Sunday | August 30, 2026 |

ಆರ್ಥಿಕ ಸಂಕಷ್ಟದಲ್ಲಿ 46 ಸಾವಿರ ಶಾಲೆಗಳು; 2ನೇ ಕಂತಿನ ಅನುದಾನದತ್ತ ಮುಖ ಮಾಡಿದ ಮುಖ್ಯ ಶಿಕ್ಷಕರು

ಬೆಂಗಳೂರು; ರಾಜ್ಯದ ಸರ್ಕಾರಿ ಶಾಲೆಗಳಿಗೆ 2ನೇ ಅನುದಾನ ಕಂತಿನ ಅನುದಾನ ಫೆಬ್ರುವರಿ ಪೂರ್ಣಗೊಳ್ಳುತ್ತಿದ್ದರೂ ಬಿಡುಗಡೆಯಾಗಿಲ್ಲ. ಆರ್ಥಿಕ ಸಂಕಷ್ಟದಿಂದ ಹೊರಬರಲು ಬಿಜೆಪಿ ಸರ್ಕಾರ ಕಸರತ್ತು ನಡೆಸುತ್ತಿರುವ ಬೆನ್ನಲ್ಲೇ ಪ್ರಾಥಮಿಕ ಶಾಲೆಗಳ ಆರ್ಥಿಕ ಸ್ಥಿತಿಯೂ ಅನಾವರಣಗೊಂಡಿದೆ.
ಅನುದಾನ ಹೊಂದಾಣಿಕೆ ಮಾಡಲು ಕಸರತ್ತು ನಡೆಸುತ್ತಿರುವ ಬಿಜೆಪಿ ಸರ್ಕಾರ ಆರ್ಥಿಕ ಸಂಕಷ್ಟದಿಂದ ಇನ್ನೂ ಪಾರಾಗಿಲ್ಲ ಎಂಬುದಕ್ಕೆ ಸರ್ಕಾರಿ ಶಾಲೆಗಳಿಗೆ 2ನೇ ಕಂತಿನ ಅನುದಾನ ಬಿಡುಗಡೆಯಾಗದಿರುವುದೇ ಇದಕ್ಕೆ ನಿದರ್ಶನ ಒದಗಿಸಿದೆ. 2ನೇ ಕಂತಿನ ಅನುದಾನ ಬಿಡುಗಡೆಯಾಗದ ಕಾರಣ ರಾಜ್ಯದ ಸರ್ಕಾರಿ ಶಾಲೆಗಳು ಮತ್ತೊಮ್ಮೆ ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದಂತಾಗಿವೆ.
‘ರಾಜ್ಯದ ಸರ್ಕಾರಿ ಶಾಲೆಗಳಿಗೆ, ಫೆಬ್ರವರಿ ತಿಂಗಳು ಮುಗಿಯುತ್ತಾ ಬಂದರೂ ಕೂಡ 2ನೇ ಕಂತಿನ ಶಾಲಾ ಅನುದಾನ ಬಿಡುಗಡೆಯಾಗಿಲ್ಲ. ಈ ಕುರಿತು ಸಚಿವ ಎಸ್‌ ಸುರೇಶ್‌ಕುಮಾರ್‌ ಅವರನ್ನು ಶಿಕ್ಷಕರ ಸಂಘ ಗಮನ ಸೆಳೆದಿದ್ದರೂ ಅನುದಾನ ಬಿಡುಗಡೆಯಾಗಿಲ್ಲ.
ಕಳೆದ ವರ್ಷ ಕೂಡ 2ನೇ ಕಂತಿನ ಶಾಲಾ ಅನುದಾನ ದೊರಕದ ಕಾರಣ ರಾಜ್ಯದ ಮುಖ್ಯ ಶಿಕ್ಷಕರು ತಮ್ಮ ಸ್ವಂತ ಹಣದಿಂದ ಶಾಲಾ ಆಡಳಿತ ವ್ಯವಸ್ಥೆಯನ್ನು ನಿರ್ವಹಿಸಿದ್ದರು,’ ಎಂದು ಮುಖ್ಯ ಶಿಕ್ಷಕರು ಅಲವತ್ತುಕೊಂಡಿದ್ದಾರೆ.
ಈ ವರ್ಷವೂ 2ನೇ ಕಂತಿನ ಅನುದಾನ ಇನ್ನೂ ಬಿಡುಗಡೆಯಾಗದೇ ರಾಜ್ಯದ ಎಲ್ಲಾ 46,000 ಪ್ರಾಥಮಿಕ ಶಾಲಾ ಮುಖ್ಯಗುರುಗಳು ನಿರಂತರವಾಗಿ ಈ ಬಗ್ಗೆ ಒತ್ತಡ ಹಾಕುತ್ತಿದ್ದರೂ ಸರ್ಕಾರ ಸೊಪ್ಪು ಹಾಕಿಲ್ಲ.
ಮಾರ್ಚ್‌ 2 ರಂದು ಬಜೆಟ್‌ ಮಂಡಿಸಲು ತಯಾರಿ ನಡೆಸುತ್ತಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹಿಂದಿನ ಮೈತ್ರಿ ಸರ್ಕಾರ ಅನುಷ್ಠಾನಗೊಳಿಸಿದ್ದ ಯೋಜನೆಗಳನ್ನು ಮುಂದುವರೆಸಬೇಕೇ ಅಥವಾ ಹೊಸ ಯೋಜನೆಗಳನ್ನು ಘೋಷಿಸಬೇಕೆ ಎಂಬ ಬಗ್ಗೆ ಇನ್ನೂ ಗೊಂದಲದಲ್ಲಿ ಮುಳುಗಿರುವ ಹೊತ್ತಿನಲ್ಲೇ ಬಿಜೆಪಿ ಸರ್ಕಾರ ಅನುಭವಿಸುತ್ತಿರುವ ಆರ್ಥಿಕ ಸಂಕಷ್ಟ ಅನಾವರಣವಾದಂತಾಗಿದೆ.

Hot this week

ಬೇನಾಮಿ ಆಸ್ತಿ ಹೊಂದಿದ ಆರೋಪ; ವಿಟಿಯು ಕುಲಪತಿ ವಿದ್ಯಾಶಂಕರ್ ಗೆ ಆದಾಯ ತೆರಿಗೆ ಇಲಾಖೆ ನೋಟೀಸ್‌

ಬೆಂಗಳೂರು;  ಆದಾಯಕ್ಕೂ ಮೀರಿ ಆಸ್ತಿ ಗಳಿಸಿದ್ದಾರೆ ಎಂಬ ಆರೋಪ ಕುರಿತು ಆದಾಯ...

‘ಅದಾನಿ ಕಂಪನಿಯಿಂದಲೇ ವಿವಾದ, 850 ಕೋಟಿ ರು ಪಾವತಿಸುವ ಲಕ್ಷಣಗಳೂ ಗೋಚರಿಸುತ್ತಿಲ್ಲ, ಅಧಿಕಾರಿಗಳ ಕೈ ಕಟ್ಟಿ ಹಾಕಿದೆ’; ಸರ್ಕಾರದ ಅಸಹಾಯಕತೆ ಬಹಿರಂಗ

ಬೆಂಗಳೂರು;  'ಕಲ್ಬುರ್ಗಿಯ ವಾಡಿಯಲ್ಲಿ  ಸುಣ್ಣದ ಕಲ್ಲು ಗಣಿ ಗುತ್ತಿಗೆ ಪ್ರದೇಶದಲ್ಲಿ ಗಣಿಗಾರಿಕೆ...

ನೀರಾವರಿ ನಿಗಮಗಳ ಗುತ್ತಿಗೆದಾರರಿಗೆ 15,429.51 ಕೋಟಿ ರು ಬಾಕಿ; ಸ್ಥಗಿತಗೊಂಡಿವೆಯೇ ಕಾಮಗಾರಿಗಳು?

ಬೆಂಗಳೂರು;  ಕೃಷ್ಣಭಾಗ್ಯ ಜಲನಿಗಮ ಸೇರಿದಂತೆ ರಾಜ್ಯದ ನಾಲ್ಕು ನೀರಾವರಿ ನಿಗಮಗಳು ಅನುಷ್ಠಾನಗೊಳಿಸುತ್ತಿರುವ...
Please Scan to make Your Contribution

Topics

ಬೇನಾಮಿ ಆಸ್ತಿ ಹೊಂದಿದ ಆರೋಪ; ವಿಟಿಯು ಕುಲಪತಿ ವಿದ್ಯಾಶಂಕರ್ ಗೆ ಆದಾಯ ತೆರಿಗೆ ಇಲಾಖೆ ನೋಟೀಸ್‌

ಬೆಂಗಳೂರು;  ಆದಾಯಕ್ಕೂ ಮೀರಿ ಆಸ್ತಿ ಗಳಿಸಿದ್ದಾರೆ ಎಂಬ ಆರೋಪ ಕುರಿತು ಆದಾಯ...

‘ಅದಾನಿ ಕಂಪನಿಯಿಂದಲೇ ವಿವಾದ, 850 ಕೋಟಿ ರು ಪಾವತಿಸುವ ಲಕ್ಷಣಗಳೂ ಗೋಚರಿಸುತ್ತಿಲ್ಲ, ಅಧಿಕಾರಿಗಳ ಕೈ ಕಟ್ಟಿ ಹಾಕಿದೆ’; ಸರ್ಕಾರದ ಅಸಹಾಯಕತೆ ಬಹಿರಂಗ

ಬೆಂಗಳೂರು;  'ಕಲ್ಬುರ್ಗಿಯ ವಾಡಿಯಲ್ಲಿ  ಸುಣ್ಣದ ಕಲ್ಲು ಗಣಿ ಗುತ್ತಿಗೆ ಪ್ರದೇಶದಲ್ಲಿ ಗಣಿಗಾರಿಕೆ...

ನೀರಾವರಿ ನಿಗಮಗಳ ಗುತ್ತಿಗೆದಾರರಿಗೆ 15,429.51 ಕೋಟಿ ರು ಬಾಕಿ; ಸ್ಥಗಿತಗೊಂಡಿವೆಯೇ ಕಾಮಗಾರಿಗಳು?

ಬೆಂಗಳೂರು;  ಕೃಷ್ಣಭಾಗ್ಯ ಜಲನಿಗಮ ಸೇರಿದಂತೆ ರಾಜ್ಯದ ನಾಲ್ಕು ನೀರಾವರಿ ನಿಗಮಗಳು ಅನುಷ್ಠಾನಗೊಳಿಸುತ್ತಿರುವ...

ಟೆಂಡರ್ ಇಲ್ಲದೆಯೇ 3.11 ಕೋಟಿ ನೇರ ಹೂಡಿಕೆ, ಮುಂಗಡ ಹಣ ಹೊಂದಾಣಿಕೆಯಲ್ಲೂ ವಿಳಂಬ, ಲಕ್ಷಾಂತರ ರು ನಷ್ಟ; ಮಹರ್ಷಿ ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಅಕ್ರಮ!

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಯಾವುದೇ ಟೆಂಡರ್‍‌ ಕರೆಯದೇ ನೇರವಾಗಿ...

ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಲೋಪ; ಹಣ ಪಾವತಿಯಲ್ಲಿ ಸರ್ಕಾರದ ಆದೇಶಗಳ ಉಲ್ಲಂಘನೆ, 51.21 ಕೋಟಿ ಮೊತ್ತದ ವಹಿವಾಟು ಪಾರದರ್ಶಕವಾಗಿವೆಯೇ?

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು ಹಣ ಪಾವತಿ ಸಂದರ್ಭಗಳಲ್ಲಿ ಸರ್ಕಾರದ...

Related Articles

Popular Categories

error: Content is protected !!