Wednesday | May 6, 2026 |

ಅನುಮತಿ ಇಲ್ಲದೆಯೇ ಗಣಿಗಾರಿಕೆ; 15.21 ಕೋಟಿ ಮೊತ್ತದ ಖನಿಜ ಮುಟ್ಟುಗೋಲು

ಕೇಂದ್ರ ಸರ್ಕಾರ ಹಾಗೂ ಹೈದರಾಬಾದ್‌ನ ಪರಮಾಣು ಖನಿಜಗಳ ನಿರ್ದೇಶನಾಲಯದ ಅನುಮತಿ ಪಡೆಯದೆಯೇ ಕರ್ನಾಟಕ ರಾಜ್ಯ ಖನಿಜಗಳ ನಿಗಮವು ₹15.21 ಕೋಟಿ ಮೊತ್ತದ ಪರಮಾಣು ಖನಿಜಗಳ ಗಣಿಗಾರಿಕೆ ಮಾಡಿರುವುದು ಬೆಳಕಿಗೆ ಬಂದಿದೆ.
ಖನಿಜಗಳ ರಿಯಾಯಿತಿ ನಿಯಮಗಳ ಪ್ರಕಾರ ಪೂರ್ವಾನುಮತಿ ಪಡೆಯಬೇಕಿತ್ತು. ನಿರ್ದೇಶನಾಲಯಕ್ಕೆ ಮಾಹಿತಿ ನೀಡದ ಕಾರಣಕ್ಕೆ ₹15.21 ಕೋಟಿ ಮೊತ್ತದ ಖನಿಜವನ್ನು ಮುಟ್ಟುಗೋಲು ಹಾಕಿಕೊಳ್ಳಲಾಯಿತು ಎಂದು ಭಾರತೀಯ ಲೆಕ್ಕ ನಿಯಂತ್ರಕರು ಹಾಗೂ ಮಹಾಲೆಕ್ಕಪರಿಶೋಧಕರ (ಸಿಎಜಿ) ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಕಂಪನಿಯು ಹಾಸನ ಜಿಲ್ಲೆಯ ತಗಡೂರು ಹಾಗೂ ಚಿಕ್ಕನಹಳ್ಳಿ ಗ್ರಾಮಗಳಲ್ಲಿ 1,200 ಎಕರೆಯಲ್ಲಿ 1976ರಿಂದಲೂ ಕ್ರೋಮೈಟ್‌ ಅದಿರಿನ ಗಣಿಗಾರಿಕೆ ನಡೆಸುತ್ತಿದೆ. ಈ ವೇಳೆಯಲ್ಲಿ ಕಂಪನಿಯು ಟೆಟಾನಿಫರಸ್‌ ಮ್ಯಾಗ್ನಟೈಟ್‌, ಡ್ಯುನೈಟ್‌, ಸರ್ಪೆನ್ಟಿನೈಟ್‌, ಟ್ಯಾಲ್ಕ್‌ ಹಾಗೂ ಕ್ವಾರ್ಟ್ಸ್ ಖನಿಜಗಳನ್ನು ಕಂಡುಹಿಡಿಯಿತು. ಟೆಟಾನಿಫರಸ್‌ ಮ್ಯಾಗ್ನಟೈಟ್‌ ಪರಮಾಣು ಖನಿಜ ಗುಂಪಿಗೆ ಸೇರಿದೆ.
ಈ ಖನಿಜಗಳ ಗಣಿಗಾರಿಕೆ ಗುತ್ತಿಗೆಯನ್ನು 20 ವರ್ಷಗಳ ಅವಧಿಗೆ ನೀಡುವ ಸಲುವಾಗಿ ಕಂಪನಿಯು ಗಣಿ ಹಾಗೂ ಭೂವಿಜ್ಞಾನ ಇಲಾಖೆಗೆ ಅರ್ಜಿ ಸಲ್ಲಿಸಿತು. ಈ ಖನಿಜಗಳನ್ನು ಹೊರತೆಗೆಯಲು ಇಲಾಖೆ 2005ರಲ್ಲಿ ಅನುಮತಿ ನೀಡಿತು. ಈ ನಡುವೆ, ಕಂಪನಿಯು ಕ್ರೋಮೈಟ್‌ ಹಾಗೂ ಟೆಟಾನಿಫರಸ್‌ ಮ್ಯಾಗ್ನಟೈಟ್‌ನ ಮಾರಾಟಕ್ಕಾಗಿ ಕಂಪನಿಯು 2016ರಲ್ಲಿ ಟೆಂಡರ್ ಪ್ರಕ್ರಿಯೆ ನಡೆಸಿತು. ಎರಡು ಕಂಪನಿಗಳಿಗೆ 34,521 ಟನ್‌ ಅದಿರು ಮಾರಾಟಕ್ಕೆ ಪತ್ರಗಳನ್ನು ನೀಡಿತು.
ಗಣಿಗಳಿಂದ ಖನಿಜಗಳ ಸಾಗಣೆಗೆ ಅನುಕೂಲ ಕಲ್ಪಿಸಲು ಖರೀದಿದಾರರಿಗೆ ಖನಿಜ ರವಾನೆ ಪರವಾನಗಿ ನೀಡುವಂತೆ ಗಣಿ ಹಾಗೂ ಭೂವಿಜ್ಞಾನ ಇಲಾಖೆಗೆ ಕಂಪನಿ 2016ರಲ್ಲಿ ಕೋರಿತು. ಗಣಿಗಾರಿಕೆ ಗುತ್ತಿಗೆ ನೀಡುವ ಮೊದಲು ಕೇಂದ್ರ ಸರ್ಕಾರದ ಅನುಮತಿ ಪಡೆದಿಲ್ಲ ಎಂಬ ಕಾರಣ ನೀಡಿ ಇಲಾಖೆಯು ಖನಿಜ ಸಾಗಣೆಗೆ ಅನುಮತಿ ನಿರಾಕರಿಸಿತು. ಜತೆಗೆ, ಗಣಿಗಾರಿಕೆ ಗುತ್ತಿಗೆಯನ್ನು ರದ್ದುಪಡಿಸಿತು.
ಖನಿಜಗಳ ಹರಾಜಿನಿಂದ ಇಲ್ಲಿಯವರೆಗೆ ಸ್ವೀಕರಿಸಿದ ಮೊತ್ತವನ್ನು ಸರ್ಕಾರದ ಬಳಿ ಠೇವಣಿ ಇಡಬೇಕು ಎಂದು ತಾಕೀತು ಮಾಡಿತು. ಗಣಿಯಿಂದ ಹೊರತೆಗೆದ 19,649 ಟನ್‌ಗಳಷ್ಟು ಕ್ರೋಮೈಟ್‌ ಹಾಗೂ 53,337 ಟನ್‌ಗಳಷ್ಟು ಟಿಟಿನಿಫೆರಸ್‌ ಮ್ಯಾಗ್ನಟೈಟ್ ಖನಿಜವನ್ನು ಮುಟ್ಟುಗೋಲು ಹಾಕಿಕೊಂಡಿತು.

Hot this week

ಬಿಜೆಪಿ ಅವಧಿಯಲ್ಲಿದ್ದ 120 ಎಕರೆ ಗೋಮಾಳ, ಕಾಂಗ್ರೆಸ್‌ ಅವಧಿಯಲ್ಲಿ ಕಣ್ಮರೆ!; 24 ಕೋಟಿ ಮೌಲ್ಯದ ಜಮೀನು, ಖಾಸಗಿ ವ್ಯಕ್ತಿಗಳ ಪಾಲು?

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ...

ಒಂದೇ ಜಾಗದಲ್ಲಿ ಎರಡು ಫ್ಲೈ ಓವರ್, ಶೇ.50ರಷ್ಟು ಕಾಮಗಾರಿಯಾಗಿದ್ದರೂ ಪೂರ್ಣ ಪಾವತಿ; ಬ್ಯಾಂಕ್‌ ಗ್ಯಾರಂಟಿ ಮುಟ್ಟುಗೋಲಿಲ್ಲ, ಗುತ್ತಿಗೆದಾರರಿಗೆ ಲಾಭ, ಬಿಬಿಎಂಪಿ ನಿಧಿಗೆ ನಷ್ಟ

ಬೆಂಗಳೂರು;  ಈಜಿಪುರ ಮೇಲ್ಸೇತುವೆ ಎಲಿವೇಟೆಡ್‌ ಕಾರಿಡಾರ್  ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ  ಪೂರ್ಣಗೊಳಿಸದ...

ಅನುದಾನ ಬಿಡುಗಡೆಯಾಗಿದ್ದರೂ ಪೂರ್ಣಗೊಳ್ಳದ ಕಾಮಗಾರಿ; ತನಿಖಾ ವರದಿಗೆ ಮೆತ್ತಿಕೊಂಡ ಧೂಳು, ಕ್ರಮಕೈಗೊಳ್ಳದ ಸಚಿವ

ಬೆಂಗಳೂರು; ತುಮಕೂರು ಜಿಲ್ಲೆಯ ಶಿರಾ ಪಟ್ಟಣದಲ್ಲಿರುವ ಕಸ್ತೂರಿ ರಂಗಪ್ಪ ನಾಯಕ ಕೋಟೆಯ...
Please Scan to make Your Contribution

Topics

ಬಿಜೆಪಿ ಅವಧಿಯಲ್ಲಿದ್ದ 120 ಎಕರೆ ಗೋಮಾಳ, ಕಾಂಗ್ರೆಸ್‌ ಅವಧಿಯಲ್ಲಿ ಕಣ್ಮರೆ!; 24 ಕೋಟಿ ಮೌಲ್ಯದ ಜಮೀನು, ಖಾಸಗಿ ವ್ಯಕ್ತಿಗಳ ಪಾಲು?

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ...

ಅನುದಾನ ಬಿಡುಗಡೆಯಾಗಿದ್ದರೂ ಪೂರ್ಣಗೊಳ್ಳದ ಕಾಮಗಾರಿ; ತನಿಖಾ ವರದಿಗೆ ಮೆತ್ತಿಕೊಂಡ ಧೂಳು, ಕ್ರಮಕೈಗೊಳ್ಳದ ಸಚಿವ

ಬೆಂಗಳೂರು; ತುಮಕೂರು ಜಿಲ್ಲೆಯ ಶಿರಾ ಪಟ್ಟಣದಲ್ಲಿರುವ ಕಸ್ತೂರಿ ರಂಗಪ್ಪ ನಾಯಕ ಕೋಟೆಯ...

ಧರ್ಮಸ್ಥಳ ಪ್ರಕರಣಗಳ ತನಿಖೆ; ಎಸ್‌ಐಟಿ ವರದಿ ಪ್ರತಿ ಒದಗಿಸದ ಸರ್ಕಾರ, ಗೃಹ ಇಲಾಖೆ ಶಾಖೆಯಲ್ಲಿ ಸಭೆ ನಡವಳಿಯೂ ಲಭ್ಯವಿಲ್ಲ

ಬೆಂಗಳೂರು: ಧರ್ಮಸ್ಥಳದ ಸುತ್ತಮುತ್ತ ನಡೆದಿರುವ ಮಹಿಳೆಯರು ಮತ್ತು ಯುವತಿಯರ ಮೇಲಿನ ದೌರ್ಜನ್ಯ/ಕೊಲೆ,...

ವೈಟ್‌ ಟ್ಯಾಪಿಂಗ್‌ ಗೋಲ್ಮಾಲ್‌; ಅಗತ್ಯವಿರದಿದ್ದರೂ ಕಾಮಗಾರಿ, ತಾಂತ್ರಿಕ ಪರಿಶೀಲನೆಯಿಲ್ಲದಿದ್ದರೂ ಹೆಚ್ಚುವರಿ ವೆಚ್ಚ, ಗುತ್ತಿಗೆದಾರರಿಗೆ ಲಾಭ

ಬೆಂಗಳೂರು;  ವೈಟ್‌ ಟ್ಯಾಪಿಂಗ್ ಅಗತ್ಯವಿಲ್ಲದಿದ್ದರೂ  ಕಾಮಗಾರಿ ಆರಂಭಿಸಿದ ನಂತರ ತಾಂತ್ರಿಕ ಮಂಜೂರಾತಿ...

Related Articles

Popular Categories

error: Content is protected !!