Sunday | August 23, 2026 |

ಮುಕ್ತ ವಿ.ವಿ. ಅಕ್ರಮ; ಸಿಬಿಐ ತನಿಖೆಯತ್ತ ಅಧೀನ ಶಾಸನ ರಚನಾ ಸಮಿತಿ ಒಲವು?

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಸೇರಿದಂತೆ ಇನ್ನಿತರ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲು ಉನ್ನತ ಶಿಕ್ಷಣ ಇಲಾಖೆ ಹಿಂಜರಿಯುತ್ತಿದೆ. ಇದರ ಬೆನ್ನಲ್ಲೇ ವಿಶ್ವವಿದ್ಯಾಲಯದಲ್ಲಿ ನಡೆದಿರುವ ಅಕ್ರಮ ಪ್ರಕರಣಗಳನ್ನು ಸಿಬಿಐ ತನಿಖೆಗೆ ವಹಿಸಬೇಕೇ ಬೇಡವೇ ಎಂಬ ಕುರಿತು ಕರ್ನಾಟಕ ವಿಧಾನಸಭೆಯ ಅಧೀನ ಶಾಸನ ರಚನಾ ಸಮಿತಿ ಚರ್ಚಿಸಿದೆ. 

ವಿಶ್ವವಿದ್ಯಾಲಯದ ಅಕ್ರಮ ಪ್ರಕರಣಗಳ ಕುರಿತು ತನಿಖಾ ಸಂಸ್ಥೆ ಮತ್ತು ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿಗಳ ಅಧ್ಯಕ್ಷತೆಯ ವಿಚಾರಣೆ ಸಮಿತಿ ಆರೋಪಿತರ ವಿರುದ್ಧ ಸಲ್ಲಿಸಿದ್ದ ದೋಷಾರೋಪ ಪಟ್ಟಿಯಲ್ಲಿರುವವರ ಪೈಕಿ ರಾಜಕೀಯ ಹಿನ್ನೆಲೆಯ ಆರೋಪಿತ ಅಧಿಕಾರಿಗಳು ತೆರೆಮರೆಯಲ್ಲಿ ಸರ್ಕಾರದ ಮಟ್ಟದಲ್ಲಿ ಸರಿದೂಗಿಸುತ್ತಿರುವ ಬೆನ್ನಲ್ಲೇ ಅಧೀನ ಶಾಸನ ರಚನಾ ಸಮಿತಿಯೂ  ಬಿರುಸಿನ ಚರ್ಚೆ ನಡೆಸಿರುವುದು ವಿಶ್ವವಿದ್ಯಾಲಯ ಮತ್ತು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. 

ಶಾಸಕ ಎಸ್‌ ಎ ರಾಮದಾಸ್‌ ಅಧ್ಯಕ್ಷತೆಯಲ್ಲಿರುವ ಕರ್ನಾಟಕ ವಿಧಾನಸಭೆ ಅಧೀನ ಶಾಸನಾ ರಚನೆ ಸಮಿತಿ 2020 ರ ಜನವರಿ 14ರಂದು ನಡೆಸಿದ್ದ ಸಭೆಯಲ್ಲಿ ಈ ವಿಚಾರ ಪ್ರಸ್ತಾಪವಾಗಿದೆ. ಇದಕ್ಕೆ ಸಂಬಂಧಿಸಿದಂತೆ ಕೆಲ ದಾಖಲೆಗಳು ‘ದಿ ಫೈಲ್‌’ ಗೆ ಲಭ್ಯವಾಗಿವೆ.  

ಮುಕ್ತ ವಿಶ್ವವಿದ್ಯಾಲಯದಲ್ಲಿ ನಡೆದಿರುವ ಅಕ್ರಮ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಿ  ಬಿ ಐ  ತನಿಖೆ  ಕುರಿತು ಸಮರ್ಥಿಸಿಕೊಂಡಂತಿರುವ ಸಮಿತಿ ಅಧ್ಯಕ್ಷ ಎಸ್‌ ಎ ರಾಮದಾಸ್‌  ಈ ಪ್ರಕರಣವು ಕರ್ನಾಟಕಕ್ಕೆ ಮಾತ್ರ ಸೀಮಿತವಾಗಿಲ್ಲ. ಅನ್ಯ ರಾಜ್ಯಗಳು  ಮತ್ತು ಅನ್ಯ ರಾಷ್ಟ್ರಗಳಲ್ಲಿಯೂ  ಸಂಯೋಜನೆ  ಕೇಂದ್ರಗಳು ಮತ್ತು ಅಧ್ಯಯನ ಕೇಂದ್ರಗಳು ಇರುವ ಕಾರಣ ಅಂತರರಾಜ್ಯ ಮತ್ತು  ಅಂತಾರಾಷ್ಟ್ರೀಯ ವ್ಯವಹಾರಗಳನ್ನು ತನಿಖೆ ಮಾಡಲು ರಾಜ್ಯದ ಯಾವುದೇ ತನಿಖಾ ಸಮಿತಿಗೂ ಕಷ್ಟವಾಗುತ್ತದೆ. ಆದ್ದರಿಂದ ಇದನ್ನು ಸಿಬಿಐಗೆ ವಹಿಸಲಾಗುತ್ತದೆ ಎಂದು ವರದಿಯೊಂದನ್ನು ಉಲ್ಲೇಖಿಸಿ  ಸಮಿತಿಯಲ್ಲಿ  ಚರ್ಚಿಸಿರುವುದು ದಾಖಲೆಗಳಿಂದ  ತಿಳಿದು ಬಂದಿದೆ.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಕೆ.ಎಸ್‌.ರಂಗಪ್ಪ ಅವರು ಕುಲಪತಿ ಆಗಿದ್ದಾಗ ಖಾಸಗಿ ಸಂಸ್ಥೆಗಳೊಂದಿಗೆ ಅಕ್ರಮ ಒಪ್ಪಂದ ಆರೋಪ, ಕಟ್ಟಡ ಕಾಮಗಾರಿ ಮತ್ತು  ಅಕ್ರಮ ನೇಮಕಾತಿ ಹಗರಣ ನಡೆದಿದೆ ಎಂದು ನಿವೃತ್ತ ನ್ಯಾಯಾಧೀಶರ  ನೇತೃತ್ವದ ತನಿಖಾ ಸಮಿತಿ ಹೊರಗೆಡವಿತ್ತು. 

ದೇಶ ಮತ್ತು ವಿದೇಶಗಳಲ್ಲಿ ದೊಡ್ಡ ಮಟ್ಟದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ಪಾಲುದಾರಿಕೆಯಲ್ಲಿ ವಿವಿಧ ಕೋರ್ಸ್‌ಗಳನ್ನು ಅಕ್ರಮವಾಗಿ ಆರಂಭಿಸಿದ ಆರೋಪಕ್ಕೆ ಗುರಿಯಾಗಿದ್ದರು. ಇಂತಹ ಆರೋಪಗಳು ಕೆ ಎಸ್ ರಂಗಪ್ಪ ಅವರ ನಂತರ ಕುಲಪತಿ ಆಗಿದ್ದ ಪ್ರೊ.ಎಂ.ಜಿ.ಕೃಷ್ಣನ್ ಅವರ ವಿರುದ್ಧವೂ ಕೇಳಿ ಬಂದಿತ್ತು. 

230ಕ್ಕೂ ಹೆಚ್ಚು ಖಾಸಗಿ ಸಂಸ್ಥೆಗಳ ಜತೆ ಕೆಎಸ್‌ಒಯು ಒಡಂಬಡಿಕೆ ಮಾಡಿಕೊಂಡಿತ್ತಲ್ಲದೆ ಈ ಸಂಸ್ಥೆಗಳು ದೇಶದಾದ್ಯಂತ 5 ಸಾವಿರಕ್ಕೂ ಹೆಚ್ಚು ಅಧ್ಯಯನ ಕೇಂದ್ರಗಳನ್ನು ತೆರೆದಿದ್ದವು. ಈ ಹಿನ್ನೆಲೆಯಲ್ಲಿ ಯುಜಿಸಿ ಮುಕ್ತ ವಿ.ವಿ.ಯ ಮಾನ್ಯತೆ ರದ್ದುಪಡಿಸಿತ್ತು.

ವಿಶ್ವವಿದ್ಯಾಲಯದ ಕುಲಪತಿಗಳಾಗಿದ್ದ ಪ್ರೊ ಕೆ ಎಸ್‌ ರಂಗಪ್ಪ ಮತ್ತು ಪ್ರೊ  ಎಂ ಜಿ ಕೃಷ್ಣನ್‌  ಅವರ ವಿರುದ್ಧ ಕೇಳಿ ಬಂದಿದ್ದ ಒಟ್ಟು 14 ಆರೋಪಗಳ ಬಗ್ಗೆ ತನಿಖೆಗೆ ರಾಜ್ಯಪಾಲ ವಜುಭಾಯಿ ವಾಲಾ ಅವರು ಡಾ.ಕೆ ಭಕ್ತವತ್ಸಲ ಸಮಿತಿ ರಚಿಸಿದ್ದರು. ಈ ಸಮಿತಿಯು 2 ಸಂಪುಟಗಳಲ್ಲಿ, 612 ಪುಟಗಳನ್ನು ಒಳಗೊಂಡ ವರದಿ ಸಲ್ಲಿಸಿದೆ.

ಅಲ್ಲದೆ ಕಂಪ್ಯೂಟರ್‌ ಮತ್ತಿತರ ಉಪಕರಣಗಳ ಖರೀದಿಗಾಗಿ ಮುಂಬೈ ಮೂಲದ ಕಂಪನಿ ಜತೆ ಅಕ್ರಮ ಒಪ್ಪಂದ ಮಾಡಿಕೊಂಡಿದ್ದಾರೆ ಎಂಬ ಆರೋಪಕ್ಕೂ  ಪ್ರೊ.ಕೆ.ಎಸ್.ರಂಗಪ್ಪ ಗುರಿಯಾಗಿದ್ದರು. ಈ ಆರೋಪದ ಕುರಿತು ತನಿಖೆಗೆ ರಾಜ್ಯಪಾಲರು ನೇಮಿಸಿದ್ದ ಪ್ರತ್ಯೇಕ ಸಮಿತಿ ವಿಚಾರಣೆ ನಡೆಸಿ ₹ 54 ಲಕ್ಷದ ಅಕ್ರಮ ನಡೆದಿದೆ ಎಂದು ವರದಿಯಲ್ಲಿ ಹೇಳಿತ್ತು. ಆದರೆ ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಎಚ್‌ ಡಿ ಕುಮಾರಸ್ವಾಮಿ ಅವಧಿಯಲ್ಲಿ ವರದಿ ಆಧರಿಸಿ ಕ್ರಮ ಕೈಗೊಂಡಿರಲಿಲ್ಲ.

ಅಲ್ಲದೆ ಮುಕ್ತ ವಿಶ್ವವಿದ್ಯಾಲಯದಲ್ಲಿ ಸರಣಿ ರೂಪದಲ್ಲಿ ನಡೆದಿದೆ ಎನ್ನಲಾಗಿರುವ ವಿವಿಧ ಅಕ್ರಮಗಳ  ಕುರಿತು ವಿಧಾನಪರಿಷತ್‌ನ ಸದಸ್ಯರಾಗಿದ್ದ ಗೋ ಮಧುಸೂದನ್‌ ಅವರು ಸದನದ  ಒಳಗೆ ಮತ್ತು ಹೊರಗೆ ಆರೋಪಿಸಿದ್ದರು. ಈ ಸಂಬಂಧ ಪ್ರೊ ಕೆ ಎಸ್ ರಂಗಪ್ಪ ಮತ್ತು ಗೋ ಮಧುಸೂದನ್‌ ನಡುವೆ ಆರೋಪ, ಪ್ರತ್ಯಾರೋಪಗಳು ಕೇಳಿ ಬಂದಿದ್ದವು.

Hot this week

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...

ನೀಟ್‌ ಪರೀಕ್ಷೆಯಿಂದ ವಿನಾಯಿತಿ; ತಮಿಳುನಾಡು ಮಾದರಿಯಲ್ಲಿ ನಿರ್ಣಯ ಮಂಡಿಸಲು ರಾಜ್ಯ ಸಜ್ಜು, ಕಾನೂನುಬದ್ಧ ವಿನಾಯಿತಿಗೆ ಪ್ರಸ್ತಾವ

ಬೆಂಗಳೂರು; ಕರ್ನಾಟಕ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶ ವ್ಯವಸ್ಥೆಯು ರಾಜ್ಯದ ಶೈಕ್ಷಣಿಕ...

2 ಕಂಪನಿಗಳಿಂದ 400 ಕೋಟಿ ರು ವಹಿವಾಟು ಆರೋಪ; ಐಜಿಪಿ ಚಂದ್ರಶೇಖರ್ ಪ್ರಕರಣದಲ್ಲಿ ವರದಿ ನೀಡಲು ಸರ್ಕಾರದ ನಿರ್ದೇಶನ

ಬೆಂಗಳೂರು; ಸರ್ಕಾರದ ಪೂರ್ವಾನುಮತಿ ಪಡೆಯದೇ ಹಾಗೂ ಸರ್ಕಾರಕ್ಕೆ ವರದಿಯನ್ನು ಸಲ್ಲಿಸದೇ ಕುಟುಂಬ...
Please Scan to make Your Contribution

Topics

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...

ನೀಟ್‌ ಪರೀಕ್ಷೆಯಿಂದ ವಿನಾಯಿತಿ; ತಮಿಳುನಾಡು ಮಾದರಿಯಲ್ಲಿ ನಿರ್ಣಯ ಮಂಡಿಸಲು ರಾಜ್ಯ ಸಜ್ಜು, ಕಾನೂನುಬದ್ಧ ವಿನಾಯಿತಿಗೆ ಪ್ರಸ್ತಾವ

ಬೆಂಗಳೂರು; ಕರ್ನಾಟಕ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶ ವ್ಯವಸ್ಥೆಯು ರಾಜ್ಯದ ಶೈಕ್ಷಣಿಕ...

2 ಕಂಪನಿಗಳಿಂದ 400 ಕೋಟಿ ರು ವಹಿವಾಟು ಆರೋಪ; ಐಜಿಪಿ ಚಂದ್ರಶೇಖರ್ ಪ್ರಕರಣದಲ್ಲಿ ವರದಿ ನೀಡಲು ಸರ್ಕಾರದ ನಿರ್ದೇಶನ

ಬೆಂಗಳೂರು; ಸರ್ಕಾರದ ಪೂರ್ವಾನುಮತಿ ಪಡೆಯದೇ ಹಾಗೂ ಸರ್ಕಾರಕ್ಕೆ ವರದಿಯನ್ನು ಸಲ್ಲಿಸದೇ ಕುಟುಂಬ...

ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ; ಹಲವು ಟೆಂಡರ್‍‌ಗಳಿಗೆ ಬಿಡ್ಡರ್‍‌ಗಳೇ ಇಲ್ಲ, ಮರು ಟೆಂಡರ್‍ ಹಿಂದಿದೆಯೇ ಲಂಚಾವತಾರ?

ಬೆಂಗಳೂರು; ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ ಕಾಣಿಸಿಕೊಂಡಿದೆ....

30,01,169 ರೈತರಿಂದ 25,180.77 ಕೋಟಿ ಹೊರಬಾಕಿ; ರೈತರ ಸಾಲ ಮನ್ನಾ ಪ್ರಸ್ತಾವವಿಲ್ಲ, ರೈತರ ಕೆಂಗಣ್ಣಿಗೆ ಗುರಿಯಾಗಲಿದೆಯೇ ಸರ್ಕಾರ?

ಬೆಂಗಳೂರು; ಸಹಕಾರ ಸಂಸ್ಥೆಗಳ ಮೂಲಕ ರೈತರು ಪಡೆದಿರುವ ಕೃಷಿ ಸಾಲವನ್ನು ಮನ್ನಾ...

Related Articles

Popular Categories

error: Content is protected !!