Friday | March 27, 2026 |

ಕೊರೊನಾ ಸೋಂಕು ಹರಡಿರುವುದರ ಹಿಂದಿನ ಮುಖ್ಯ ಕಾರಣ ಬಹಿರಂಗ; ಬಯಲಾಯಿತು ಸರ್ಕಾರದ ನಿರ್ಲಕ್ಷ್ಯ

Support THE-FILE

spot_img

ಬೆಂಗಳೂರು; ಕೋವಿಡ್‌-19 ಸೋಂಕಿನಿಂದ ಬಳಲುತ್ತಿರುವ ರೋಗಿಗಳನ್ನು ಮನೆಗಳಲ್ಲಿ ಪ್ರತ್ಯೇಕವಾಗಿರಿಸಿದ್ದರೂ ವೈದ್ಯಕೀಯ ಸೂಚನೆ ಪ್ರಕಾರ  ಶಿಷ್ಟಾಚಾರ ಅನುಸರಿಸುತ್ತಿಲ್ಲ ಎಂಬ ಹೊಸ ಮಾಹಿತಿ ಹೊರಬಿದ್ದಿದೆ. ಸೋಂಕಿತರು ಮತ್ತು ಪ್ರಾಥಮಿಕ ಸಂಪರ್ಕದಲ್ಲಿದವರು ಶಿಷ್ಟಾಚಾರ ಅನುಸರಿಸದಿರುವುದೇ ಕರ್ನಾಟಕ ನಿರ್ಣಾಯಕ ಘಟ್ಟಕ್ಕೆ ತಲುಪಲು ಮೂಲ ಕಾರಣ ಎಂಬ ಹೊಸ  ಅಂಶವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಗೆಡವಿದೆ.

ಅಲ್ಲದೆ, ಮಾರ್ಚ್‌  19ರಿಂದ 28 ರವರೆಗೂ ಈ ಬಗ್ಗೆ ಮುಂಜಾಗರೂಕತೆ ವಹಿಸದ  ಇಲಾಖೆ ಅಧಿಕಾರಿಗಳು ಇದೀಗ ನಿರ್ಣಾಯಕ ಘಟ್ಟಕ್ಕೆ ತಲುಪಿದ ನಂತರ ಪ್ರಾಥಮಿಕ ಸಂಪರ್ಕಗಳನ್ನು ಮನೆಯಿಂದ ಹೊರತುಪಡಿಸಲು ಮುಂದಾಗಿದ್ದಾರೆ.  ಇದು ಇಲಾಖೆ ಮಾತ್ರವಲ್ಲದೆ ರಾಜ್ಯ ಸರ್ಕಾರದ ಭಂಡ ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ. 

ಕೋವಿಡ್‌ 19 ಪ್ರಾಥಮಿಕ ಸಂಪರ್ಕ ಹೊಂದಿರುವ ವ್ಯಕ್ತಿಗಳ ಮೇಲ್ವಿಚಾರಣೆ ನಡೆಸುವಲ್ಲಿಯೂ ಸತತವಾಗಿ ವಿಫಲವಾಗಿದೆಯಲ್ಲದೆ, ಮುಂಜಾಗರೂಕತೆ ಕ್ರಮಗಳನ್ನು ಕೈಗೊಳ್ಳುವಲ್ಲಿಯೂ ಎಡವಿ ಬಿದ್ದಿದೆ ಎಂಬುದನ್ನು ಮತ್ತೊಮ್ಮೆ ನಿರೂಪಿಸಿದೆ.  

2020ರ ಮಾರ್ಚ್ 28ರಂದು ಮತ್ತೊಮ್ಮೆ ಬಿಗಿಯಾದ ಮಾರ್ಗಸೂಚಿಗಳನ್ನು ಹೊರಡಿಸಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯದ ಆಯುಕ್ತರು ಪ್ರಾಥಮಿಕ ಸಂಪರ್ಕವನ್ನು ಹೋಮ್‌ ಕ್ವಾರಂಟೀನ್‌ಗೆ ಒಳಪಡಿಸುವುದು ಕಷ್ಟವಾಗುತ್ತಿದೆ ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. 

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಆಯುಕ್ತರು, ಸೋಂಕು ಹರಡದಂತೆ ತಡೆಯುವುದು ಮತ್ತು ಸಾರ್ವಜನಿಕ ಹಿತಾಸಕ್ತಿ ಹಿನ್ನೆಲೆಯಲ್ಲಿ ಪ್ರಾಥಮಿಕ ಸಂಪರ್ಕಗಳನ್ನು ಸರ್ಕಾರದ ಪ್ರತ್ಯೇಕ ಕ್ವಾರಂಟೀನ್‌ ಸೌಲಭ್ಯವಿರುವ ಕೇಂದ್ರಗಳ ಪ್ರತ್ಯೇಕ ಕೊಠಡಿಗಳಲ್ಲಿ ಇರಿಸಲು ನಿರ್ಧರಿಸಿದ್ದಾರೆ. 

ಹಾಗೆಯೇ ಕೋವಿಡ್‌ ದೃಢಪಟ್ಟವರೊಂದಿಗೆ ಸಂಪರ್ಕದಲ್ಲಿದ್ದ ಪ್ರಾಥಮಿಕ ಸಂಪರ್ಕಿತರನ್ನು ಅವರ  ಮನೆಯಿಂದ ಕ್ವಾರಂಟೀನ್‌ ಕೇಂದ್ರಗಳಿಗೆ ಸ್ಥಳಾಂತರ  ಮಾಡಲು ಅಧಿಕಾರಿಗಳಿಗೆ ಆಯುಕ್ತರು ಸೂಚಿಸಿರುವುದು ಡಿಎಚ್‌ಒಗಳಿಗೆ ಬರೆದಿರು ಪತ್ರದಿಂದ ತಿಳಿದು ಬಂದಿದೆ.

ಅಲ್ಲದೆ ಸಾಮಾಜಿಕ ಅಂತರಕ್ಕೆ ಕೊಡುತ್ತಿರುವ ಒತ್ತನ್ನು, ಶಾರೀರಕ  ಅಂತರಕ್ಕೆ ಕೊಡುತ್ತಿಲ್ಲ. ಇದು ಕೂಡ ವೈರಾಣು ಇನ್ನಷ್ಟು ವೇಗದಲ್ಲಿ ಹಬ್ಬಲು ಕಾರಣವಾಗಬಲ್ಲದು ಎಂಬ ಹೊಸ ಅಂಶವನ್ನು ಆರೋಗ್ಯ ಶಿಕ್ಷಣಾಧಿಕಾರಿಗಳು  ಬಹಿರಂಗಪಡಿಸಿದ್ದಾರೆ. 

‘ದಿ ಫೈಲ್‌’ ಜತೆ ಮಾತನಾಡಿದ ಹೆಸರು ಹೇಳಲಿಚ್ಛಿಸದ ಆರೋಗ್ಯ ಶಿಕ್ಷಣಾಧಿಕಾರಿಯೊಬ್ಬರು ‘ಮನೆಗಳಲ್ಲಿ ಪ್ರತ್ಯೇಕವಾಗಿರಿಸಿವವರ ಸುರಕ್ಷತೆ  ಹೇಗಿದೆ,  ಹೇಗೆ ಇತರರಿಂದ ಅಂತರವನ್ನು ಕಾಪಾಡಿಕೊಳ್ಳಬೇಕು ಎಂಬ ಬಗ್ಗೆ ಸಮೀಕ್ಷೆ ನಡೆಸಲು ಮಾರ್ಗಸೂಚಿಗಳನ್ನೇ ಹೊರಡಿಸಿಲ್ಲ. ಅಲ್ಲದೆ ಹೇಗೆ ಸಮೀಕ್ಷೆ  ಮಾಡಬೇಕು ಎಂಬ ಬಗ್ಗೆಯೂ ತುರ್ತು ತರಬೇತಿಯನ್ನೂ ನೀಡಿಲ್ಲ,’ ಎಂದು ಅಳಲು ತೋಡಿಕೊಂಡರು. 

ಈಗ  ಕಂಡು ಬಂದಿರುವ ಒಟ್ಟು ಪ್ರಕರಣಗಳ ಪೈಕಿ ಶೇ.25ರಷ್ಟು ಪ್ರಕರಣಗಳನ್ನು ಕೋವಿಡ್‌ 19 ಪ್ರಕರಣದ ಪ್ರಾಥಮಿಕ ಸಂಪರ್ಕಗಳೆಂದು ಪರಿಗಣಿಸಿದೆ. ‘ಕರ್ನಾಟಕ  ಸರ್ಕಾರದ ಈಗಿರುವ ಶಿಷ್ಟಾಚಾರದ ಪ್ರಕಾರ ಕೋವಿಡ್‌-19  ಪಾಸಿಟಿವ್‌ ರೋಗಿಯ ಪ್ರಾಥಮಿಕ ಸಂಪರ್ಕವನ್ನು ಅವರ ಮನೆಗಳಲ್ಲಿಯೇ ಇರಿಸಬೇಕಾಗಿತ್ತು. ಹೋಮ್‌ ಕ್ವಾರಂಟೀನ್‌ಗೆ ಒಳಗಾಗಿರುವ ವ್ಯಕ್ತಿಯ ವೈಯಕ್ತಿಕ ಶಿಸ್ತು ಅತ್ಯಂತ ನಿರ್ಣಾಯಕವಾಗಿದೆ. ಪ್ರಾಥಮಿಕ ಸಂಪರ್ಕಗಳನ್ನು ಹೊಂದಿದ ವ್ಯಕ್ತಿಗಳು ಹೋಮ್‌ ಕ್ವಾರಂಟೀನ್‌ ಶಿಷ್ಟಾಚಾರವನ್ನು ಅನುಸರಿಸುತ್ತಿಲ್ಲ. ಇದು ಸೋಂಕು  ಹರಡಲು ಮುಖ್ಯ ಕಾರಣವಾಗುತ್ತಿದೆ. ಇಂತಹ ಸ್ಥಿತಿಯಲ್ಲಿ ಪ್ರಾಥಮಿಕ  ಸಂಪರ್ಕವನ್ನು ಹೋಮ್‌ ಕ್ವಾರಂಟೀನ್‌ಗೆ ಒಳಪಡಿಸುವುದು ಕಷ್ಟದ  ಕೆಲಸವಾಗುತ್ತಿದೆ,’ ಎಂದು ಆಯುಕ್ತರು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. 

ಸೋಂಕು ಉಲ್ಬಣಗೊಳ್ಳುವ ಮುನ್ನವೇ ಎಚ್ಚೆತ್ತುಕೊಳ್ಳದ  ಅಧಿಕಾರಶಾಹಿ ಸೋಂಕಿತರನ್ನು ಮತ್ತು ವಿದೇಶದಿಂದ ಬೆಂಗಳೂರು, ಮಂಗಳೂರು, ಹುಬ್ಬಳ್ಳಿ, ಬೆಳಗಾವಿಗೆ ಆಗಮಿಸಿದ ಅಂದಾಜು 26,000 ಮಂದಿಯನ್ನು ಮನೆಗೆ ಕಳಿಸದೇ ಪ್ರತ್ಯೇಕ ವಸತಿ ಸೌಕರ್ಯ ಕಲ್ಪಿಸಬೇಕಿತ್ತು. ಕೇವಲ ಸಂಶಯ ಇರುವ ಪ್ರಕರಣಗಳನ್ನಷ್ಟೇ ಪರಿಗಣಿಸಿ ಉಳಿದವರನ್ನು ಮನೆಗಳಿಗೆ ಕಳಿಸುವ ಮೂಲಕ ಇಲಾಖೆ ಅತಿ ದೊಡ್ಡ ಲೋಪವನ್ನೆಸಗಿದೆ ಎಂದು ಇಲಾಖೆಯ ಮತ್ತೊಬ್ಬ ಅಧಿಕಾರಿಯೊಬ್ಬರು ‘ದಿ ಫೈಲ್‌’ಗೆ ತಿಳಿಸಿದರು.

Hot this week

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ...

42,750 ಕೋಟಿ ದೀರ್ಘಾವಧಿ ಸಾಲ, 4,516 ಕೋಟಿ ಆದಾಯ ಕೊರತೆ; ಎಸ್ಕಾಂಗಳ ಆರ್ಥಿಕ ಸ್ಥಿತಿ ಅನಾವರಣ

ಬೆಂಗಳೂರು; ವಿದ್ಯುತ್ ಸರಬರಾಜು ಕಂಪನಿಗಳು ಇದುವರೆಗೆ ಒಟ್ಟಾರೆ 42,750 ಕೋಟಿಗಳಷ್ಟು ದೀರ್ಘಾವಧಿ...

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ...

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

Topics

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ...

42,750 ಕೋಟಿ ದೀರ್ಘಾವಧಿ ಸಾಲ, 4,516 ಕೋಟಿ ಆದಾಯ ಕೊರತೆ; ಎಸ್ಕಾಂಗಳ ಆರ್ಥಿಕ ಸ್ಥಿತಿ ಅನಾವರಣ

ಬೆಂಗಳೂರು; ವಿದ್ಯುತ್ ಸರಬರಾಜು ಕಂಪನಿಗಳು ಇದುವರೆಗೆ ಒಟ್ಟಾರೆ 42,750 ಕೋಟಿಗಳಷ್ಟು ದೀರ್ಘಾವಧಿ...

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ...

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

ನರೇಗಾ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಿಯಮ ಉಲ್ಲಂಘನೆ; 86.67 ಕೋಟಿ ರು ಅಕ್ರಮ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಮಾನವ ಸಂಪನ್ಮೂಲ ಬಳಕೆಗಾಗಿ ಮಾಡಿಕೊಂಡಿದ್ದ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಡೆದಿದ್ದ...

ಮೋಸದ ವಹಿವಾಟು, ಹೆಚ್ಚಿನ ಪಾವತಿ, ಅಕ್ರಮ ವೆಚ್ಚ; ನರೇಗಾದ ಮತ್ತೊಂದು ಮುಖ ಬಯಲು ಮಾಡಿದ ಸಿಎಜಿ

ಬೆಂಗಳೂರು; ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೈಗೊಂಡಿದ್ದ ಕಾಮಗಾರಿಗಳು...

ಗೃಹಜ್ಯೋತಿ; 23,823.06 ಮಿಲಿಯನ್ ಯೂನಿಟ್ ವಿದ್ಯುತ್ ಬಳಕೆ, ಎಸ್ಕಾಂಗಳಿಗೆ 631.75 ಕೋಟಿ ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಗೃಹ ಜ್ಯೋತಿ ಯೋಜನೆ ಅನುಷ್ಠಾನಗೊಳಿಸಿರುವ ವಿದ್ಯುತ್ ಸರಬರಾಜು ಕಂಪನಿಗಳಿಗೆ ಸರ್ಕಾರವು...

Related Articles

Popular Categories

error: Content is protected !!