Thursday | March 19, 2026 |

ಕರೊನಾ ಪ್ರಕರಣ ಸಂಖ್ಯೆಯಲ್ಲಿ ಹೆಚ್ಚಳ; ಪ್ರಯೋಗಾಲಯಗಳ ಹೆಚ್ಚಿಸದೇ ಮೈಮರೆತ ಸರ್ಕಾರ?

Support THE-FILE

spot_img

ಬೆಂಗಳೂರು; ರಾಜ್ಯದಲ್ಲಿ ಕರೊನಾ ವೈರಾಣು ಸೋಂಕು ಹೊಂದಿರವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದರೂ ಪ್ರಯೋಗಾಲಯಗಳ ಸಂಖ್ಯೆಯನ್ನು ಹೆಚ್ಚಿಸುತ್ತಿಲ್ಲ. ಕರ್ನಾಟಕದಲ್ಲಿ ದೃಢಪಟ್ಟ ಪ್ರಕರಣಗಳ ಸಂಖ್ಯೆ 98ಕ್ಕೇರಿದೆಯಲ್ಲದೆ ಸಮುದಾಯಗಳಲ್ಲಿ ವೈರಸ್‌ ಅತ್ಯಂತ ವೇಗವಾಗಿ ಪ್ರಸರಣವಾಗುತ್ತಿರುವ ಸೂಚನೆಗಳು ಕಂಡು ಬರುತ್ತಿದ್ದರೂ ಸಾರ್ವಜನಿಕ ಆಸ್ಪತ್ರೆಗಳಲ್ಲಿನ ಪ್ರಯೋಗಾಲಯಗಳ ಸಂಖ್ಯೆ 7 ರ ಗಡಿ ದಾಟಿಲ್ಲ. 

ಪ್ರಕರಣವನ್ನು ನಿಭಾಯಿಸುವಲ್ಲಿ ನೆರೆಯ ರಾಜ್ಯಗಳಿಗಿಂತ ಹಿಂದೆ  ಬಿದ್ದಿರುವ ರಾಜ್ಯ ಸರ್ಕಾರ, ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಹಗಲಿರುಳು ಕಾರ್ಯನಿರ್ವಹಿಸುತ್ತಿರುವ ಆರೋಗ್ಯ ಕಾರ್ಯಕರ್ತರಿಗೆ  ಆರೋಗ್ಯ ಸುರಕ್ಷಾ ಕವಚ ಸೇರಿದಂತೆ ರಕ್ಷಣಾ ಸಾಧನಗಳನ್ನು ಸಮರ್ಪಕವಾಗಿ ಪೂರೈಕೆ ಮಾಡುವಲ್ಲಿ ನಿರ್ಲಕ್ಷ್ಯವನ್ನು ಮೆರೆದಿದೆ. ಇದೇ ಪರಿಸ್ಥಿತಿ ಮುಂದುವರೆದಲ್ಲಿ ಮುಂದಿನ ದಿನಗಳಲ್ಲಿ ಕೋವಿಡ್‌-19 ಪ್ರಕರಣಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಇಡೀ ದೇಶವನ್ನೇ  ಮುನ್ನೆಡೆಸುವುದರಲ್ಲಿ  ಯಾವುದೇ ಅನುಮಾನಗಳೂ ಇಲ್ಲ. 

ಪ್ರಯೋಗಾಲಯಗಳ ಸಂಖ್ಯೆ ಹೆಚ್ಚಳ ಮಾಡುವ ಮಾತು ಒತ್ತಟ್ಟಿಗಿರಲಿ. ಆರೋಗ್ಯ ಕಾರ್ಯಕರ್ತರಿಗೆ ಗುಣಮಟ್ಟದ ಸುರಕ್ಷಾ ಕವಚ, ರಕ್ಷಣಾ ಸಾಧನಗಳನ್ನೂ ಪೂರೈಸಿಲ್ಲ ಎಂದು ಆರೋಗ್ಯ ಕಾರ್ಯಕರ್ತರೊಬ್ಬರು ‘ದಿ ಫೈಲ್‌’ಗೆ ಮಾಹಿತಿ ನೀಡಿದ್ದಾರೆ. 

ಅಲ್ಲದೆ, ಈ ಬಗ್ಗೆ ಬಾಗಲಕೋಟೆಯ ಗ್ರಾಮೀಣ ಪ್ರದೇಶವೊಂದಕ್ಕೆ ತೆರಳಿದ್ದ ಸರ್ಕಾರಿ ವೈದ್ಯಾಧಿಕಾರಿಗಳೊಬ್ಬರು ಆರೋಗ್ಯ ಕಾರ್ಯಕರ್ತರು ಮತ್ತು  ವೈದ್ಯಾಧಿಕಾರಿಗಳಿಗೂ ರಕ್ಷಣಾ ಕವಚಗಳನ್ನು ಪೂರೈಸಿಲ್ಲ ಎಂದು ಹೇಳಿರುವ ವಿಡಯೋ ವೈರಲ್‌ ಆಗಿದೆ. ಇಂತಹ ಪ್ರಕರಣಗಳನ್ನು ರಾಜ್ಯ ಸರ್ಕಾರ  ಹೇಗೆ  ನಿಭಾಯಿಸುತ್ತಿದೆ ಎಂಬುದಕ್ಕೆ ಈ ಎಲ್ಲವೂ ಪದೇ ಪದೇ ನಿದರ್ಶನವನ್ನು ಒದಗಿಸುತ್ತಿದ್ದರೂ ಇನ್ನೂ ಎಚ್ಚೆತ್ತುಕೊಂಡಿಲ್ಲ. 

ಹೆಚ್ಚಿನ ಪ್ರಯೋಗಾಲಯಗಳನ್ನು ಹೊಂದಿರುವ ರಾಜ್ಯಗಳಷ್ಟೇ ಹೆಚ್ಚು ಪರೀಕ್ಷಿಸುತ್ತಿವೆ ಮತ್ತು ಹೆಚ್ಚಿನ ಪ್ರಕರಣಗಳನ್ನು ಪತ್ತೆ ಮಾಡುತ್ತಿವೆ. ಕರ್ನಾಟಕದಲ್ಲಿ ಈವರೆವಿಗೆ ಒಟ್ಟು  1,637 ಮಾದರಿಗಳನ್ನು ಪರೀಕ್ಷಿಸಿದ್ದರೆ,  ಕೇರಳದಲ್ಲಿ 4,516, ಮಹಾರಾಷ್ಟ್ರದಲ್ಲಿ 2,144 ಮಾದರಿಗಳನ್ನು ಪರೀಕ್ಷಿಸಿದೆ. ದೇಶದಲ್ಲಿ ಪತ್ತೆಯಾದ ಒಟ್ಟು ಪ್ರಕರಣಗಳ ಪೈಕಿ ಕೇರಳ  ಮತ್ತು ಮಹಾರಾಷ್ಟ್ರದಲ್ಲಿ  ಶೇ.37ಕ್ಕಿಂತ  ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷಿಸಿರುವುದು ಐಸಿಎಂಆರ್‌  ಜಾಲತಾಣದಿಂದ ಗೊತ್ತಾಗಿದೆ. 

ಇನ್ನು ಹೆಚ್ಚಿನ ಜನಸಂಖ್ಯೆ ಹೊಂದಿರುವ ರಾಜ್ಯಗಳು ಕಡಿಮೆ ಪರೀಕ್ಷೆಗಳನ್ನು ನಡೆಸುತ್ತಿವೆ. ಕರ್ನಾಟಕದಲ್ಲಿ ಪ್ರತಿ ಮಿಲಿಯನ್‌ಗೆ 27 ಮಂದಿಯನ್ನು ಪರೀಕ್ಷಿಸಿರುವುದು ತಿಳಿದು ಬಂದಿದೆ. 

ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್‌ನ ಇತ್ತೀಚಿನ ನವೀಕರಣದ ಪ್ರಕಾರ ಮಾರ್ಚ್ 24 ರ ಹೊತ್ತಿಗೆ 21,804 ವ್ಯಕ್ತಿಗಳಿಂದ 22,694 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಈ ಪರೀಕ್ಷೆಗಳಲ್ಲಿ ಸುಮಾರು 41.5% (9,409) ಕಳೆದ ಐದು ದಿನಗಳಲ್ಲಿ (ಮಾರ್ಚ್ 20-24) ನಡೆಸಲಾಗಿದೆ.ದಿನಕ್ಕೆ ಸರಾಸರಿ 1,882 ಸಂಖ್ಯೆಯಲ್ಲಿ ಪರೀಕ್ಷೆಗಳು ನಡೆದಿವೆ.

ಅದೇ ರೀತಿ ಕರ್ನಾಟಕದಲ್ಲಿ ಕೋವಿಡ್‌ 19 ದೃಢಪಟ್ಟಿರುವ ಒಟ್ಟು ಪ್ರಕರಣಗಳಲ್ಲಿ 20-30 ವಯೋಮಾನದವರ ಸಂಖ್ಯೆ ಅಗ್ರ ಪಂಕ್ತಿಯಲ್ಲಿದೆ. ಈ ವಯೋಮಾನದವರಲ್ಲಿ ಒಟ್ಟು 20 ಪ್ರಕರಣಗಳಿದ್ದರೆ, 5-10 ವರ್ಷದವರಲ್ಲಿ  2, 10-20ರ ವಯೋಮಾನದವರಲ್ಲಿ 4, 30-40 ವಯೋಮಾನದವರ ಪಟ್ಟಿಯಲ್ಲಿ 17 ಪ್ರಕರಣಗಳು, 40-50 ವಯೋಮಾನದವರಲ್ಲಿ 8, 50-60ರವರಲ್ಲಿ 7, 60-70ರಲ್ಲಿ 12 ಮತ್ತು 70ರ ವಯೋಮಾನದವರಲ್ಲಿ 4 ಪ್ರಕರಣಗಳಿರುವುದು ಕರ್ನಾಟಕ ಸರ್ಕಾರದ ಆರೋಗ್ಯ, ಕುಟುಂಬ ಕಲ್ಯಾಣ ಸೇವೆಗಳ  ಇಲಾಖೆಯ ಅಧಿಕೃತ  ಜಾಲತಾಣದಿಂದ  ತಿಳಿದು ಬಂದಿದೆ. 

Hot this week

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

ರೋಹಿತ್ ವೇಮುಲ ಕಾಯ್ದೆ; ವ್ಯಾಖ್ಯಾನಗಳು ಅಸ್ಪಷ್ಟ, ಕಾನೂನು ಬಲವಿಲ್ಲ, ವಿಧೇಯಕವೇ ಅಪೂರ್ಣ

ಬೆಂಗಳೂರು; ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು...

ಗ್ರಾಮಠಾಣ ಜಮೀನು ಅದಲು-ಬದಲು; ಆರ್ಥಿಕ ಇಲಾಖೆ ಆಕ್ಷೇಪ ಬದಿಗೊತ್ತಿ ಎಂ ಆರ್ ಸೀತಾರಾಂ ಕುಟುಂಬದ ಬೆನ್ನಿಗೆ ನಿಂತ ಸರ್ಕಾರ

ಬೆಂಗಳೂರು; ಸರ್ಕಾರಿ ಭೂಮಿಗೆ ರಸ್ತೆಯ ಸಂಪರ್ಕ ಹೊಂದಿಲ್ಲದಿರುವ, ರಸ್ತೆ ಸಂಪರ್ಕ ಕಲ್ಪಿಸದೇ...

ಅದಾನಿ ಎಸಿಸಿ ಲಿಮಿಟೆಡ್‌ನಿಂದ ಅಕ್ರಮ ಗಣಿಗಾರಿಕೆ; ನಿರ್ದೇಶಕರು, ಅಧಿಕಾರಿಗಳ ವಿರುದ್ಧ ಲೋಕಾ ತನಿಖೆಗೆ ಶಿಫಾರಸ್ಸು, ಕಡತಕ್ಕೆ ಧೂಳು

ಬೆಂಗಳೂರು;  ಕಲ್ಬುರ್ಗಿಯ ವಾಡಿಯಲ್ಲಿ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್ ಪ್ರೈವೈಟ್ ಲಿಮಿಟೆಡ್...

1,260 ಕೋಟಿ ಮೊತ್ತದ ಹಗರಣ; 3 ವರ್ಷವಾದರೂ ಕಾಣದ ತಾರ್ಕಿಕ ಅಂತ್ಯ, ತೆವಳಿದ ಲೋಕಾ ತನಿಖೆ

ಬೆಂಗಳೂರು;  1,260 ಕೋಟಿ ರು ಮೊತ್ತದಲ್ಲಿ  108 ಆರೋಗ್ಯ ಕವಚ ಆಂಬ್ಯುಲೆನ್ಸ್‌ಗಳನ್ನು...

Topics

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

ರೋಹಿತ್ ವೇಮುಲ ಕಾಯ್ದೆ; ವ್ಯಾಖ್ಯಾನಗಳು ಅಸ್ಪಷ್ಟ, ಕಾನೂನು ಬಲವಿಲ್ಲ, ವಿಧೇಯಕವೇ ಅಪೂರ್ಣ

ಬೆಂಗಳೂರು; ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು...

ಗ್ರಾಮಠಾಣ ಜಮೀನು ಅದಲು-ಬದಲು; ಆರ್ಥಿಕ ಇಲಾಖೆ ಆಕ್ಷೇಪ ಬದಿಗೊತ್ತಿ ಎಂ ಆರ್ ಸೀತಾರಾಂ ಕುಟುಂಬದ ಬೆನ್ನಿಗೆ ನಿಂತ ಸರ್ಕಾರ

ಬೆಂಗಳೂರು; ಸರ್ಕಾರಿ ಭೂಮಿಗೆ ರಸ್ತೆಯ ಸಂಪರ್ಕ ಹೊಂದಿಲ್ಲದಿರುವ, ರಸ್ತೆ ಸಂಪರ್ಕ ಕಲ್ಪಿಸದೇ...

ಅದಾನಿ ಎಸಿಸಿ ಲಿಮಿಟೆಡ್‌ನಿಂದ ಅಕ್ರಮ ಗಣಿಗಾರಿಕೆ; ನಿರ್ದೇಶಕರು, ಅಧಿಕಾರಿಗಳ ವಿರುದ್ಧ ಲೋಕಾ ತನಿಖೆಗೆ ಶಿಫಾರಸ್ಸು, ಕಡತಕ್ಕೆ ಧೂಳು

ಬೆಂಗಳೂರು;  ಕಲ್ಬುರ್ಗಿಯ ವಾಡಿಯಲ್ಲಿ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್ ಪ್ರೈವೈಟ್ ಲಿಮಿಟೆಡ್...

1,260 ಕೋಟಿ ಮೊತ್ತದ ಹಗರಣ; 3 ವರ್ಷವಾದರೂ ಕಾಣದ ತಾರ್ಕಿಕ ಅಂತ್ಯ, ತೆವಳಿದ ಲೋಕಾ ತನಿಖೆ

ಬೆಂಗಳೂರು;  1,260 ಕೋಟಿ ರು ಮೊತ್ತದಲ್ಲಿ  108 ಆರೋಗ್ಯ ಕವಚ ಆಂಬ್ಯುಲೆನ್ಸ್‌ಗಳನ್ನು...

ಶೈಕ್ಷಣಿಕ ಸಂಯೋಜಕ ಹುದ್ದೆ; 88.06 ಕೋಟಿ ಹೊರೆ, ಅರ್ಹ 1,500 ಅತಿಥಿ ಉಪನ್ಯಾಸಕರ ಹುದ್ದೆ ಕಿತ್ತುಕೊಂಡಿತೇ?

ಬೆಂಗಳೂರು; ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ದ  ನಿಗದಿತ ವಿದ್ಯಾರ್ಹತೆ ಹೊಂದದ...

ಅರಣ್ಯ ಜಮೀನಿನ ಖಾತೆ ಬದಲಾವಣೆ, ಅಸಮರ್ಪಕ ವರದಿ; ತಡವಾಗಿ ವಿಚಾರಣೆ, ನೋಟೀಸ್ ಜಾರಿ

ಬೆಂಗಳೂರು; ಭಾರತ ಸರ್ಕಾರದ ಅರಣ್ಯ ಸಚಿವಾಲಯದಿಂದ ಯಾವುದೇ ಪೂರ್ವಾನುಮತಿ ಪಡೆಯದೇ ಅಂದಾಜು...

ಸಾಮಾಜಿಕ ಭದ್ರತಾ ಯೋಜನೆ; ಖರ್ಚಾಗದ ಪೂರ್ಣ ಅನುದಾನ, 676.16 ಕೋಟಿ ಉಳಿಕೆ

ಬೆಂಗಳೂರು; ವೃದ್ಧಾಪ್ಯ, ಸಂಧ್ಯಾ ಸುರಕ್ಷಾ ಸೇರಿದಂತೆ ಒಟ್ಟಾರೆ 12 ಸಾಮಾಜಿಕ ಭದ್ರತಾ...

Related Articles

Popular Categories

error: Content is protected !!