Monday | July 27, 2026 |

ಜಿಎಸ್‌ಟಿಯಲ್ಲಿ ಕರ್ನಾಟಕಕ್ಕೆ ದೊರೆಯದ ಪಾಲು; ಬಜೆಟ್‌ ಭಾಷಣದಲ್ಲಿ ಒಪ್ಪಿಕೊಂಡ ಯಡಿಯೂರಪ್ಪ

ಕೇಂದ್ರದಿಂದ ಬರಬೇಕಿದ್ದ ಸುಮಾರು ₹11 ಸಾವಿರ ಕೋಟಿ ಜಿಎಸ್‌ಟಿ (ಸರಕು ಮತ್ತು ಸೇವಾ ತೆರಿಗೆ) ಪಾಲು ರಾಜ್ಯಕ್ಕೆ ದೊರೆಯದ ಕಾರಣ ಈ ಬಾರಿಯ ಅನುದಾನದಲ್ಲಿ ಅಂದಾಜು 8 ಸಾವಿರ ಕೋಟಿ ರು. ಕಡಿಮೆಯಾಗಿದೆ.
ಬಜೆಟ್‌ ಭಾಷಣದಲ್ಲಿ ಕೇಂದ್ರದಿಂದ ಬರಬೇಕಿದ್ದ ತೆರಿಗೆ ಪಾಲು ಮತ್ತು ಅನುದಾನದ ಬಗ್ಗೆ ಪ್ರಸ್ತಾಪಿಸಿರುವ ಯಡಿಯೂರಪ್ಪ ಅವರು ಜಿಎಸ್‌ಟಿಯಲ್ಲಿನ ಕರ್ನಾಟಕದ ನ್ಯಾಯಬದ್ಧ ಪಾಲು ದೊರೆತಿಲ್ಲ ಎಂಬ ಆರೋಪಗಳಿಗೆ ಪುಷ್ಠಿ ಒದಗಿಸಿದ್ದಾರೆ.
ಸರಕು ಮತ್ತು ಸೇವಾ ತೆರಿಗೆ ರೂಪದಲ್ಲಿ ಕರ್ನಾಟಕದ ಪಾಲು ದೊರೆಯದಿರುವ ಬಗ್ಗೆ ಪ್ರತಿಪಕ್ಷ ಕಾಂಗ್ರೆಸ್‌ ಕೂಡ ಸದನದಲ್ಲಿ ದನಿ ಎತ್ತಿತ್ತು. ‘ತೆರಿಗೆ ಮತ್ತು ಮಾಹಿತಿ ತಂತ್ರಜ್ಞಾನ ಆಧರಿತ ಉತ್ಪನ್ನಗಳ ಮೂಲಕ ಕರ್ನಾಟಕ ರಾಜ್ಯವು ದೇಶಕ್ಕೆ ಆದಾಯ ತಂದುಕೊಡುತ್ತಿದೆ. ಆದರೆ ರಾಜ್ಯ ಸರ್ಕಾರಕ್ಕೆ ಹೆಚ್ಚು ಆದಾಯ ಬರುತ್ತಿಲ್ಲ’ ಎಂದು ಬಜೆಟ್‌ ಭಾಷಣದಲ್ಲಿ ಹೇಳಿದ್ದಾರೆ.
2019–20ರಲ್ಲಿ ಕೇಂದ್ರ ತೆರಿಗೆಯಲ್ಲಿ ರಾಜ್ಯದ ಪಾಲು ₹1,993 ಕೋಟಿಯಷ್ಟು ಕಡಿತವಾಗಿದೆ. ರಾಜಸ್ವ ಸಂಪನ್ಮೂಲ ಇಳಿಕೆಯಾಗಿದೆ. ಜಿಎಸ್‌ಟಿ ಉಪಕರದ ನಿರೀಕ್ಷಿತ ಸಂಗ್ರಹ ಖೋತಾ ಕಾರಣ ಸುಮಾರು ₹3000 ಕೋಟಿ ರೂಪಾಯಿ ರಾಜ್ಯದ ಪಾಲು ಕಡಿಮೆಯಾಗಿದೆ. ಹೀಗಾಗಿ ಅನಿವಾರ್ಯವಾಗಿ ಕೆಲ ಇಲಾಖೆಗಳ ವೆಚ್ಚ ಕಡಿಮೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಮಾಹಿತಿ ನೀಡಿದರು.
ಪ್ರಾದೇಶಿಕ ಅಸಮತೋಲನ ನಿವಾರಣೆ, ಕೃಷಿ, ಕೈಗಾರಿಕೆ, ಪ್ರವಾಸೋದ್ಯಮಕ್ಕೆ ನಮ್ಮ ಸರ್ಕಾರ ಹೆಚ್ಚು ಒತ್ತು ನೀಡುತ್ತಿದೆ. ಕೌಶಲ ಅಭಿವೃದ್ಧಿ ಮೂಲಕ ನಿರುದ್ಯೋಗ ನಿವಾರಣೆಗೆ ಗಮನ ಹರಿಸಲಾಗಿದೆ ಎಂದು ಯಡಿಯೂರಪ್ಪ ಹೇಳಿದರು.
ನೆರೆ ಪರಿಹಾರಕ್ಕೆ ಆದ್ಯತೆ: ಪ್ರಕೃತಿಯ ಮುನಿಸು, ನೈಸರ್ಗಿಕ ವಿಕೋಪ ಪರಿಹಾರಕ್ಕೆ ಆದ್ಯತೆ ನೀಡಿದ್ದೇವೆ. ಒಂದೆಡೆ ನೆರೆ, ಮತ್ತೊಂದೆಡೆ ಬರವನ್ನು ರಾಜ್ಯ ಏಕಕಾಲಕ್ಕೆ ಎದುರಿಸಿತು. 7 ಲಕ್ಷ ಜನರ ಬದುಕಿಗೆ ತೊಂದರೆಯಾಯಿತು. 4.69 ಲಕ್ಷ ಹೆಕ್ಟೇರ್ ಕೃಷಿ ಭೂಮಿ ಹಾನಿಗೀಡಾಯಿತು. ರಸ್ತೆ, ಸೇತುವೆ, ಶಾಲೆ, ಅಂಗನವಾಡಿಗಳಿಗೆ ಹಾನಿಯಾಯಿತು. ₹35,160 ಕೋಟಿ ನಷ್ಟವಾಗಿದೆ. ಕೇಂದ್ರ ಸರ್ಕಾರ ₹1869 ಕೋಟಿ ನೀಡಿದೆ ಎಂದು ಮುಖ್ಯಮಂತ್ರಿ ಮಾಹಿತಿ ಒದಗಿಸಿದರು.

Hot this week

ದೇಶದಲ್ಲಿ 5.64 ಕೋಟಿ, ರಾಜ್ಯದಲ್ಲಿ 23.21 ಲಕ್ಷ ಪ್ರಕರಣಗಳು ವಿಚಾರಣೆಗೆ ಬಾಕಿ; ನ್ಯಾಯಾಲಯಗಳಲ್ಲಿ ಕೆಲಸದ ಒತ್ತಡ, ನ್ಯಾಯದಾನವೂ ವಿಳಂಬ

ಬೆಂಗಳೂರು: ದೇಶದ ವಿವಿಧ ನ್ಯಾಯಾಲಯಗಳಲ್ಲಿ ಒಟ್ಟು 5.64 ಕೋಟಿಗೂ ಅಧಿಕ ಪ್ರಕರಣಗಳು...

15ನೇ ಹಣಕಾಸು ಆಯೋಗ; ಗುಜರಾತ್‌ಗೆ ಅತೀ ಕಡಿಮೆ, ಕರ್ನಾಟಕಕ್ಕೆ ಅತೀ ಹೆಚ್ಚು ಮೊತ್ತ ಬಿಡುಗಡೆಗೆ ಬಾಕಿ

ಬೆಂಗಳೂರು; ಕರ್ನಾಟಕ ರಾಜ್ಯವೂ ಸೇರಿದಂತೆ ದೇಶದ 28 ರಾಜ್ಯಗಳಲ್ಲಿರುವ ಗ್ರಾಮ ಪಂಚಾಯ್ತಿಗಳಿಗೆ...

ಪೋಕ್ಸೋ; ಕರ್ನಾಟಕದಲ್ಲಿ 21,436 ಪ್ರಕರಣಗಳು ವಿಚಾರಣೆಗೆ ಬಾಕಿ, ದೇಶದಲ್ಲಿ ಪ್ರಕರಣಗಳ ಸಂಖ್ಯೆಯಲ್ಲಿ ಶೇ.48ರಷ್ಟು ಹೆಚ್ಚಳ

ಬೆಂಗಳೂರು:  ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ವಿರುದ್ಧದ ಪೋಕ್ಸೋ...

ಮುದ್ರಾ ಯೋಜನೆ ಸಾಲದ ಖಾತೆ ತೆರೆಯುವಲ್ಲಿ ಹಿಂದುಳಿದ 8 ಜಿಲ್ಲೆ; ಸಾಲ ನೀಡುವಲ್ಲಿ ಖಾಸಗಿ ಬ್ಯಾಂಕ್‌ಗಳದ್ದೇ ಮೇಲುಗೈ

ಬೆಂಗಳೂರು; ಮುದ್ರಾ ಸಾಲ ಸಹಿತ ವಿವಿಧ ಸ್ವಯಂ ಉದ್ಯಮ ಯೋಜನೆಗಳಡಿ ಕರ್ನಾಟಕ...
Please Scan to make Your Contribution

Topics

15ನೇ ಹಣಕಾಸು ಆಯೋಗ; ಗುಜರಾತ್‌ಗೆ ಅತೀ ಕಡಿಮೆ, ಕರ್ನಾಟಕಕ್ಕೆ ಅತೀ ಹೆಚ್ಚು ಮೊತ್ತ ಬಿಡುಗಡೆಗೆ ಬಾಕಿ

ಬೆಂಗಳೂರು; ಕರ್ನಾಟಕ ರಾಜ್ಯವೂ ಸೇರಿದಂತೆ ದೇಶದ 28 ರಾಜ್ಯಗಳಲ್ಲಿರುವ ಗ್ರಾಮ ಪಂಚಾಯ್ತಿಗಳಿಗೆ...

ಪೋಕ್ಸೋ; ಕರ್ನಾಟಕದಲ್ಲಿ 21,436 ಪ್ರಕರಣಗಳು ವಿಚಾರಣೆಗೆ ಬಾಕಿ, ದೇಶದಲ್ಲಿ ಪ್ರಕರಣಗಳ ಸಂಖ್ಯೆಯಲ್ಲಿ ಶೇ.48ರಷ್ಟು ಹೆಚ್ಚಳ

ಬೆಂಗಳೂರು:  ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ವಿರುದ್ಧದ ಪೋಕ್ಸೋ...

ಕರ್ನಾಟಕ ವೈದ್ಯಕೀಯ ಸರಬರಾಜು ನಿಗಮ ವ್ಯವಸ್ಥಾಪಕ ನಿರ್ದೇಶಕರ ಬದಲಾವಣೆಗೆ ಸಚಿವರ ಪಟ್ಟು; ಐಎಎಸ್‌, ಕೆಎಎಸ್‌ಯೇತರ ಅಧಿಕಾರಿ ನೇಮಕಕ್ಕೆ ಮುಂದಾಗಿರುವುದೇಕೆ?

ಬೆಂಗಳೂರು; ತಮಿಳುನಾಡು ಮಾದರಿಯಲ್ಲಿ ಕರ್ನಾಟಕದ ವೈದ್ಯಕೀಯ ಸರಬರಾಜು ನಿಗಮವನ್ನು ಸ್ಥಾಪಿಸಿರುವ ರಾಜ್ಯ...

ರೈಲ್ವೇ ಯೋಜನೆಗಳಿಗೆ ಗ್ರಹಣ; 7,748 ಕೋಟಿ ರು ಅನುದಾನವಿದ್ದರೂ ಬಿರುಸುಗೊಳ್ಳದ ಭೂಸ್ವಾಧೀನ ಪ್ರಕ್ರಿಯೆ, ರಾಜ್ಯದತ್ತಲೇ ಬೊಟ್ಟು ಮಾಡಿದ ಕೇಂದ್ರ ಸರ್ಕಾರ

ಬೆಂಗಳೂರು; ಕರ್ನಾಟಕದಲ್ಲಿ  ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಗೆ ಕೇಂದ್ರ ಸರ್ಕಾರವು  2026-27ನೇ ಸಾಲಿನಲ್ಲಿ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸೇರದ ಭದ್ರಾ ಮೇಲ್ದಂಡೆ ಯೋಜನೆ; ಸಹಾಯಧನ ಬಿಡುಗಡೆ ವಿಳಂಬಕ್ಕೆ ನೆಪವೊಡ್ಡಿದ ಕೇಂದ್ರ

ಬೆಂಗಳೂರು; ರಾಜ್ಯದ ಮಹತ್ವಾಕಾಂಕ್ಷೆ ನೀರಾವರಿ ಯೋಜನೆ ಭದ್ರಾ ಮೇಲ್ದಂಡೆ ಯೋಜನೆಯ ಅಂದಾಜು...

Related Articles

Popular Categories

error: Content is protected !!