Wednesday | March 25, 2026 |

ಮೈತ್ರಿ ಸರ್ಕಾರದ ಕಾಮಗಾರಿಗಳಿಗೆ ತಡೆ; ಸದನದಲ್ಲಿ ಒಪ್ಪಿಕೊಂಡ ಬಿಜೆಪಿ ಸರ್ಕಾರ

Support THE-FILE

spot_img

ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರದ ಅಧಿಕಾರಾವಧಿಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಗೆ ಮಂಜೂರಾಗಿದ್ದ ಒಟ್ಟು ಮೊತ್ತದ ಪೈಕಿ 943.48 ಕೋಟಿ ರು. ಮೊತ್ತದ ಕಾಮಗಾರಿಗಳಿಗೆ ಬಿಜೆಪಿ ಸರ್ಕಾರ ತಡೆಯೊಡ್ಡಿತ್ತು ಎಂದು ಕೆ ಎಸ್‌ ಈಶ್ವರಪ್ಪ ಅವರು ಸದನದಲ್ಲಿ ಲಿಖಿತ ಉತ್ತರ ನೀಡುವ ಮೂಲಕ ಒಪ್ಪಿಕೊಂಡಿದ್ದಾರೆ.
ಮೈತ್ರಿ ಸರ್ಕಾರದ ಅವಧಿಯಲ್ಲಿ ಜುಲೈ 2019ರ ನಂತರ ಮಂಜೂರಾಗಿದ್ದ ಕಾಮಗಾರಿಗಳಿಗೆ ತಡೆಯೊಡ್ಡಿದ್ದ ಬಿಜೆಪಿ ಸರ್ಕಾರದ ಧೋರಣೆ ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿತ್ತು. ಅಲ್ಲದೆ ರಾಜಕೀಯ ದ್ವೇಷ ಸಾಧಿಸುವ ಭಾಗವಾಗಿಯೇ ಮೈತ್ರಿ ಸರ್ಕಾರ ಅನುಮೋದಿಸಿದ್ದ ಕಾಮಗಾರಿಗಳಿಗೆ ತಡೆಯೊಡ್ಡಿತ್ತು ಎಂಬ ಆರೋಪಕ್ಕೂ ಯಡಿಯೂರಪ್ಪ ಅವರು ಗುರಿಯಾಗಿದ್ದರು.
ಹಾಸನ ಜಿಲ್ಲೆಗೆ ಮಂಜೂರಾಗಿದ್ದ ಅಭಿವೃದ್ಧಿ ಯೋಜನೆಗಳನ್ನು ಬಿಜೆಪಿ ಸರ್ಕಾರ ತಡೆ ಹಿಡಿದಿರುವುದನ್ನು ಖಂಡಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಮಾಜಿ ಸಚಿವ ಎಚ್‌.ಡಿ.ರೇವಣ್ಣ ಹೇಳಿಕೆ ನೀಡಿದ ಒಂದು ತಿಂಗಳ ಬೆನ್ನಲ್ಲೇ ತಡೆಯೊಡ್ಡಿದ್ದ ಕಾಮಗಾರಿಗಳ ಮೊತ್ತದ ವಿವರ ಬಹಿರಂಗಗೊಂಡಿದೆ.

ತಡೆಹಿಡಿಯಲಾದ ಕಾಮಗಾರಿಗಳ ಪೈಕಿ 517.87 ಕೋಟಿ ರು.ಮೊತ್ತದ ಕಾಮಗಾರಿಗಳನ್ನು ಮುಂದುವರೆಸಿದೆ. ಮುಂದುವರೆಸಿರುವ ಕಾಮಗಾರಿಗಳ ಪೈಕಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿನಿಧಿಸಿರುವ ಬಾದಾಮಿ ಮತ್ತು ಎಚ್‌ ಡಿ ಕುಮಾರಸ್ವಾಮಿ ಪ್ರತಿನಿಧಿಸಿರುವ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರ ಉಳಿದ ಎಲ್ಲ  ಕ್ಷೇತ್ರಗಳ ಪೈಕಿ ಸಿಂಹಪಾಲು ಪಡೆದಿರುವುದು ವಿಶೇಷ.  

ಬಾದಾಮಿ ವಿಧಾನಸಭೆ ಕ್ಷೇತ್ರಕ್ಕೆ ಹಿಂದಿನ ಸಮ್ಮಿಶ್ರ  ಸರ್ಕಾರದ ಅವಧಿಯಲ್ಲಿ ಒಟ್ಟು 20 ಕೋಟಿ ರು.ಮೊತ್ತದ ಕಾಮಗಾರಿಗೆ  ಮಂಜೂರಾತಿ ದೊರೆತ್ತಿತ್ತಾದರೂ ಬಿಡಿಗಾಸು ಬಿಡುಗಡೆಯಾಗಿರಲಿಲ್ಲ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಕಾಮಗಾರಿಗೆ ತಡೆಯೊಡ್ಡಿತ್ತಾದರೂ ಪ್ರಥಮ ಹಂತದಲ್ಲೇ ಒಂದೇ ಬಾರಿಗೆ 20 ಕೋಟಿ ರು.ಗಳನ್ನು ಬಿಡುಗಡೆ ಮಾಡಿರುವುದು ಲಿಖಿತ ಉತ್ತರದಿಂದ  ತಿಳಿದು ಬಂದಿದೆ. 

ಅದೇ ರೀತಿ ಸಚಿವ ಎಸ್‌ ಟಿ ಸೋಮಶೇಖರ್‌, ಎಂಟಿಬಿ ನಾಗರಾಜ್‌, ಆನಂದ್‌ಸಿಂಗ್‌, ಎನ್‌ ಮಹೇಶ್‌, ಕೆ ಸುಧಾಕರ್‌, ಬಿ ಸಿ ಪಾಟೀಲ್‌, ಎಚ್‌ ನಾಗೇಶ್‌, ನಾರಾಯಣಗೌಡ, ಎಚ್‌ ವಿಶ್ವನಾಥ್‌, ಅರಬೈಲು ಶಿವರಾಮ ಹೆಬ್ಬಾರ್‌ ಪ್ರತಿನಿಧಿಸಿರುವ ಕ್ಷೇತ್ರಗಳಿಗೆ ಅನುಮೋದಿಸಿದ್ದ ಪೂರ್ಣ ಮೊತ್ತವನ್ನು ಬಿಜೆಪಿ ಸರ್ಕಾರ ಬಿಡುಗಡೆ ಮಾಡಿರುವುದು ವಿಶೇಷ. 

ಇನ್ನು, ಕಾಂಗ್ರೆಸ್‌ನ ಪ್ರಭಾವಿ ಶಾಸಕರು ಪ್ರತಿನಿಧಿಸಿರುವ ಕ್ಷೇತ್ರಗಳಿಗೆ ಮೈತ್ರಿ ಸರ್ಕಾರ ಅನುಮೋದಿಸಿದ್ದ ಮೊತ್ತವನ್ನು ತಡೆಹಿಡಿದಿತ್ತಾದರೂ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಅತ್ಯಲ್ಪ ದಿನಗಳಲ್ಲೇ ಪೂರ್ಣ ಮೊತ್ತ ಬಿಡುಗಡೆಯಾಗಿದೆ. 

ದೊಡ್ಡಬಳ್ಳಾಪುರ ಶಾಸಕ ವೆಂಕಟರಮಣಯ್ಯ, ದಾಸರಹಳ್ಳಿ ಶಾಸಕ ಆರ್‌  ಮಂಜುನಾಥ್‌, ಚಿಕ್ಕೋಡಿ ಶಾಸಕ ಗಣೇಶ್‌ಪ್ರಕಾಶ್‌ ಹುಕ್ಕೇರಿ, ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್‌, ಅಥಣಿಯ ಮಹಾಂತೇಶ ಕವಟಗಿಮಠ, ಕಂಪ್ಲಿಯ ಜೆ ಎನ್‌ ಗಣೇಶ್‌, ಭಾಲ್ಕಿಯ ಈಶ್ವರ ಖಂಡ್ರೆ, ಹುಮನಾಬಾದ್‌ನ ರಾಜಶೇಖರ್‌ ಪಾಟೀಲ್‌, ಬಸವನ ಬಾಗೇವಾಡಿಯ ಶಿವಾನಂದ ಎಸ್‌ ಪಾಟೀಲ್‌, ಆರ್‌ ಚೌಡರೆಡ್ಡಿ, ಬಾಗೆಪಲ್ಲಿಯ ಎಸ್‌ ಎನ್ ಸುಬ್ಬಾರೆಡ್ಡಿ, ದಾವಣಗೆರೆ ಉತ್ತರ ಕ್ಷೇತ್ರದ  ಎಸ್‌ ಎ ರವೀಂದ್ರನಾಥ್‌, ಶಾಮನೂರು ಶಿವಶಂಕರಪ್ಪ, ಎನ್‌ ಎಚ್‌ ಕೋನರೆಡ್ಡಿ, ಬೇಲೂರಿನ ಕೆ ಎಸ್‌ ಲಿಂಗೇಶ್‌, ಅರಸಿಕೆರೆಯ ಕೆ ಎಂ ಶಿವಲಿಂಗೇಗೌಡ, ಶ್ರವಣಬೆಳಗೊಳದ  ಸಿ  ಎನ್‌  ಬಾಲಕೃಷ್ಣ, ಶ್ರೀನಿವಾಸಪುರ ಕ್ಷೇತ್ರದ ಕೆ ಆರ್‌ ರಮೇಶ್‌ಕುಮಾರ್‌, ಪಾಂಡವಪುರ ಕ್ಷೇತ್ರದ  ಸಿ ಎಸ್‌ ಪುಟ್ಟರಾಜು, ಪಿರಿಯಾಪಟ್ಟಣದ ಕೆ ಮಹಾದೇವ್‌, ಭದ್ರಾವತಿ ಕ್ಷೇತ್ರದ ಬಿ ಕೆ ಸಂಗಮೇಶ್ವರ್‌, ತುಮಕೂರು ಗ್ರಾಮಾಂತರದ ಡಿ ಸಿ ಗೌರಿಶಂಕರ್‌, ಗುಬ್ಬಿ ಕ್ಷೇತ್ರದ  ಎಸ್‌ ಆರ್‌ ಶ್ರೀನಿವಾಸ್‌, ಎಸ್‌ ಎಲ್ ಬೋಜೇಗೌಡ, ಹಾಲಾಡಿ ಶ್ರೀನಿವಾಸಶೆಟ್ಟಿ ಪ್ರತಿನಿಧಿಸುವ ಕ್ಷೇತ್ರಗಳಿಗೆ ಮೈತ್ರಿ ಸರ್ಕಾರ ಅನುಮೋದಿಸಿದ್ದ  ಮೊತ್ತದ ಪೈಕಿ ನಯಾಪೈಸೆಯನ್ನೂ  ಬಿಡುಗಡೆ ಮಾಡದಿರುವುದು ದಾಖಲೆಯಿಂದ  ತಿಳಿದು ಬಂದಿದೆ.

ಅನುದಾನ ಬಿಡುಗಡೆ ಮಾಡುವ ಸಂಬಂಧ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಶಾಸಕರು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಹಲವು ಬಾರಿ ಪತ್ರ ಬರೆದಿದ್ದರೂ ಅನುದಾನ ಬಿಡುಗಡೆ ಮಾಡಿರಲಿಲ್ಲ. ಹಾಸನ ಜಿಲ್ಲೆಗೆ ಸಂಬಂಧಿಸಿದಂತೆ ಖುದ್ದು ಮಾಜಿ ಪ್ರಧಾನಿ ದೇವೇಗೌಡರೇ ಮಧ್ಯ ಪ್ರವೇಶ ಮಾಡಿದ್ದರೂ ಸಹ ಅನುದಾನ ಬಿಡುಗಡೆ ಮಾಡಿರಲಿಲ್ಲ.   

ಅಭಿವೃದ್ಧಿ ಯೋಜನೆಗಳಿಗೆ ತಾಂತ್ರಿಕ, ಆಡಳಿತಾತ್ಮಕ ಮಂಜೂರಾತಿ ನೀಡಿ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡು ಅನುಷ್ಠಾನ ಹಂತದಲ್ಲಿರುವ ಕಾಮಗಾರಿಗಳಿಗೂ ತಡೆ ನೀಡಿ ರಾಜಕೀಯ ದ್ವೇಷ ಸಾಧನೆ ಮಾಡಲಾಗುತ್ತಿದೆ. ‘ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅಭಿವೃದ್ಧಿ ವಿಷಯದಲ್ಲಿ ದ್ವೇಷದ ರಾಜಕಾರಣ ಮಾಡುವುದಿಲ್ಲ ಎಂದು ಹೇಳುತ್ತಲೇ ಹಾಸನ ಜಿಲ್ಲೆಯ ಅಭಿವೃದ್ಧಿ ಯೋಜನೆಗಳಿಗೆ ತಡೆ ನೀಡಿ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ,’ ಎಂದು ರೇವಣ್ಣ ಅವರು ಆಕ್ರೋಶ ವ್ಯಕ್ತಪಡಿಸಿದ್ದನ್ನು ಸ್ಮರಿಸಬಹುದು.  

Hot this week

ನರೇಗಾ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಿಯಮ ಉಲ್ಲಂಘನೆ; 86.67 ಕೋಟಿ ರು ಅಕ್ರಮ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಮಾನವ ಸಂಪನ್ಮೂಲ ಬಳಕೆಗಾಗಿ ಮಾಡಿಕೊಂಡಿದ್ದ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಡೆದಿದ್ದ...

ಮೋಸದ ವಹಿವಾಟು, ಹೆಚ್ಚಿನ ಪಾವತಿ, ಅಕ್ರಮ ವೆಚ್ಚ; ನರೇಗಾದ ಮತ್ತೊಂದು ಮುಖ ಬಯಲು ಮಾಡಿದ ಸಿಎಜಿ

ಬೆಂಗಳೂರು; ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೈಗೊಂಡಿದ್ದ ಕಾಮಗಾರಿಗಳು...

ಗೃಹಜ್ಯೋತಿ; 23,823.06 ಮಿಲಿಯನ್ ಯೂನಿಟ್ ವಿದ್ಯುತ್ ಬಳಕೆ, ಎಸ್ಕಾಂಗಳಿಗೆ 631.75 ಕೋಟಿ ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಗೃಹ ಜ್ಯೋತಿ ಯೋಜನೆ ಅನುಷ್ಠಾನಗೊಳಿಸಿರುವ ವಿದ್ಯುತ್ ಸರಬರಾಜು ಕಂಪನಿಗಳಿಗೆ ಸರ್ಕಾರವು...

ವಿನಾಶಕಾರಿ ಭೂ ಕುಸಿತ; ಕೊಡಗು ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರದಲ್ಲಿ ಸಭೆಯೇ ನಡೆದಿಲ್ಲ, ಪುರಾವೆಯೂ ಇಲ್ಲ

ಬೆಂಗಳೂರು; ಕೊಡಗಿನಲ್ಲಿ 2018-19ನೇ ಸಾಲಿನಲ್ಲಿ  ಭಾರೀ ಪ್ರಮಾಣದ ವಿನಾಶಕಾರಿ ಭೂ ಕುಸಿತಗಳಾಗಿದ್ದರೂ ...

ಭೂ ಸ್ವಾಧೀನ, ಪರಿಹಾರದಲ್ಲಿ ಅಕ್ರಮ; ಬಿಸ್ವಾಸ್ ವರದಿ ಮೂಲೆಗುಂಪು, 29.96 ಕೋಟಿ ನಷ್ಟ ಪ್ರಕರಣಕ್ಕೆ ಕ್ಲೀನ್ ಚಿಟ್

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಸಾಬೀತಾಗಿದ್ದ  ಬೆಳಗಾವಿ ಜಿಲ್ಲೆ ಹುಕ್ಕೇರಿ...

Topics

ನರೇಗಾ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಿಯಮ ಉಲ್ಲಂಘನೆ; 86.67 ಕೋಟಿ ರು ಅಕ್ರಮ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಮಾನವ ಸಂಪನ್ಮೂಲ ಬಳಕೆಗಾಗಿ ಮಾಡಿಕೊಂಡಿದ್ದ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಡೆದಿದ್ದ...

ಮೋಸದ ವಹಿವಾಟು, ಹೆಚ್ಚಿನ ಪಾವತಿ, ಅಕ್ರಮ ವೆಚ್ಚ; ನರೇಗಾದ ಮತ್ತೊಂದು ಮುಖ ಬಯಲು ಮಾಡಿದ ಸಿಎಜಿ

ಬೆಂಗಳೂರು; ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೈಗೊಂಡಿದ್ದ ಕಾಮಗಾರಿಗಳು...

ಗೃಹಜ್ಯೋತಿ; 23,823.06 ಮಿಲಿಯನ್ ಯೂನಿಟ್ ವಿದ್ಯುತ್ ಬಳಕೆ, ಎಸ್ಕಾಂಗಳಿಗೆ 631.75 ಕೋಟಿ ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಗೃಹ ಜ್ಯೋತಿ ಯೋಜನೆ ಅನುಷ್ಠಾನಗೊಳಿಸಿರುವ ವಿದ್ಯುತ್ ಸರಬರಾಜು ಕಂಪನಿಗಳಿಗೆ ಸರ್ಕಾರವು...

ವಿನಾಶಕಾರಿ ಭೂ ಕುಸಿತ; ಕೊಡಗು ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರದಲ್ಲಿ ಸಭೆಯೇ ನಡೆದಿಲ್ಲ, ಪುರಾವೆಯೂ ಇಲ್ಲ

ಬೆಂಗಳೂರು; ಕೊಡಗಿನಲ್ಲಿ 2018-19ನೇ ಸಾಲಿನಲ್ಲಿ  ಭಾರೀ ಪ್ರಮಾಣದ ವಿನಾಶಕಾರಿ ಭೂ ಕುಸಿತಗಳಾಗಿದ್ದರೂ ...

ಭೂ ಸ್ವಾಧೀನ, ಪರಿಹಾರದಲ್ಲಿ ಅಕ್ರಮ; ಬಿಸ್ವಾಸ್ ವರದಿ ಮೂಲೆಗುಂಪು, 29.96 ಕೋಟಿ ನಷ್ಟ ಪ್ರಕರಣಕ್ಕೆ ಕ್ಲೀನ್ ಚಿಟ್

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಸಾಬೀತಾಗಿದ್ದ  ಬೆಳಗಾವಿ ಜಿಲ್ಲೆ ಹುಕ್ಕೇರಿ...

ಬೆಳೆ ಹವಾಮಾನ ನಿಗಾ ಸಭೆ ನಡೆಸಿಲ್ಲ, ಮಾಹಿತಿ ವ್ಯವಸ್ಥೆಯೂ ಇಲ್ಲ; ಸಿಎಜಿಯನ್ನೂ ತಪ್ಪುದಾರಿಗೆಳೆದ ಸರ್ಕಾರ

ಬೆಂಗಳೂರು;  ರಾಜ್ಯದಲ್ಲಿ ಬರ ಪರಿಸ್ಥಿತಿ ಮೇಲ್ವಿಚಾರಣೆ ಮಾಡಲು ಬೆಳೆ ಹವಾಮಾನ ನಿಗಾ...

ರಾಡಾರ್ ಸ್ಟ್ರೀಮ್‌ ಗೇಜ್‌, ವೈರ್‍‌ಲೆಸ್‌ ಸಾಧನ ಅಳವಡಿಕೆ; ನಡೆಯದ ತಾಂತ್ರಿಕ ಪರಿಶೀಲನೆ, 3.54 ಕೋಟಿ ವ್ಯರ್ಥ

ಬೆಂಗಳೂರು;  ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಪ್ರವಾಹದ ಮುನ್ನೆಚ್ಚರಿಕೆಗಾಗಿ 2.45 ಕೋಟಿ...

ಎಂ ಆರ್ ಸೀತಾರಾಂ ಕುಟುಂಬ ಸದಸ್ಯರ ವಿರುದ್ಧ ಭೂಕಬಳಿಕೆ ಆರೋಪ; ದೂರು ಮರೆಮಾಚಿತ್ತೇ ಕಂದಾಯ ಇಲಾಖೆ?

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ ಅಕ್ಲೇನಹಳ್ಳಿ...

Related Articles

Popular Categories

error: Content is protected !!