Thursday | May 14, 2026 |

ರಾಜೀವ್‌ ಆರೋಗ್ಯ ವಿ ವಿ; ಹೊರಗುತ್ತಿಗೆಯಲ್ಲಿ ಮೀಸಲಾತಿಯೇ ಇಲ್ಲ, ನಿಯಮೋಲ್ಲಂಘನೆಯೇ ಎಲ್ಲ

ಬೆಂಗಳೂರು; ಸರ್ಕಾರಿ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ನಡೆಯುತ್ತಿರುವ ನೇಮಕಾತಿ ಪ್ರಕ್ರಿಯೆಗಳಲ್ಲಿ ಮೀಸಲಾತಿ ನೀತಿ ಅನುಸರಿಸುತ್ತಿಲ್ಲ ಎಂಬ ಮಾಹಿತಿ ಹೊರಬಿದ್ದಿದೆ. ಅಷ್ಟೇ ಏಕೆ ಯಾವ ವಿದ್ಯಾರ್ಹತೆಯನ್ನೂ ಪರಿಗಣಿಸುವುದಿಲ್ಲ ಎಂದು ವೈದ್ಯಕೀಯ ಶಿಕ್ಷಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಯೇ ಒಪ್ಪಿಕೊಂಡಿದ್ದಾರೆ. 

ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ದಿನಗೂಲಿ ನೌಕರರ ಖಾಯಂಗೊಳಿಸುವ ಕುರಿತು ಇತ್ತೀಚೆಗೆ ನಡೆದಿರುವ ಕರ್ನಾಟಕ ವಿಧಾನಪರಿಷತ್‌ನ ಅರ್ಜಿಗಳ ಸಮಿತಿ ಸಭೆ ಹೊರಗುತ್ತಿಗೆ ಪದ್ಧತಿಯ ಇನ್ನೊಂದು ಮುಖವನ್ನು ಪರಿಚಯಿಸಿದೆ. ಸಭೆಯ ನಡವಳಿಗಳು ‘ದಿ ಫೈಲ್‌’ಗೆ ಲಭ್ಯವಾಗಿದೆ.

‘ಹೊರಗುತ್ತಿಗೆ ಮೇಲೆ ಯಾರು ಕೆಲಸ ಮಾಡುತ್ತಿದ್ದಾರೋ ಅವರು ವೈದ್ಯಕೀಯ ಶಿಕ್ಷಣ ಇಲಾಖೆಯ ನೌಕರರೊಂದಿಗೆ ಯಾವುದೇ ರೀತಿಯ ಒಪ್ಪಂದ ಮಾಡಿಕೊಂಡಿಲ್ಲ. ಟೆಂಡರ್‌ ಮೂಲಕ ಒಪ್ಪಂದ ಮಾಡಿಕೊಂಡು ಕೆಲಸ ಕೊಡುತ್ತೇವೆ.  ನಾವು ಮಾಡಿಕೊಂಡಿರುವ ಒಪ್ಪಂದ ಅವರ ಜತೆಗಿರುತ್ತದೆಯೇ  ಹೊರತು ನಮ್ಮ ನೌಕರರ ಜತೆ ಇರುವುದಿಲ್ಲ. ಆದ್ದರಿಂದ ನಾವು  ಯಾವುದೇ ರೋಸ್ಟರ್‌ನ್ನು  ಫಾಲೋ ಮಾಡಿರುವುದಿಲ್ಲ,’ ಎಂದು ವೈದ್ಯಕೀಯ ಶಿಕ್ಷಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಒಪ್ಪಿಕೊಂಡಿದ್ದಾರೆ.

ಬೇರೆ ಬೇರೆ ಇಲಾಖೆಯಲ್ಲಿಯೂ  ಗುತ್ತಿಗೆ  ಆಧಾರದ ಮೇಲೆ ನೇಮಕ ಪ್ರಕ್ರಿಯೆ ನಡೆದಿದೆ. ಆದರೆ ಎಲ್ಲಿಯೂ ಜಾಹೀರಾತು ನೀಡಿಲ್ಲ.  ರೋಸ್ಟರ್‌  ಕೂಡ ಅನುಸರಿಸಿಲ್ಲ ಎಂಬ ಮಾಹಿತಿ ನಡವಳಿಯಿಂದ ತಿಳಿದು ಬಂದಿದೆ. 

‘ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳುವುದು ಒಂದು ದೊಡ್ಡ ಹಗರಣವಾಗಿದೆ. ಗುತ್ತಿಗೆ ಆಧಾರದ ನೇಮಕಾತಿ ಯಾವ ಇಲಾಖೆಯಲ್ಲಿಯೂ ಶೇ.90ರಷ್ಟು ಸರಿಯಾಗಿಲ್ಲ,’  ಸಭೆಯಲ್ಲಿ ಸಮಿತಿ ಸದಸ್ಯ ಶಾಸಕ ಆರ್‌ ಚೌಡರೆಡ್ಡಿ  ತೂಪಲ್ಲಿ ಅವರು ಹೊರಗುತ್ತಿಗೆಯ ಇನ್ನೊಂದು ಮುಖವನ್ನು ತೆರೆದಿಟ್ಟಿರುವುದು ಗೊತ್ತಾಗಿದೆ. 

ವಿಶ್ವವಿದ್ಯಾಲಯಗಳಿಗೆ ನೇಮಕವಾಗುವ ಕುಲಪತಿಗಳು ತಮ್ಮ ಅವಧಿಯಲ್ಲಿ ತಮಗೆ  ಇಷ್ಟಬಂದಂತೆ ಸುಮಾರು  50-60 ಜನರಿಗೆ ಗುತ್ತಿಗೆ ಆಧಾರದ ಮೇಲೆ ನೇಮಕ ನಡೆಸುತ್ತಿರುವ ಬಗ್ಗೆ ಸಭೆಯಲ್ಲಿ ಪ್ರಸ್ತಾಪಿಸಿರುವ ಸದಸ್ಯ ಮರಿತಿಬ್ಬೇಗೌಡ ಅವರು ನಿಯಮಗಳಲ್ಲಿ ಅವಕಾಶವಿಲ್ಲದಿದ್ದರೂ ಮನಸೋ ಇಚ್ಛೆ ಹೊರಗುತ್ತಿಗೆ ಅಡಿ ನೇಮಕ ಪ್ರಕ್ರಿಯೆ ನಡೆಯುತ್ತಿದೆ ಎಂಬುದನ್ನು ಬಹಿರಂಗಗೊಳಿಸಿದ್ದಾರೆ. 

ಇನ್ನು, ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ  ವಿಶ್ವವಿದ್ಯಾಲಯ ಹಳೆಯ ವಿಶ್ವವಿದ್ಯಾಲಯವಾದರೂ ಈವರೆವಿಗೂ ವೃಂದ  ಮತ್ತು ನೇಮಕಾತಿ ನಿಯಮಗಳನ್ನೇ ರಚಿಸಿಕೊಂಡಿಲ್ಲ. ಆದರೆ  ಈ ವಿಚಾರ ಆರ್ಥಿಕ ಇಲಾಖೆಯ ಸರ್ಕಾರದ ಕಾರ್ಯದರ್ಶಿಗೇ ಗೊತ್ತಿಲ್ಲ  ಎಂಬ  ಮಾಹಿತಿಯೂ ನಡವಳಿಯಿಂದ  ತಿಳಿದು ಬಂದಿದೆ.

ಅದೆ ರೀತಿ ಹೊರಗುತ್ತಿಗೆ ಆಧಾರದ ಮೇಲೆ ಮಾಡಿಕೊಳ್ಳುತ್ತಿರುವ ನೇಮಕಾತಿಯಲ್ಲಿ ಮೀಸಲಾತಿ ಪಾಲಿಸದಿರುವ ವೈದ್ಯಕೀಯ ಶಿಕ್ಷಣ ಸಂಸ್ಥೆಗಳ ಪಟ್ಟಿಯಲ್ಲಿ ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ  ಸಂಸ್ಥೆಯೂ ಸೇರಿದೆ. 

‘ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ನೇಮಕ ಮಾಡುವಾಗ ಜಾಹೀರಾತು  ನೀಡಿಲ್ಲ ಮತ್ತು ರೋಸ್ಟರ್‌ ಕೂಡ ಫಾಲೋ ಮಾಡಿಲ್ಲ,’ ಎಂದು ಒಪ್ಪಿಕೊಂಡಿರುವ ವೈದ್ಯಕೀಯ ಶಿಕ್ಷಣ ಸಂಸ್ಥೆಗಳ ಸರ್ಕಾರದ ಪ್ರಧಾನ ಕಾರ್ಯದರ್ಶಿ, ಈ ವಿಚಾರದಲ್ಲಿ ನಾವು ಹಾಗೆ ಮಾಡಬಾರದಿತ್ತು ಎಂದೂ  ಸಮಿತಿ ಮುಂದೆ  ತಪ್ಪೊಪ್ಪಿಕೊಂಡಿರುವುದು ನಡವಳಿಯಿಂದ ಗೊತ್ತಾಗಿದೆ. 

Hot this week

ಕೋಟ್ಯಂತರ ರು ಮೌಲ್ಯದ ನಿವೇಶನ ನಿಯಮಬಾಹಿರ ಮಂಜೂರು, ಅಕ್ರಮ ಲಾಭ; ಕೆಎಎಸ್ ಅಧಿಕಾರಿ ವಿರುದ್ಧ ಲೋಕಾಯುಕ್ತ ವಿಚಾರಣೆಗೆ ಅನುಮತಿ

ಬೆಂಗಳೂರು; ಕೋಟ್ಯಂತರ ರುಪಾಯಿ ಮೌಲ್ಯದ ನಿವೇಶನಗಳನ್ನು ನಿಯಮಬಾಹಿರವಾಗಿ ಮಂಜೂರು ಮಾಡಿ ಖಾಸಗಿಯವರಿಗೆ...

ರಾಮಕೃಷ್ಣ ಹೆಗಡೆ ಕುಟುಂಬಕ್ಕೆ ಖರಾಬು ಗುಂಡು ತೋಪು ಜಮೀನು ಮಂಜೂರಿಗೆ ಕೋರಿಕೆ; ಸಿದ್ದು ಭೇಟಿ ಬೆನ್ನಲ್ಲೇ ಬಹಿರಂಗವಾದ ಪತ್ರ

ಬೆಂಗಳೂರು; ಬೆಂಗಳೂರು ಉತ್ತರ ತಾಲೂಕಿನಲ್ಲಿ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು...

ಘನತ್ಯಾಜ್ಯ ವಿಲೇವಾರಿ ಟಿಪ್ಪಿಂಗ್ ಶುಲ್ಕ; ರಾಮ್ಕಿ ಗ್ರೂಪ್‌ಗೆ ಅನುಕೂಲಕರ, ರಾಜ್ಯ ಸರ್ಕಾರವನ್ನು ಆರ್ಥಿಕ ದಿವಾಳಿತನದತ್ತ ತಳ್ಳಲಾಗಿದೆಯೇ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣಾ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ಟಿಪ್ಪಿಂಗ್ ಶುಲ್ಕದ ಆಧಾರದ ಮೇಲೆ...

ಶಾಂತಿನಗರ ಹೌಸಿಂಗ್‌ ಸೊಸೈಟಿ ಅಕ್ರಮ; 2,900 ಕೋಟಿ ಅಧಿಕ ಮೊತ್ತದ ಹಗರಣ ಕೆದಕಿದರೇ ಸತೀಶ್ ಜಾರಕಿಹೊಳಿ?

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ಅವರೊಂದಿಗೆ ತಳಕು ಹಾಕಿಕೊಂಡಿದ್ದ...

ಎಲ್‌ 1 ತಿರಸ್ಕೃತವಾದರೂ ನಡೆಯದ ಮರು ಟೆಂಡರ್, ಎಲ್ 2 ಗೆ ನೇರವಾಗಿ ಗುತ್ತಿಗೆಗೆ ಪರಿಗಣನೆ; 2,477.90 ಕೋಟಿ ರು ಹಗರಣ!

ಬೆಂಗಳೂರು; ಮಾಲೂರು-ಹೊಸಕೋಟೆ ವ್ಯಾಪ್ತಿಯನ್ನೂ ಸೇರಿದಂತೆ ಒಟ್ಟಾರೆ 123 ಕಿ ಮೀ ರಸ್ತೆಯನ್ನು ...
Please Scan to make Your Contribution

Topics

ಕೋಟ್ಯಂತರ ರು ಮೌಲ್ಯದ ನಿವೇಶನ ನಿಯಮಬಾಹಿರ ಮಂಜೂರು, ಅಕ್ರಮ ಲಾಭ; ಕೆಎಎಸ್ ಅಧಿಕಾರಿ ವಿರುದ್ಧ ಲೋಕಾಯುಕ್ತ ವಿಚಾರಣೆಗೆ ಅನುಮತಿ

ಬೆಂಗಳೂರು; ಕೋಟ್ಯಂತರ ರುಪಾಯಿ ಮೌಲ್ಯದ ನಿವೇಶನಗಳನ್ನು ನಿಯಮಬಾಹಿರವಾಗಿ ಮಂಜೂರು ಮಾಡಿ ಖಾಸಗಿಯವರಿಗೆ...

ರಾಮಕೃಷ್ಣ ಹೆಗಡೆ ಕುಟುಂಬಕ್ಕೆ ಖರಾಬು ಗುಂಡು ತೋಪು ಜಮೀನು ಮಂಜೂರಿಗೆ ಕೋರಿಕೆ; ಸಿದ್ದು ಭೇಟಿ ಬೆನ್ನಲ್ಲೇ ಬಹಿರಂಗವಾದ ಪತ್ರ

ಬೆಂಗಳೂರು; ಬೆಂಗಳೂರು ಉತ್ತರ ತಾಲೂಕಿನಲ್ಲಿ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು...

ಘನತ್ಯಾಜ್ಯ ವಿಲೇವಾರಿ ಟಿಪ್ಪಿಂಗ್ ಶುಲ್ಕ; ರಾಮ್ಕಿ ಗ್ರೂಪ್‌ಗೆ ಅನುಕೂಲಕರ, ರಾಜ್ಯ ಸರ್ಕಾರವನ್ನು ಆರ್ಥಿಕ ದಿವಾಳಿತನದತ್ತ ತಳ್ಳಲಾಗಿದೆಯೇ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣಾ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ಟಿಪ್ಪಿಂಗ್ ಶುಲ್ಕದ ಆಧಾರದ ಮೇಲೆ...

ಶಾಂತಿನಗರ ಹೌಸಿಂಗ್‌ ಸೊಸೈಟಿ ಅಕ್ರಮ; 2,900 ಕೋಟಿ ಅಧಿಕ ಮೊತ್ತದ ಹಗರಣ ಕೆದಕಿದರೇ ಸತೀಶ್ ಜಾರಕಿಹೊಳಿ?

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ಅವರೊಂದಿಗೆ ತಳಕು ಹಾಕಿಕೊಂಡಿದ್ದ...

ಎಲ್‌ 1 ತಿರಸ್ಕೃತವಾದರೂ ನಡೆಯದ ಮರು ಟೆಂಡರ್, ಎಲ್ 2 ಗೆ ನೇರವಾಗಿ ಗುತ್ತಿಗೆಗೆ ಪರಿಗಣನೆ; 2,477.90 ಕೋಟಿ ರು ಹಗರಣ!

ಬೆಂಗಳೂರು; ಮಾಲೂರು-ಹೊಸಕೋಟೆ ವ್ಯಾಪ್ತಿಯನ್ನೂ ಸೇರಿದಂತೆ ಒಟ್ಟಾರೆ 123 ಕಿ ಮೀ ರಸ್ತೆಯನ್ನು ...

ನಕಲಿ ಶಿಕ್ಷಕರಿಗೆ ವೇತನ ಪಾವತಿ; ಆರೋಪಿತ ಅಧಿಕಾರಿಗಳ ವಿರುದ್ಧ ಇಲಾಖೆ ವಿಚಾರಣೆ ಕೈಬಿಟ್ಟ ಸರ್ಕಾರ!

ಬೆಂಗಳೂರು; ರಾಮನಗರ ಜಿಲ್ಲೆಯಲ್ಲಿ  2011ರಿಂದ 2014ರವರೆಗೆ ಹೆಚ್‌ಆರ್‍ಎಂಎಸ್‌ ಮೂಲಕ ನಕಲಿ ಶಿಕ್ಷಕರ...

120 ಎಕರೆ ಗೋಮಾಳ ಕಬಳಿಕೆ ಪ್ರಕರಣ; ಕಂದಾಯ ನಿರೀಕ್ಷಕರ ವರದಿಯನ್ನೇ ಮುಚ್ಚಿಟ್ಟ ತಹಶೀಲ್ದಾರ್, ಸಚಿವರ ಒತ್ತಡ?

ಬೆಂಗಳೂರು; ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ ಗ್ರಾಮದ ವಿವಿಧ ಸರ್ವೆ ನಂಬರ್‍‌ಗಳಲ್ಲಿರುವ...

ಕೌನ್ಸಲಿಂಗ್‌ಗೂ ಮುನ್ನವೇ ಪಿಡಿಒಗಳ ವರ್ಗಾವಣೆ; ಹಣ ಕೊಟ್ಟವರಿಗೆ ಆದೇಶ, ಕೊಡದವರಿಗೆ ಕೌನ್ಸಲಿಂಗ್, ಆರೋಪ

ಬೆಂಗಳೂರು; ಪಂಚಾಯ್ತಿ ಅಭಿವೃದ್ದಿ ಅಧಿಕಾರಿಗಳ ವರ್ಗಾವಣೆಯನ್ನು ಕೌನ್ಸಲಿಂಗ್‌ ಮೂಲಕವೇ ನಡೆಸಲಾಗುವುದು ಎಂದು...

Related Articles

Popular Categories

error: Content is protected !!