Tuesday | May 26, 2026 |

ಹೆಣ್ಣುಮಕ್ಕಳಿಗೆ ಉಚಿತ ಶಿಕ್ಷಣ; 5 ವರ್ಷವಾದರೂ ಬಿಡುಗಡೆಯಾಗದ ಅನುದಾನ

ಬೆಂಗಳೂರು; ಖಾಸಗಿ ಅನುದಾನಿತ ಪದವಿ ಕಾಲೇಜುಗಳ ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣ ಹೆಸರಿನ ಯೋಜನೆ ಪ್ರಕಟಿಸಿದ್ದ ಹಿಂದಿನ ಕಾಂಗ್ರೆಸ್ ಸರ್ಕಾರ, ಘೋಷಣೆಯಂತೆ ಅನುದಾನ ಬಿಡುಗಡೆ ಮಾಡಿರಲಿಲ್ಲ ಎಂಬ ಸಂಗತಿ ಹೊರಬಿದ್ದಿದೆ. ಪ್ರಸಕ್ತ  ಸಾಲಿನ ಶೈಕ್ಷಣಿಕ ವರ್ಷ  ಇನ್ನೆರೆಡು ತಿಂಗಳಲ್ಲಿ ಆರಂಭಗೊಳ್ಳುತ್ತಿದ್ದರೂ ಈಗಿನ ಬಿಜೆಪಿ ಸರ್ಕಾರವೂ ಇದರ ಬಗ್ಗೆ ಚಕಾರವೆತ್ತಿಲ್ಲ. 

ಹೆಣ್ಣು ಮಕ್ಕಳ ಉಚಿತ ಶಿಕ್ಷಣಕ್ಕೆ ಸಂಬಂಧಿಸಿದಂತೆ 2019ರ ಮಾರ್ಚ್ ಅಂತ್ಯಕ್ಕೆ ಸಿಎಜಿ ವರದಿಯಲ್ಲಿನ ಆಕ್ಷೇಪಣೆಗಳಿಗೆ ಸಂಬಂಧಿಸಿದಂತೆ ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರು 2020ರ ಮಾರ್ಚ್ 20ರಂದು ಸರ್ಕಾರಕ್ಕೆ ಬರೆದಿರುವ ಪತ್ರ, ಹಿಂದಿನ ಕಾಂಗ್ರೆಸ್ ಸರ್ಕಾರದ ಮುಖವಾಡವನ್ನು ಕಳಚಿದೆ.

ಖಾಸಗಿ ಅನುದಾನಿತ ಪದವಿ ಕಾಲೇಜುಗಳಲ್ಲಿ ಅನುದಾನಿತ ವಿಷಯಗಳಲ್ಲಿ ಪ್ರವೇಶ ಪಡೆದಿದ್ದ ವಿದ್ಯಾರ್ಥಿನಿಯರಿಗೆ 2014-15ನೇ ಸಾಲಿನಿಂದ ಬೋಧನಾ ಮತ್ತು ಪ್ರಯೋಗಾಲಯ ಶುಲ್ಕದಿಂದ ವಿನಾಯಿತಿ ನೀಡಿ 2014ರ ಜೂನ್ 6ರಂದು ಸರ್ಕಾರ ಆದೇಶ ಹೊರಡಿಸಿತ್ತು. 

2014-15ನೇ ಸಾಲಿನಿಂದ ತಗಲುವ ವಾರ್ಷಿಕ ಅಂದಾಜು ವೆಚ್ಚವನ್ನು ಭರಿಸಲು ಅವಕಾಶ ಮಾಡಿಕೊಟ್ಟಿತ್ತಾದರೂ ಆದೇಶ ಹೊರಬಿದ್ದ ವರ್ಷದಿಂದ 2018-19ನೇ ಸಾಲಿನವರೆಗೆ ಅರ್ಹ ವಿದ್ಯಾರ್ಥಿನಿಯರಿಗೆ ಪಾವತಿ ಮಾಡಬೇಕಾದ ಹಣವನ್ನು ಬಿಡುಗಡೆ ಮಾಡಿರಲಿಲ್ಲ ಎಂಬುದು ಆಯುಕ್ತರ ಪತ್ರದಿಂದ ಗೊತ್ತಾಗಿದೆ.

ವಿದ್ಯಾರ್ಥಿನಿಯರಿಂದ ವಸೂಲಾತಿ ಮಾಡಿದ ಬೋಧನಾ ಮತ್ತು ಪ್ರಯೋಗಾಲಯ ಶುಲ್ಕವನ್ನು ಜಂಟಿ ಖಾತೆಯಲ್ಲಿ ಈಗಾಗಲೇ ಜಮಾ ಆಗಿದೆ. ಆದರೆ ಈ ಹಣ ವಿದ್ಯಾರ್ಥಿನಿಯರ ಕೈಗೆ ಸೇರಿಲ್ಲ. ಹಾಗೆಯೇ ಈ ಹಣ ಪಾವತಿಸಲು ಸರ್ಕಾರ ಈಗಲೂ ಅನುಮತಿ ನೀಡಿಲ್ಲ. 

ಆದರೀಗ 2020-21ನೇ ಶೈಕ್ಷಣಿಕ ವರ್ಷದಲ್ಲಿ ಖಾಸಗಿ ಅನುದಾನಿತ ಪದವಿ ಕಾಲೇಜುಗಳ ಅನುದಾನಿತ ವಿಷಯಗಳಿಗೆ ಪ್ರವೇಶಾತಿ ಪಡೆಯುವ ವಿದ್ಯಾರ್ಥಿನಿಯರಿಂದ ಬೋಧನಾ ಮತ್ತು ಪ್ರಯೋಗಾಲಯ ಶುಲ್ಕವನ್ನು ವಸೂಲಿ ಮಾಡದೇ ಕಡ್ಡಾಯವಾಗಿ ವಿನಾಯಿತಿ ನೀಡಲಾಗಿದೆ. 

ಅದಕ್ಕೆ ತಗಲುವ ವೆಚ್ಚವನ್ನು ಸರ್ಕಾರದಿಂದ ಮರುಭರಿಕೆ ಮಾಡಿಕೊಳ್ಳಲು ಸುತ್ತೋಲೆ ಹೊರಡಿಸಿದೆ ಎಂದು ತಿಳಿದು ಬಂದಿದೆ. ರಾಜ್ಯದಲ್ಲಿ ಅಂದಾಜು 3.5 ಲಕ್ಷ ಹೆಣ್ಣು ಮಕ್ಕಳು  ಕಾಲೇಜು ಶಿಕ್ಷಣ ಪಡೆಯುತ್ತಿದ್ದಾರೆ. ಈ ಯೋಜನೆಗೆ ವಾರ್ಷಿಕವಾಗಿ 95 ಕೋಟಿ ರು.ವೆಚ್ಚವಾಗಲಿದೆ. 

Hot this week

ಸರ್ಕಾರದ ಹಿತಾಸಕ್ತಿ, ಘನತೆಗೆ ಧಕ್ಕೆ ನೆಪ; ಸಮಿತಿ ರಚನೆಯಿಲ್ಲದೇ 21 ಪ್ಯಾಕೇಜ್‌ ಟೆಂಡರ್ ಅನುಮೋದನೆ, 4,791.95 ಕೋಟಿ ರು ಹಗರಣ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣೆಯ 21  ಪ್ಯಾಕೇಜ್‌ಗಳಿಗೆ ಟೆಂಡರ್‌ ಪ್ರಕ್ರಿಯೆಗೆ ಸಂಬಂಧಿಸಿದಂತೆ  ಐಎಎಸ್...

ಐಎಎಸ್‌ ವೃಂದದಲ್ಲಿ ಅನರ್ಹ 7 ಅಧಿಕಾರಿಗಳು ಮುಂದುವರಿಕೆ; ಬಂಡೆದ್ದ 25 ಕೆಎಎಸ್‌ ಅಧಿಕಾರಿಗಳು, ಅಖಾಡಕ್ಕಿಳಿದ ಡಿ ಕೆ ಶಿವಕುಮಾರ್

ಬೆಂಗಳೂರು;  ಕನಿಷ್ಟ 8 ವರ್ಷಗಳ ನಿಯಮಿತವಾಗಿ ಸೇವೆ ಸಲ್ಲಿಸಿರುವ  ಕೆಎಎಸ್‌ ಅಧಿಕಾರಿಗಳಿಗೆ...
Please Scan to make Your Contribution

Topics

ಸರ್ಕಾರದ ಹಿತಾಸಕ್ತಿ, ಘನತೆಗೆ ಧಕ್ಕೆ ನೆಪ; ಸಮಿತಿ ರಚನೆಯಿಲ್ಲದೇ 21 ಪ್ಯಾಕೇಜ್‌ ಟೆಂಡರ್ ಅನುಮೋದನೆ, 4,791.95 ಕೋಟಿ ರು ಹಗರಣ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣೆಯ 21  ಪ್ಯಾಕೇಜ್‌ಗಳಿಗೆ ಟೆಂಡರ್‌ ಪ್ರಕ್ರಿಯೆಗೆ ಸಂಬಂಧಿಸಿದಂತೆ  ಐಎಎಸ್...

ಐಎಎಸ್‌ ವೃಂದದಲ್ಲಿ ಅನರ್ಹ 7 ಅಧಿಕಾರಿಗಳು ಮುಂದುವರಿಕೆ; ಬಂಡೆದ್ದ 25 ಕೆಎಎಸ್‌ ಅಧಿಕಾರಿಗಳು, ಅಖಾಡಕ್ಕಿಳಿದ ಡಿ ಕೆ ಶಿವಕುಮಾರ್

ಬೆಂಗಳೂರು;  ಕನಿಷ್ಟ 8 ವರ್ಷಗಳ ನಿಯಮಿತವಾಗಿ ಸೇವೆ ಸಲ್ಲಿಸಿರುವ  ಕೆಎಎಸ್‌ ಅಧಿಕಾರಿಗಳಿಗೆ...

‘ನಾನು ಹೇಳೋವರೆಗೂ ಕೂಡಂಗಿಲ್ಲ, ಗೆಟ್‌ ಔಟ್‌, ಗೆಟ್‌ ಔಟ್’; ಮಂಡಳಿ ಕಾರ್ಯದರ್ಶಿಯಿಂದಲೇ ಪ್ರಾಜೆಕ್ಟ್ ಇಂಜಿನಿಯರ್ ಸಮೀರ್ ಗೆ ಅವಮಾನ?

ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧ್ಯಕ್ಷರಾಗಿರುವ  ಕರ್ನಾಟಕ ರಾಜ್ಯ ವಿಜ್ಞಾನ ಮತ್ತು...

52 ಕ್ರಿಮಿನಲ್ ಪ್ರಕರಣಗಳ ಹಿಂತೆಗೆತಕ್ಕೆ ಮತ್ತೆ ಚಾಲನೆ; ಡಿಜಿಐಜಿಪಿ, ಕಾನೂನು ಇಲಾಖೆ ಅಸಮ್ಮತಿ ನಡುವೆಯೂ ಪ್ರಸ್ತಾವ

ಬೆಂಗಳೂರು; ರಾಜ್ಯದ ವಿವಿಧ ಪೊಲೀಸ್‌ ಠಾಣೆಗಳಲ್ಲಿ  ಜನಪ್ರತಿನಿಧಿಗಳ ವಿರುದ್ಧ  ದಾಖಲಾಗಿರುವ ಮತ್ತು...

Related Articles

Popular Categories

error: Content is protected !!