Tuesday | August 25, 2026 |

ಹೆಣ್ಣುಮಕ್ಕಳಿಗೆ ಉಚಿತ ಶಿಕ್ಷಣ; 5 ವರ್ಷವಾದರೂ ಬಿಡುಗಡೆಯಾಗದ ಅನುದಾನ

ಬೆಂಗಳೂರು; ಖಾಸಗಿ ಅನುದಾನಿತ ಪದವಿ ಕಾಲೇಜುಗಳ ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣ ಹೆಸರಿನ ಯೋಜನೆ ಪ್ರಕಟಿಸಿದ್ದ ಹಿಂದಿನ ಕಾಂಗ್ರೆಸ್ ಸರ್ಕಾರ, ಘೋಷಣೆಯಂತೆ ಅನುದಾನ ಬಿಡುಗಡೆ ಮಾಡಿರಲಿಲ್ಲ ಎಂಬ ಸಂಗತಿ ಹೊರಬಿದ್ದಿದೆ. ಪ್ರಸಕ್ತ  ಸಾಲಿನ ಶೈಕ್ಷಣಿಕ ವರ್ಷ  ಇನ್ನೆರೆಡು ತಿಂಗಳಲ್ಲಿ ಆರಂಭಗೊಳ್ಳುತ್ತಿದ್ದರೂ ಈಗಿನ ಬಿಜೆಪಿ ಸರ್ಕಾರವೂ ಇದರ ಬಗ್ಗೆ ಚಕಾರವೆತ್ತಿಲ್ಲ. 

ಹೆಣ್ಣು ಮಕ್ಕಳ ಉಚಿತ ಶಿಕ್ಷಣಕ್ಕೆ ಸಂಬಂಧಿಸಿದಂತೆ 2019ರ ಮಾರ್ಚ್ ಅಂತ್ಯಕ್ಕೆ ಸಿಎಜಿ ವರದಿಯಲ್ಲಿನ ಆಕ್ಷೇಪಣೆಗಳಿಗೆ ಸಂಬಂಧಿಸಿದಂತೆ ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರು 2020ರ ಮಾರ್ಚ್ 20ರಂದು ಸರ್ಕಾರಕ್ಕೆ ಬರೆದಿರುವ ಪತ್ರ, ಹಿಂದಿನ ಕಾಂಗ್ರೆಸ್ ಸರ್ಕಾರದ ಮುಖವಾಡವನ್ನು ಕಳಚಿದೆ.

ಖಾಸಗಿ ಅನುದಾನಿತ ಪದವಿ ಕಾಲೇಜುಗಳಲ್ಲಿ ಅನುದಾನಿತ ವಿಷಯಗಳಲ್ಲಿ ಪ್ರವೇಶ ಪಡೆದಿದ್ದ ವಿದ್ಯಾರ್ಥಿನಿಯರಿಗೆ 2014-15ನೇ ಸಾಲಿನಿಂದ ಬೋಧನಾ ಮತ್ತು ಪ್ರಯೋಗಾಲಯ ಶುಲ್ಕದಿಂದ ವಿನಾಯಿತಿ ನೀಡಿ 2014ರ ಜೂನ್ 6ರಂದು ಸರ್ಕಾರ ಆದೇಶ ಹೊರಡಿಸಿತ್ತು. 

2014-15ನೇ ಸಾಲಿನಿಂದ ತಗಲುವ ವಾರ್ಷಿಕ ಅಂದಾಜು ವೆಚ್ಚವನ್ನು ಭರಿಸಲು ಅವಕಾಶ ಮಾಡಿಕೊಟ್ಟಿತ್ತಾದರೂ ಆದೇಶ ಹೊರಬಿದ್ದ ವರ್ಷದಿಂದ 2018-19ನೇ ಸಾಲಿನವರೆಗೆ ಅರ್ಹ ವಿದ್ಯಾರ್ಥಿನಿಯರಿಗೆ ಪಾವತಿ ಮಾಡಬೇಕಾದ ಹಣವನ್ನು ಬಿಡುಗಡೆ ಮಾಡಿರಲಿಲ್ಲ ಎಂಬುದು ಆಯುಕ್ತರ ಪತ್ರದಿಂದ ಗೊತ್ತಾಗಿದೆ.

ವಿದ್ಯಾರ್ಥಿನಿಯರಿಂದ ವಸೂಲಾತಿ ಮಾಡಿದ ಬೋಧನಾ ಮತ್ತು ಪ್ರಯೋಗಾಲಯ ಶುಲ್ಕವನ್ನು ಜಂಟಿ ಖಾತೆಯಲ್ಲಿ ಈಗಾಗಲೇ ಜಮಾ ಆಗಿದೆ. ಆದರೆ ಈ ಹಣ ವಿದ್ಯಾರ್ಥಿನಿಯರ ಕೈಗೆ ಸೇರಿಲ್ಲ. ಹಾಗೆಯೇ ಈ ಹಣ ಪಾವತಿಸಲು ಸರ್ಕಾರ ಈಗಲೂ ಅನುಮತಿ ನೀಡಿಲ್ಲ. 

ಆದರೀಗ 2020-21ನೇ ಶೈಕ್ಷಣಿಕ ವರ್ಷದಲ್ಲಿ ಖಾಸಗಿ ಅನುದಾನಿತ ಪದವಿ ಕಾಲೇಜುಗಳ ಅನುದಾನಿತ ವಿಷಯಗಳಿಗೆ ಪ್ರವೇಶಾತಿ ಪಡೆಯುವ ವಿದ್ಯಾರ್ಥಿನಿಯರಿಂದ ಬೋಧನಾ ಮತ್ತು ಪ್ರಯೋಗಾಲಯ ಶುಲ್ಕವನ್ನು ವಸೂಲಿ ಮಾಡದೇ ಕಡ್ಡಾಯವಾಗಿ ವಿನಾಯಿತಿ ನೀಡಲಾಗಿದೆ. 

ಅದಕ್ಕೆ ತಗಲುವ ವೆಚ್ಚವನ್ನು ಸರ್ಕಾರದಿಂದ ಮರುಭರಿಕೆ ಮಾಡಿಕೊಳ್ಳಲು ಸುತ್ತೋಲೆ ಹೊರಡಿಸಿದೆ ಎಂದು ತಿಳಿದು ಬಂದಿದೆ. ರಾಜ್ಯದಲ್ಲಿ ಅಂದಾಜು 3.5 ಲಕ್ಷ ಹೆಣ್ಣು ಮಕ್ಕಳು  ಕಾಲೇಜು ಶಿಕ್ಷಣ ಪಡೆಯುತ್ತಿದ್ದಾರೆ. ಈ ಯೋಜನೆಗೆ ವಾರ್ಷಿಕವಾಗಿ 95 ಕೋಟಿ ರು.ವೆಚ್ಚವಾಗಲಿದೆ. 

Hot this week

ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಲೋಪ; ಹಣ ಪಾವತಿಯಲ್ಲಿ ಸರ್ಕಾರದ ಆದೇಶಗಳ ಉಲ್ಲಂಘನೆ, 51.21 ಕೋಟಿ ಮೊತ್ತದ ವಹಿವಾಟು ಪಾರದರ್ಶಕವಾಗಿವೆಯೇ?

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು ಹಣ ಪಾವತಿ ಸಂದರ್ಭಗಳಲ್ಲಿ ಸರ್ಕಾರದ...

ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?

ಬೆಂಗಳೂರು;  ರಾಯಚೂರಿನಲ್ಲಿರುವ  ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಟೆಂಡರ್ ಕರೆಯದೇ ನೇರವಾಗಿ ಏಜೆನ್ಸಿ...

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...
Please Scan to make Your Contribution

Topics

ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಲೋಪ; ಹಣ ಪಾವತಿಯಲ್ಲಿ ಸರ್ಕಾರದ ಆದೇಶಗಳ ಉಲ್ಲಂಘನೆ, 51.21 ಕೋಟಿ ಮೊತ್ತದ ವಹಿವಾಟು ಪಾರದರ್ಶಕವಾಗಿವೆಯೇ?

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು ಹಣ ಪಾವತಿ ಸಂದರ್ಭಗಳಲ್ಲಿ ಸರ್ಕಾರದ...

ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?

ಬೆಂಗಳೂರು;  ರಾಯಚೂರಿನಲ್ಲಿರುವ  ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಟೆಂಡರ್ ಕರೆಯದೇ ನೇರವಾಗಿ ಏಜೆನ್ಸಿ...

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...

ನೀಟ್‌ ಪರೀಕ್ಷೆಯಿಂದ ವಿನಾಯಿತಿ; ತಮಿಳುನಾಡು ಮಾದರಿಯಲ್ಲಿ ನಿರ್ಣಯ ಮಂಡಿಸಲು ರಾಜ್ಯ ಸಜ್ಜು, ಕಾನೂನುಬದ್ಧ ವಿನಾಯಿತಿಗೆ ಪ್ರಸ್ತಾವ

ಬೆಂಗಳೂರು; ಕರ್ನಾಟಕ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶ ವ್ಯವಸ್ಥೆಯು ರಾಜ್ಯದ ಶೈಕ್ಷಣಿಕ...

2 ಕಂಪನಿಗಳಿಂದ 400 ಕೋಟಿ ರು ವಹಿವಾಟು ಆರೋಪ; ಐಜಿಪಿ ಚಂದ್ರಶೇಖರ್ ಪ್ರಕರಣದಲ್ಲಿ ವರದಿ ನೀಡಲು ಸರ್ಕಾರದ ನಿರ್ದೇಶನ

ಬೆಂಗಳೂರು; ಸರ್ಕಾರದ ಪೂರ್ವಾನುಮತಿ ಪಡೆಯದೇ ಹಾಗೂ ಸರ್ಕಾರಕ್ಕೆ ವರದಿಯನ್ನು ಸಲ್ಲಿಸದೇ ಕುಟುಂಬ...

Related Articles

Popular Categories

error: Content is protected !!