Friday | June 12, 2026 |

ಹೆಣ್ಣುಮಕ್ಕಳಿಗೆ ಉಚಿತ ಶಿಕ್ಷಣ; 5 ವರ್ಷವಾದರೂ ಬಿಡುಗಡೆಯಾಗದ ಅನುದಾನ

ಬೆಂಗಳೂರು; ಖಾಸಗಿ ಅನುದಾನಿತ ಪದವಿ ಕಾಲೇಜುಗಳ ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣ ಹೆಸರಿನ ಯೋಜನೆ ಪ್ರಕಟಿಸಿದ್ದ ಹಿಂದಿನ ಕಾಂಗ್ರೆಸ್ ಸರ್ಕಾರ, ಘೋಷಣೆಯಂತೆ ಅನುದಾನ ಬಿಡುಗಡೆ ಮಾಡಿರಲಿಲ್ಲ ಎಂಬ ಸಂಗತಿ ಹೊರಬಿದ್ದಿದೆ. ಪ್ರಸಕ್ತ  ಸಾಲಿನ ಶೈಕ್ಷಣಿಕ ವರ್ಷ  ಇನ್ನೆರೆಡು ತಿಂಗಳಲ್ಲಿ ಆರಂಭಗೊಳ್ಳುತ್ತಿದ್ದರೂ ಈಗಿನ ಬಿಜೆಪಿ ಸರ್ಕಾರವೂ ಇದರ ಬಗ್ಗೆ ಚಕಾರವೆತ್ತಿಲ್ಲ. 

ಹೆಣ್ಣು ಮಕ್ಕಳ ಉಚಿತ ಶಿಕ್ಷಣಕ್ಕೆ ಸಂಬಂಧಿಸಿದಂತೆ 2019ರ ಮಾರ್ಚ್ ಅಂತ್ಯಕ್ಕೆ ಸಿಎಜಿ ವರದಿಯಲ್ಲಿನ ಆಕ್ಷೇಪಣೆಗಳಿಗೆ ಸಂಬಂಧಿಸಿದಂತೆ ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರು 2020ರ ಮಾರ್ಚ್ 20ರಂದು ಸರ್ಕಾರಕ್ಕೆ ಬರೆದಿರುವ ಪತ್ರ, ಹಿಂದಿನ ಕಾಂಗ್ರೆಸ್ ಸರ್ಕಾರದ ಮುಖವಾಡವನ್ನು ಕಳಚಿದೆ.

ಖಾಸಗಿ ಅನುದಾನಿತ ಪದವಿ ಕಾಲೇಜುಗಳಲ್ಲಿ ಅನುದಾನಿತ ವಿಷಯಗಳಲ್ಲಿ ಪ್ರವೇಶ ಪಡೆದಿದ್ದ ವಿದ್ಯಾರ್ಥಿನಿಯರಿಗೆ 2014-15ನೇ ಸಾಲಿನಿಂದ ಬೋಧನಾ ಮತ್ತು ಪ್ರಯೋಗಾಲಯ ಶುಲ್ಕದಿಂದ ವಿನಾಯಿತಿ ನೀಡಿ 2014ರ ಜೂನ್ 6ರಂದು ಸರ್ಕಾರ ಆದೇಶ ಹೊರಡಿಸಿತ್ತು. 

2014-15ನೇ ಸಾಲಿನಿಂದ ತಗಲುವ ವಾರ್ಷಿಕ ಅಂದಾಜು ವೆಚ್ಚವನ್ನು ಭರಿಸಲು ಅವಕಾಶ ಮಾಡಿಕೊಟ್ಟಿತ್ತಾದರೂ ಆದೇಶ ಹೊರಬಿದ್ದ ವರ್ಷದಿಂದ 2018-19ನೇ ಸಾಲಿನವರೆಗೆ ಅರ್ಹ ವಿದ್ಯಾರ್ಥಿನಿಯರಿಗೆ ಪಾವತಿ ಮಾಡಬೇಕಾದ ಹಣವನ್ನು ಬಿಡುಗಡೆ ಮಾಡಿರಲಿಲ್ಲ ಎಂಬುದು ಆಯುಕ್ತರ ಪತ್ರದಿಂದ ಗೊತ್ತಾಗಿದೆ.

ವಿದ್ಯಾರ್ಥಿನಿಯರಿಂದ ವಸೂಲಾತಿ ಮಾಡಿದ ಬೋಧನಾ ಮತ್ತು ಪ್ರಯೋಗಾಲಯ ಶುಲ್ಕವನ್ನು ಜಂಟಿ ಖಾತೆಯಲ್ಲಿ ಈಗಾಗಲೇ ಜಮಾ ಆಗಿದೆ. ಆದರೆ ಈ ಹಣ ವಿದ್ಯಾರ್ಥಿನಿಯರ ಕೈಗೆ ಸೇರಿಲ್ಲ. ಹಾಗೆಯೇ ಈ ಹಣ ಪಾವತಿಸಲು ಸರ್ಕಾರ ಈಗಲೂ ಅನುಮತಿ ನೀಡಿಲ್ಲ. 

ಆದರೀಗ 2020-21ನೇ ಶೈಕ್ಷಣಿಕ ವರ್ಷದಲ್ಲಿ ಖಾಸಗಿ ಅನುದಾನಿತ ಪದವಿ ಕಾಲೇಜುಗಳ ಅನುದಾನಿತ ವಿಷಯಗಳಿಗೆ ಪ್ರವೇಶಾತಿ ಪಡೆಯುವ ವಿದ್ಯಾರ್ಥಿನಿಯರಿಂದ ಬೋಧನಾ ಮತ್ತು ಪ್ರಯೋಗಾಲಯ ಶುಲ್ಕವನ್ನು ವಸೂಲಿ ಮಾಡದೇ ಕಡ್ಡಾಯವಾಗಿ ವಿನಾಯಿತಿ ನೀಡಲಾಗಿದೆ. 

ಅದಕ್ಕೆ ತಗಲುವ ವೆಚ್ಚವನ್ನು ಸರ್ಕಾರದಿಂದ ಮರುಭರಿಕೆ ಮಾಡಿಕೊಳ್ಳಲು ಸುತ್ತೋಲೆ ಹೊರಡಿಸಿದೆ ಎಂದು ತಿಳಿದು ಬಂದಿದೆ. ರಾಜ್ಯದಲ್ಲಿ ಅಂದಾಜು 3.5 ಲಕ್ಷ ಹೆಣ್ಣು ಮಕ್ಕಳು  ಕಾಲೇಜು ಶಿಕ್ಷಣ ಪಡೆಯುತ್ತಿದ್ದಾರೆ. ಈ ಯೋಜನೆಗೆ ವಾರ್ಷಿಕವಾಗಿ 95 ಕೋಟಿ ರು.ವೆಚ್ಚವಾಗಲಿದೆ. 

Hot this week

ತ್ಯಾಜ್ಯ ವಿಲೇವಾರಿ ಟೆಂಡರ್ ಪ್ರಕ್ರಿಯೆಗಳಲ್ಲಿ ಅಕ್ರಮ ಆರೋಪ; ಮಧ್ಯಪ್ರವೇಶಕ್ಕೆ ಲೋಕಭವನ ಕದ ತಟ್ಟಿದ ಬಿಜೆಪಿ, ಸ್ವತಂತ್ರ ತನಿಖೆಗೆ ಮುಂದಾಗುವರೇ?

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸಮಗ್ರ ಘನ ತ್ಯಾಜ್ಯ ನಿರ್ವಹಣಾ...

ಕಸ ವಿಲೇವಾರಿ ಟೆಂಡರ್‍‌ನಲ್ಲಿ ಅಕ್ರಮ; 10,000 ಕೋಟಿ ಕಿಕ್‌ ಬ್ಯಾಕ್‌ ಆರೋಪ, ಹೈಕಮಾಂಡ್ ಕಪ್ಪದ ಟೆಂಡರ್, ರಾಜ್ಯಪಾಲರಿಗೆ ದೂರು, ದಿ ಫೈಲ್ ವರದಿ ಬೆನ್ನಲ್ಲೇ ತುಟಿ ಬಿಚ್ಚಿದ ಆರ್ ಅಶೋಕ್

ಬೆಂಗಳೂರು; ಸಮಗ್ರ ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯೂಎಂಎಲ್‌ ಯೋಜಿಸಿದ್ದ ಟೆಂಡರ್ ಪ್ಯಾಕೇಜ್‌ಗಳಲ್ಲಿ...

ಒಂದು ರಾಷ್ಟ್ರ ಒಂದು ಚುನಾವಣೆ; ಸಂಸತ್‌ ಜಂಟಿ ಸಮಿತಿಗೆ 5 ತಿಂಗಳಾದರೂ ಮಾಹಿತಿ ನೀಡದ ರಾಜ್ಯ

ಬೆಂಗಳೂರು; ಒಂದು ರಾಷ್ಟ್ರ ಒಂದು ಚುನಾವಣೆಗೆ ಸಂಬಂಧಿಸಿದಂತೆ ಸಂವಿಧಾನದ 129ನೇ ತಿದ್ದುಪಡಿ...
Please Scan to make Your Contribution

Topics

ಕಸ ವಿಲೇವಾರಿ ಟೆಂಡರ್‍‌ನಲ್ಲಿ ಅಕ್ರಮ; 10,000 ಕೋಟಿ ಕಿಕ್‌ ಬ್ಯಾಕ್‌ ಆರೋಪ, ಹೈಕಮಾಂಡ್ ಕಪ್ಪದ ಟೆಂಡರ್, ರಾಜ್ಯಪಾಲರಿಗೆ ದೂರು, ದಿ ಫೈಲ್ ವರದಿ ಬೆನ್ನಲ್ಲೇ ತುಟಿ ಬಿಚ್ಚಿದ ಆರ್ ಅಶೋಕ್

ಬೆಂಗಳೂರು; ಸಮಗ್ರ ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯೂಎಂಎಲ್‌ ಯೋಜಿಸಿದ್ದ ಟೆಂಡರ್ ಪ್ಯಾಕೇಜ್‌ಗಳಲ್ಲಿ...

ಒಂದು ರಾಷ್ಟ್ರ ಒಂದು ಚುನಾವಣೆ; ಸಂಸತ್‌ ಜಂಟಿ ಸಮಿತಿಗೆ 5 ತಿಂಗಳಾದರೂ ಮಾಹಿತಿ ನೀಡದ ರಾಜ್ಯ

ಬೆಂಗಳೂರು; ಒಂದು ರಾಷ್ಟ್ರ ಒಂದು ಚುನಾವಣೆಗೆ ಸಂಬಂಧಿಸಿದಂತೆ ಸಂವಿಧಾನದ 129ನೇ ತಿದ್ದುಪಡಿ...

ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌, ಸಿಎಂ ಜನಸ್ಪಂದನ, ಸಿ ಎಸ್ ಕಚೇರಿಯಲ್ಲಿ ಇತ್ಯರ್ಥವಾಗದ 37,782 ಅರ್ಜಿಗಳು; ನಿಷ್ಕ್ರೀಯವಾಯಿತೇ ಆಡಳಿತ?

ಬೆಂಗಳೂರು;  ಸಾರ್ವಜನಿಕರು ವಿವಿಧ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌,...

ಅತಿಥಿ ಶಿಕ್ಷಕರ ನೇಮಕ ಪದ್ಧತಿಗೆ ರಾಜ್ಯ ಶಿಕ್ಷಣ ನೀತಿ ಆಯೋಗ ವಿರೋಧ; ಪದ್ದತಿ ಸಂಪೂರ್ಣವಾಗಿ ತೆಗೆದು ಹಾಕದೇ ವರದಿಯನ್ನೇ ಮೂಲೆಗುಂಪು ಮಾಡಿತೇ ಸರ್ಕಾರ?

ಬೆಂಗಳೂರು; 'ರಾಜ್ಯದಲ್ಲಿ   ಬೇರೂರಿದ ಗುತ್ತಿಗೆ ಶಿಕ್ಷಕ ನೇಮಕ ಪದ್ಧತಿಯಿಂದಾಗಿ  ವೃತ್ತಿಪರತೆಯ ಕೊರತೆ...

ಕಸ ವಿಲೇವಾರಿ ಟೆಂಡರ್ ಪ್ರಕ್ರಿಯೆಗಳಲ್ಲಿ ಬಹುಕೋಟಿ ಮೊತ್ತದ ಹಗರಣ; ಯತ್ನಾಳ್, ಶೋಭಾ ನಂತರ ಧೀರಜ್ ಮುನಿರಾಜು ದೂರು, ತುಟಿಬಿಚ್ಚದ ಪ್ರತಿಪಕ್ಷ ನಾಯಕ ಅಶೋಕ್

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬೆಂಗಳೂರಿನ ಸಮಗ್ರ ಘನತ್ಯಾಜ್ಯ ನಿರ್ವಹಣೆಗೆ...

Related Articles

Popular Categories

error: Content is protected !!