Wednesday | August 19, 2026 |

ಬ್ರಿಮ್ಸ್‌ನಲ್ಲಿ 18.00 ಕೋಟಿ ರು.ಅವ್ಯವಹಾರ; ನಿರ್ದೇಶಕ ಸೇರಿ 10 ಮಂದಿ ವಿಚಾರಣೆಗೆ ಅನುಮತಿ

ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಖರೀದಿ, ಸಿಬ್ಬಂದಿ ನೇಮಕ ಮತ್ತು ಇತರೆ ಕಾಮಗಾರಿಗಳಲ್ಲಿ ನಡೆದಿದ್ದ ಒಟ್ಟು 18.00 ಕೋಟಿ ರು. ಮೊತ್ತದ ಅವ್ಯವಹಾರಗಳಿಗೆ ಸಂಬಂಧಿಸಿದಂತೆ ಬ್ರಿಮ್ಸ್‌ ಹಿಂದಿನ ನಿರ್ದೇಶಕ ಡಾ ಚನ್ನಣ್ಣ ಸಿ ಸೇರಿದಂತೆ ಒಟ್ಟು 10 ಮಂದಿ ಅಧಿಕಾರಿ ಸಿಬ್ಬಂದಿ ವಿರುದ್ಧ ವಿಚಾರಣೆಗೆ ಮಂಜೂರಾತಿ ದೊರೆತಿದೆ.

ಬ್ರಿಮ್ಸ್‌ನಲ್ಲಿ ನಡೆದಿದ್ದ ಅವ್ಯವಹಾರಗಳಿಗೆ ಸಂಬಂಧಿಸಿದಂತೆ ದಾಖಲಾಗಿದ್ದ ದೂರನ್ನಾಧರಿಸಿ ತನಿಖೆ ನಡೆಸಿದ್ದ ಭ್ರಷ್ಟಾಚಾರ ನಿಗ್ರಹ ದಳ, ಅವ್ಯವಹಾರ ನಡೆದಿದೆ ಎಂದು ತನಿಖೆ ವೇಳೆಯಲ್ಲಿ ಸಾಬೀತುಪಡಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಸಲು ಅಭಿಯೋಜನಾ ಮಂಜೂರಾತಿ ಪಡೆದಿರುವ ಎಸಿಬಿ ತನಿಖೆಯನ್ನು ಚುರುಕುಗೊಳಿಸಿದೆ. 

ಬೀದರ್‌ ವೈದ್ಯಕೀಯ ಕಾಲೇಜಿನಲ್ಲಿ ನಡೆದಿರುವ ಹಲವು ಅಕ್ರಮಗಳ ಕುರಿತು ತನಿಖೆ ನಡೆದು ಹಲವು  ತಿಂಗಳಾಗಿದ್ದರೂ ಅಭಿಯೋಜನಾ ಮಂಜೂರಾತಿ ನೀಡಿರಲಿಲ್ಲ. ಆದರೆ ಡಾ ಕೆ ಸುಧಾಕರ್‌ ವೈದ್ಯಕೀಯ ಶಿಕ್ಷಣರಾಗುತ್ತಿದ್ದಂತೆ ಆರೋಪಿಗಳ ವಿರುದ್ಧ ವಿಚಾರಣೆಗೆ ಅನುಮತಿ ದೊರೆತಿದೆ ಎಂದು ಇಲಾಖೆಯ ಉನ್ನತ ಮೂಲಗಳು ತಿಳಿಸಿವೆ.

ಬ್ರಿಮ್ಸ್‌ನ ಹಿಂದಿನ ವೈದ್ಯಕೀಯ ಅಧೀಕ್ಷಕ ಡಾ ಶಿವಕುಮಾರ್ ಶೆಟಕಾರ, ಹಿಂದಿನ ಸಿಇಓ ಆನಂದಸಾಗರ ರೆಡ್ಡಿ, ಸಹಾಯಕ ಆಡಳಿತಾಧಿಕಾರಿ ಅನುಸೂಯ, ಕಚೇರಿ ಅಧೀಕ್ಷಕ ಬಾಬು ಕೋಟೆ, ಪ್ರಕಾಶ ಶರಣಪ್ಪ ಮಡಿವಾಳ, ಪ್ರಥಮ ದರ್ಜೆ ಸಹಾಯಕ ಪ್ರಕಾಶ ಮಾಳಗೆ, ವರ್ಷ, ಮಾಚೆ ಕಲ್ಲಪ್ಪ, ಮತ್ತು ದ್ವಿತೀಯ ದರ್ಜೆ ಸಹಾಯಕ ಶಿವಾಜಿ ಅವರು ಇದೀಗ ವಿಚಾರಣೆ ಎದುರಿಸಬೇಕಾಗಿದೆ. ಈ ಆರೋಪಿಗಳ ವಿರುದ್ಧ ಈಗಾಗಲೇ ದೋಷಾರೋಪಣಾ ಪಟ್ಟಿ ಜಾರಿಗೊಳಿಸಿರುವುದು ದಾಖಲೆಯಿಂದ ತಿಳಿದು ಬಂದಿದೆ.

ಆದರೆ ಆರೋಪಿಗಳು ತಮ್ಮ ವಿರುದ್ಧದ ಆರೋಪಗಳನ್ನು ಕೈಬಿಡುವಂತೆ ಸಮಜಾಯಿಷಿ ನೀಡಿದ್ದಾರೆ. ಇದನ್ನು ಪರಿಶೀಲಿಸುತ್ತಿರುವ ಎಸಿಬಿ, ವೈದ್ಯಕೀಯ ಶಿಕ್ಷಣ ಇಲಾಖೆಯ ಸಿಬ್ಬಂದಿಯನ್ನು ಹೊರತುಪಡಿಸಿ ಇತರೆ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ಇಲಾಖೆ ವಿಚಾರಣೆ ನಡೆಸಲು ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆ, ಯೋಜನಾ ಇಲಾಖೆಗೆ ಸಹಮತಿ ಕೋರಿ ಪತ್ರ ಬರೆದಿದೆ. ಆದರೆ ಈವರೆವಿಗೂ ಈ ಇಲಾಖೆಗಳಿಂದ ಸಹಮತಿ ಪತ್ರ ಎಸಿಬಿಗೆ ದೊರೆತಿಲ್ಲ ಎಂಬುದು ಗೊತ್ತಾಗಿದೆ. 

Hot this week

30,01,169 ರೈತರಿಂದ 25,180.77 ಕೋಟಿ ಹೊರಬಾಕಿ; ರೈತರ ಸಾಲ ಮನ್ನಾ ಪ್ರಸ್ತಾವವಿಲ್ಲ, ರೈತರ ಕೆಂಗಣ್ಣಿಗೆ ಗುರಿಯಾಗಲಿದೆಯೇ ಸರ್ಕಾರ?

ಬೆಂಗಳೂರು; ಸಹಕಾರ ಸಂಸ್ಥೆಗಳ ಮೂಲಕ ರೈತರು ಪಡೆದಿರುವ ಕೃಷಿ ಸಾಲವನ್ನು ಮನ್ನಾ...

ಇ-ಆಫೀಸ್‌ ತಂತ್ರಾಂಶದಲ್ಲೇ ಬೆಟ್ಟದಷ್ಟು ಬೆಳೆದು ನಿಂತ ಕಡತಗಳ ರಾಶಿ; ಗರಿಷ್ಠ 3,187, ಕನಿಷ್ಟ 32 ದಿನಗಳಾದರೂ ವಿಲೇವಾರಿಯಾಗಿಲ್ಲ, ಜಡ್ಡುಗಟ್ಟಿದೆಯೇ ಆಡಳಿತ?

ಬೆಂಗಳೂರು;   ಭೌತಿಕ ಕಡತಗಳ ವಿಲೇವಾರಿಯಲ್ಲಿ ಆಗುತ್ತಿದ್ದ ವಿಳಂಬವನ್ನು ತಪ್ಪಿಸುವ ಉದ್ದೇಶದಿಂದ ಇ-ಆಫೀಸ್‌...

ಹಿಂದುಳಿದ ಸಮುದಾಯ ಅಭಿವೃದ್ಧಿ ನಿಗಮಗಳಿಗೆ 473.41 ಕೋಟಿ ಅನುದಾನ ಹಂಚಿಕೆ; ನಾಲ್ಕೂವರೆ ತಿಂಗಳಾದರೂ ನಯಾಪೈಸೆಯೂ ಬಿಡುಗಡೆಯಾಗಿಲ್ಲ

ಬೆಂಗಳೂರು; ಆರ್ಥಿಕ ವರ್ಷ ಆರಂಭವಾಗಿ ನಾಲ್ಕೂವರೆ ತಿಂಗಳಾದರೂ ಸಹ ಹಿಂದುಳಿದ ವರ್ಗಗಳ...
Please Scan to make Your Contribution

Topics

30,01,169 ರೈತರಿಂದ 25,180.77 ಕೋಟಿ ಹೊರಬಾಕಿ; ರೈತರ ಸಾಲ ಮನ್ನಾ ಪ್ರಸ್ತಾವವಿಲ್ಲ, ರೈತರ ಕೆಂಗಣ್ಣಿಗೆ ಗುರಿಯಾಗಲಿದೆಯೇ ಸರ್ಕಾರ?

ಬೆಂಗಳೂರು; ಸಹಕಾರ ಸಂಸ್ಥೆಗಳ ಮೂಲಕ ರೈತರು ಪಡೆದಿರುವ ಕೃಷಿ ಸಾಲವನ್ನು ಮನ್ನಾ...

ಇ-ಆಫೀಸ್‌ ತಂತ್ರಾಂಶದಲ್ಲೇ ಬೆಟ್ಟದಷ್ಟು ಬೆಳೆದು ನಿಂತ ಕಡತಗಳ ರಾಶಿ; ಗರಿಷ್ಠ 3,187, ಕನಿಷ್ಟ 32 ದಿನಗಳಾದರೂ ವಿಲೇವಾರಿಯಾಗಿಲ್ಲ, ಜಡ್ಡುಗಟ್ಟಿದೆಯೇ ಆಡಳಿತ?

ಬೆಂಗಳೂರು;   ಭೌತಿಕ ಕಡತಗಳ ವಿಲೇವಾರಿಯಲ್ಲಿ ಆಗುತ್ತಿದ್ದ ವಿಳಂಬವನ್ನು ತಪ್ಪಿಸುವ ಉದ್ದೇಶದಿಂದ ಇ-ಆಫೀಸ್‌...

ಫ್ರೀಡಂ ಹಬ್ಬಕ್ಕೆ 6 ಕೋಟಿ ವೆಚ್ಚ!; ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳುವ ಮುನ್ನವೇ ಕೆಲಸ ಆರಂಭಿಸಿದ ಕಂಪನಿ

ಬೆಂಗಳೂರು; ಹೊಸದಾಗಿ ವಿದ್ಯಾರ್ಥಿ ನಿಲಯಗಳ ಆರಂಭ, ಅನುಮೋದಿತ ಕಾಮಗಾರಿಗಳ ಕಾರ್ಯಭಾರಕ್ಕೆ ನಲುಗಿ...

3,206 ಪಂಚಾಯ್ತಿಗಳಲ್ಲಿ ಶಾಸನಬದ್ಧ ತೆರಿಗೆ ವಸೂಲು; ಸರ್ಕಾರಕ್ಕೆ ಪಾವತಿಯಾಗದ 17.28 ಕೋಟಿ ಎಲ್ಲಿದೆ?

ಬೆಂಗಳೂರು; ರಾಜ್ಯದ 27 ಜಿಲ್ಲೆಗಳ 3,206 ಪಂಚಾಯ್ತಿಗಳು ಸರಕು ಸೇವಾ ತೆರಿಗೆ,...

Related Articles

Popular Categories

error: Content is protected !!