Sunday | September 20, 2026 |

ಲೋಕಾಯುಕ್ತರ ಶಿಫಾರಸ್ಸು ಕಡೆಗಣನೆ; ವರದಿಗಳ ಪರಿಶೀಲನೆ ಸಂಪ್ರದಾಯಕ್ಕೆ ಮನ್ನಣೆ

ಬೆಂಗಳೂರು; ಕರ್ತವ್ಯಲೋಪ, ಅಧಿಕಾರ ಮತ್ತು ಹಣಕಾಸು ದುರುಪಯೋಗ, ನಿಯಮಬಾಹಿರ ಚಟುವಟಿಕೆ ಮತ್ತು ನಿಯಮಗಳ ಉಲ್ಲಂಘನೆ ಪ್ರಕರಣಗಳಲ್ಲಿ ಭಾಗಿ ಆಗಿರುವ ಅಧಿಕಾರಿ, ಸಿಬ್ಬಂದಿ ವಿರುದ್ಧ  ಇಲಾಖೆ ವಿಚಾರಣೆ  ಪ್ರಕರಣಗಳಿಗೆ ಸಂಬಂಧಿಸಿದಂತೆ ಸರ್ಕಾರದ ಇಲಾಖೆಗಳು ಲೋಕಾಯುಕ್ತರ ಶಿಫಾರಸ್ಸನ್ನು ಕಡೆಗಣಿಸುತ್ತಿವೆ. 

ಅಲ್ಲದೆ,  ಇಂತಹ ಪ್ರಕರಣಗಳಲ್ಲಿ ಅಧಿಕಾರಿಗಳು ಅಂತಿಮ ಆದೇಶಗಳನ್ನು ಹೊರಡಿಸದೇ ಕಾಲಹರಣ ಮಾಡುತ್ತಿದ್ದಾರೆ. ವರದಿಗಳ ಆಧರಿಸಿ ಸಂಬಂಧಪಟ್ಟ ಇಲಾಖೆಯ ಅಭಿಪ್ರಾಯಪಡೆದು ಪರಿಶೀಲಿಸುವ ಸಂಪ್ರದಾಯ ಈಗಲೂ ಮುಂದುವರೆದಿದೆ. 

ಅಷ್ಟೇ ಅಲ್ಲ  ಲೋಕಾಯುಕ್ತ, ಉಪ ಲೋಕಾಯುಕ್ತರ ತನಿಖೆಯಲ್ಲಿ ಅಧಿಕಾರಿಗಳು ಎಸಗಿರುವ ಲೋಪಗಳು, ನಿಯಮ ಉಲ್ಲಂಘನೆ,  ನಿಯಮಬಾಹಿರ ಚಟುವಟಿಕೆಗಳು ಸಾಬೀತಾಗಿದ್ದರೂ ಅಧಿಕಾರಿಗಳು ಪುನಃ ಅದೇ ವರದಿ ಮೇಲೆ ಇಲಾಖೆಯ ಅಭಿಪ್ರಾಯ ಪಡೆಯುವ  ತಂತ್ರಗಾರಿಕೆ ನಡೆಸುತ್ತಿರುವುದು ಇದೀಗ ಬಹಿರಂಗವಾಗಿದೆ. 

ಇಲಾಖೆ ವಿಚಾರಣೆ ನಡೆಸಬೇಕಲ್ಲದೆ ಆರೋಪಿತ ಅಧಿಕಾರಿಗಳ  ವಿರುದ್ಧ ಕೈಗೊಂಡಿರುವ ಕ್ರಮಗಳ ವರದಿ ಸಲ್ಲಿಸಬೇಕು ಎಂದು ಲೋಕಾಯುಕ್ತ ಸಂಸ್ಥೆ ಹಲವು ಬಾರಿ ಬರೆದಿರುವ ನೆನಪೋಲೆಗಳು ಇಲಾಖೆಗಳ  ಕಸದ ಬುಟ್ಟಿಗೆ ಸೇರಿವೆ. ಗ್ರಾಮೀಣಾಭಿವೃದ್ಧಿ, ಪಂಚಾಯತ್‌ರಾಜ್‌, ಕಂದಾಯ, ನಗರಾಭಿವೃದ್ಧಿ ಇಲಾಖೆಗಳಲ್ಲಿ ಅತಿ ಹೆಚ್ಚು ಇಂತಹ ಪ್ರಕರಣಗಳು ಬಾಕಿ ಇರುವುದು ತಿಳಿದು ಬಂದಿದೆ.

ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯಭಾಸ್ಕರ್‌ ಅಧ್ಯಕ್ಷತೆಯಲ್ಲಿ 2020ರ ಜನವರಿ 27ರಂದು ಈ ಕುರಿತು ಸಭೆ ನಡೆದಿದೆ. ‘ ಲೋಕಾಯುಕ್ತ ಪ್ರಕರಣಗಳಲ್ಲಿ ಲೋಕಾಯುಕ್ತರು ನೀಡುತ್ತಿರುವ ವರದಿ ಆಧಾರದ ಮೇಲೆ ಸಂಬಂಧಪಟ್ಟ ಇಲಾಖೆಯ ಅಭಿಪ್ರಾಯ ಪಡೆದು ಪರಿಶೀಲಿಸುವ ಸಂಪ್ರಾಯವನ್ನು ಕೈ ಬಿಟ್ಟು ತಮ್ಮ ಹಂತದಲ್ಲಿ  ಪರಿಶೀಲಿಸಿ ಶೀಘ್ರ  ಕ್ರಮ ಕೈಗೊಂಡು ಅಂತಿಮ ಆದೇಶ ಹೊರಡಿಸಿ,’ ಎಂದು ಸಭೆಯಲ್ಲಿ ಸೂಚಿಸಿರುವುದು ಸಭೆ ನಡವಳಿಯಿಂದ ಗೊತ್ತಾಗಿದೆ. 

ಇನ್ನು, ಪ್ರಾಥಮಿಕ, ಪ್ರೌಢಶಿಕ್ಷಣ, ಸಿಬ್ಬಂದಿ, ಆಡಳಿತ ಸುಧಾರಣೆ,  ಅಲ್ಪಸಂಖ್ಯಾತರ ಕಲ್ಯಾಣ,  ಆರ್ಥಿಕ ಮತ್ತು ನಗರಾಭಿವೃದ್ಧಿ ಇಲಾಖೆಗಳಲ್ಲಿನ ಇಲಾಖೆ ವಿಚಾರಣೆಗಳ ಪ್ರಕರಣಗಳು ಇತ್ಯರ್ಥಗೊಂಡಿಲ್ಲ. ‘ಹಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ವಿಚಾರಣಾಧಿಕಾರಿಗಳಿಂದ ವರದಿ ಬಂದಿದ್ದರೂ ಅಂತಿಮ ಆದೇಶ  ಹೊರಡಿಸಿದ  ಪ್ರಕರಣಗಳ ಸಂಖ್ಯೆ ಅತ್ಯಂತ ಕಡಿಮೆ ಇದೆ. ಈ ಸಂಬಂಧ  ಎಲ್ಲ  ಕಾರ್ಯದರ್ಶಿಗಳು ಗಮನಹರಿಸಬೇಕು,’ ಎಂದು ಮುಖ್ಯ ಕಾರ್ಯದರ್ಶಿ ಸೂಚಿಸಿದ್ದಾರೆ. 

ಅದೇ ರೀತಿ ಅಮಾನತು ಪ್ರಕರಣಗಳಿಗೆ ಸಂಬಂಧಿಸಿದಂತೆ 6 ತಿಂಗಳಿಗೂ  ಮೀರಿ ಹೆಚ್ಚು ಪ್ರಕರಣಗಳಿವೆ. ಕಂದಾಯ, ಪ್ರಾಥಮಿಕ, ಪ್ರೌಢಶಿಕ್ಷಣ ಇಲಾಖೆಗಳಲ್ಲಿ ಇಂತಹ ಪ್ರಕರಣಗಳಿರುವುದು ಸಭೆ ನಡವಳಿಯಿಂದ ತಿಳಿದು ಬಂದಿದೆ. 

ಬಾಕಿ ಕಡತಗಳಿಗೆ  ಸಂಬಂಧಿಸಿದಂತೆಯೂ ಸಭೆಯಲ್ಲಿ ಚರ್ಚೆಯಾಗಿದೆ. ಕಾರ್ಮಿಕ, ಜಲ ಸಂಪನ್ಮೂಲ, ಸಾರ್ವಜನಿಕ ಉದ್ದಿಮೆ, ಕೃಷಿ, ಕನ್ನಡ ಮತ್ತು ಸಂಸ್ಕೃತಿ, ಅರಣ್ಯ, ಗ್ರಾಮೀಣಾಭಿವೃದ್ಧಿ ಪಂಚಾಯತ್‌ರಾಜ್‌, ಮತ್ತು ವಾಣಿಜ್ಯ, ಕೈಗಾರಿಕೆ ಇಲಾಖೆಗಳಲ್ಲಿ ಕಡತಗಳು ವಿಲೇವಾರಿ ಆಗದೇ ಸಾವಿರಾರು ಸಂಖ್ಯೆಯಲ್ಲಿ ಬಾಕಿ ಇವೆ. ಅದೇ ರೀತಿ ಜನತಾದರ್ಶನದ ಅರ್ಜಿಗಳಿಗೆ ಸಂಬಂಧಿಸಿದಂತೆಯೂ ಸಮಾಜ ಕಲ್ಯಾಣ, ಅಲ್ಪಸಂಖ್ಯಾತರ  ಕಲ್ಯಾಣ, ಮಹಿಳಾ,  ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಹೆಚ್ಚಿನ ಅರ್ಜಿಗಳು ಇತ್ಯರ್ಥಗೊಳ್ಳದೇ ವಿಲೇವಾರಿಗೆ ಬಾಕಿ ಇರುವುದು ನಡವಳಿಯಿಂದ ಗೊತ್ತಾಗಿದೆ. 

Hot this week

ಖರ್ಗೆ ಕುಟುಂಬ ಸದಸ್ಯರ ಸಿದ್ದಾರ್ಥ ವಿಹಾರ ಟ್ರಸ್ಟ್‌; ಪ್ರಕರಣ ಮುಂದುವರಿಕೆ, ಲೋಕಾಯುಕ್ತ ಎಸ್‌ಪಿ ಗೆ ನೋಟೀಸ್‌ ನೀಡಿದ ನ್ಯಾಯಾಲಯ

ಬೆಂಗಳೂರು;  ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ,...

ಪಿಎಸ್‌ಐ ನೇಮಕಾತಿ ಹಗರಣ; ಅಮೃತ್‌ ಪೌಲ್‌ ವಿರುದ್ಧ ಇಲಾಖೆ ವಿಚಾರಣೆ, ವಿಚಾರಣಾಧಿಕಾರಿಗೆ 15 ಲಕ್ಷ ರು ಸಂಭಾವನೆ

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾಗಿರುವ ಪಿಎಸ್‌ಐಗಳ ನೇಮಕಾತಿಯಲ್ಲಿನ...

ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆ; ದೇಸೀಯ ಹೆಸರು ಮರು ನಾಮಕರಣಕ್ಕೆ ಎನ್‌ಒಸಿ ಪಡೆಯಲು ಪ್ರಸ್ತಾವ, ಇಂದು ನಿರ್ಧಾರ!

ಬೆಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯ ಹೆಸರು ಬದಲಾವಣೆ ಮಾಡಲು ರಾಜ್ಯ ಕಾಂಗ್ರೆಸ್‌...
Please Scan to make Your Contribution

Topics

ಪಿಎಸ್‌ಐ ನೇಮಕಾತಿ ಹಗರಣ; ಅಮೃತ್‌ ಪೌಲ್‌ ವಿರುದ್ಧ ಇಲಾಖೆ ವಿಚಾರಣೆ, ವಿಚಾರಣಾಧಿಕಾರಿಗೆ 15 ಲಕ್ಷ ರು ಸಂಭಾವನೆ

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾಗಿರುವ ಪಿಎಸ್‌ಐಗಳ ನೇಮಕಾತಿಯಲ್ಲಿನ...

ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆ; ದೇಸೀಯ ಹೆಸರು ಮರು ನಾಮಕರಣಕ್ಕೆ ಎನ್‌ಒಸಿ ಪಡೆಯಲು ಪ್ರಸ್ತಾವ, ಇಂದು ನಿರ್ಧಾರ!

ಬೆಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯ ಹೆಸರು ಬದಲಾವಣೆ ಮಾಡಲು ರಾಜ್ಯ ಕಾಂಗ್ರೆಸ್‌...

ಅನಂತ್‌ ನಾಗ್‌ ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಗೌರವ; 8 ವರ್ಷದ ಹಿಂದಿನ ವಿಸ್ತೃತ ಸಂದರ್ಶನ

ಬೆಂಗಳೂರು;  ಕನ್ನಡ ಚಿತ್ರರಂಗದ  ಹಿರಿಯ ನಟ ಅನಂತ್ ನಾಗ್ ಅವರಿಗೆ 2024ರ...

ಭೂಗತ ಸುರಂಗ ಮಾರ್ಗ; ರಿಯಾಯಿತಿ ಅವಧಿಯಲ್ಲೇ ಗರಿಷ್ಠ ಟೋಲ್‌ ಸಂಗ್ರಹಣೆ, ದರ ಪರಿಷ್ಕರಣೆಯ ಹಿಂದಿನ ರಹಸ್ಯ ಬಯಲು

ಬೆಂಗಳೂರು; ಭೂಗತ ಸುರಂಗ ಮಾರ್ಗದಲ್ಲಿ ರಿಯಾಯಿತಿ ಅವಧಿಯಲ್ಲಿ ಗರಿಷ್ಠ ಟೋಲ್‌ ಸಂಗ್ರಹಣೆ...

Related Articles

Popular Categories

error: Content is protected !!