Wednesday | May 13, 2026 |

ಲೋಕಾಯುಕ್ತರ ಶಿಫಾರಸ್ಸು ಕಡೆಗಣನೆ; ವರದಿಗಳ ಪರಿಶೀಲನೆ ಸಂಪ್ರದಾಯಕ್ಕೆ ಮನ್ನಣೆ

ಬೆಂಗಳೂರು; ಕರ್ತವ್ಯಲೋಪ, ಅಧಿಕಾರ ಮತ್ತು ಹಣಕಾಸು ದುರುಪಯೋಗ, ನಿಯಮಬಾಹಿರ ಚಟುವಟಿಕೆ ಮತ್ತು ನಿಯಮಗಳ ಉಲ್ಲಂಘನೆ ಪ್ರಕರಣಗಳಲ್ಲಿ ಭಾಗಿ ಆಗಿರುವ ಅಧಿಕಾರಿ, ಸಿಬ್ಬಂದಿ ವಿರುದ್ಧ  ಇಲಾಖೆ ವಿಚಾರಣೆ  ಪ್ರಕರಣಗಳಿಗೆ ಸಂಬಂಧಿಸಿದಂತೆ ಸರ್ಕಾರದ ಇಲಾಖೆಗಳು ಲೋಕಾಯುಕ್ತರ ಶಿಫಾರಸ್ಸನ್ನು ಕಡೆಗಣಿಸುತ್ತಿವೆ. 

ಅಲ್ಲದೆ,  ಇಂತಹ ಪ್ರಕರಣಗಳಲ್ಲಿ ಅಧಿಕಾರಿಗಳು ಅಂತಿಮ ಆದೇಶಗಳನ್ನು ಹೊರಡಿಸದೇ ಕಾಲಹರಣ ಮಾಡುತ್ತಿದ್ದಾರೆ. ವರದಿಗಳ ಆಧರಿಸಿ ಸಂಬಂಧಪಟ್ಟ ಇಲಾಖೆಯ ಅಭಿಪ್ರಾಯಪಡೆದು ಪರಿಶೀಲಿಸುವ ಸಂಪ್ರದಾಯ ಈಗಲೂ ಮುಂದುವರೆದಿದೆ. 

ಅಷ್ಟೇ ಅಲ್ಲ  ಲೋಕಾಯುಕ್ತ, ಉಪ ಲೋಕಾಯುಕ್ತರ ತನಿಖೆಯಲ್ಲಿ ಅಧಿಕಾರಿಗಳು ಎಸಗಿರುವ ಲೋಪಗಳು, ನಿಯಮ ಉಲ್ಲಂಘನೆ,  ನಿಯಮಬಾಹಿರ ಚಟುವಟಿಕೆಗಳು ಸಾಬೀತಾಗಿದ್ದರೂ ಅಧಿಕಾರಿಗಳು ಪುನಃ ಅದೇ ವರದಿ ಮೇಲೆ ಇಲಾಖೆಯ ಅಭಿಪ್ರಾಯ ಪಡೆಯುವ  ತಂತ್ರಗಾರಿಕೆ ನಡೆಸುತ್ತಿರುವುದು ಇದೀಗ ಬಹಿರಂಗವಾಗಿದೆ. 

ಇಲಾಖೆ ವಿಚಾರಣೆ ನಡೆಸಬೇಕಲ್ಲದೆ ಆರೋಪಿತ ಅಧಿಕಾರಿಗಳ  ವಿರುದ್ಧ ಕೈಗೊಂಡಿರುವ ಕ್ರಮಗಳ ವರದಿ ಸಲ್ಲಿಸಬೇಕು ಎಂದು ಲೋಕಾಯುಕ್ತ ಸಂಸ್ಥೆ ಹಲವು ಬಾರಿ ಬರೆದಿರುವ ನೆನಪೋಲೆಗಳು ಇಲಾಖೆಗಳ  ಕಸದ ಬುಟ್ಟಿಗೆ ಸೇರಿವೆ. ಗ್ರಾಮೀಣಾಭಿವೃದ್ಧಿ, ಪಂಚಾಯತ್‌ರಾಜ್‌, ಕಂದಾಯ, ನಗರಾಭಿವೃದ್ಧಿ ಇಲಾಖೆಗಳಲ್ಲಿ ಅತಿ ಹೆಚ್ಚು ಇಂತಹ ಪ್ರಕರಣಗಳು ಬಾಕಿ ಇರುವುದು ತಿಳಿದು ಬಂದಿದೆ.

ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯಭಾಸ್ಕರ್‌ ಅಧ್ಯಕ್ಷತೆಯಲ್ಲಿ 2020ರ ಜನವರಿ 27ರಂದು ಈ ಕುರಿತು ಸಭೆ ನಡೆದಿದೆ. ‘ ಲೋಕಾಯುಕ್ತ ಪ್ರಕರಣಗಳಲ್ಲಿ ಲೋಕಾಯುಕ್ತರು ನೀಡುತ್ತಿರುವ ವರದಿ ಆಧಾರದ ಮೇಲೆ ಸಂಬಂಧಪಟ್ಟ ಇಲಾಖೆಯ ಅಭಿಪ್ರಾಯ ಪಡೆದು ಪರಿಶೀಲಿಸುವ ಸಂಪ್ರಾಯವನ್ನು ಕೈ ಬಿಟ್ಟು ತಮ್ಮ ಹಂತದಲ್ಲಿ  ಪರಿಶೀಲಿಸಿ ಶೀಘ್ರ  ಕ್ರಮ ಕೈಗೊಂಡು ಅಂತಿಮ ಆದೇಶ ಹೊರಡಿಸಿ,’ ಎಂದು ಸಭೆಯಲ್ಲಿ ಸೂಚಿಸಿರುವುದು ಸಭೆ ನಡವಳಿಯಿಂದ ಗೊತ್ತಾಗಿದೆ. 

ಇನ್ನು, ಪ್ರಾಥಮಿಕ, ಪ್ರೌಢಶಿಕ್ಷಣ, ಸಿಬ್ಬಂದಿ, ಆಡಳಿತ ಸುಧಾರಣೆ,  ಅಲ್ಪಸಂಖ್ಯಾತರ ಕಲ್ಯಾಣ,  ಆರ್ಥಿಕ ಮತ್ತು ನಗರಾಭಿವೃದ್ಧಿ ಇಲಾಖೆಗಳಲ್ಲಿನ ಇಲಾಖೆ ವಿಚಾರಣೆಗಳ ಪ್ರಕರಣಗಳು ಇತ್ಯರ್ಥಗೊಂಡಿಲ್ಲ. ‘ಹಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ವಿಚಾರಣಾಧಿಕಾರಿಗಳಿಂದ ವರದಿ ಬಂದಿದ್ದರೂ ಅಂತಿಮ ಆದೇಶ  ಹೊರಡಿಸಿದ  ಪ್ರಕರಣಗಳ ಸಂಖ್ಯೆ ಅತ್ಯಂತ ಕಡಿಮೆ ಇದೆ. ಈ ಸಂಬಂಧ  ಎಲ್ಲ  ಕಾರ್ಯದರ್ಶಿಗಳು ಗಮನಹರಿಸಬೇಕು,’ ಎಂದು ಮುಖ್ಯ ಕಾರ್ಯದರ್ಶಿ ಸೂಚಿಸಿದ್ದಾರೆ. 

ಅದೇ ರೀತಿ ಅಮಾನತು ಪ್ರಕರಣಗಳಿಗೆ ಸಂಬಂಧಿಸಿದಂತೆ 6 ತಿಂಗಳಿಗೂ  ಮೀರಿ ಹೆಚ್ಚು ಪ್ರಕರಣಗಳಿವೆ. ಕಂದಾಯ, ಪ್ರಾಥಮಿಕ, ಪ್ರೌಢಶಿಕ್ಷಣ ಇಲಾಖೆಗಳಲ್ಲಿ ಇಂತಹ ಪ್ರಕರಣಗಳಿರುವುದು ಸಭೆ ನಡವಳಿಯಿಂದ ತಿಳಿದು ಬಂದಿದೆ. 

ಬಾಕಿ ಕಡತಗಳಿಗೆ  ಸಂಬಂಧಿಸಿದಂತೆಯೂ ಸಭೆಯಲ್ಲಿ ಚರ್ಚೆಯಾಗಿದೆ. ಕಾರ್ಮಿಕ, ಜಲ ಸಂಪನ್ಮೂಲ, ಸಾರ್ವಜನಿಕ ಉದ್ದಿಮೆ, ಕೃಷಿ, ಕನ್ನಡ ಮತ್ತು ಸಂಸ್ಕೃತಿ, ಅರಣ್ಯ, ಗ್ರಾಮೀಣಾಭಿವೃದ್ಧಿ ಪಂಚಾಯತ್‌ರಾಜ್‌, ಮತ್ತು ವಾಣಿಜ್ಯ, ಕೈಗಾರಿಕೆ ಇಲಾಖೆಗಳಲ್ಲಿ ಕಡತಗಳು ವಿಲೇವಾರಿ ಆಗದೇ ಸಾವಿರಾರು ಸಂಖ್ಯೆಯಲ್ಲಿ ಬಾಕಿ ಇವೆ. ಅದೇ ರೀತಿ ಜನತಾದರ್ಶನದ ಅರ್ಜಿಗಳಿಗೆ ಸಂಬಂಧಿಸಿದಂತೆಯೂ ಸಮಾಜ ಕಲ್ಯಾಣ, ಅಲ್ಪಸಂಖ್ಯಾತರ  ಕಲ್ಯಾಣ, ಮಹಿಳಾ,  ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಹೆಚ್ಚಿನ ಅರ್ಜಿಗಳು ಇತ್ಯರ್ಥಗೊಳ್ಳದೇ ವಿಲೇವಾರಿಗೆ ಬಾಕಿ ಇರುವುದು ನಡವಳಿಯಿಂದ ಗೊತ್ತಾಗಿದೆ. 

Hot this week

ಕೋಟ್ಯಂತರ ರು ಮೌಲ್ಯದ ನಿವೇಶನ ನಿಯಮಬಾಹಿರ ಮಂಜೂರು, ಅಕ್ರಮ ಲಾಭ; ಕೆಎಎಸ್ ಅಧಿಕಾರಿ ವಿರುದ್ಧ ಲೋಕಾಯುಕ್ತ ವಿಚಾರಣೆಗೆ ಅನುಮತಿ

ಬೆಂಗಳೂರು; ಕೋಟ್ಯಂತರ ರುಪಾಯಿ ಮೌಲ್ಯದ ನಿವೇಶನಗಳನ್ನು ನಿಯಮಬಾಹಿರವಾಗಿ ಮಂಜೂರು ಮಾಡಿ ಖಾಸಗಿಯವರಿಗೆ...

ರಾಮಕೃಷ್ಣ ಹೆಗಡೆ ಕುಟುಂಬಕ್ಕೆ ಖರಾಬು ಗುಂಡು ತೋಪು ಜಮೀನು ಮಂಜೂರಿಗೆ ಕೋರಿಕೆ; ಸಿದ್ದು ಭೇಟಿ ಬೆನ್ನಲ್ಲೇ ಬಹಿರಂಗವಾದ ಪತ್ರ

ಬೆಂಗಳೂರು; ಬೆಂಗಳೂರು ಉತ್ತರ ತಾಲೂಕಿನಲ್ಲಿ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು...

ಘನತ್ಯಾಜ್ಯ ವಿಲೇವಾರಿ ಟಿಪ್ಪಿಂಗ್ ಶುಲ್ಕ; ರಾಮ್ಕಿ ಗ್ರೂಪ್‌ಗೆ ಅನುಕೂಲಕರ, ರಾಜ್ಯ ಸರ್ಕಾರವನ್ನು ಆರ್ಥಿಕ ದಿವಾಳಿತನದತ್ತ ತಳ್ಳಲಾಗಿದೆಯೇ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣಾ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ಟಿಪ್ಪಿಂಗ್ ಶುಲ್ಕದ ಆಧಾರದ ಮೇಲೆ...

ಶಾಂತಿನಗರ ಹೌಸಿಂಗ್‌ ಸೊಸೈಟಿ ಅಕ್ರಮ; 2,900 ಕೋಟಿ ಅಧಿಕ ಮೊತ್ತದ ಹಗರಣ ಕೆದಕಿದರೇ ಸತೀಶ್ ಜಾರಕಿಹೊಳಿ?

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ಅವರೊಂದಿಗೆ ತಳಕು ಹಾಕಿಕೊಂಡಿದ್ದ...

ಎಲ್‌ 1 ತಿರಸ್ಕೃತವಾದರೂ ನಡೆಯದ ಮರು ಟೆಂಡರ್, ಎಲ್ 2 ಗೆ ನೇರವಾಗಿ ಗುತ್ತಿಗೆಗೆ ಪರಿಗಣನೆ; 2,477.90 ಕೋಟಿ ರು ಹಗರಣ!

ಬೆಂಗಳೂರು; ಮಾಲೂರು-ಹೊಸಕೋಟೆ ವ್ಯಾಪ್ತಿಯನ್ನೂ ಸೇರಿದಂತೆ ಒಟ್ಟಾರೆ 123 ಕಿ ಮೀ ರಸ್ತೆಯನ್ನು ...
Please Scan to make Your Contribution

Topics

ಕೋಟ್ಯಂತರ ರು ಮೌಲ್ಯದ ನಿವೇಶನ ನಿಯಮಬಾಹಿರ ಮಂಜೂರು, ಅಕ್ರಮ ಲಾಭ; ಕೆಎಎಸ್ ಅಧಿಕಾರಿ ವಿರುದ್ಧ ಲೋಕಾಯುಕ್ತ ವಿಚಾರಣೆಗೆ ಅನುಮತಿ

ಬೆಂಗಳೂರು; ಕೋಟ್ಯಂತರ ರುಪಾಯಿ ಮೌಲ್ಯದ ನಿವೇಶನಗಳನ್ನು ನಿಯಮಬಾಹಿರವಾಗಿ ಮಂಜೂರು ಮಾಡಿ ಖಾಸಗಿಯವರಿಗೆ...

ರಾಮಕೃಷ್ಣ ಹೆಗಡೆ ಕುಟುಂಬಕ್ಕೆ ಖರಾಬು ಗುಂಡು ತೋಪು ಜಮೀನು ಮಂಜೂರಿಗೆ ಕೋರಿಕೆ; ಸಿದ್ದು ಭೇಟಿ ಬೆನ್ನಲ್ಲೇ ಬಹಿರಂಗವಾದ ಪತ್ರ

ಬೆಂಗಳೂರು; ಬೆಂಗಳೂರು ಉತ್ತರ ತಾಲೂಕಿನಲ್ಲಿ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು...

ಘನತ್ಯಾಜ್ಯ ವಿಲೇವಾರಿ ಟಿಪ್ಪಿಂಗ್ ಶುಲ್ಕ; ರಾಮ್ಕಿ ಗ್ರೂಪ್‌ಗೆ ಅನುಕೂಲಕರ, ರಾಜ್ಯ ಸರ್ಕಾರವನ್ನು ಆರ್ಥಿಕ ದಿವಾಳಿತನದತ್ತ ತಳ್ಳಲಾಗಿದೆಯೇ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣಾ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ಟಿಪ್ಪಿಂಗ್ ಶುಲ್ಕದ ಆಧಾರದ ಮೇಲೆ...

ಶಾಂತಿನಗರ ಹೌಸಿಂಗ್‌ ಸೊಸೈಟಿ ಅಕ್ರಮ; 2,900 ಕೋಟಿ ಅಧಿಕ ಮೊತ್ತದ ಹಗರಣ ಕೆದಕಿದರೇ ಸತೀಶ್ ಜಾರಕಿಹೊಳಿ?

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ಅವರೊಂದಿಗೆ ತಳಕು ಹಾಕಿಕೊಂಡಿದ್ದ...

ಎಲ್‌ 1 ತಿರಸ್ಕೃತವಾದರೂ ನಡೆಯದ ಮರು ಟೆಂಡರ್, ಎಲ್ 2 ಗೆ ನೇರವಾಗಿ ಗುತ್ತಿಗೆಗೆ ಪರಿಗಣನೆ; 2,477.90 ಕೋಟಿ ರು ಹಗರಣ!

ಬೆಂಗಳೂರು; ಮಾಲೂರು-ಹೊಸಕೋಟೆ ವ್ಯಾಪ್ತಿಯನ್ನೂ ಸೇರಿದಂತೆ ಒಟ್ಟಾರೆ 123 ಕಿ ಮೀ ರಸ್ತೆಯನ್ನು ...

ನಕಲಿ ಶಿಕ್ಷಕರಿಗೆ ವೇತನ ಪಾವತಿ; ಆರೋಪಿತ ಅಧಿಕಾರಿಗಳ ವಿರುದ್ಧ ಇಲಾಖೆ ವಿಚಾರಣೆ ಕೈಬಿಟ್ಟ ಸರ್ಕಾರ!

ಬೆಂಗಳೂರು; ರಾಮನಗರ ಜಿಲ್ಲೆಯಲ್ಲಿ  2011ರಿಂದ 2014ರವರೆಗೆ ಹೆಚ್‌ಆರ್‍ಎಂಎಸ್‌ ಮೂಲಕ ನಕಲಿ ಶಿಕ್ಷಕರ...

120 ಎಕರೆ ಗೋಮಾಳ ಕಬಳಿಕೆ ಪ್ರಕರಣ; ಕಂದಾಯ ನಿರೀಕ್ಷಕರ ವರದಿಯನ್ನೇ ಮುಚ್ಚಿಟ್ಟ ತಹಶೀಲ್ದಾರ್, ಸಚಿವರ ಒತ್ತಡ?

ಬೆಂಗಳೂರು; ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ ಗ್ರಾಮದ ವಿವಿಧ ಸರ್ವೆ ನಂಬರ್‍‌ಗಳಲ್ಲಿರುವ...

ಕೌನ್ಸಲಿಂಗ್‌ಗೂ ಮುನ್ನವೇ ಪಿಡಿಒಗಳ ವರ್ಗಾವಣೆ; ಹಣ ಕೊಟ್ಟವರಿಗೆ ಆದೇಶ, ಕೊಡದವರಿಗೆ ಕೌನ್ಸಲಿಂಗ್, ಆರೋಪ

ಬೆಂಗಳೂರು; ಪಂಚಾಯ್ತಿ ಅಭಿವೃದ್ದಿ ಅಧಿಕಾರಿಗಳ ವರ್ಗಾವಣೆಯನ್ನು ಕೌನ್ಸಲಿಂಗ್‌ ಮೂಲಕವೇ ನಡೆಸಲಾಗುವುದು ಎಂದು...

Related Articles

Popular Categories

error: Content is protected !!