Thursday | August 20, 2026 |

ಯು ಪಿ ಹಿಂದಿಕ್ಕಿದ ಕರ್ನಾಟಕ; ಹಾಟ್‌ಸ್ಪಾಟ್‌ಗಳ ಪಟ್ಟಿಗೆ ಬೆಂಗಳೂರು, ಮೈಸೂರು, ಚಿಕ್ಕಬಳ್ಳಾಪುರ ಸೇರ್ಪಡೆ

ಬೆಂಗಳೂರು; ಕೊರೊನಾ ವೈರಸ್‌ ದೃಢಪಟ್ಟಿರುವ ಪ್ರಕರಣಗಳ ಸಂಖ್ಯೆ ಏರುಮುಖವಾಗುತ್ತಿರುವ ಆತಂಕದ ನಡುವೆಯೇ ಕರ್ನಾಟಕ ಇದೀಗ ಉತ್ತರ ಪ್ರದೇಶವನ್ನು ಹಿಂದಿಕ್ಕಿ 5ನೇ ಸ್ಥಾನಕ್ಕೇರಿದೆ. ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ದೇಶದ 7 ನಗರಗಳಲ್ಲಿ ಬೆಂಗಳೂರು ನಗರ ಸೇರ್ಪಡೆಯಾಗಿದ್ದರೂ ವೆಂಟಿಲೇಟರ್‌ಗಳ ಸಂಖ್ಯೆಯನ್ನು ಇನ್ನೂ ಹೆಚ್ಚಿಸಿಕೊಂಡಿಲ್ಲ. ತಪಾಸಣೆಗಳೂ ನಿರೀಕ್ಷಿತ  ಮಟ್ಟದಲ್ಲಾಗುತ್ತಿಲ್ಲ. 

ಹಾಗೆಯೇ ದೇಶದ ಒಟ್ಟು 25 ಹಾಟ್‌ಸ್ಪಾಟ್‌ಗಳ ಪಟ್ಟಿಯಲ್ಲಿ ಬೆಂಗಳೂರು, ಮೈಸೂರು ಮತ್ತು ಚಿಕ್ಕಬಳ್ಳಾಪುರವೂ ಸೇರಿದೆ. ಅದರಲ್ಲೂ ತುಂಬಾ ಮುಖ್ಯವಾಗಿ ಕಳೆದ  14 ದಿನದಲ್ಲಿ  ಹಾಟ್‌ಸ್ಪಾಟ್‌ ಪಟ್ಟಿಯಲ್ಲಿ ಚಿಕ್ಕಬಳ್ಳಾಪುರವೂ ಕಾಣಿಸಿಕೊಂಡಿರುವುದು ಇನ್ನಷ್ಟು ಕಳವಳಕ್ಕೆ ಕಾರಣವಾಗಿದೆ. ಕೋವಿಡ್‌ -19ನ್ನು ಎದುರಿಸುವ ಬಗ್ಗೆ  ಬಹುದೊಡ್ಡಮಟ್ಟದ ಸಿದ್ಧತೆಗಳು ನಡೆಯದಿರುವುದು ಸಾಕಷ್ಟು ಆತಂಕಕ್ಕೆ ಕಾರಣವಾಗುತ್ತಿದೆ.

ಕೋವಿಡ್‌-19ರ ಸದ್ಯದ ಸ್ಥಿತಿಗತಿ ಕುರಿತು ಭಾರತ ಸರ್ಕಾರದ ಆರೋಗ್ಯ ಸಚಿವಾಲಯ ಮಾರ್ಚ್‌ 31ರ  ಅಂತ್ಯಕ್ಕೆ ಬಿಡುಗಡೆ ಮಾಡಿರುವ ದೇಶದ ರಾಜ್ಯಗಳ ಸ್ಥಿತಿಗತಿ ವರದಿ ಕೊರೊನಾ ಪ್ರಕರಣಗಳ  ಸಂಖ್ಯೆ ಹೇಗೆ ಏರುಮುಖವಾಗುತ್ತಿವೆ ಎಂದು ವಿವರಿಸಿವೆ. 

ಕೊರೊನಾ ವೈರಸ್‌ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚುತ್ತಿರುವ ದೇಶದ 7 ನಗರಗಳಲ್ಲಿ ಬೆಂಗಳೂರು ನಗರವೂ ಸೇರಿದೆ. ಇದೇ ಪಟ್ಟಿಯಲ್ಲಿ ಮುಂಬೈ, ಕಾಸರಗೋಡು, ಹೈದರಾಬಾದ್‌, ಕಣ್ಣೂರು, ಪುಣೆ, ಜಿ ಬಿ ನಗರವೂ ಇದೆ.  ಈ ನಗರಗಳಲ್ಲಿ ಕನಿಷ್ಠ 30 ಪ್ರಕರಣಗಳು ದೃಢಪಟ್ಟಿರುವುದು ಕೇಂದ್ರ ಸರ್ಕಾರದ ಆರೋಗ್ಯ ಸಚಿವಾಲಯದ ವರದಿಯಿಂದ ತಿಳಿದು ಬಂದಿದೆ.

ಮಾರ್ಚ್ 9ರಿಂದ ಮಾರ್ಚ್ 31ರ ಅಂತ್ಯಕ್ಕೆ ರಾಜ್ಯದಲ್ಲಿ ಒಟ್ಟು 105 ಪ್ರಕರಣಗಳು ದೃಢಪಟ್ಟಿವೆ. ಉತ್ತರ ಪ್ರದೇಶದಲ್ಲಿ  ಈವರೆವಿಗೆ ಒಟ್ಟು 103 ಪ್ರಕರಣಗಳಿವೆ. ದೇಶದಲ್ಲಿನ ಕೋವಿಡ್‌-19 ಪ್ರಕರಣಗಳಿಗೆ ಸಂಬಂಧಿಸಿದಂತೆ ಕರ್ನಾಟಕ,  ಮಹಾರಾಷ್ಟ್ರ,  ಕೇರಳ, ಉತ್ತರ ಪ್ರದೇಶ, ದೆಹಲಿ, ಜಮ್ಮು ಕಾಶ್ಮೀರ, ತೆಲಂಗಾಣ, ಗುಜರಾತ್‌, ತಮಿಳುನಾಡು, ಪಂಜಾಬ್‌ ಸೇರಿ ಒಟ್ಟು 10 ರಾಜ್ಯಗಳು ಒಟ್ಟು ಸರಾಸರಿಯಲ್ಲಿ  ಶೇ.80ರಷ್ಟು ಪ್ರಕರಣಗಳಿರುವುದು ಗೊತ್ತಾಗಿದೆ. 

ಮಾರ್ಚ್ 31ರ ಅಂತ್ಯಕ್ಕೆ ಬೆಂಗಳೂರು ನಗರದಲ್ಲಿ 45 ಪ್ರಕರಣಗಳು, ಮೈಸೂರಿನಲ್ಲಿ 14 ಮತ್ತು ಚಿಕ್ಕಬಳ್ಳಾಪುರದಲ್ಲಿ 9 ಪ್ರಕರಣಗಳು ದೃಢಪಟ್ಟಿವೆ. ಕಳೆದ 14  ದಿನದಲ್ಲಿ ಬೆಂಗಳೂರು ನಗರದಲ್ಲಿ ದಾಖಲಾಗಿರುವ ಒಟ್ಟು ಪ್ರಕರಣಗಳಲ್ಲಿ 23 ಪ್ರಕರಣಗಳು ದೃಢಪಟ್ಟಿವೆ. ಪ್ರಕರಣಗಳನ್ನು ತಡೆಗಟ್ಟಿರುವ ರಾಜ್ಯಗಳಲ್ಲಿ ಕರ್ನಾಟಕವೂ ಸೇರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಹೇಳಿದೆಯಾದರೂ ವಲಸೆ ಮತ್ತು ಕಟ್ಟಡ ಕಾರ್ಮಿಕರ ಆಹಾರ ಭದ್ರತೆ ಸೇರಿದಂತೆ ಇನ್ನಿತರೆ ಸುರಕ್ಷಾ  ಕ್ರಮಗಳ ಬಗ್ಗೆ ವಿವರಗಳನ್ನು ನಮೂದಿಸದಿರುವುದು ಅಚ್ಚರಿ  ಮೂಡಿಸಿದೆ. 

ಜಮ್ಮು ಕಾಶ್ಮೀರದಲ್ಲಿನ ಕಟ್ಟಡ ಕಾರ್ಮಿಕರಿಗೆ 17.65 ಕೋಟಿ ರು. ಬಿಡುಗಡೆಯಾಗಿದೆ. ಕೇರಳದಲ್ಲಿ  ವಲಸಿಗರಿಗೆ  5,000 ಶಿಬಿರಗಳನ್ನು ತೆರೆದಿದೆ.  ಆದರೆ ಕರ್ನಾಟಕದಲ್ಲಿ ಇಂತಹ ಪ್ರಕರಣಗಳ ಬಗ್ಗೆ  ಯಾವುದೇ ಮಾಹಿತಿ ಇಲ್ಲದಿರುವುದು ಸೋಜಿಗಕ್ಕೆ ಕಾರಣವಾಗಿದೆ. 

ಇನ್ನು 45 ಪ್ರಕರಣಗಳು ದೃಢಪಟ್ಟಿರುವ ಬೆಂಗಳೂರು ನಗರ ದೇಶದ 7 ಹಾಟ್‌ಸ್ಪಾಟ್‌ನಲ್ಲಿ ಕಾಣಿಸಿಕೊಂಡಿದ್ದರೂ ಇಲ್ಲಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೆಂಟಿಲೇಟರ್‌ಗಳ ಸಂಖ್ಯೆ 20 ರ ಗಡಿ ದಾಟಿಲ್ಲ. ಆದರೆ ಗುಜರಾತ್‌ನ ಅಹಮದಾಬಾದ್‌ನಲ್ಲಿ 300 ಮತ್ತು ನೆರೆಯ ಹೈದರಾಬಾದ್‌ನಲ್ಲಿ 200 ವೆಂಟಿಲೇಟರ್‌ಗಳಿವೆ ಎಂದು ವರದಿ ಬಹಿರಂಗಪಡಿಸಿದೆ.

ಸೋಂಕಿಗೆ ತುತ್ತಾಗಿರಬಹುದಾದ ಶಂಕಿತರನ್ನು ಪ್ರತ್ಯೇಕಿಸುವ (Quarantine) ವ್ಯವಸ್ಥೆಯನ್ನು ಮನೆಯಲ್ಲಿಯೇ ಕಲ್ಪಿಸಿ ಅವರ ಚಲನ ವಲನಗಳ ಮೇಲೆ ನಿಗಾವಹಿಸಲು ತಂತ್ರಜ್ಞಾನ ಅಳವಡಿಸಿಕೊಂಡಿದೆಯಾದರೂ ಈ ಮನೆಗಳಿಂದ ತ್ಯಾಜ್ಯ ವಿಲೇವಾರಿ ತಂದೊಡ್ಡಿರುವ  ಬಹುದೊಡ್ಡ ಸವಾಲನ್ನು ಹೇಗೆ ಎದುರಿಸಲಿದೆ ಎಂಬ ಪ್ರಶ್ನೆಯೂ ಎದುರಾಗಿದೆ. 

‘ಈ ತ್ಯಾಜ್ಯ ವಿಲೇವಾರಿಯನ್ನು ಆಸ್ಪತ್ರೆಗಳ ಬಯೋ ಮೆಡಿಕಲ್ ವೇಸ್ಟ್ ವಿಲೇವಾರಿ ಮಾಡಿದಂತೆ ತ್ಯಾಜ್ಯ ವಿಲೇವಾರಿ ಮಾಡಬೇಕಾದದ್ದು ಮತ್ತು ಅದಕ್ಕೆ ಸೂಕ್ತವಾದಂತಹ ವ್ಯವಸ್ಥೆ ಕಲ್ಪಿಸಬೇಕಾದಂತದ್ದು ಅಗತ್ಯ. ಈ ತ್ಯಾಜ್ಯ ಸಮರ್ಪಕವಾಗಿ ವಿಲೇವಾರಿಯಾಗದಿದ್ದರೆ ಮುಂಬರುವ ದಿನಗಳಲ್ಲಿ ಮಹಾಮಾರಿಯ ಸೋಂಕು ಇಲ್ಲಿಂದಲೇ ಹರಡುವ ಸಾಧ್ಯತೆಗಳು ಇಲ್ಲದಿಲ್ಲ,’ ಎಂದು ಮಾಜಿ  ಸಚಿವ ಹಾಗೂ ಹಾಲಿ ಶಾಸಕ  ಎಚ್‌ ಕೆ  ಪಾಟೀಲ್‌ ಆತಂಕ ವ್ಯಕ್ತಪಡಿಸಿದ್ದಾರೆ. 

ಇನ್ನು, ಶಂಕಿತರ ತಪಾಸಣೆಗಳು ನಿರೀಕ್ಷಿತ ಮಟ್ಟದಲ್ಲಿ ಆಗುತ್ತಿಲ್ಲ. ಶೇ.85ರಷ್ಟು ನಿಖರ ಫಲಿತಾಂಶ ಮತ್ತು 10 ನಿಮಿಷದಲ್ಲಿ ವರದಿ ಕೈಗೆ ಸಿಗುವ ತಪಾಸಣೆ ಕಿಟ್‌ಗಳನ್ನು ಖರೀದಿಸುವ ಗೋಜಿಗೆ ಹೋಗದ ಸರ್ಕಾರ ಇನ್ನೂ ವಿಳಂಬ ಧೋರಣೆ ಅನುಸರಿಸುತ್ತಿದೆ.  ಐಸಿಎಂಆರ್‌ ಅನುಮೋದಿಸಿರುವ ಪುಣೆಯ  ಕಿಟ್‌ ಗಳನ್ನು ತರಿಸಿಕೊಂಡು ಸಾಮೂಹಿಕ ತಪಾಸಣೆಗಳನ್ನು ನಡೆಸುವುದರತ್ತ ಇನ್ನೂ ಗಮನಹರಿಸಿಲ್ಲ.  

ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಒಂದರಂತೆ (ಲ್ಯಾಬೊರೇಟರಿ) ಪ್ರಯೋಗಾಲಯ ಸ್ಥಾಪಿಸುವ ಅನಿವಾರ್ಯತೆ ಇದ್ದರೂ ರಾಜ್ಯ ಸರ್ಕಾರ ಇನ್ನೂ ಕಾರ್ಯೋನ್ಮುಖವಾಗಿಲ್ಲ.’ಗಡಿ ಜಿಲ್ಲೆ ಬೆಳಗಾವಿ ವಿಭಾಗದಲ್ಲಿ ಒಂದೂ ಪ್ರಯೋಗಾಲಯ ಇಲ್ಲ. ಎಲ್ಲಾ ತಪಾಸಣೆಗಳಿಗೂ ಬೆಂಗಳೂರಿಗೆ ಬರಬೇಕು.  ಒಂದು ತಿಂಗಳ ನಂತರವೂ ಬೆಳಗಾವಿ/ಹುಬ್ಬಳ್ಳಿಯಲ್ಲಿ ಪ್ರಯೋಗಾಲಯ ಇಲ್ಲವೆಂದರೆ ಹೇಗೆ ಎಂದು ಎಚ್‌ ಕೆ ಪಾಟೀಲ್‌  ಅವರು ಪ್ರಶ್ನಿಸಿದ್ದಾರೆ. 

Hot this week

30,01,169 ರೈತರಿಂದ 25,180.77 ಕೋಟಿ ಹೊರಬಾಕಿ; ರೈತರ ಸಾಲ ಮನ್ನಾ ಪ್ರಸ್ತಾವವಿಲ್ಲ, ರೈತರ ಕೆಂಗಣ್ಣಿಗೆ ಗುರಿಯಾಗಲಿದೆಯೇ ಸರ್ಕಾರ?

ಬೆಂಗಳೂರು; ಸಹಕಾರ ಸಂಸ್ಥೆಗಳ ಮೂಲಕ ರೈತರು ಪಡೆದಿರುವ ಕೃಷಿ ಸಾಲವನ್ನು ಮನ್ನಾ...

ಇ-ಆಫೀಸ್‌ ತಂತ್ರಾಂಶದಲ್ಲೇ ಬೆಟ್ಟದಷ್ಟು ಬೆಳೆದು ನಿಂತ ಕಡತಗಳ ರಾಶಿ; ಗರಿಷ್ಠ 3,187, ಕನಿಷ್ಟ 32 ದಿನಗಳಾದರೂ ವಿಲೇವಾರಿಯಾಗಿಲ್ಲ, ಜಡ್ಡುಗಟ್ಟಿದೆಯೇ ಆಡಳಿತ?

ಬೆಂಗಳೂರು;   ಭೌತಿಕ ಕಡತಗಳ ವಿಲೇವಾರಿಯಲ್ಲಿ ಆಗುತ್ತಿದ್ದ ವಿಳಂಬವನ್ನು ತಪ್ಪಿಸುವ ಉದ್ದೇಶದಿಂದ ಇ-ಆಫೀಸ್‌...

ಹಿಂದುಳಿದ ಸಮುದಾಯ ಅಭಿವೃದ್ಧಿ ನಿಗಮಗಳಿಗೆ 473.41 ಕೋಟಿ ಅನುದಾನ ಹಂಚಿಕೆ; ನಾಲ್ಕೂವರೆ ತಿಂಗಳಾದರೂ ನಯಾಪೈಸೆಯೂ ಬಿಡುಗಡೆಯಾಗಿಲ್ಲ

ಬೆಂಗಳೂರು; ಆರ್ಥಿಕ ವರ್ಷ ಆರಂಭವಾಗಿ ನಾಲ್ಕೂವರೆ ತಿಂಗಳಾದರೂ ಸಹ ಹಿಂದುಳಿದ ವರ್ಗಗಳ...
Please Scan to make Your Contribution

Topics

30,01,169 ರೈತರಿಂದ 25,180.77 ಕೋಟಿ ಹೊರಬಾಕಿ; ರೈತರ ಸಾಲ ಮನ್ನಾ ಪ್ರಸ್ತಾವವಿಲ್ಲ, ರೈತರ ಕೆಂಗಣ್ಣಿಗೆ ಗುರಿಯಾಗಲಿದೆಯೇ ಸರ್ಕಾರ?

ಬೆಂಗಳೂರು; ಸಹಕಾರ ಸಂಸ್ಥೆಗಳ ಮೂಲಕ ರೈತರು ಪಡೆದಿರುವ ಕೃಷಿ ಸಾಲವನ್ನು ಮನ್ನಾ...

ಇ-ಆಫೀಸ್‌ ತಂತ್ರಾಂಶದಲ್ಲೇ ಬೆಟ್ಟದಷ್ಟು ಬೆಳೆದು ನಿಂತ ಕಡತಗಳ ರಾಶಿ; ಗರಿಷ್ಠ 3,187, ಕನಿಷ್ಟ 32 ದಿನಗಳಾದರೂ ವಿಲೇವಾರಿಯಾಗಿಲ್ಲ, ಜಡ್ಡುಗಟ್ಟಿದೆಯೇ ಆಡಳಿತ?

ಬೆಂಗಳೂರು;   ಭೌತಿಕ ಕಡತಗಳ ವಿಲೇವಾರಿಯಲ್ಲಿ ಆಗುತ್ತಿದ್ದ ವಿಳಂಬವನ್ನು ತಪ್ಪಿಸುವ ಉದ್ದೇಶದಿಂದ ಇ-ಆಫೀಸ್‌...

ಫ್ರೀಡಂ ಹಬ್ಬಕ್ಕೆ 6 ಕೋಟಿ ವೆಚ್ಚ!; ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳುವ ಮುನ್ನವೇ ಕೆಲಸ ಆರಂಭಿಸಿದ ಕಂಪನಿ

ಬೆಂಗಳೂರು; ಹೊಸದಾಗಿ ವಿದ್ಯಾರ್ಥಿ ನಿಲಯಗಳ ಆರಂಭ, ಅನುಮೋದಿತ ಕಾಮಗಾರಿಗಳ ಕಾರ್ಯಭಾರಕ್ಕೆ ನಲುಗಿ...

3,206 ಪಂಚಾಯ್ತಿಗಳಲ್ಲಿ ಶಾಸನಬದ್ಧ ತೆರಿಗೆ ವಸೂಲು; ಸರ್ಕಾರಕ್ಕೆ ಪಾವತಿಯಾಗದ 17.28 ಕೋಟಿ ಎಲ್ಲಿದೆ?

ಬೆಂಗಳೂರು; ರಾಜ್ಯದ 27 ಜಿಲ್ಲೆಗಳ 3,206 ಪಂಚಾಯ್ತಿಗಳು ಸರಕು ಸೇವಾ ತೆರಿಗೆ,...

Related Articles

Popular Categories

error: Content is protected !!