Saturday | March 21, 2026 |

ಲಾಕ್‌ಡೌನ್‌ ಅವಧಿಯಲ್ಲಿಯೂ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳ; ಏರಿಕೆಯಾಗಿಲ್ಲ ತಪಾಸಣೆ ಸಂಖ್ಯೆ

Support THE-FILE

spot_img

ಬೆಂಗಳೂರು; ಕೊರೊನಾ ವೈರಸ್‌ ಹಿಮ್ಮೆಟ್ಟಿಸುವ ನಿಟ್ಟಿನಲ್ಲಿ ದೇಶದಲ್ಲಿ ಲಾಕ್‌ಡೌನ್‌ ಜಾರಿಯಾಗಿ 21 ದಿನಗಳು  ಕಳೆದಿದ್ದರೂ ಸೋಂಕಿತರ ಸಂಖ್ಯೆ  ಕಡಿಮೆಗೊಳ್ಳುತ್ತಿಲ್ಲ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ.  

ಕೋವಿಡ್‌ 19 ಸಮುದಾಯಕ್ಕೆ ಹರಡುವುದಕ್ಕೆ ಈಗಿನಿಂದಲೇ ಕಡಿವಾಣ ಹಾಕುವ ನಿಟ್ಟಿನಲ್ಲಿ ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ನಡೆಸುತ್ತಿರುವ ತಪಾಸಣೆಗಳ ಸಂಖ್ಯೆ ಇನ್ನೂ ಇಮ್ಮಡಿಗೊಳ್ಳುತ್ತಿಲ್ಲ ಎಂದು ಸಾರ್ವಜನಿಕ ಆರೋಗ್ಯ ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ. 

ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್‌(ಐಸಿಎಂಆರ್‌) ಬೆಳಗ್ಗೆ 9ಕ್ಕೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ ಏಪ್ರಿಲ್‌ 12ರ ಅಂತ್ಯಕ್ಕೆ ಒಟ್ಟು 1,81,028 ವ್ಯಕ್ತಿಗಳಿಂದ 1,95,748 ಮಾದರಿಗಳನ್ನು ಸಂಗ್ರಹಿಸಲಾಗಿದೆ.ಈವರೆವಿಗೆ ದೇಶದಲ್ಲಿ  ಒಟ್ಟು 8,312 ಪ್ರಕರಣಗಳು ದೃಢಪಟ್ಟಿದ್ದರೆ  308 ಮಂದಿ ಕೋವಿಡ್‌ 19ಗೆ ಬಲಿಯಾಗಿದ್ದಾರೆ. 

ಏಪ್ರಿಲ್‌ 12ರಂದೇ  ಒಟ್ಟು  15,583 ಸಂಖ್ಯೆಯಲ್ಲಿ ತಪಾಸಣೆ ನಡೆಸಲಾಗಿದೆ. ಇದರಲ್ಲಿ 544 ಪ್ರಕರಣಗಳು ದೃಢಪಟ್ಟಿವೆ. ಕರ್ನಾಟಕದಲ್ಲಿ 9,251 ಮಾದರಿಗಳನ್ನು ಸಂಗ್ರಹಿಸಿದ್ದರೆ,  ಈ ಪೈಕಿ 232 ಪ್ರಕರಣಗಳು ದೃಢಪಟ್ಟಿವೆ. 6 ಮಂದಿ ಮೃತಪಟ್ಟಿದ್ದಾರೆ. 54 ಮಂದಿ ಚೇತರಿಸಿಕೊಂಡಿದ್ದಾರೆ. 

ಆಂಧ್ರ ಪ್ರದೇಶದಲ್ಲಿ 7,889 ಮಾದರಿಗಳನ್ನು ಸಂಗ್ರಹಿಸಿದ್ದರೆ, ಈವರೆವಿಗೆ 420 ಪ್ರಕರಣಗಳು ದೃಢಪಟ್ಟಿವೆ.  7 ಮಂದಿ ಮೃತಪಟ್ಟಿದ್ದಾರೆ. 12 ಮಂದಿ ಚೇತರಿಸಿಕೊಂಡಿದ್ದಾರೆ. 

ಕೇರಳದಲ್ಲಿ 14,989 ಮಾದರಿಗಳನ್ನು ಈವರೆವಿಗೆ  ಸಂಗ್ರಹಿಸಿದ್ದರೆ, ಈ ಪೈಕಿ 376 ಮಂದಿಯಲ್ಲಿ ಸೋಂಕು ದೃಢಪಟ್ಟಿವೆ.  3  ಮಂದಿ ಮೃತಪಟ್ಟಿದ್ದಾರೆ. 179 ಮಂದಿ  ಚೇತರಿಸಿಕೊಂಡಿದ್ದಾರೆ. ತಮಿಳುನಾಡಿನಲ್ಲಿ ಒಟ್ಟು 10,665 ಮಾದರಿಗಳನ್ನು ಸಂಗ್ರಹಿಸಿದ್ದರೆ ಇದರಲ್ಲಿ  1,075 ಮಂದಿಯಲ್ಲಿ ಸೋಂಕು  ಖಚಿತಪಟ್ಟಿವೆ.  11  ಮಂದಿ ಮರಣ ಹೊಂದಿದ್ದರೆ 50 ಮಂದಿ ಚೇತರಿಸಿಕೊಂಡಿದ್ದಾರೆ. 

ಆದರೆ ತೆಲಂಗಾಣ ಎಷ್ಟು ಸಂಖ್ಯೆಯಲ್ಲಿ  ಮಾದರಿಗಳನ್ನು ಸಂಗ್ರಹಿಸಿದೆ ಎಂದು ಐಸಿಎಂಆರ್‌ಗೆ ಮಾಹಿತಿ ಒದಗಿಸಿಲ್ಲ. ಇಲ್ಲಿ ಒಟ್ಟು 531 ಪ್ರಕರಣಗಳು  ಖಚಿತಪಟ್ಟಿವೆ. 16 ಮಂದಿ ಮೃತಪಟ್ಟಿದ್ದರೆ,  103 ಮಂದಿ ಚೇತರಿಸಿಕೊಂಡಿದ್ದಾರೆ.

ಮಹಾರಾಷ್ಟ್ರದಲ್ಲಿ ಈವರೆವಿಗೆ 41,109 ಮಾದರಿಗಳನ್ನು ಸಂಗ್ರಹಿಸಿದೆ. ಒಟ್ಟು 1,985  ಖಚಿತಪಟ್ಟ ಪ್ರಕರಣಗಳಾಗಿವೆ.  149 ಮಂದಿ ಕೋವಿಡ್‌  19 ಕ್ಕೆ ಬಲಿಯಾಗಿದ್ದರೆ 217 ಮಂದಿ ಚೇತರಿಸಿಕೊಂಡಿರುವುದು ಐಸಿಎಂಆರ್‌ ಬಿಡುಗಡೆಗೊಳಿಸಿರುವ ಮಾಹಿತಿಯಿಂದ ಗೊತ್ತಾಗಿದೆ. ದೆಹಲಿಯಲ್ಲಿ 1,154 ,ತಮಿಳುನಾಡಿನಲ್ಲಿ 1,075, ರಾಜಸ್ಥಾನದಲ್ಲಿ 804, ಮಧ್ಯ ಪ್ರದೇಶದಲ್ಲಿ 532 ಮತ್ತು ಗುಜರಾತ್‌ನಲ್ಲಿ 516 ಪ್ರಕರಣಗಳು ವರದಿಯಾಗಿವೆ. 

Hot this week

ಬೆಳೆ ಹವಾಮಾನ ನಿಗಾ ಸಭೆ ನಡೆಸಿಲ್ಲ, ಮಾಹಿತಿ ವ್ಯವಸ್ಥೆಯೂ ಇಲ್ಲ; ಸಿಎಜಿಯನ್ನೂ ತಪ್ಪುದಾರಿಗೆಳೆದ ಸರ್ಕಾರ

ಬೆಂಗಳೂರು;  ರಾಜ್ಯದಲ್ಲಿ ಬರ ಪರಿಸ್ಥಿತಿ ಮೇಲ್ವಿಚಾರಣೆ ಮಾಡಲು ಬೆಳೆ ಹವಾಮಾನ ನಿಗಾ...

ರಾಡಾರ್ ಸ್ಟ್ರೀಮ್‌ ಗೇಜ್‌, ವೈರ್‍‌ಲೆಸ್‌ ಸಾಧನ ಅಳವಡಿಕೆ; ನಡೆಯದ ತಾಂತ್ರಿಕ ಪರಿಶೀಲನೆ, 3.54 ಕೋಟಿ ವ್ಯರ್ಥ

ಬೆಂಗಳೂರು;  ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಪ್ರವಾಹದ ಮುನ್ನೆಚ್ಚರಿಕೆಗಾಗಿ 2.45 ಕೋಟಿ...

ಎಂ ಆರ್ ಸೀತಾರಾಂ ಕುಟುಂಬ ಸದಸ್ಯರ ವಿರುದ್ಧ ಭೂಕಬಳಿಕೆ ಆರೋಪ; ದೂರು ಮರೆಮಾಚಿತ್ತೇ ಕಂದಾಯ ಇಲಾಖೆ?

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ ಅಕ್ಲೇನಹಳ್ಳಿ...

ನರೇಗಾ ಅಕ್ರಮ; 2 ವರ್ಷದಲ್ಲಿ 105.1 ಕೋಟಿ ದುರುಪಯೋಗ, 12.34 ಕೋಟಿಯಷ್ಟೇ ವಸೂಲು

  ಬೆಂಗಳೂರು; ಕಳೆದ ಮೂರು ವರ್ಷಗಳಲ್ಲಿ  ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 64,806 ಪ್ರಕರಣಗಳಲ್ಲಿ...

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

Topics

ಬೆಳೆ ಹವಾಮಾನ ನಿಗಾ ಸಭೆ ನಡೆಸಿಲ್ಲ, ಮಾಹಿತಿ ವ್ಯವಸ್ಥೆಯೂ ಇಲ್ಲ; ಸಿಎಜಿಯನ್ನೂ ತಪ್ಪುದಾರಿಗೆಳೆದ ಸರ್ಕಾರ

ಬೆಂಗಳೂರು;  ರಾಜ್ಯದಲ್ಲಿ ಬರ ಪರಿಸ್ಥಿತಿ ಮೇಲ್ವಿಚಾರಣೆ ಮಾಡಲು ಬೆಳೆ ಹವಾಮಾನ ನಿಗಾ...

ರಾಡಾರ್ ಸ್ಟ್ರೀಮ್‌ ಗೇಜ್‌, ವೈರ್‍‌ಲೆಸ್‌ ಸಾಧನ ಅಳವಡಿಕೆ; ನಡೆಯದ ತಾಂತ್ರಿಕ ಪರಿಶೀಲನೆ, 3.54 ಕೋಟಿ ವ್ಯರ್ಥ

ಬೆಂಗಳೂರು;  ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಪ್ರವಾಹದ ಮುನ್ನೆಚ್ಚರಿಕೆಗಾಗಿ 2.45 ಕೋಟಿ...

ಎಂ ಆರ್ ಸೀತಾರಾಂ ಕುಟುಂಬ ಸದಸ್ಯರ ವಿರುದ್ಧ ಭೂಕಬಳಿಕೆ ಆರೋಪ; ದೂರು ಮರೆಮಾಚಿತ್ತೇ ಕಂದಾಯ ಇಲಾಖೆ?

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ ಅಕ್ಲೇನಹಳ್ಳಿ...

ನರೇಗಾ ಅಕ್ರಮ; 2 ವರ್ಷದಲ್ಲಿ 105.1 ಕೋಟಿ ದುರುಪಯೋಗ, 12.34 ಕೋಟಿಯಷ್ಟೇ ವಸೂಲು

  ಬೆಂಗಳೂರು; ಕಳೆದ ಮೂರು ವರ್ಷಗಳಲ್ಲಿ  ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 64,806 ಪ್ರಕರಣಗಳಲ್ಲಿ...

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

ರೋಹಿತ್ ವೇಮುಲ ಕಾಯ್ದೆ; ವ್ಯಾಖ್ಯಾನಗಳು ಅಸ್ಪಷ್ಟ, ಕಾನೂನು ಬಲವಿಲ್ಲ, ವಿಧೇಯಕವೇ ಅಪೂರ್ಣ

ಬೆಂಗಳೂರು; ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು...

ಗ್ರಾಮಠಾಣ ಜಮೀನು ಅದಲು-ಬದಲು; ಆರ್ಥಿಕ ಇಲಾಖೆ ಆಕ್ಷೇಪ ಬದಿಗೊತ್ತಿ ಎಂ ಆರ್ ಸೀತಾರಾಂ ಕುಟುಂಬದ ಬೆನ್ನಿಗೆ ನಿಂತ ಸರ್ಕಾರ

ಬೆಂಗಳೂರು; ಸರ್ಕಾರಿ ಭೂಮಿಗೆ ರಸ್ತೆಯ ಸಂಪರ್ಕ ಹೊಂದಿಲ್ಲದಿರುವ, ರಸ್ತೆ ಸಂಪರ್ಕ ಕಲ್ಪಿಸದೇ...

ಅದಾನಿ ಎಸಿಸಿ ಲಿಮಿಟೆಡ್‌ನಿಂದ ಅಕ್ರಮ ಗಣಿಗಾರಿಕೆ; ನಿರ್ದೇಶಕರು, ಅಧಿಕಾರಿಗಳ ವಿರುದ್ಧ ಲೋಕಾ ತನಿಖೆಗೆ ಶಿಫಾರಸ್ಸು, ಕಡತಕ್ಕೆ ಧೂಳು

ಬೆಂಗಳೂರು;  ಕಲ್ಬುರ್ಗಿಯ ವಾಡಿಯಲ್ಲಿ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್ ಪ್ರೈವೈಟ್ ಲಿಮಿಟೆಡ್...

Related Articles

Popular Categories

error: Content is protected !!