Sunday | May 10, 2026 |

ಲಾಕ್‌ಡೌನ್‌ ಅವಧಿಯಲ್ಲಿಯೂ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳ; ಏರಿಕೆಯಾಗಿಲ್ಲ ತಪಾಸಣೆ ಸಂಖ್ಯೆ

ಬೆಂಗಳೂರು; ಕೊರೊನಾ ವೈರಸ್‌ ಹಿಮ್ಮೆಟ್ಟಿಸುವ ನಿಟ್ಟಿನಲ್ಲಿ ದೇಶದಲ್ಲಿ ಲಾಕ್‌ಡೌನ್‌ ಜಾರಿಯಾಗಿ 21 ದಿನಗಳು  ಕಳೆದಿದ್ದರೂ ಸೋಂಕಿತರ ಸಂಖ್ಯೆ  ಕಡಿಮೆಗೊಳ್ಳುತ್ತಿಲ್ಲ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ.  

ಕೋವಿಡ್‌ 19 ಸಮುದಾಯಕ್ಕೆ ಹರಡುವುದಕ್ಕೆ ಈಗಿನಿಂದಲೇ ಕಡಿವಾಣ ಹಾಕುವ ನಿಟ್ಟಿನಲ್ಲಿ ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ನಡೆಸುತ್ತಿರುವ ತಪಾಸಣೆಗಳ ಸಂಖ್ಯೆ ಇನ್ನೂ ಇಮ್ಮಡಿಗೊಳ್ಳುತ್ತಿಲ್ಲ ಎಂದು ಸಾರ್ವಜನಿಕ ಆರೋಗ್ಯ ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ. 

ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್‌(ಐಸಿಎಂಆರ್‌) ಬೆಳಗ್ಗೆ 9ಕ್ಕೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ ಏಪ್ರಿಲ್‌ 12ರ ಅಂತ್ಯಕ್ಕೆ ಒಟ್ಟು 1,81,028 ವ್ಯಕ್ತಿಗಳಿಂದ 1,95,748 ಮಾದರಿಗಳನ್ನು ಸಂಗ್ರಹಿಸಲಾಗಿದೆ.ಈವರೆವಿಗೆ ದೇಶದಲ್ಲಿ  ಒಟ್ಟು 8,312 ಪ್ರಕರಣಗಳು ದೃಢಪಟ್ಟಿದ್ದರೆ  308 ಮಂದಿ ಕೋವಿಡ್‌ 19ಗೆ ಬಲಿಯಾಗಿದ್ದಾರೆ. 

ಏಪ್ರಿಲ್‌ 12ರಂದೇ  ಒಟ್ಟು  15,583 ಸಂಖ್ಯೆಯಲ್ಲಿ ತಪಾಸಣೆ ನಡೆಸಲಾಗಿದೆ. ಇದರಲ್ಲಿ 544 ಪ್ರಕರಣಗಳು ದೃಢಪಟ್ಟಿವೆ. ಕರ್ನಾಟಕದಲ್ಲಿ 9,251 ಮಾದರಿಗಳನ್ನು ಸಂಗ್ರಹಿಸಿದ್ದರೆ,  ಈ ಪೈಕಿ 232 ಪ್ರಕರಣಗಳು ದೃಢಪಟ್ಟಿವೆ. 6 ಮಂದಿ ಮೃತಪಟ್ಟಿದ್ದಾರೆ. 54 ಮಂದಿ ಚೇತರಿಸಿಕೊಂಡಿದ್ದಾರೆ. 

ಆಂಧ್ರ ಪ್ರದೇಶದಲ್ಲಿ 7,889 ಮಾದರಿಗಳನ್ನು ಸಂಗ್ರಹಿಸಿದ್ದರೆ, ಈವರೆವಿಗೆ 420 ಪ್ರಕರಣಗಳು ದೃಢಪಟ್ಟಿವೆ.  7 ಮಂದಿ ಮೃತಪಟ್ಟಿದ್ದಾರೆ. 12 ಮಂದಿ ಚೇತರಿಸಿಕೊಂಡಿದ್ದಾರೆ. 

ಕೇರಳದಲ್ಲಿ 14,989 ಮಾದರಿಗಳನ್ನು ಈವರೆವಿಗೆ  ಸಂಗ್ರಹಿಸಿದ್ದರೆ, ಈ ಪೈಕಿ 376 ಮಂದಿಯಲ್ಲಿ ಸೋಂಕು ದೃಢಪಟ್ಟಿವೆ.  3  ಮಂದಿ ಮೃತಪಟ್ಟಿದ್ದಾರೆ. 179 ಮಂದಿ  ಚೇತರಿಸಿಕೊಂಡಿದ್ದಾರೆ. ತಮಿಳುನಾಡಿನಲ್ಲಿ ಒಟ್ಟು 10,665 ಮಾದರಿಗಳನ್ನು ಸಂಗ್ರಹಿಸಿದ್ದರೆ ಇದರಲ್ಲಿ  1,075 ಮಂದಿಯಲ್ಲಿ ಸೋಂಕು  ಖಚಿತಪಟ್ಟಿವೆ.  11  ಮಂದಿ ಮರಣ ಹೊಂದಿದ್ದರೆ 50 ಮಂದಿ ಚೇತರಿಸಿಕೊಂಡಿದ್ದಾರೆ. 

ಆದರೆ ತೆಲಂಗಾಣ ಎಷ್ಟು ಸಂಖ್ಯೆಯಲ್ಲಿ  ಮಾದರಿಗಳನ್ನು ಸಂಗ್ರಹಿಸಿದೆ ಎಂದು ಐಸಿಎಂಆರ್‌ಗೆ ಮಾಹಿತಿ ಒದಗಿಸಿಲ್ಲ. ಇಲ್ಲಿ ಒಟ್ಟು 531 ಪ್ರಕರಣಗಳು  ಖಚಿತಪಟ್ಟಿವೆ. 16 ಮಂದಿ ಮೃತಪಟ್ಟಿದ್ದರೆ,  103 ಮಂದಿ ಚೇತರಿಸಿಕೊಂಡಿದ್ದಾರೆ.

ಮಹಾರಾಷ್ಟ್ರದಲ್ಲಿ ಈವರೆವಿಗೆ 41,109 ಮಾದರಿಗಳನ್ನು ಸಂಗ್ರಹಿಸಿದೆ. ಒಟ್ಟು 1,985  ಖಚಿತಪಟ್ಟ ಪ್ರಕರಣಗಳಾಗಿವೆ.  149 ಮಂದಿ ಕೋವಿಡ್‌  19 ಕ್ಕೆ ಬಲಿಯಾಗಿದ್ದರೆ 217 ಮಂದಿ ಚೇತರಿಸಿಕೊಂಡಿರುವುದು ಐಸಿಎಂಆರ್‌ ಬಿಡುಗಡೆಗೊಳಿಸಿರುವ ಮಾಹಿತಿಯಿಂದ ಗೊತ್ತಾಗಿದೆ. ದೆಹಲಿಯಲ್ಲಿ 1,154 ,ತಮಿಳುನಾಡಿನಲ್ಲಿ 1,075, ರಾಜಸ್ಥಾನದಲ್ಲಿ 804, ಮಧ್ಯ ಪ್ರದೇಶದಲ್ಲಿ 532 ಮತ್ತು ಗುಜರಾತ್‌ನಲ್ಲಿ 516 ಪ್ರಕರಣಗಳು ವರದಿಯಾಗಿವೆ. 

Hot this week

120 ಎಕರೆ ಗೋಮಾಳ ಕಬಳಿಕೆ ಪ್ರಕರಣ; ಕಂದಾಯ ನಿರೀಕ್ಷಕರ ವರದಿಯನ್ನೇ ಮುಚ್ಚಿಟ್ಟ ತಹಶೀಲ್ದಾರ್, ಸಚಿವರ ಒತ್ತಡ?

ಬೆಂಗಳೂರು; ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ ಗ್ರಾಮದ ವಿವಿಧ ಸರ್ವೆ ನಂಬರ್‍‌ಗಳಲ್ಲಿರುವ...

ಕೌನ್ಸಲಿಂಗ್‌ಗೂ ಮುನ್ನವೇ ಪಿಡಿಒಗಳ ವರ್ಗಾವಣೆ; ಹಣ ಕೊಟ್ಟವರಿಗೆ ಆದೇಶ, ಕೊಡದವರಿಗೆ ಕೌನ್ಸಲಿಂಗ್, ಆರೋಪ

ಬೆಂಗಳೂರು; ಪಂಚಾಯ್ತಿ ಅಭಿವೃದ್ದಿ ಅಧಿಕಾರಿಗಳ ವರ್ಗಾವಣೆಯನ್ನು ಕೌನ್ಸಲಿಂಗ್‌ ಮೂಲಕವೇ ನಡೆಸಲಾಗುವುದು ಎಂದು...

ಪಿಟಿಸಿಎಲ್, ಗೋಮಾಳ, ಅರಣ್ಯ ಜಮೀನು ಸ್ವರೂಪ ಮರೆಮಾಚಿ ಪರಿವರ್ತನೆ; ದಿ ಫೈಲ್ ವರದಿ ಬೆನ್ನಲ್ಲೇ ಸರ್ಕಾರದ ಮೆಟ್ಟಿಲೇರಿದ ಕೆಆರ್‍‌ಎಸ್‌

ಬೆಂಗಳೂರು; ಪಿಟಿಸಿಎಲ್,  ಸರ್ಕಾರಿ ಗೋಮಾಳ ಮತ್ತು ಅರಣ್ಯ ಪ್ರದೇಶದ ಜಮೀನುಗಳ ಸ್ವರೂಪವನ್ನೇ...

30 ವರ್ಷಗಳ ನಂತರ ಎಲ್‌ಎಸಿ ಪ್ರಕರಣ ದಾಖಲು; ಸರ್ಕಾರದ ಬೊಕ್ಕಸಕ್ಕೆ 80 ಕೋಟಿ ಆರ್ಥಿಕ ಹೊರೆ

ಬೆಂಗಳೂರು; ಮಂಡ್ಯ ತಾಲೂಕು ಕೊತ್ತತ್ತಿ ಹೋಬಳಿಯ ಗುತ್ತಲು ಗ್ರಾಮದಲ್ಲಿ 30 ವರ್ಷಗಳ...
Please Scan to make Your Contribution

Topics

120 ಎಕರೆ ಗೋಮಾಳ ಕಬಳಿಕೆ ಪ್ರಕರಣ; ಕಂದಾಯ ನಿರೀಕ್ಷಕರ ವರದಿಯನ್ನೇ ಮುಚ್ಚಿಟ್ಟ ತಹಶೀಲ್ದಾರ್, ಸಚಿವರ ಒತ್ತಡ?

ಬೆಂಗಳೂರು; ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ ಗ್ರಾಮದ ವಿವಿಧ ಸರ್ವೆ ನಂಬರ್‍‌ಗಳಲ್ಲಿರುವ...

ಕೌನ್ಸಲಿಂಗ್‌ಗೂ ಮುನ್ನವೇ ಪಿಡಿಒಗಳ ವರ್ಗಾವಣೆ; ಹಣ ಕೊಟ್ಟವರಿಗೆ ಆದೇಶ, ಕೊಡದವರಿಗೆ ಕೌನ್ಸಲಿಂಗ್, ಆರೋಪ

ಬೆಂಗಳೂರು; ಪಂಚಾಯ್ತಿ ಅಭಿವೃದ್ದಿ ಅಧಿಕಾರಿಗಳ ವರ್ಗಾವಣೆಯನ್ನು ಕೌನ್ಸಲಿಂಗ್‌ ಮೂಲಕವೇ ನಡೆಸಲಾಗುವುದು ಎಂದು...

ಪಿಟಿಸಿಎಲ್, ಗೋಮಾಳ, ಅರಣ್ಯ ಜಮೀನು ಸ್ವರೂಪ ಮರೆಮಾಚಿ ಪರಿವರ್ತನೆ; ದಿ ಫೈಲ್ ವರದಿ ಬೆನ್ನಲ್ಲೇ ಸರ್ಕಾರದ ಮೆಟ್ಟಿಲೇರಿದ ಕೆಆರ್‍‌ಎಸ್‌

ಬೆಂಗಳೂರು; ಪಿಟಿಸಿಎಲ್,  ಸರ್ಕಾರಿ ಗೋಮಾಳ ಮತ್ತು ಅರಣ್ಯ ಪ್ರದೇಶದ ಜಮೀನುಗಳ ಸ್ವರೂಪವನ್ನೇ...

30 ವರ್ಷಗಳ ನಂತರ ಎಲ್‌ಎಸಿ ಪ್ರಕರಣ ದಾಖಲು; ಸರ್ಕಾರದ ಬೊಕ್ಕಸಕ್ಕೆ 80 ಕೋಟಿ ಆರ್ಥಿಕ ಹೊರೆ

ಬೆಂಗಳೂರು; ಮಂಡ್ಯ ತಾಲೂಕು ಕೊತ್ತತ್ತಿ ಹೋಬಳಿಯ ಗುತ್ತಲು ಗ್ರಾಮದಲ್ಲಿ 30 ವರ್ಷಗಳ...

ಶೌಚಾಲಯ, ಸ್ನಾನದ ಗೃಹ, ಮೂತ್ರಾಲಯ ಶುಲ್ಕ ವಸೂಲಿ; ಸುಲಭ್‌ ಇಂಟರ್ ನ್ಯಾಷನಲ್‌, ಬಿಬಿಎಂಪಿ ಖಾತೆಗೆ ಹಣ ಜಮೆ ಮಾಡಿದೆಯೇ, ನುಂಗಿದೆಯೇ?

ಬೆಂಗಳೂರು;  ಸುಲಭ್ ಶೌಚಾಲಯ ಮತ್ತು ಸಾರ್ವಜನಿಕ ಮೂತ್ರಾಲಯ  ನಿರ್ವಹಣೆಗೆ ಸಂಬಂಧಿಸಿದಂತೆ ಗುತ್ತಿಗೆದಾರರು...

ಬಿಜೆಪಿ ಅವಧಿಯಲ್ಲಿದ್ದ 120 ಎಕರೆ ಗೋಮಾಳ, ಕಾಂಗ್ರೆಸ್‌ ಅವಧಿಯಲ್ಲಿ ಕಣ್ಮರೆ!; 24 ಕೋಟಿ ಮೌಲ್ಯದ ಜಮೀನು, ಖಾಸಗಿ ವ್ಯಕ್ತಿಗಳ ಪಾಲು?

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ...

Related Articles

Popular Categories

error: Content is protected !!