Saturday | May 2, 2026 |

ಬೆಳೆ ಪರಿಹಾರ; ವಿಮಾ ಕಂಪನಿಗಳ ಬಳಿಯೇ ಬಾಕಿ ಉಳಿದಿದೆ 150 ಕೋಟಿ

ಬೆಂಗಳೂರು; ಕರ್ನಾಟಕ ರೈತ  ಸುರಕ್ಷ  ಪ್ರಧಾನಮಂತ್ರಿ  ಫಸಲ್‌  ಬೀಮಾ  ಯೋಜನೆಯಡಿ 2019ರ ಮುಂಗಾರು ಹಂಗಾಮಿನಲ್ಲಿ ಮಧ್ಯಂತರ ವಿಮಾ ಪರಿಹಾರದ ಪೈಕಿ ಒಟ್ಟು ಮೊತ್ತದಲ್ಲಿ 150 ಕೋಟಿ ರು. ಮೊತ್ತವನ್ನು ವಿಮಾ ಕಂಪನಿಗಳು ಬಾಕಿ ಉಳಿಸಿಕೊಂಡಿವೆ. 

ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಬ್ಬು, ಭತ್ತ, ಬಾಳೆ ಸೇರಿದಂತೆ ಹಾನಿಗೀಡಾಗಿರುವ ಮತ್ತಿತರ  ಬೆಳೆಗಳ  ಸಮೀಕ್ಷೆ  ನಡೆಸಿ ನಷ್ಟಕ್ಕೀಡಾಗಿರುವ ರೈತರಿಗೆ ಪರಿಹಾರ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದರು.  ಅಲ್ಲದೆ ಕೇಂದ್ರ  ಸರ್ಕಾರವೂ ಫಸಲ್‌ಭಿಮಾ ಯೋಜನೆಯ ಹಣವನ್ನು ರಾಜ್ಯ ಸರ್ಕಾರಗಳಿಗೆ  ಬಿಡುಗಡೆಗೊಳಿಸಲು ಕ್ರಮ  ಕೈಗೊಂಡ ಬೆನ್ನಲ್ಲೇ ವಿಮಾ ಕಂಪನಿಗಳು ಕರ್ನಾಟಕದಲ್ಲಿ ಕೋಟ್ಯಂತರ ರು.ಮೊತ್ತ ಬಾಕಿ ಉಳಿಸಿಕೊಂಡಿರುವುದು ಮುನ್ನೆಲೆಗೆ  ಬಂದಿದೆ. 

ಕೊರೊನಾ ವೈರಸ್‌ನಿಂದಾಗಿ ಕೃಷಿ ವಲಯದಲ್ಲಿ ಬಿಕ್ಕಟ್ಟುಗಳ ಸಂಖ್ಯೆ ಹೆಚ್ಚಿವೆ. ಇದರ ಮಧ್ಯೆಯೇ ಬರಗಾಲಕ್ಕೆ ತುತ್ತಾಗಿರುವ ಪ್ರದೇಶಗಳ ರೈತರಿಗೆ ಸಕಾಲದಲ್ಲಿ ವಿಮೆ ಮೊತ್ತ  ದೊರಕದಿರುವುದು ರೈತರನ್ನು ಇನ್ನಷ್ಟು ಕಂಗೆಡಿಸುವ ಸಾಧ್ಯತೆಗಳಿವೆ. ಸದ್ಯ ಕೊರೊನಾ ವೈರಸ್‌ನ್ನು ತಡೆಗಟ್ಟುವ ಕಾರ್ಯಾಚರಣೆಗಳಲ್ಲಿಯೇ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಗ್ನರಾಗಿದ್ದಾರೆ. ಹೀಗಾಗಿಯೇ ವಿಮೆ ಮೊತ್ತವನ್ನು ಒಂದು ವರ್ಷ ಕಳೆದರೂ ಇತ್ಯರ್ಥಪಡಿಸದ ಕಂಪನಿಗಳ ವಿರುದ್ಧ ಯಾವ ಕ್ರಮವೂ ಜರುಗಿಲ್ಲ.  ರೈತರ ಗೋಳು ಕೇಳುವವರೂ ಇಲ್ಲವಾಗಿದೆ. 

ವಿಜಯಪುರ, ಹಾವೇರಿ, ಗದಗ್‌, ಧಾರವಾಡ, ಚಾಮರಾಜನಗರ, ಬಾಗಲಕೋಟೆ, ಕಲಬುರಗಿ,  ರಾಯಚೂರು, ಬೆಳಗಾವಿ ಜಿಲ್ಲೆಗಳಲ್ಲಿ ಅಗ್ರಿಕಲ್ಚರಲ್‌ ಇನ್ಸೂರೆನ್ಸ್‌  ಕಂಪನಿ, ಬಜಾಜ್‌  ಆಲಿಯನ್ಸ್‌, ಜಿ ಐ ಸಿ , ಭಾರತಿ ಆಕ್ಸ್, ಫ್ಯೂಚರ್‌ ಜನರಲಿ ಜಿಐಸಿ  ವಿಮಾ ಕಂಪನಿಗಳು 2019ನೇ ಸಾಲಿನ ಮುಂಗಾರು ಹಂಗಾಮಿನ ವಿಮೆ ಪರಿಹಾರ ಮೊತ್ತ ಇನ್ನೂ ಇತ್ಯರ್ಥಗೊಳಿಸಿಲ್ಲ. ಇದರ ಮೊತ್ತವೇ 150 ಕೋಟಿ  ರು. ಇದೆ ಎಂದು ಕೃಷಿ ಇಲಾಖೆ  ನೀಡಿರುವ ಮಾಹಿತಿಯಿಂದ ಗೊತ್ತಾಗಿದೆ. 

2020ರ ಮಾರ್ಚ್‌ 9ರ ಅಂತ್ಯಕ್ಕೆ 9 ಜಿಲ್ಲೆಗಳ 1,67,241  ಫಲಾನುಭವಿ ರೈತರಿಗೆ ಮಧ್ಯಂತರ  ಪರಿಹಾರದ ಪೈಕಿ ಒಟ್ಟು 150.774 ಕೋಟಿ ರು.ಗಳನ್ನು ಇತ್ಯರ್ಥಪಡಿಸದೇ ಬಾಕಿ ಇಟ್ಟುಕೊಂಡಿರುವುದು ದಾಖಲೆಯಿಂದ ತಿಳಿದು ಬಂದಿದೆ. ಈ ಪೈಕಿ ಭಾರತಿ ಆಕ್ಸ್‌ ವಿಮಾ ಕಂಪನಿಯೊಂದೇ 77.14 ಕೋಟಿ ರು.ಗಳನ್ನು ಇತ್ಯರ್ಥಪಡಿಸದೇ ಬಾಕಿ ಉಳಿಸಿಕೊಂಡಿದೆ.  

2020ರ  ಫೆ.12 ಮತ್ತು 13ರ  ಅಂತ್ಯಕ್ಕೆ ಒಟ್ಟು 327 ವಿಮಾ ಘಟಕಗಳು 56,184  ರೈತ ಫಲಾನುಭವಿಗಳಿಗೆ ಒಟ್ಟು ವಿಮೆ ಪರಿಹಾರ ಮೊತ್ತದ ಪೈಕಿ 32.37 ಕೋಟಿ ರು.ಮಾತ್ರ ಇತ್ಯರ್ಥಪಡಿಸಿದೆ. 

2019-20ನೇ ಸಾಲಿಗೆ ಸಂಬಂಧಿಸಿದಂತೆ ವಿಮಾ ಕಂಪನಿಗಳು ಎಸ್‌ಬಿಐ ಬ್ಯಾಂಕ್‌ನಲ್ಲಿ ಖಾತೆ ತೆರೆದಿದೆಯಾದರೂ ಈ ಖಾತೆಯನ್ನು ಸಂರಕ್ಷಣೆ ತಂತ್ರಾಂಶದಲ್ಲಿ ಅಳವಡಿಸಿ ಅರ್ಹ ಫಲಾನುಭವಿಗಳ  ಬ್ಯಾಂಕ್‌ ಖಾತೆಗೆ ನೇರವಾಗಿ  ವರ್ಗಾಯಿಸುವ ಪ್ರಕ್ರಿಯೆ ಇನ್ನೂ ತೆವಳುತ್ತಿರುವುದು ದಾಖಲೆಯಿಂದ ತಿಳಿದು ಬಂದಿದೆ. 

2019ರ ಮುಂಗಾರು ಹಂಗಾಮಿಗೆ ಸಂಬಂಧಿಸಿದಂತೆ  ಅಭಿವೃದ್ಧಿಪಡಿಸಿರುವ ಸಂರಕ್ಷಣೆ ತಂತ್ರಾಂಶದಲ್ಲಿ ಬೆಳೆ ವಿಮೆ ಪರಿಹಾರ ಮೊತ್ತವು ನಿಯಂತ್ರಣವಾಗುತ್ತಿರಲಿಲ್ಲ.  ಅಲ್ಲದೆ ನೇರವಾಗಿ ವಿಮಾ ಸಂಸ್ಥೆಯಿಂದ ಅರ್ಹ ಫಲಾನುಭವಿಗಳ ಖಾತೆಗೆ ಇತ್ಯರ್ಥಪಡಿಸಲಾಗುತ್ತಿತ್ತಾದರೂ ಇರಿಂದ  ರೈತರಿಗೆ ಬೆಳೆ ವಿಮೆ ಪರಿಹಾರ ಮೊತ್ತವನ್ನು ಇತ್ಯರ್ಥಪಡಿಸಿದ  ವಿವರದ  ಮಾಹಿತಿಯಲ್ಲಿ ಪಾರದರ್ಶಕತೆ,  ನೈಜ  ಸಮಯದ ಪಾವತಿಯ ಸ್ಥಿತಿಯು ಲಭ್ಯವಾಗುತ್ತಿರಲಿಲ್ಲ. 

2016ನೇ ಮುಂಗಾರು ಹಂಗಾಮಿನಿಂದ 2019ರ  ಹಿಂಗಾರು ಅವಧಿವರೆಗೆ ಒಟ್ಟು 6,421.25 ಕೋಟಿ  ರು.ಗಳನ್ನು ವಿತರಿಸಿದೆ. ಇದರಲ್ಲಿ ರೈತರ ಪಾಲಿನಿಂದ 773.61 ಕೋಟಿ  ಮತ್ತು ರಾಜ್ಯದ 2,823.81 ಕೋಟಿ ರು. ಈ ವಿಮೆ ಕಂತಿನಲ್ಲಿ ಸೇರಿದೆ. 

ಕಳೆದ ಆಗಸ್ಟ್‌ನಲಿ ಬಂದ ಮಳೆ ಮತ್ತು ಪ್ರವಾಹದಿಂದ ಕರ್ನಾಟಕದ 9.35 ಲಕ್ಷ ಹೆಕ್ಟೇರ್‌ ಕೃಷಿ ಪ್ರದೇಶ ಹಾನಿಗೊಳಗಾಗಿದೆ ಎಂದು ಕೇಂದ್ರ ಸರಕಾರದ ಕೃಷಿ ಮಂತ್ರಾಲಯ 2019ರ ನವೆಂಬರ್‌ ಅಂತ್ಯಕ್ಕೆ ವರದಿ ಬಿಡುಗಡೆ ಮಾಡಿದ್ದರೂ ಇನ್ನೂ ಪೂರ್ಣ ಪ್ರಮಾಣದಲ್ಲಿ ವಿಮೆ ಪರಿಹಾರ ಮೊತ್ತವನ್ನು ಇತ್ಯರ್ಥಪಡಿಸಿಲ್ಲ. 

ದೇಶದಲ್ಲಿ ಒಟ್ಟು 64 ಲಕ್ಷ ಹೆಕ್ಟೇರ್‌ ಕೃಷಿ ಪ್ರದೇಶ ಹಾನಿಯಾಗಿದೆ ಎಂದು ವರದಿ  ನೀಡಿತ್ತು. ಆದರೂ ಫಸಲ್‌ ಬಿಮಾ ಪರಿಹಾರ ಮಾತ್ರ ವಿಮಾ ರೈತರಿಗೆ ಇನ್ನೂ ಮರಿಚೀಕೆಯಾಗಿದೆ.

ಹವಾಮಾನ ವೈಪರಿತ್ಯ, ಮಳೆ,  ನೆರೆ/ಪ್ರವಾಹಗಳಿಂದ ಬೆಳೆ ಮುಳುಗಡೆ,  ದೀರ್ಘಕಾಲದ ತೇವಾಂಶ ಕೊರತೆ,  ತೀವ್ರ ಬರಗಾಲ ಸೇರಿದಂತೆ  ಅಧಿಸೂಚಿತ  ವಿಮಾ ಘಟಕದಲ್ಲಿ ಬಿತ್ತನೆಯಾದ ನಂತರ ಕಟಾವಿಗೆ ಮೊದಲು ನಿರೀಕ್ಷಿತ ಇಳುವರಿಯು ಸಾಮಾನ್ಯ ಇಳುವರಿಯ ಶೇ.50ಕ್ಕಿಂತ ಕಡಿಮೆ ಬಂದಲ್ಲಿ ಮಾತ್ರ ವಿಮೆ  ಮಾಡಿಸಿದ  ರೈತರಿಗೆ ಹಣ ಬಿಡುಗಡೆಯಾಗುತ್ತದೆ. 

Hot this week

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕದಲ್ಲಿ ಡಿಸಿಎಂ ಮೇಲುಗೈ, ಜಾರಕಿಹೊಳಿ ಮೌನ; ಕೆಟ್ಟ ಪೂರ್ವ ನಿದರ್ಶನಕ್ಕೆ ನಾಂದಿ ಹಾಡಿದ ಸಿಎಂ

ಬೆಂಗಳೂರು;  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ...

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕಕ್ಕೆ ಒತ್ತಡ; ವಿವಾದಕ್ಕೆ ದಾರಿಯಾದ ಡಿಸಿಎಂ ಟಿಪ್ಪಣಿ, ನಿಯಮ ಉಲ್ಲಂಘನೆ?

ಬೆಂಗಳೂರು; ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್  ಪ್ರವೀಣ್ ಲಿಂಗಯ್ಯ ಅವರನ್ನು...

Topics

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕದಲ್ಲಿ ಡಿಸಿಎಂ ಮೇಲುಗೈ, ಜಾರಕಿಹೊಳಿ ಮೌನ; ಕೆಟ್ಟ ಪೂರ್ವ ನಿದರ್ಶನಕ್ಕೆ ನಾಂದಿ ಹಾಡಿದ ಸಿಎಂ

ಬೆಂಗಳೂರು;  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ...

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕಕ್ಕೆ ಒತ್ತಡ; ವಿವಾದಕ್ಕೆ ದಾರಿಯಾದ ಡಿಸಿಎಂ ಟಿಪ್ಪಣಿ, ನಿಯಮ ಉಲ್ಲಂಘನೆ?

ಬೆಂಗಳೂರು; ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್  ಪ್ರವೀಣ್ ಲಿಂಗಯ್ಯ ಅವರನ್ನು...

ಆಧಾರ್ ಕಾರ್ಡ್‌ಗಿಂತಲೂ ಶಕ್ತಿ ಸ್ಮಾರ್ಟ್‌ ದುಬಾರಿ, ಎಸ್‌ಪಿವಿ ರಚನೆಯಾದರೂ ಸಿಗದ ಕಾರ್ಡ್‌; 185 ಕೋಟಿ ವೆಚ್ಚ ಭರಿಸುವವರಾರು?

ಬೆಂಗಳೂರು; ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ  ಸೌಲಭ್ಯ ಕಲ್ಪಿಸುವ 'ಶಕ್ತಿ'...

ಟೆಲಿಕಾಂ ಕಂಪನಿಯಿಂದ ವಿಧಾನಸೌಧ ಟರೇಸ್‌ ಅನಧಿಕೃತ ಬಳಕೆ; ವಸೂಲಾಗದ ನೆಲಬಾಡಿಗೆ, ನಿಯಮ ಉಲ್ಲಂಘಿಸಿದ್ದರೂ ಕ್ರಮವಿಲ್ಲ

ಬೆಂಗಳೂರು; ಟೆಲಿಕಾಂ ಮೂಲಸೌಕರ್ಯ ಕಂಪನಿಗಳಲ್ಲಿ ಖ್ಯಾತಿ ಹೊಂದಿರುವ ಆಂಧ್ರ ಪ್ರದೇಶ ಮೂಲದ...

ನೀಟ್‌, ಕೆ-ಸಿಇಟಿ ತರಬೇತಿ; ಅಲ್ಪಸಂಖ್ಯಾತರ ಇಲಾಖೆಯಲ್ಲಿ ಟೆಂಡರ್ ನಿಯಮ ಉಲ್ಲಂಘನೆ, ನಿಯಮಬಾಹಿರ ಚಟುವಟಿಕೆ, ಸರ್ಕಾರಕ್ಕೆ ಲೀಗಲ್ ನೋಟೀಸ್‌

ಬೆಂಗಳೂರು; ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ವಸತಿ ಕಾಲೇಜು ವಿದ್ಯಾರ್ಥಿಗಳಿಗೆ ಆಫ್‌ಲೈನ್ ಮಾದರಿಯಲ್ಲಿ...

Related Articles

Popular Categories

error: Content is protected !!