Thursday | May 14, 2026 |

ವಿಧಾನಸೌಧ; ಶೌಚಾಲಯಗಳ ನಿರ್ವಹಣೆ ಗುತ್ತಿಗೆದಾರನಿಗೆ 60 ಲಕ್ಷ ಬಾಕಿ ಉಳಿಸಿಕೊಂಡ ಸರ್ಕಾರ?

ಬೆಂಗಳೂರು; ವಿಧಾನಸೌಧ, ವಿಕಾಸಸೌಧ, ಬಹುಮಹಡಿ ಕಟ್ಟಡಗಳಲ್ಲಿನ ಸಚಿವರು, ಅಧಿಕಾರಿಗಳ ಕೊಠಡಿ ಮತ್ತು ಕಾರಿಡಾರ್‌ಗಳಲ್ಲಿರುವ ಸಾರ್ವಜನಿಕ ಶೌಚಾಲಯಗಳ ನಿರ್ವಹಣೆ ಮತ್ತು ಕಾರಿಡಾರ್‌ಗಳಲ್ಲಿನ ಸ್ವಚ್ಛತೆ ನಿರ್ವಹಣೆ ಮಾಡುತ್ತಿರುವ ಗುತ್ತಿಗೆದಾರರಿಗೆ ಕಳೆದ 8 ತಿಂಗಳಿನಿಂದ ಬಾಕಿ ಮೊತ್ತವನ್ನು ಪಾವತಿಸದೆ  ಸರ್ಕಾರ ಬಾಕಿ ಉಳಿಸಿಕೊಂಡಿರುವುದು ಬಹಿರಂಗವಾಗಿದೆ. 

ಅಧೀನ ಕಾರ್ಯದರ್ಶಿಗಳು ಮತ್ತು ಶಾಖಾಧಿಕಾರಿಗಳು ಶೌಚಾಲಯಗಳ ನಿರ್ವಹಣೆ ಮಾಡಬೇಕು ಎಂದು ಡಿಪಿಎಆರ್‌  ಅನಧಿಕೃತ  ಟಿಪ್ಪಣಿ ಹೊರಡಿಸಿದ್ದ ಬೆನ್ನಲ್ಲೇ, ಶೌಚಾಲಯಗಳ ನಿರ್ವಹಣೆ  ಮಾಡುವ ಗುತ್ತಿಗೆದಾರನಿಗೆ ಬಾಕಿ ಹಣ ಪಾವತಿಸದಿರುವ ವಿಚಾರ ಮುನ್ನೆಲೆಗೆ ಬಂದಿದೆ.  

ಹೊರಗುತ್ತಿಗೆ ಪಡೆದಿರುವ ಏಜೆನ್ಸಿಗೆ ಸರ್ಕಾರ ಅಂದಾಜು 60 ಲಕ್ಷ ರು. ಗೂ ಅಧಿಕ  ಮೊತ್ತವನ್ನು ಪಾವತಿಸಿಲ್ಲ ಎಂದು ತಿಳಿದು ಬಂದಿದೆ. ಅಲ್ಲದೆ, ಗುತ್ತಿಗೆ ಅವಧಿ 2 ತಿಂಗಳ ಹಿಂದೆಯಷ್ಟೇ ಪೂರ್ಣಗೊಂಡಿದ್ದರೂ ಗುತ್ತಿಗೆ ಅವಧಿಯನ್ನು ಮುಂದುವರೆಸುವ ಬಗ್ಗೆ ಈವರೆವಿಗೂ ಆದೇಶ ಹೊರಡಿಸಿಲ್ಲ. 

ಹೊಸದಾಗಿ ಗುತ್ತಿಗೆ ಪಡೆಯಲು ಕರೆದಿದ್ದ ಟೆಂಡರ್‌ನಲ್ಲಿ ಭಾಗವಹಿಸಿದ್ದ ಏಜೆನ್ಸಿಗಳ ಪೈಕಿ  ಮೂರು ಏಜೆನ್ಸಿಗಳು ಎಲ್‌  1 ಅರ್ಹತೆ ಪಡೆದಿವೆ. ಹೀಗಾಗಿ ಯಾವ ಏಜೆನ್ಸಿಗೆ ಗುತ್ತಿಗೆ  ನೀಡಬೇಕು ಎಂಬ ಬಗ್ಗೆ ಡಿಪಿಎಆರ್‌ ಅಧಿಕಾರಿಗಳು ಗೊಂದಲದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಮರು ಟೆಂಡರ್‌ ಕರೆದು ಇನ್ನಷ್ಟು ಕಠಿಣ ಷರತ್ತುಗಳನ್ನು ವಿಧಿಸಿ ಒಬ್ಬರನ್ನು  ಎಲ್‌ 1  ಎಂದು ಘೋಷಿಸಬೇಕಿತ್ತು. ಆದರೆ ಅಧಿಕಾರಿಗಳ್ಯಾರು ಇದರ ಬಗ್ಗೆ ಗಮನಹರಿಸಿಲ್ಲ ಎಂದು ತಿಳಿದು ಬಂದಿದೆ.  

ಹೀಗಾಗಿ ಹೊರಗುತ್ತಿಗೆ ಪಡೆದಿರುವ ಏಜೆನ್ಸಿಯ ಯಾವ ಸಿಬ್ಬಂದಿಯೂ ಕೆಲಸಕ್ಕೆ ಹಾಜರಾಗಿಲ್ಲ. ಅಲ್ಲದೆ, ಲಾಕ್‌ಡೌನ್‌ ಜಾರಿಯಲ್ಲಿರುವ ಕಾರಣ ಏಜೆನ್ಸಿ ಕೆಲಸಗಾರರಿಗೆ ಗುರುತಿನ ಪತ್ರ ಮತ್ತು ಕಚೇರಿಗೆ ಆಗಮಿಸಲು ಪಾಸ್‌ ಕೂಡ  ನೀಡಿಲ್ಲ ಎಂದು ತಿಳಿದು ಬಂದಿದೆ. 

ಹೊರಗುತ್ತಿಗೆ ಏಜೆನ್ಸಿ ಸ್ವಚ್ಛತಾ ನೌಕರರು ಆಗಮಿಸದ ಕಾರಣ ಅವರು ಮಾಡುವ ಕೆಲಸ ಅಧೀನ ಕಾರ್ಯದರ್ಶಿ ಮತ್ತು ಶಾಖಾಧಿಕಾರಿಗಳ ಹೆಗಲಿಗೆ ಬಿದ್ದಿದೆ. ಮತ್ತೊಂದು ಸಂಗತಿ ಎಂದರೆ ವಿಧಾನಸೌಧ, ವಿಕಾಸಸೌಧ,  ಬಹುಮಹಡಿ ಕಟ್ಟಡಗಳಲ್ಲಿನ ಸಾರ್ವಜನಿಕ ಶೌಚಾಲಯಗಳ ಸ್ವಚ್ಛತಾ ಕಾರ್ಯಗಳನ್ನು ನಿರ್ವಹಿಸುವ ಹೊರಗುತ್ತಿಗೆ ಸಿಬ್ಬಂದಿ ಪೈಕಿ ಬಹುತೇಕರು ಪಾದರಾಯನಪುರ ನಿವಾಸಿಗಳು ಎನ್ನಲಾಗಿದೆ. ಪಾದರಾಯನಪುರ ಸೀಲ್‌ಡೌನ್‌ ಆಗಿರುವ ಕಾರಣ ಸ್ವಚ್ಛತಾ ಸಿಬ್ಬಂದಿಗೆ ಯಾವುದೇ ಪಾಸ್‌ ನೀಡಲಾಗಿಲ್ಲ ಎಂದು ಗೊತ್ತಾಗಿದೆ. 

ಮತ್ತೊಂದು ವಿಶೇಷವೆಂದರೆ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳಲ್ಲಿನ ಶೌಚಾಲಯ ಮತ್ತು ಕಾರಿಡಾರ್‌ಗಳ ಸ್ವಚ್ಛತಾ ಕೆಲಸಗಳನ್ನು ನಿರ್ವಹಿಸಲು  ಹೊರಗುತ್ತಿಗೆ ಪಡೆದಿರುವ ಏಜೆನ್ಸಿಯ ವಾರ್ಷಿಕ ವಹಿವಾಟೇ 30ರಿಂದ 40 ಕೋಟಿ  ರು. ಇದೆ. ವಿಧಾನಸೌಧದಲ್ಲಿ ಗುತ್ತಿಗೆ ನಿರ್ವಹಿಸುತ್ತಿರುವ ಏಜೆನ್ಸಿ ಯಾವುದೇ ಸೇವಾ ಶುಲ್ಕ  ಪಡೆಯುತ್ತಿಲ್ಲ. 

ಇಲ್ಲಿ ಗುತ್ತಿಗೆ ಪಡೆದು ಕಾರ್ಯನಿರ್ವಹಿಸುವುದೇ  ಒಂದು ಪ್ರತಿಷ್ಠೆಯ ವಿಷಯ. ಹೀಗಾಗಿ 30ರಿಂದ 40 ಕೋಟಿ ವಾರ್ಷಿಕ ವಹಿವಾಟು ಇದ್ದರೂ ಶಕ್ತಿ ಸೌಧದಲ್ಲಿ ಗುತ್ತಿಗೆ  ಪಡೆಯಲು ಪೈಪೋಟಿ  ಇರುತ್ತೆ ಎಂದು ಅಧಿಕಾರಿಯೊಬ್ಬರು ಮಾಹಿತಿ  ನೀಡಿದ್ದಾರೆ. ಶಕ್ತಿ ಸೌಧದಲ್ಲಿ ಪಡೆದಿರುವ ಗುತ್ತಿಗೆಯನ್ನು ಟ್ರಂಪ್‌ ಕಾರ್ಡ್‌ ತರಹ ಬಳಸಿಕೊಳ್ಳುತ್ತಿರುವ ಏಜೆನ್ಸಿಗಳು, ಕಾರ್ಪೋರೇಟ್  ಸಂಸ್ಥೆಗಳಲ್ಲಿಯೂ ಗುತ್ತಿಗೆ ಪಡೆಯುತ್ತಿದ್ದಾರೆ ಎಂದು  ಹೇಳಲಾಗಿದೆ. 

Hot this week

ಕೋಟ್ಯಂತರ ರು ಮೌಲ್ಯದ ನಿವೇಶನ ನಿಯಮಬಾಹಿರ ಮಂಜೂರು, ಅಕ್ರಮ ಲಾಭ; ಕೆಎಎಸ್ ಅಧಿಕಾರಿ ವಿರುದ್ಧ ಲೋಕಾಯುಕ್ತ ವಿಚಾರಣೆಗೆ ಅನುಮತಿ

ಬೆಂಗಳೂರು; ಕೋಟ್ಯಂತರ ರುಪಾಯಿ ಮೌಲ್ಯದ ನಿವೇಶನಗಳನ್ನು ನಿಯಮಬಾಹಿರವಾಗಿ ಮಂಜೂರು ಮಾಡಿ ಖಾಸಗಿಯವರಿಗೆ...

ರಾಮಕೃಷ್ಣ ಹೆಗಡೆ ಕುಟುಂಬಕ್ಕೆ ಖರಾಬು ಗುಂಡು ತೋಪು ಜಮೀನು ಮಂಜೂರಿಗೆ ಕೋರಿಕೆ; ಸಿದ್ದು ಭೇಟಿ ಬೆನ್ನಲ್ಲೇ ಬಹಿರಂಗವಾದ ಪತ್ರ

ಬೆಂಗಳೂರು; ಬೆಂಗಳೂರು ಉತ್ತರ ತಾಲೂಕಿನಲ್ಲಿ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು...

ಘನತ್ಯಾಜ್ಯ ವಿಲೇವಾರಿ ಟಿಪ್ಪಿಂಗ್ ಶುಲ್ಕ; ರಾಮ್ಕಿ ಗ್ರೂಪ್‌ಗೆ ಅನುಕೂಲಕರ, ರಾಜ್ಯ ಸರ್ಕಾರವನ್ನು ಆರ್ಥಿಕ ದಿವಾಳಿತನದತ್ತ ತಳ್ಳಲಾಗಿದೆಯೇ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣಾ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ಟಿಪ್ಪಿಂಗ್ ಶುಲ್ಕದ ಆಧಾರದ ಮೇಲೆ...

ಶಾಂತಿನಗರ ಹೌಸಿಂಗ್‌ ಸೊಸೈಟಿ ಅಕ್ರಮ; 2,900 ಕೋಟಿ ಅಧಿಕ ಮೊತ್ತದ ಹಗರಣ ಕೆದಕಿದರೇ ಸತೀಶ್ ಜಾರಕಿಹೊಳಿ?

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ಅವರೊಂದಿಗೆ ತಳಕು ಹಾಕಿಕೊಂಡಿದ್ದ...

ಎಲ್‌ 1 ತಿರಸ್ಕೃತವಾದರೂ ನಡೆಯದ ಮರು ಟೆಂಡರ್, ಎಲ್ 2 ಗೆ ನೇರವಾಗಿ ಗುತ್ತಿಗೆಗೆ ಪರಿಗಣನೆ; 2,477.90 ಕೋಟಿ ರು ಹಗರಣ!

ಬೆಂಗಳೂರು; ಮಾಲೂರು-ಹೊಸಕೋಟೆ ವ್ಯಾಪ್ತಿಯನ್ನೂ ಸೇರಿದಂತೆ ಒಟ್ಟಾರೆ 123 ಕಿ ಮೀ ರಸ್ತೆಯನ್ನು ...
Please Scan to make Your Contribution

Topics

ಕೋಟ್ಯಂತರ ರು ಮೌಲ್ಯದ ನಿವೇಶನ ನಿಯಮಬಾಹಿರ ಮಂಜೂರು, ಅಕ್ರಮ ಲಾಭ; ಕೆಎಎಸ್ ಅಧಿಕಾರಿ ವಿರುದ್ಧ ಲೋಕಾಯುಕ್ತ ವಿಚಾರಣೆಗೆ ಅನುಮತಿ

ಬೆಂಗಳೂರು; ಕೋಟ್ಯಂತರ ರುಪಾಯಿ ಮೌಲ್ಯದ ನಿವೇಶನಗಳನ್ನು ನಿಯಮಬಾಹಿರವಾಗಿ ಮಂಜೂರು ಮಾಡಿ ಖಾಸಗಿಯವರಿಗೆ...

ರಾಮಕೃಷ್ಣ ಹೆಗಡೆ ಕುಟುಂಬಕ್ಕೆ ಖರಾಬು ಗುಂಡು ತೋಪು ಜಮೀನು ಮಂಜೂರಿಗೆ ಕೋರಿಕೆ; ಸಿದ್ದು ಭೇಟಿ ಬೆನ್ನಲ್ಲೇ ಬಹಿರಂಗವಾದ ಪತ್ರ

ಬೆಂಗಳೂರು; ಬೆಂಗಳೂರು ಉತ್ತರ ತಾಲೂಕಿನಲ್ಲಿ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು...

ಘನತ್ಯಾಜ್ಯ ವಿಲೇವಾರಿ ಟಿಪ್ಪಿಂಗ್ ಶುಲ್ಕ; ರಾಮ್ಕಿ ಗ್ರೂಪ್‌ಗೆ ಅನುಕೂಲಕರ, ರಾಜ್ಯ ಸರ್ಕಾರವನ್ನು ಆರ್ಥಿಕ ದಿವಾಳಿತನದತ್ತ ತಳ್ಳಲಾಗಿದೆಯೇ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣಾ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ಟಿಪ್ಪಿಂಗ್ ಶುಲ್ಕದ ಆಧಾರದ ಮೇಲೆ...

ಶಾಂತಿನಗರ ಹೌಸಿಂಗ್‌ ಸೊಸೈಟಿ ಅಕ್ರಮ; 2,900 ಕೋಟಿ ಅಧಿಕ ಮೊತ್ತದ ಹಗರಣ ಕೆದಕಿದರೇ ಸತೀಶ್ ಜಾರಕಿಹೊಳಿ?

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ಅವರೊಂದಿಗೆ ತಳಕು ಹಾಕಿಕೊಂಡಿದ್ದ...

ಎಲ್‌ 1 ತಿರಸ್ಕೃತವಾದರೂ ನಡೆಯದ ಮರು ಟೆಂಡರ್, ಎಲ್ 2 ಗೆ ನೇರವಾಗಿ ಗುತ್ತಿಗೆಗೆ ಪರಿಗಣನೆ; 2,477.90 ಕೋಟಿ ರು ಹಗರಣ!

ಬೆಂಗಳೂರು; ಮಾಲೂರು-ಹೊಸಕೋಟೆ ವ್ಯಾಪ್ತಿಯನ್ನೂ ಸೇರಿದಂತೆ ಒಟ್ಟಾರೆ 123 ಕಿ ಮೀ ರಸ್ತೆಯನ್ನು ...

ನಕಲಿ ಶಿಕ್ಷಕರಿಗೆ ವೇತನ ಪಾವತಿ; ಆರೋಪಿತ ಅಧಿಕಾರಿಗಳ ವಿರುದ್ಧ ಇಲಾಖೆ ವಿಚಾರಣೆ ಕೈಬಿಟ್ಟ ಸರ್ಕಾರ!

ಬೆಂಗಳೂರು; ರಾಮನಗರ ಜಿಲ್ಲೆಯಲ್ಲಿ  2011ರಿಂದ 2014ರವರೆಗೆ ಹೆಚ್‌ಆರ್‍ಎಂಎಸ್‌ ಮೂಲಕ ನಕಲಿ ಶಿಕ್ಷಕರ...

120 ಎಕರೆ ಗೋಮಾಳ ಕಬಳಿಕೆ ಪ್ರಕರಣ; ಕಂದಾಯ ನಿರೀಕ್ಷಕರ ವರದಿಯನ್ನೇ ಮುಚ್ಚಿಟ್ಟ ತಹಶೀಲ್ದಾರ್, ಸಚಿವರ ಒತ್ತಡ?

ಬೆಂಗಳೂರು; ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ ಗ್ರಾಮದ ವಿವಿಧ ಸರ್ವೆ ನಂಬರ್‍‌ಗಳಲ್ಲಿರುವ...

ಕೌನ್ಸಲಿಂಗ್‌ಗೂ ಮುನ್ನವೇ ಪಿಡಿಒಗಳ ವರ್ಗಾವಣೆ; ಹಣ ಕೊಟ್ಟವರಿಗೆ ಆದೇಶ, ಕೊಡದವರಿಗೆ ಕೌನ್ಸಲಿಂಗ್, ಆರೋಪ

ಬೆಂಗಳೂರು; ಪಂಚಾಯ್ತಿ ಅಭಿವೃದ್ದಿ ಅಧಿಕಾರಿಗಳ ವರ್ಗಾವಣೆಯನ್ನು ಕೌನ್ಸಲಿಂಗ್‌ ಮೂಲಕವೇ ನಡೆಸಲಾಗುವುದು ಎಂದು...

Related Articles

Popular Categories

error: Content is protected !!