Thursday | March 26, 2026 |

ಆಸ್ಪತ್ರೆಗಳಿಗೆ ಮರುಪಾವತಿಯಾಗದ 30 ಕೋಟಿ; ಪೊಲೀಸ್‌ ಸಿಬ್ಬಂದಿಗೆ ಚಿಕಿತ್ಸೆ ನಿರಾಕರಣೆ?

Support THE-FILE

spot_img

ಬೆಂಗಳೂರು; ಆರೋಗ್ಯ ಭಾಗ್ಯ ಯೋಜನೆಯಡಿಯಲ್ಲಿ ಪೊಲೀಸ್‌ ಸಿಬ್ಬಂದಿಗೆ ಚಿಕಿತ್ಸೆ ನೀಡಿರುವ ಖಾಸಗಿ ಆಸ್ಪತ್ರೆಗಳಿಗೆ ಕಳೆದ ಒಂದು ವರ್ಷದಿಂದ ವೆಚ್ಚದ ಮೊತ್ತ ಮರುಪಾವತಿ ಅಗಿಲ್ಲ. 2019-20ನೇ ಸಾಲಿನಲ್ಲಿ ಇದರ  ಮೊತ್ತ ಅಂದಾಜು 25 ರಿಂದ 30 ಕೋಟಿ  ರು.ಗಳಷ್ಟಿದೆ ಎಂದು ತಿಳಿದು ಬಂದಿದೆ.

ಪೊಲೀಸ್‌ ಇಲಾಖೆಯಲ್ಲಿ ಜಾರಿಯಲ್ಲಿರುವ ‘ಆರೋಗ್ಯ ಭಾಗ್ಯ’ ಯೋಜನೆಯನ್ನು ಎಲ್ಲ ಇಲಾಖೆಯ ನೌಕರರಿಗೂ ವಿಸ್ತರಿಸುವ ಮಹತ್ವದ ನಿರ್ಧಾರವನ್ನು ಸಿಎಂ ಬಿ.ಎಸ್‌.ಯಡಿಯೂರಪ್ಪ ಕೆಲ  ತಿಂಗಳ ಹಿಂದೆ ಪ್ರಕಟಿಸಿದ್ದರು. ಇದರ ಬೆನ್ನಲ್ಲೇ ಇದೇ ಯೋಜನೆಯಡಿಯಲ್ಲಿ ಪೊಲೀಸ್‌ ಸಿಬ್ಬಂದಿಗೆ ವೈದ್ಯಕೀಯ ಚಿಕಿತ್ಸೆ ನೀಡಿರುವ ಖಾಸಗಿ ಆಸ್ಪತ್ರೆಗಳಿಗೆ ಕೋಟ್ಯಂತರ ರು.ಬಾಕಿ ಉಳಿಸಿಕೊಂಡಿರುವ ವಿಚಾರ ಮುನ್ನೆಲೆಗೆ  ಬಂದಿದೆ. 

ಚಿಕಿತ್ಸೆ ನೀಡಿರುವ ನೋಂದಾಯಿತ ಖಾಸಗಿ ಆಸ್ಪತ್ರೆಗಳಿಗೆ ಕನಿಷ್ಠ 2 ರಿಂದ 3 ಕೋಟಿ  ರು.  ಮರು ಪಾವತಿ ಆಗಬೇಕಿದೆ. ಬಾಕಿ ಇರುವ ಮೊತ್ತವನ್ನು  ಸರ್ಕಾರ ಮರುಪಾವತಿ ಮಾಡದ ಹೊರತು ಚಿಕಿತ್ಸೆ ನೀಡಲು ನೋಂದಾಯಿತ ಖಾಸಗಿ ಆಸ್ಪತ್ರೆಗಳು ನಿರಾಕರಿಸುತ್ತಿವೆ ಎಂದು ಗೊತ್ತಾಗಿದೆ. ಖಾಸಗಿ ಆಸ್ಪತ್ರೆಗಳ ಧೋರಣೆಯಿಂದಾಗಿ ಪೊಲೀಸ್‌ ಸಿಬ್ಬಂದಿ ಪರದಾಡುತ್ತಿದ್ದಾರೆ. ಈ ಪೈಕಿ ನಿವೃತ್ತ ಪೊಲೀಸ್‌ ಸಿಬ್ಬಂದಿ ಅತಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. 

ಬಾಕಿ ಹಣಕ್ಕಾಗಿ ಖಾಸಗಿ ಆಸ್ಪತ್ರೆಗಳ ಆಡಳಿತ ಮಂಡಳಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರು, ಸರ್ಕಾರದ ಪ್ರಧಾನ ಕಾರ್ಯದರ್ಶಿ ಕಚೇರಿ ಸಂಪರ್ಕಿಸಿ ಹಲವು ಮನವಿಗಳನ್ನು ನೀಡಿದ್ದರೂ ಈವರೆವಿಗೂ ಬಾಕಿ ಮೊತ್ತ ಪಾವತಿಯಾಗಿಲ್ಲ. 

ಅಲ್ಲದೆ, ಯಶಸ್ವಿನಿ ಯೋಜನೆ ಸೇರಿದಂತೆ ವಿವಿಧ  ಆರೋಗ್ಯ ಯೋಜನೆಗಳನ್ನು ಸ್ಥಗಿತಗೊಳಿಸಿ ಆರೋಗ್ಯ ಕರ್ನಾಟಕ  ಯೋಜನೆ ಜಾರಿಗೊಳಿಸಿರುವ ಸರ್ಕಾರ,  ಈ ಯೋಜನೆಯಡಿಯಲ್ಲಿಯೂ ಮರುಪಾವತಿಸಬೇಕಿರುವ ಮೊತ್ತದ ಪೈಕಿ ಒಂದೊಂದು ಅಸ್ಪತ್ರೆಗೆ ಕನಿಷ್ಠ 50 ಲಕ್ಷ  ರು.ಗಳನ್ನು ಬಾಕಿ ಉಳಿಸಿಕೊಂಡಿದೆ ಎಂದು ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆಯ ಮೂಲಗಳು ‘ದಿ ಫೈಲ್‌’ಗೆ ತಿಳಿಸಿವೆ. 

‘ದಿ ಫೈಲ್‌’ ಜತೆ ಮಾತನಾಡಿದ ಖಾಸಗಿ ಆಸ್ಪತ್ರೆಯೊಂದರ ಆಡಳಿತ ಮಂಡಳಿ ನಿರ್ದೇಶಕರೊಬ್ಬರು ‘ಆರೋಗ್ಯಭಾಗ್ಯ ಯೋಜನೆಯಡಿಯಲ್ಲಿ ಮೂಳೆ ಸಂಬಂಧಿತ ರೋಗಗಳಿಂದ ಬಳಲುತ್ತಿದ್ದ ಪೊಲೀಸ್‌ ಸಿಬ್ಬಂದಿಗೆ  ಶಸ್ತ್ರಚಿಕಿತ್ಸೆ ಮಾಡಲಾಗಿದೆ. 2019-20ನೇ ಸಾಲಿನಲ್ಲಿ ನಮ್ಮ ಆಸ್ಪತ್ರೆಗೆ 2  ಕೋಟಿ  ರು.ಮರು ಪಾವತಿ ಆಗಿಲ್ಲ. ಅದೇ ರೀತಿ ಯಶಸ್ವಿನಿ ಯೋಜನೆಯಡಿಯಲ್ಲಿಯೂ 1.50 ಕೋಟಿ ರು. ಬಾಕಿ ಬರಬೇಕಿದೆ,’ ಎಂದು ಮಾಹಿತಿ ನೀಡಿದರು. 

ಪೊಲೀಸ್‌ ಸಿಬ್ಬಂದಿ ಚಿಕಿತ್ಸೆ ಪಡೆದ ವೆಚ್ಚದ ಮರುಪಾವತಿ ವಿಳಂಬವಾಗುತ್ತಿದ್ದರೂ  ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಗಂಭೀರವಾಗಿ ಪರಿಗಣಿಸಿಲ್ಲ. ‘ಅನುದಾನದ ಕೊರತೆ ಇರುವ ಕಾರಣ ವೈದ್ಯಕೀಯ ಚಿಕಿತ್ಸೆ ವೆಚ್ಚದ ಮರುಪಾವತಿಸಲು ಸಾಧ್ಯವಾಗುತ್ತಿಲ್ಲ,’ ಎಂದು ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.   

2018ರ ಜುಲೈನಿಂದ ಜಾರಿಯಲ್ಲಿರುವ ಆರೋಗ್ಯ ನಿವೃತ್ತ ಅಧಿಕಾರಿ ಮತ್ತು ಸಿಬ್ಬಂದಿಯ ಪತಿ ಮತ್ತು ಪತ್ನಿಗೆ ಮಾತ್ರ ಸೀಮಿತವಾಗಿರುತ್ತದೆ. ಚಿಕಿತ್ಸೆಗಾಗಿ ಲಕ್ಷ ರೂ.ವರೆಗೆ ಹಾಗೂ ಶಸ್ತ್ರಚಿಕಿತ್ಸೆಗೆ 2 ಲಕ್ಷ ರೂ.ವರೆಗೆ ಈ ಯೋಜನೆಯಡಿ ಆರೋಗ್ಯ ಸೇವೆ ಪಡೆಯಲು ಅವಕಾಶವಿದೆ. ಸಮಾಜದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಪೊಲೀಸ್ ಸಿಬ್ಬಂದಿಗಾಗಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಆರೋಗ್ಯ ಭಾಗ್ಯ ಯೋಜನೆಗೆ 20,000 ನಿವೃತ್ತ ಪೊಲೀಸರನ್ನು ಸೇರ್ಪಡೆಗೊಳಿಸಲಾಗಿತ್ತು.   

ನಿವೃತ್ತ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ರೂಪಿಸಿದ್ದ ‘ಆರೋಗ್ಯ ಭಾಗ್ಯ ಯೋಜನೆಗೆ ಹಿಂದಿನ ಸರ್ಕಾರ 10 ಕೋಟಿ ರೂ. ಮಂಜೂರು ಮಾಡಿತ್ತು. 

ಇದೇ ಯೋಜನೆಯನ್ನು ಸರ್ಕಾರದ ಎಲ್ಲಾ  ಇಲಾಖೆಗಳ ನೌಕರರಿಗೂ ವಿಸ್ತರಿಸಬೇಕು ಎಂದು ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದ ರಾಜ್ಯ ಸರ್ಕಾರಿ ನೌಕರರ ಸಂಘ, ಇದರಿಂದ 15 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯ ಸರ್ಕಾರಿ ನೌಕರರಿಗೆ ಪ್ರಯೋಜನವಾಗಲಿದೆ ಎಂದು ಮನವರಿಕೆ ಮಾಡಿಕೊಟ್ಟಿತ್ತು. 

ಹಾಗೆಯೇ ರಾಜ್ಯ ಸರಕಾರಿ ನೌಕರರು ಹಾಗೂ ಅವರ ಕುಟುಂಬ ವರ್ಗದವರ ಚಿಕಿತ್ಸೆ ಮತ್ತು ವೈದ್ಯ ವೆಚ್ಚ ಪಾವತಿಸಲು ವರ್ಷಗಟ್ಟಲೇ ವಿಳಂಬವಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಿಯಮ ಪರಿವರ್ತನೆ ಮಾಡಬೇಕೆಂದು ಸರಕಾರಿ ನೌಕರರ ಸಂಘ ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಆರೋಗ್ಯ ಭಾಗ್ಯವನ್ನು ಎಲ್ಲ ಸರಕಾರಿ ನೌಕರರಿಗೂ ವಿಸ್ತರಿಸಲು ನಿರ್ಧರಿಸಲಾಗಿತ್ತು. 

ರಾಜ್ಯದ ಪೊಲೀಸರು ಸಾಮಾಜಿಕ ಒತ್ತಡ ಹಾಗೂ ಕೆಲಸದ ಒತ್ತಡದಿಂದಾಗಿ ಹಲವು ರೀತಿಯ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಕಳೆದ ವರ್ಷ ಖಾಸಗಿ ಸಂಸ್ಥೆ ನಡೆಸಿದ್ದ ಸಮೀಕ್ಷೆಯೊಂದು ಹೊರಗೆಡವಿತ್ತು. 

Hot this week

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ...

42,750 ಕೋಟಿ ದೀರ್ಘಾವಧಿ ಸಾಲ, 4,516 ಕೋಟಿ ಆದಾಯ ಕೊರತೆ; ಎಸ್ಕಾಂಗಳ ಆರ್ಥಿಕ ಸ್ಥಿತಿ ಅನಾವರಣ

ಬೆಂಗಳೂರು; ವಿದ್ಯುತ್ ಸರಬರಾಜು ಕಂಪನಿಗಳು ಇದುವರೆಗೆ ಒಟ್ಟಾರೆ 42,750 ಕೋಟಿಗಳಷ್ಟು ದೀರ್ಘಾವಧಿ...

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ...

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

Topics

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ...

42,750 ಕೋಟಿ ದೀರ್ಘಾವಧಿ ಸಾಲ, 4,516 ಕೋಟಿ ಆದಾಯ ಕೊರತೆ; ಎಸ್ಕಾಂಗಳ ಆರ್ಥಿಕ ಸ್ಥಿತಿ ಅನಾವರಣ

ಬೆಂಗಳೂರು; ವಿದ್ಯುತ್ ಸರಬರಾಜು ಕಂಪನಿಗಳು ಇದುವರೆಗೆ ಒಟ್ಟಾರೆ 42,750 ಕೋಟಿಗಳಷ್ಟು ದೀರ್ಘಾವಧಿ...

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ...

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

ನರೇಗಾ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಿಯಮ ಉಲ್ಲಂಘನೆ; 86.67 ಕೋಟಿ ರು ಅಕ್ರಮ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಮಾನವ ಸಂಪನ್ಮೂಲ ಬಳಕೆಗಾಗಿ ಮಾಡಿಕೊಂಡಿದ್ದ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಡೆದಿದ್ದ...

ಮೋಸದ ವಹಿವಾಟು, ಹೆಚ್ಚಿನ ಪಾವತಿ, ಅಕ್ರಮ ವೆಚ್ಚ; ನರೇಗಾದ ಮತ್ತೊಂದು ಮುಖ ಬಯಲು ಮಾಡಿದ ಸಿಎಜಿ

ಬೆಂಗಳೂರು; ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೈಗೊಂಡಿದ್ದ ಕಾಮಗಾರಿಗಳು...

ಗೃಹಜ್ಯೋತಿ; 23,823.06 ಮಿಲಿಯನ್ ಯೂನಿಟ್ ವಿದ್ಯುತ್ ಬಳಕೆ, ಎಸ್ಕಾಂಗಳಿಗೆ 631.75 ಕೋಟಿ ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಗೃಹ ಜ್ಯೋತಿ ಯೋಜನೆ ಅನುಷ್ಠಾನಗೊಳಿಸಿರುವ ವಿದ್ಯುತ್ ಸರಬರಾಜು ಕಂಪನಿಗಳಿಗೆ ಸರ್ಕಾರವು...

Related Articles

Popular Categories

error: Content is protected !!