Friday | March 27, 2026 |

ಪರಿಸರ ನಿಯಮ ಉಲ್ಲಂಘನೆ; ದಂಡ ವಸೂಲು ಮಾಡದ ಮಾಲಿನ್ಯ ನಿಯಂತ್ರಣ ಮಂಡಳಿ

Support THE-FILE

spot_img

ಬೆಂಗಳೂರು; ಪರಿಸರ ಮಾಲಿನ್ಯ ತಡೆಗಟ್ಟಲು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕಿದ್ದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಪರಿಸರ ನಿಯಮಗಳನ್ನು ಉಲ್ಲಂಘಿಸುವ ಖಾಸಗಿ ವಲಯದ ಬೃಹತ್ ಪ್ರಮಾಣದ ಕೈಗಾರಿಕೆಗಳತ್ತ ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ. 

ದೂರು ಸಲ್ಲಿಕೆಯಾದ ನಂತರ ಕೇವಲ ನೋಟೀಸ್ ನೀಡಿ ಕೈತೊಳೆದುಕೊಳ್ಳುತ್ತಿರುವ ಮಾಲಿನ್ಯ ನಿಯಂತ್ರಣ ಮಂಡಳಿ ದಂಡ ವಸೂಲು ಮಾಡದೆ ಕೇವಲ ಕಣ್ಣೊರೆಸುವುದಕಷ್ವೇ ಸೀಮಿತವಾಗಿದೆ. ದಂಡ ವಸೂಲು ಮಾಡಿಲ್ಲ ಎಂಬುದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ  ಇಲಾಖೆಯ ಸಚಿವ  ಆನಂದ್‌ಸಿಂಗ್‌ ಅವರು ಸದನದಲ್ಲಿ ನೀಡಿರುವ ಲಿಖಿತ ಉತ್ತರದಿಂದ ತಿಳಿದು ಬಂದಿದೆ. 

ಇದಕ್ಕೊಂದು ಜ್ವಲಂತ ನಿದರ್ಶನ, ಕಲಬುರ್ಗಿ ಜಿಲ್ಲೆಯ ಸೇಡಂ ತಾಲೂಕಿನ ಬಾಲಾಜಿ ಸಿಮೆಂಟ್ಸ್ ಮತ್ತು ಪವರ್ ಲಿಮಿಟೆಡ್. ಸೇಡಂ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಹಲವು ಸಿಮೆಂಟ್ ಕಂಪನಿಗಳು ಪರಿಸರ ಮಾಲಿನ್ಯ ಮಾಡುತ್ತಿದ್ದರೂ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಜಾಣ ಕುರುಡು ನೀತಿ ಅನುಸರಿಸುತ್ತಿದೆ.

ಸಿಮೆಂಟ್‌ ಕಾರ್ಖಾನೆಗಳಿಂದ ಪರಿಸರ ಮಾಲಿನ್ಯವಾಗುತ್ತಿರುವ ಪ್ರಕರಣಗಳು ಗಮನದಲ್ಲಿದ್ದರೂ ಸರ್ಕಾರದ ಅರಣ್ಯ,ಪರಿಸರ ಜೀವಿಶಾಸ್ತ್ರ ಇಲಾಖೆಯೂ ಯಾವುದೇ ಕ್ರಮ ಕೈಗೊಳ್ಳದೇ ಭಂಡ ನಿರ್ಲಕ್ಷ್ಯ ವಹಿಸಿದೆ.

ಬಾಲಾಜಿ ಸಿಮೆಂಟ್ಸ್ ಮತ್ತು ಪವರ್ ಲಿಮಿಟೆಡ್(ಹಿಂದಿನ ಸೌತ್ ಇಂಡಿಯಾ ಸಿಮೆಂಟ್ಸ್) ಕಾರ್ಖಾನೆ ಸಮ್ಮತಿ ಪತ್ರವನ್ನು ಉಲ್ಲಂಘಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ 2019ರ ಮೇ 15 ಮತ್ತು ನವೆಂಬರ್ 30ರಂದು ನೋಟೀಸ್ ನೀಡಿರುವ ಮಾಲಿನ್ಯ ನಿಯಂತ್ರಣ ಮಂಡಳಿ, ಮಾಲಿನ್ಯ ಉಂಟುಮಾಡಿದ ಕಂಪನಿಯಿಂದ ದಂಡದ ರೂಪದಲ್ಲಿ ಬಿಡಿಗಾಸನ್ನೂ ವಸೂಲು ಮಾಡಿಲ್ಲದಿರುವುದು ದಾಖಲೆಯಿಂದ ತಿಳಿದು ಬಂದಿದೆ.

ಸಿಮೆಂಟ್ ಕೈಗಾರಿಕೆಗಳ ಆವರಣದಲ್ಲಿ ಪರಿವೇಷ್ಠಕ ವಾಯು ಗುಣಮಟ್ಟವನ್ನು ಮಾಪನ ಮಾಡಿರುವ ಮಂಡಳಿಯ ಪ್ರಾದೇಶಿಕ ಕಚೇರಿ, ಪಿಎಂ 10(ಹತ್ತು ಮೈಕ್ರಾನ್‍ಗಿಂತ ಕಡಿಮೆ ಇರುವ ಧೂಳಿನ ಪ್ರಮಾಣವು ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಮಂತ್ರಾಲಯದ 2009ರಲ್ಲಿ ನಿಗದಿಪಡಿಸಿರುವ ಪ್ರಮಾಣಕ್ಕಿಂತ ಕಡಿಮೆ ಇದೆ ಎಂದು ಹೇಳಿದೆ.

ಧೂಳಿನ ಪ್ರಮಾಣದಲ್ಲಿ ಅಕಸ್ಮಾತ್ ಆಗಿ ಕ್ಷಿಪ್ರ ಬದಲಾವಣೆ ಕಂಡು ಬಂದಲ್ಲಿ ಎಸ್‍ಎಂಎಸ್ ಅಥವಾ ಇ-ಮೇಲ್ ಮೂಲಕ ಎಚ್ಚರಿಕೆ ನೀಡಿ ಕೈತೊಳೆದುಕೊಳ್ಳುತ್ತಿರುವುದು ದಾಖಲೆಯಿಂದ ಗೊತ್ತಾಗಿದೆ. 

Hot this week

ಪ್ರಚೋದನಕಾರಿ ಭಾಷಣ, ಕೋಮು ಗಲಭೆ; 3 ವರ್ಷದಲ್ಲಿ 50 ಪ್ರಕರಣಗಳು ದಾಖಲು, ಪಟ್ಟಿ ಬಹಿರಂಗ

ಬೆಂಗಳೂರು; ರಾಜ್ಯದ  ಕರಾವಳಿ ಭಾಗ ಸೇರಿದಂತೆ ವಿವಿಧೆಡೆ ಪ್ರಚೋದನಾಕಾರಿ ಭಾಷಣ ಮಾಡಿದವರು...

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ...

42,750 ಕೋಟಿ ದೀರ್ಘಾವಧಿ ಸಾಲ, 4,516 ಕೋಟಿ ಆದಾಯ ಕೊರತೆ; ಎಸ್ಕಾಂಗಳ ಆರ್ಥಿಕ ಸ್ಥಿತಿ ಅನಾವರಣ

ಬೆಂಗಳೂರು; ವಿದ್ಯುತ್ ಸರಬರಾಜು ಕಂಪನಿಗಳು ಇದುವರೆಗೆ ಒಟ್ಟಾರೆ 42,750 ಕೋಟಿಗಳಷ್ಟು ದೀರ್ಘಾವಧಿ...

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ...

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

Topics

ಪ್ರಚೋದನಕಾರಿ ಭಾಷಣ, ಕೋಮು ಗಲಭೆ; 3 ವರ್ಷದಲ್ಲಿ 50 ಪ್ರಕರಣಗಳು ದಾಖಲು, ಪಟ್ಟಿ ಬಹಿರಂಗ

ಬೆಂಗಳೂರು; ರಾಜ್ಯದ  ಕರಾವಳಿ ಭಾಗ ಸೇರಿದಂತೆ ವಿವಿಧೆಡೆ ಪ್ರಚೋದನಾಕಾರಿ ಭಾಷಣ ಮಾಡಿದವರು...

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ...

42,750 ಕೋಟಿ ದೀರ್ಘಾವಧಿ ಸಾಲ, 4,516 ಕೋಟಿ ಆದಾಯ ಕೊರತೆ; ಎಸ್ಕಾಂಗಳ ಆರ್ಥಿಕ ಸ್ಥಿತಿ ಅನಾವರಣ

ಬೆಂಗಳೂರು; ವಿದ್ಯುತ್ ಸರಬರಾಜು ಕಂಪನಿಗಳು ಇದುವರೆಗೆ ಒಟ್ಟಾರೆ 42,750 ಕೋಟಿಗಳಷ್ಟು ದೀರ್ಘಾವಧಿ...

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ...

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

ನರೇಗಾ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಿಯಮ ಉಲ್ಲಂಘನೆ; 86.67 ಕೋಟಿ ರು ಅಕ್ರಮ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಮಾನವ ಸಂಪನ್ಮೂಲ ಬಳಕೆಗಾಗಿ ಮಾಡಿಕೊಂಡಿದ್ದ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಡೆದಿದ್ದ...

ಮೋಸದ ವಹಿವಾಟು, ಹೆಚ್ಚಿನ ಪಾವತಿ, ಅಕ್ರಮ ವೆಚ್ಚ; ನರೇಗಾದ ಮತ್ತೊಂದು ಮುಖ ಬಯಲು ಮಾಡಿದ ಸಿಎಜಿ

ಬೆಂಗಳೂರು; ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೈಗೊಂಡಿದ್ದ ಕಾಮಗಾರಿಗಳು...

Related Articles

Popular Categories

error: Content is protected !!