Friday | May 1, 2026 |

ಉಳುವವನೇ ಭೂ ಒಡೆಯ; 46 ವರ್ಷಗಳಾದರೂ ಇತ್ಯರ್ಥಗೊಂಡಿಲ್ಲ 4.75 ಲಕ್ಷ ಪ್ರಕರಣಗಳು

ಬೆಂಗಳೂರು; ರಾಜ್ಯದಲ್ಲಿ ದೇವರಾಜ ಅರಸು ಸರ್ಕಾರದ ಅವಧಿಯಲ್ಲೆ ಜಾರಿಗೊಂಡಿದ್ದ ಭೂ ಸುಧಾರಣೆ ಕಾಯ್ದೆಯ ಉಳುವವನೇ ಭೂ ಒಡೆಯ ಯೋಜನೆ ಅನುಷ್ಠಾನಗೊಂಡು 46 ವರ್ಷಗಳು ಪೂರ್ಣಗೊಂಡಿದ್ದರೂ ಯೋಜನೆ ಫಲಾನುಭವಿಗಳ ಪ್ರಕರಣಗಳು ಭೂ ನ್ಯಾಯ ಮಂಡಳಿಯಲ್ಲಿ ಇನ್ನೂ ಪೂರ್ಣ ಪ್ರಮಾಣದಲ್ಲಿ ಇತ್ಯರ್ಥಗೊಂಡಿಲ್ಲ. 

ಭೂ ನ್ಯಾಯ ಮಂಡಳಿಯಲ್ಲಿ ಇತ್ಯರ್ಥಕ್ಕಾಗಿ 4,75,801 ಪ್ರಕರಣಗಳು  ಬಾಕಿ ಇವೆ. ರಾಜ್ಯದ 4 ಪ್ರಾದೇಶಿಕ ವಿಭಾಗಗಳ ಪೈಕಿ ಬೆಳಗಾವಿ ವಿಭಾಗವೊಂದರಲ್ಲೇ 2,17,822 ಪ್ರಕರಣಗಳು ಇತ್ಯರ್ಥಗೊಳ್ಳಲು ಇನ್ನೂ ಬಾಕಿ ಇರುವುದು ದಾಖಲೆಯಿಂದ ತಿಳಿದು ಬಂದಿದೆ. 

ಮೈಸೂರಿನ ಕೆ ಆರ್‌ ನಗರ  ವಿಧಾನಸಭೆ ಸದಸ್ಯ ಸಾ ರಾ ಮಹೇಶ್‌ ಅವರು 2020ರ ಮಾರ್ಚ್  23ರಂದು ಸದನದಲ್ಲಿ ಕೇಳಿದ  ಪ್ರಶ್ನೆಗೆ ಉತ್ತರಿಸಿರುವ ಕಂದಾಯ ಸಚಿವ ಆರ್‌ ಅಶೋಕ್‌ ಅವರು 4  ಲಕ್ಷಕ್ಕೂ ಅಧಿಕ ಪ್ರಕರಣಗಳು ಇತ್ಯರ್ಥಕ್ಕಾಗಿ ಭೂ ನ್ಯಾಯಮಂಡಳಿಯಲ್ಲಿ ಬಾಕಿ ಇವೆ ಎಂದು ಮಾಹಿತಿ ಒದಗಿಸಿದ್ದಾರೆ. 

ಬೆಳಗಾವಿ ವಿಭಾಗದ ಉತ್ತರ ಕನ್ನಡ ಜಿಲ್ಲೆಯೊಂದರಲ್ಲಿ 91,470 ಪ್ರಕರಣಗಳಿಗೆ ಇನ್ನೂ ಮುಕ್ತಿ ಸಿಕ್ಕಿಲ್ಲ. ಮೈಸೂರು ವಿಭಾಗದಲ್ಲಿ 1,28,769, ಬೆಂಗಳೂರು ವಿಭಾಗದಲ್ಲಿ 86,940, ಕಲಬುರಗಿ ವಿಭಾಗದಲ್ಲಿ 42,270 ಪ್ರಕರಣಗಳು ಇತ್ಯರ್ಥಕ್ಕೆ ಬಾಕಿ ಇವೆ. ಮೈಸೂರು ವಿಭಾಗದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ  ಹೆಚ್ಚು ಎಂದರೆ 78,832  ಪ್ರಕರಣಗಳು ಇತ್ಯರ್ಥಕ್ಕೆ  ಬಾಕಿ ಇದ್ದರೆ, ಬೆಂಗಳೂರು ವಿಭಾಗದಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ 33,987, ಕಲಬುರಗಿ ವಿಭಾಗದ ಕಲಬುರಗಿ ಜಿಲ್ಲೆಯಲ್ಲಿ 11,741 ಪ್ರಕರಣಗಳು ಇತ್ಯರ್ಥಕ್ಕೆ ಬಾಕಿ ಇರುವುದು ಕಂದಾಯ ದಾಖಲೆಯಿಂದ ಗೊತ್ತಾಗಿದೆ. 

ಮೈಸೂರು ಜಿಲ್ಲೆಯಲ್ಲಿ 16,454, ಬೆಂಗಳೂರು ನಗರ ಜಿಲ್ಲೆಯಲ್ಲಿ 17,702, ಹಾಸನ ಜಿಲ್ಲೆಯಲ್ಲಿ 12,364, ಬೆಳಗಾವಿ  ಜಿಲ್ಲೆಯೊಂದರಲ್ಲಿ 61,008 ಪ್ರಕರಣಗಳಿಗೆ  ಇನ್ನೂ ಮುಕ್ತಿ ಸಿಕ್ಕಿಲ್ಲ. 

ಸಾಮಾಜಿಕ ಪರಿವರ್ತನಾಶೀಲ ರಾಜಕಾರಣಿ ದೇವರಾಜ ಅರಸು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಜಾರಿಗೊಂಡಿದ್ದ ಉಳುವವನೇ ಭೂ ಒಡೆಯ ಯೋಜನೆ, ಭೂರಹಿತರು ಸ್ವಂತ ಭೂಮಿ ಹೊಂದುವ ಅವಕಾಶ ಕಲ್ಪಿಸಿದಂತಾಗಿತ್ತು. ಈ ಯೋಜನೆಗೆ ಅಂದಿನ ಭೂಮಾಲೀಕರು ಸಾಕಷ್ಟು ವಿರೋಧ ವ್ಯಕ್ತಪಡಿಸಿದ್ದರೂ ಧೃತಿಗೆಡದ ದೇವರಾಜ ಅರಸು ಅವರು ಯೋಜನೆಯನ್ನು ಅನುಷ್ಠಾನಗೊಳಿಸುವಲ್ಲಿ ಕಟಿಬದ್ಧರಾಗಿದ್ದರು.

ದೇವರಾಜ ಅರಸು ಅವರ ನಂತರದ ಅನೇಕ  ವರ್ಷಗಳವರೆಗೆ ಕಾಂಗ್ರೆಸ್‌ ಪಕ್ಷವೇ ರಾಜ್ಯದಲ್ಲಿ ಅಧಿಕಾರದಲ್ಲಿದ್ದರೂ ಉಳುವವನೇ ಭೂ ಒಡೆಯ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಲ್ಲಿ ವಿಫಲವಾಯಿತು.ಅದರಲ್ಲೂ ಮಲೆನಾಡು ಮತ್ತು ಕರಾವಳಿ ಭಾಗ ಹೊರತುಪಡಿಸಿ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಈ ಯೋಜನೆ ಪರಿಣಾಮಕಾರಿಯಾಗಿ ಮತ್ತು ಸಮರ್ಪಕವಾಗಿ ಅನುಷ್ಠಾನಗೊಳ್ಳಲೇ ಇಲ್ಲ.

ಹಿಂದಿನ ಕಾಂಗ್ರೆಸ್‌ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಅರ್ಹ ಗೇಣಿದಾರರಿಗೆ ಭೂ ಒಡೆತನ ನೀಡಲು ಮುಂದಾಗಿದ್ದರು. ಆದರೆ ಆ ನಂತರ ಜೆಡಿಎಸ್‌ ಮತ್ತು ಕಾಂಗ್ರೆಸ್‌ ಮೈತ್ರಿಕೂಟ ಸರ್ಕಾರದ ಅವಧಿಯಲ್ಲಿ ಭೂಒಡೆತನ  ನೀಡಲು ಎದುರಾಗಿದ್ದ  ಕಾನೂನು ತೊಡಕುಗಳನ್ನು ನಿವಾರಿಸುವ ಗೋಜಿಗೆ ಹೋಗಿರಲಿಲ್ಲ.

Hot this week

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕದಲ್ಲಿ ಡಿಸಿಎಂ ಮೇಲುಗೈ, ಜಾರಕಿಹೊಳಿ ಮೌನ; ಕೆಟ್ಟ ಪೂರ್ವ ನಿದರ್ಶನಕ್ಕೆ ನಾಂದಿ ಹಾಡಿದ ಸಿಎಂ

ಬೆಂಗಳೂರು;  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ...

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕಕ್ಕೆ ಒತ್ತಡ; ವಿವಾದಕ್ಕೆ ದಾರಿಯಾದ ಡಿಸಿಎಂ ಟಿಪ್ಪಣಿ, ನಿಯಮ ಉಲ್ಲಂಘನೆ?

ಬೆಂಗಳೂರು; ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್  ಪ್ರವೀಣ್ ಲಿಂಗಯ್ಯ ಅವರನ್ನು...

ಆಧಾರ್ ಕಾರ್ಡ್‌ಗಿಂತಲೂ ಶಕ್ತಿ ಸ್ಮಾರ್ಟ್‌ ದುಬಾರಿ, ಎಸ್‌ಪಿವಿ ರಚನೆಯಾದರೂ ಸಿಗದ ಕಾರ್ಡ್‌; 185 ಕೋಟಿ ವೆಚ್ಚ ಭರಿಸುವವರಾರು?

ಬೆಂಗಳೂರು; ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ  ಸೌಲಭ್ಯ ಕಲ್ಪಿಸುವ 'ಶಕ್ತಿ'...

Topics

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕದಲ್ಲಿ ಡಿಸಿಎಂ ಮೇಲುಗೈ, ಜಾರಕಿಹೊಳಿ ಮೌನ; ಕೆಟ್ಟ ಪೂರ್ವ ನಿದರ್ಶನಕ್ಕೆ ನಾಂದಿ ಹಾಡಿದ ಸಿಎಂ

ಬೆಂಗಳೂರು;  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ...

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕಕ್ಕೆ ಒತ್ತಡ; ವಿವಾದಕ್ಕೆ ದಾರಿಯಾದ ಡಿಸಿಎಂ ಟಿಪ್ಪಣಿ, ನಿಯಮ ಉಲ್ಲಂಘನೆ?

ಬೆಂಗಳೂರು; ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್  ಪ್ರವೀಣ್ ಲಿಂಗಯ್ಯ ಅವರನ್ನು...

ಆಧಾರ್ ಕಾರ್ಡ್‌ಗಿಂತಲೂ ಶಕ್ತಿ ಸ್ಮಾರ್ಟ್‌ ದುಬಾರಿ, ಎಸ್‌ಪಿವಿ ರಚನೆಯಾದರೂ ಸಿಗದ ಕಾರ್ಡ್‌; 185 ಕೋಟಿ ವೆಚ್ಚ ಭರಿಸುವವರಾರು?

ಬೆಂಗಳೂರು; ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ  ಸೌಲಭ್ಯ ಕಲ್ಪಿಸುವ 'ಶಕ್ತಿ'...

ಟೆಲಿಕಾಂ ಕಂಪನಿಯಿಂದ ವಿಧಾನಸೌಧ ಟರೇಸ್‌ ಅನಧಿಕೃತ ಬಳಕೆ; ವಸೂಲಾಗದ ನೆಲಬಾಡಿಗೆ, ನಿಯಮ ಉಲ್ಲಂಘಿಸಿದ್ದರೂ ಕ್ರಮವಿಲ್ಲ

ಬೆಂಗಳೂರು; ಟೆಲಿಕಾಂ ಮೂಲಸೌಕರ್ಯ ಕಂಪನಿಗಳಲ್ಲಿ ಖ್ಯಾತಿ ಹೊಂದಿರುವ ಆಂಧ್ರ ಪ್ರದೇಶ ಮೂಲದ...

ನೀಟ್‌, ಕೆ-ಸಿಇಟಿ ತರಬೇತಿ; ಅಲ್ಪಸಂಖ್ಯಾತರ ಇಲಾಖೆಯಲ್ಲಿ ಟೆಂಡರ್ ನಿಯಮ ಉಲ್ಲಂಘನೆ, ನಿಯಮಬಾಹಿರ ಚಟುವಟಿಕೆ, ಸರ್ಕಾರಕ್ಕೆ ಲೀಗಲ್ ನೋಟೀಸ್‌

ಬೆಂಗಳೂರು; ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ವಸತಿ ಕಾಲೇಜು ವಿದ್ಯಾರ್ಥಿಗಳಿಗೆ ಆಫ್‌ಲೈನ್ ಮಾದರಿಯಲ್ಲಿ...

ವರ್ಗಾವಣೆ ರದ್ದುಗೊಳಿಸಲು ತಲಾ 20 ಲಕ್ಷಕ್ಕೆ ಬೇಡಿಕೆ ಆರೋಪ; ಟೆಂಡರ್ ಕಮಿಷನ್ ಆಪಾದನೆ ಬೆನ್ನಲ್ಲೇ ಕರೀಗೌಡರ ವಿರುದ್ಧ ದೂರು

ಬೆಂಗಳೂರು; ಒಂದೆಡೆ ಮಂಜೂರಾಗಿರುವ ಹುದ್ದೆಗಳನ್ನು  ಭರ್ತಿ ಮಾಡುತ್ತಿಲ್ಲ, ಶೇ. 40ರಷ್ಟು ಹುದ್ದೆಗಳು...

Related Articles

Popular Categories

error: Content is protected !!