Saturday | March 7, 2026 |

ಕೊರೊನಾ ನಂತರ ತುಮಕೂರು ಜಿಲ್ಲೆ ನಿದ್ದೆಗೆಡಿಸಿವೆ 250 ಚಿರತೆಗಳು

Support THE-FILE

spot_img

ತುಮಕೂರು; ಕೊರೊನಾ ವೈರಸ್‌ ಭೀತಿಯಿಂದ ಸದ್ಯಕ್ಕೆ ಪಾರಾಗಿರುವ ತುಮಕೂರು ಜಿಲ್ಲೆಯಲ್ಲೀಗ ಚಿರತೆ ಭೀತಿ ಕಾಡತೊಡಗಿದೆ. ಜಿಲ್ಲೆಯಲ್ಲಿ ಎಲ್ಲಿ ಕೇಳಿದರೂ ಚಿರತೆಗಳದ್ದೇ ಸದ್ದು. ನರಹಂತಕ ಚಿರತೆಗಳನ್ನು ಸೆರೆ ಹಿಡಿಯಲು ಅರಣ್ಯಾಧಿಕಾರಿಗಳು ಅದಷ್ಟೇ ಯತ್ನಿಸಿದರೂ ಸಫಲವಾಗುತ್ತಿಲ್ಲ. 

ತುಮಕೂರು ತಾಲೂಕು, ಗುಬ್ಬಿ, ಕುಣಿಗಲ್ ಮತ್ತು ತುರುವೇಕೆರೆ ತಾಲೂಕು ವ್ಯಾಪ್ತಿಯ ಹಳ್ಳಿಗಳಲ್ಲಿ ಕೇವಲ 10 ಚಿರತೆಗಳಷ್ಟೇ ಅರಣ್ಯಾಧಿಕಾರಿಗಳ ಸೆರೆಗೆ ಸಿಕ್ಕಿವೆ. ಇನ್ನುಳಿದ 250 ಚಿರತೆಗಳು ತುಮಕೂರು ಜಿಲ್ಲೆಯಾದ್ಯಂತ ಈಗಲೂ ಓಡಾಡಿಕೊಂಡಿರುವುದು ಈ ಭಾಗದ ಜನರಲ್ಲಿ ಆತಂಕ ಮೂಡಿಸಿದೆ. 

ತುಮಕೂರು ಜಿಲ್ಲೆಯಾದ್ಯಂತ ಇರುವ ಚಿರತೆಗಳ ಬಗ್ಗೆ ತುರುವೇಕೆರೆ ಶಾಸಕ ಮಸಾಲ ಜಯರಾಮ್ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಸಚಿವ ಆನಂದ್‍ಸಿಂಗ್ ಅವರು ತುಮಕೂರು ಜಿಲ್ಲೆಯಾದ್ಯಂತ ಈಗಲೂ 250 ಚಿರತೆಗಳಿವೆ ಎಂದು ಮಾಹಿತಿ ಒದಗಿಸಿದ್ದಾರೆ.

ತುಮಕೂರು ತಾಲೂಕಿನಲ್ಲಿ ಚಿರತೆ ಹಾವಳಿ ಪ್ರಕರಣಗಳು 2016-17ರಿಂದ 2018-19ರವರೆಗೆ ಹೆಚ್ಚಿವೆ. 2016-17ರಲ್ಲಿ 20 ಪ್ರಕರಣಗಳು, 2017-18ರಲ್ಲಿ 29, 2018-19ರಲ್ಲಿ 43, 2019-20ರಲ್ಲಿ 19 ಪ್ರಕರಣಗಳು ವರದಿಯಾಗಿರುವುದು ಆನಂದ್ ಸಿಂಗ್ ಅವರು ನೀಡಿರುವ ಉತ್ತರದಿಂದ ತಿಳಿದು ಬಂದಿದೆ.

ತುಮಕೂರು ತಾಲೂಕಿನಲ್ಲಿ ಸಾಕು ಪ್ರಾಣಿ ಹತ್ಯೆ ಪ್ರಕರಣಗಳಿಗೆ ಸಂಬಂಧಿಸಿದಂತೆ 2016-17ರಲ್ಲಿ 1,98,000 ರು., 2017-18ರಲ್ಲಿ 2,33,798 ರು., 2018-19ರಲ್ಲಿ 3,29,000 ರು.ಗಳನ್ನು ಪರಿಹಾರ ನೀಡಲಾಗಿದೆ. ಗುಬ್ಬಿ ತಾಲೂಕಿನಲ್ಲಿ ಈ ಮೂರು ವರ್ಷಗಳಲ್ಲಿ 9,27,182 ರು, ಕುಣಿಗಲ್‍ನಲ್ಲಿ 31,29,498 ರು., ತುರುವೇಕೆರೆಯಲ್ಲಿ 2,91,833 ರು.ಗಳನ್ನು ಪರಿಹಾರ ವಿತರಿಸಿದೆ.

ಚಿರತೆ ದಾಳಿಯಿಂದ 2016-17ರಿಂದ 2018-19ರಲ್ಲಿ ಯಾವುದೇ ಮಾನವ, ಪ್ರಾಣ ಹಾನಿ ಆಗಿಲ್ಲ. 2019-20ರಲ್ಲಿ ಒಟ್ಟು 3 ಪ್ರಕರಣಗಳು ವರದಿಯಾಗಿವೆ. ತುಮಕೂರು, ಗುಬ್ಬಿ, ಕುಣಿಗಲ್ ವ್ಯಾಪ್ತಿಯಲ್ಲಿ ಆಗಿರುವ ಮಾನವ,ಪ್ರಾಣ ಹಾನಿಗೆ ಸಂಬಂಧಿಸಿದಂತೆ ಒಟ್ಟು 17 ಲಕ್ಷ ರು.ಗಳನ್ನು ಪರಿಹಾರ ರೂಪದಲ್ಲಿ ವಿತರಿಸಿದೆ ಎಂದು ಆನಂದ್‍ಸಿಂಗ್ ಅವರು ಉತ್ತರ ನೀಡಿದ್ದಾರೆ. 

Hot this week

ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ರಾಜ್ಯದ ಪಾಲು ಕುಸಿತ; ಕರ್ನಾಟಕಕ್ಕೆ ತೀವ್ರ ಸವಾಲು ಒಡ್ಡಲಿದೆಯೇ?

ಬೆಂಗಳೂರು;  ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ವರ್ಷದಿಂದ ವರ್ಷಕ್ಕೆ  ರಾಜ್ಯ ಪಾಲು ಕುಸಿತವಾಗುತ್ತಿರುವ...

ಕೃಷಿ, ಕೈಗಾರಿಕೆ ವಲಯದ ಪಾಲು ಇಳಿಕೆ; ಒಟ್ಟಾರೆ ಆಂತರಿಕ ಉತ್ಪನ್ನದಲ್ಲಿ ಹಿನ್ನಡೆ

ಬೆಂಗಳೂರು;  ರಾಜ್ಯದ ಒಟ್ಟು ಆಂತರಿಕ ಉತ್ಪನ್ನದಲ್ಲಿ 2024-25ರಲ್ಲಿ ಕೃಷಿ ವಲಯದ ಪಾಲು...

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

Topics

ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ರಾಜ್ಯದ ಪಾಲು ಕುಸಿತ; ಕರ್ನಾಟಕಕ್ಕೆ ತೀವ್ರ ಸವಾಲು ಒಡ್ಡಲಿದೆಯೇ?

ಬೆಂಗಳೂರು;  ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ವರ್ಷದಿಂದ ವರ್ಷಕ್ಕೆ  ರಾಜ್ಯ ಪಾಲು ಕುಸಿತವಾಗುತ್ತಿರುವ...

ಕೃಷಿ, ಕೈಗಾರಿಕೆ ವಲಯದ ಪಾಲು ಇಳಿಕೆ; ಒಟ್ಟಾರೆ ಆಂತರಿಕ ಉತ್ಪನ್ನದಲ್ಲಿ ಹಿನ್ನಡೆ

ಬೆಂಗಳೂರು;  ರಾಜ್ಯದ ಒಟ್ಟು ಆಂತರಿಕ ಉತ್ಪನ್ನದಲ್ಲಿ 2024-25ರಲ್ಲಿ ಕೃಷಿ ವಲಯದ ಪಾಲು...

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

Related Articles

Popular Categories

spot_imgspot_img
error: Content is protected !!