Wednesday | June 17, 2026 |

ಕೊರೊನಾ ನಂತರ ತುಮಕೂರು ಜಿಲ್ಲೆ ನಿದ್ದೆಗೆಡಿಸಿವೆ 250 ಚಿರತೆಗಳು

ತುಮಕೂರು; ಕೊರೊನಾ ವೈರಸ್‌ ಭೀತಿಯಿಂದ ಸದ್ಯಕ್ಕೆ ಪಾರಾಗಿರುವ ತುಮಕೂರು ಜಿಲ್ಲೆಯಲ್ಲೀಗ ಚಿರತೆ ಭೀತಿ ಕಾಡತೊಡಗಿದೆ. ಜಿಲ್ಲೆಯಲ್ಲಿ ಎಲ್ಲಿ ಕೇಳಿದರೂ ಚಿರತೆಗಳದ್ದೇ ಸದ್ದು. ನರಹಂತಕ ಚಿರತೆಗಳನ್ನು ಸೆರೆ ಹಿಡಿಯಲು ಅರಣ್ಯಾಧಿಕಾರಿಗಳು ಅದಷ್ಟೇ ಯತ್ನಿಸಿದರೂ ಸಫಲವಾಗುತ್ತಿಲ್ಲ. 

ತುಮಕೂರು ತಾಲೂಕು, ಗುಬ್ಬಿ, ಕುಣಿಗಲ್ ಮತ್ತು ತುರುವೇಕೆರೆ ತಾಲೂಕು ವ್ಯಾಪ್ತಿಯ ಹಳ್ಳಿಗಳಲ್ಲಿ ಕೇವಲ 10 ಚಿರತೆಗಳಷ್ಟೇ ಅರಣ್ಯಾಧಿಕಾರಿಗಳ ಸೆರೆಗೆ ಸಿಕ್ಕಿವೆ. ಇನ್ನುಳಿದ 250 ಚಿರತೆಗಳು ತುಮಕೂರು ಜಿಲ್ಲೆಯಾದ್ಯಂತ ಈಗಲೂ ಓಡಾಡಿಕೊಂಡಿರುವುದು ಈ ಭಾಗದ ಜನರಲ್ಲಿ ಆತಂಕ ಮೂಡಿಸಿದೆ. 

ತುಮಕೂರು ಜಿಲ್ಲೆಯಾದ್ಯಂತ ಇರುವ ಚಿರತೆಗಳ ಬಗ್ಗೆ ತುರುವೇಕೆರೆ ಶಾಸಕ ಮಸಾಲ ಜಯರಾಮ್ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಸಚಿವ ಆನಂದ್‍ಸಿಂಗ್ ಅವರು ತುಮಕೂರು ಜಿಲ್ಲೆಯಾದ್ಯಂತ ಈಗಲೂ 250 ಚಿರತೆಗಳಿವೆ ಎಂದು ಮಾಹಿತಿ ಒದಗಿಸಿದ್ದಾರೆ.

ತುಮಕೂರು ತಾಲೂಕಿನಲ್ಲಿ ಚಿರತೆ ಹಾವಳಿ ಪ್ರಕರಣಗಳು 2016-17ರಿಂದ 2018-19ರವರೆಗೆ ಹೆಚ್ಚಿವೆ. 2016-17ರಲ್ಲಿ 20 ಪ್ರಕರಣಗಳು, 2017-18ರಲ್ಲಿ 29, 2018-19ರಲ್ಲಿ 43, 2019-20ರಲ್ಲಿ 19 ಪ್ರಕರಣಗಳು ವರದಿಯಾಗಿರುವುದು ಆನಂದ್ ಸಿಂಗ್ ಅವರು ನೀಡಿರುವ ಉತ್ತರದಿಂದ ತಿಳಿದು ಬಂದಿದೆ.

ತುಮಕೂರು ತಾಲೂಕಿನಲ್ಲಿ ಸಾಕು ಪ್ರಾಣಿ ಹತ್ಯೆ ಪ್ರಕರಣಗಳಿಗೆ ಸಂಬಂಧಿಸಿದಂತೆ 2016-17ರಲ್ಲಿ 1,98,000 ರು., 2017-18ರಲ್ಲಿ 2,33,798 ರು., 2018-19ರಲ್ಲಿ 3,29,000 ರು.ಗಳನ್ನು ಪರಿಹಾರ ನೀಡಲಾಗಿದೆ. ಗುಬ್ಬಿ ತಾಲೂಕಿನಲ್ಲಿ ಈ ಮೂರು ವರ್ಷಗಳಲ್ಲಿ 9,27,182 ರು, ಕುಣಿಗಲ್‍ನಲ್ಲಿ 31,29,498 ರು., ತುರುವೇಕೆರೆಯಲ್ಲಿ 2,91,833 ರು.ಗಳನ್ನು ಪರಿಹಾರ ವಿತರಿಸಿದೆ.

ಚಿರತೆ ದಾಳಿಯಿಂದ 2016-17ರಿಂದ 2018-19ರಲ್ಲಿ ಯಾವುದೇ ಮಾನವ, ಪ್ರಾಣ ಹಾನಿ ಆಗಿಲ್ಲ. 2019-20ರಲ್ಲಿ ಒಟ್ಟು 3 ಪ್ರಕರಣಗಳು ವರದಿಯಾಗಿವೆ. ತುಮಕೂರು, ಗುಬ್ಬಿ, ಕುಣಿಗಲ್ ವ್ಯಾಪ್ತಿಯಲ್ಲಿ ಆಗಿರುವ ಮಾನವ,ಪ್ರಾಣ ಹಾನಿಗೆ ಸಂಬಂಧಿಸಿದಂತೆ ಒಟ್ಟು 17 ಲಕ್ಷ ರು.ಗಳನ್ನು ಪರಿಹಾರ ರೂಪದಲ್ಲಿ ವಿತರಿಸಿದೆ ಎಂದು ಆನಂದ್‍ಸಿಂಗ್ ಅವರು ಉತ್ತರ ನೀಡಿದ್ದಾರೆ. 

Hot this week

ಸಿದ್ದರಾಮಯ್ಯರಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್‌ನಲ್ಲಿ ಲೋಪ!; ಬಹಿರಂಗವಾಗದ ಹೈಕ್ರಾಫ್ಟ್ ಏವಿಯೇಷನ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್‌ನ ವರದಿ

ಬೆಂಗಳೂರು; ಸಿದ್ದರಾಮಯ್ಯ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‍‌, ಅನುಮೋದಿತ ಸ್ಥಳದಲ್ಲಿ ಇಳಿಯದೇ ಬೇರೆ...

ಪಠ್ಯಪುಸ್ತಕ ಪರಿಷ್ಕರಣೆ; ರಾಜಕೀಯ ನಾಯಕತ್ವ ಸ್ಥಾಪಿಸಿದ ತಾತ್ಕಾಲಿಕ ಸಮಿತಿಗಳಿಂದ ನಿರ್ವಹಣೆಗೆ ಆಯೋಗ ಆಕ್ಷೇಪ

ಬೆಂಗಳೂರು; ಕರ್ನಾಟಕದಲ್ಲಿ ಪಠ್ಯಕ್ರಮ ಅಭಿವೃದ್ಧಿ, ಪಠ್ಯಪುಸ್ತಕ ತಯಾರಿಕೆ ಮತ್ತು ಇತರೆ ಸಂಬಂಧಿತ...
Please Scan to make Your Contribution

Topics

ಸಿದ್ದರಾಮಯ್ಯರಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್‌ನಲ್ಲಿ ಲೋಪ!; ಬಹಿರಂಗವಾಗದ ಹೈಕ್ರಾಫ್ಟ್ ಏವಿಯೇಷನ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್‌ನ ವರದಿ

ಬೆಂಗಳೂರು; ಸಿದ್ದರಾಮಯ್ಯ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‍‌, ಅನುಮೋದಿತ ಸ್ಥಳದಲ್ಲಿ ಇಳಿಯದೇ ಬೇರೆ...

ಪಠ್ಯಪುಸ್ತಕ ಪರಿಷ್ಕರಣೆ; ರಾಜಕೀಯ ನಾಯಕತ್ವ ಸ್ಥಾಪಿಸಿದ ತಾತ್ಕಾಲಿಕ ಸಮಿತಿಗಳಿಂದ ನಿರ್ವಹಣೆಗೆ ಆಯೋಗ ಆಕ್ಷೇಪ

ಬೆಂಗಳೂರು; ಕರ್ನಾಟಕದಲ್ಲಿ ಪಠ್ಯಕ್ರಮ ಅಭಿವೃದ್ಧಿ, ಪಠ್ಯಪುಸ್ತಕ ತಯಾರಿಕೆ ಮತ್ತು ಇತರೆ ಸಂಬಂಧಿತ...

ಮಾನ್ಸೂನ್ ಅಧಿವೇಶನವೋ, ವಿಸ್ತರಿಸಿದ ಅಧಿವೇಶನವೋ: ಸಚಿವ ಸಂಪುಟ ಮಾರ್ಗದರ್ಶನ ಕೋರಿದ ಸಂಸದೀಯ ಇಲಾಖೆ

ಬೆಂಗಳೂರು; ಕರ್ನಾಟಕ ವಿಧಾನಸಭೆ ಮತ್ತು ಕರ್ನಾಟಕ ವಿಧಾನ ಪರಿಷತ್ತಿನ ಅಧಿವೇಶನ ಅನಿರ್ದಿಷ್ಟಾವಧಿಗೆ...

ಆರ್ಥಿಕ ಬಿಕ್ಕಟ್ಟು; ಶಿಕ್ಷಕರ ನೇಮಕಾತಿ, ವೃತ್ತಿಪರತೆ ಅಭಿವೃದ್ಧಿ ವೆಚ್ಚಕ್ಕೆ ತಡೆಹಿಡಿದಿತ್ತೇ ಸರ್ಕಾರ?

ಬೆಂಗಳೂರು; ರಾಜ್ಯದ ಹೆಚ್ಚಿನ ಸರ್ಕಾರಿ ಶಾಲೆಗಳು ಆರ್‍‌ಟಿಇ ಕಾಯ್ದೆಯು ಭೌತಿಕ ಮೂಲಸೌಕರ್ಯಗಳು...

Related Articles

Popular Categories

error: Content is protected !!