Sunday | May 3, 2026 |

ತಬ್ಲಿಗಿ ಜಮಾತ್‌ ಸಂಘಟನೆ ವಿರುದ್ಧ ಸಿಬಿಐ ತನಿಖೆ

ಬೆಂಗಳೂರು; ಕೊರೊನಾ ವೈರಸ್‌ ಹರಡುವಿಕೆಗೆ ಕಾರಣರು ಎಂಬ ಅರೋಪಕ್ಕೀಡಾಗಿರುವ ತಬ್ಲಿಗಿ ಜಮಾತ್‌ಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ ಮತ್ತು ಮಾರ್ಗಸೂಚಿಗಳನ್ನು ಉಲ್ಲಂಘಿಸಿದೆ ಎಂಬ ಆರೋಪದಡಿ ಸಿಬಿಐ ಪ್ರಾಥಮಿಕ ತನಿಖೆ ಆರಂಭಿಸಿದೆ.

ಧಾರ್ಮಿಕ ಸಂಘಟನೆಯಾಗಿರುವ ತಬ್ಲಿಗಿ ಜಮಾತ್‌ಗೆ ಅಂತರಾಷ್ಟ್ರೀಯ ಸಂಪರ್ಕಗಳು ಇದೆ ಎಂದು ಶಂಕೆ ವ್ಯಕ್ತಪಡಿಸಿರುವ ಸಿಬಿಐ ತನಿಖೆಯನ್ನು ಚುರುಕುಗೊಳಿಸಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ ಮತ್ತು ಮಾರ್ಗಸೂಚಿಗಳನ್ನು ಉಲ್ಲಂಘನೆ ಆಗಿದೆಯೇ ಇಲ್ಲವೇ ಎಂಬ ಬಗ್ಗೆಯಷ್ಟೇ ಪ್ರಾಥಮಿಕ ತನಿಖೆ ನಡೆಸಲಿದೆ. ಆ ನಂತರ ಈ ಸಂಘಟನೆ ವಿದೇಶಿ ಮೂಲಗಳಿಂದ ಪಡೆದಿರುವ ದೇಣಿಗೆ ಕುರಿತೂ ತನಿಖೆ ನಡೆಸಲಿದೆ ಎಂದು ಸಿಬಿಐ ಅಧಿಕಾರಿಯೊಬ್ಬರು ರಾಷ್ಟ್ರೀಯ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.

ಇದೇ ಸಂಘಟನೆಯ ಕಾರ್ಯಚಟುವಟಿಕೆ ಕುರಿತು ತನಿಖೆ ನಡೆಸಿದ್ದ ದೆಹಲಿ ಪೊಲೀಸ್‌ ಅಪರಾಧ ವಿಭಾಗ ಸಿದ್ಧಪಡಿಸಿರುವ ದೋಷಾರೋಪಣೆ ಪಟ್ಟಿಯನ್ನು ಸಿಬಿಐ ಕಲೆ ಹಾಕಿದೆ. ಕಳೆದ 3 ದಿನಗಳ ಹಿಂದೆಯಷ್ಟೇ ಸಲ್ಲಿಕೆಯಾಗಿರುವ 40,000 ಪುಟಗಳನ್ನೊಂದಿರುವ ದೋಷಾರೋಪಣೆ ಪಟ್ಟಿಯನ್ನು ಪಡೆದು ತನಿಖೆ ಆರಂಭಿಸಿದೆ. ಇದರಲ್ಲಿ ಜಮಾತ್‌ಗೆ ವಿದೇಶದಲ್ಲಿರುವ 900 ಮಂದಿ ಸದಸ್ಯರ ವಿರುದ್ಧವೂ ದೋಷಾರೋಪಗಳಿವೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

‘ತಬ್ಲಿಗಿ ಜಮಾತ್‌ ಸಂಘಟನೆಯ ಕೆಲವರ ವಿರುದ್ಧ ಸಿಬಿಐ ಈಗಾಗಲೇ ಪ್ರಕರಣವನ್ನು ದಾಖಲಿಸಿದೆ. ಸಂಘಟಕರು ಮತ್ತು ಟ್ರಸ್ಟಿಗಳು ನಡೆಸಿರುವ ನಗದು ವಹಿವಾಟಿನ ಮೇಲೆ ಸಂಶಯಗಳಿವೆ. ವಿದೇಶದಿಂದ ಸಂಗ್ರಹಿಸಿರುವ ದೇಣಿಗೆ ಹಣವನ್ನು ಕಾನೂನು ಬಾಹಿರ ಚಟುವಟಿಕೆಗಳಿಗೆ ಬಳಸಿಕೊಂಡಿರುವ ಸಾಧ್ಯತೆ ಇದೆ,’ ಎಂದು ಸಿಬಿಐ ಅಧಿಕಾರಿಯೊಬ್ಬರು ರಾಷ್ಟ್ರೀಯ ಮಾಧ್ಯಮದೊಂದಿಗೆ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಸಿಬಿಐ ಕಾರ್ಯಾಚರಣೆಯ ನಿಯಮಗಳ ಪ್ರಕಾರ ಮೊದಲ ಹಂತದಲ್ಲಿ ಪ್ರಾಥಮಿಕ ತನಿಖೆ ನಡೆಯಲಿದೆ. ನಿಯಮಬಾಹಿರ ಚಟುವಟಿಕೆಗಳು ನಡೆದಿದೆಯೇ ಇಲ್ಲವೇ ಎಂಬ ಬಗ್ಗೆ ಪ್ರಾಥಮಿಕ ತನಿಖೆ ನಡೆಸಿ ಆ ನಂತರ ಎಫ್‌ಐಆರ್‌ ದಾಖಲಿಸಬೇಕೆ ಎಂದು ನಿರ್ಧರಿಸಲಿದೆ.

ಹಣದ ವಹಿವಾಟು ಮತ್ತು ವ್ಯಕ್ತಿಗತವಾಗಿ ಅಂತರಾಷ್ಟ್ರೀಯ ಸಂರ್ಪಕಗಳನ್ನು ಹೊಂದಿರುವ ಕುರಿತೂ ತನಿಖೆ ನಡೆಸಲಿದೆಯಲ್ಲದೆ ಈ ಸಂಘಟನೆಗೆ ಭಾರತ ಮತ್ತು ವಿದೇಶಗಳಿಂದ ಹಣಕಾಸಿನ ನೆರವು ನೀಡುತ್ತಿರುವ ವ್ಯಕ್ತಿಗಳು ಮತ್ತು ಈ ಸಂಘಟನೆಯೊಂದಿಗೆ ಗುರುತಿಸಿಕೊಂಡಿರುವ ಇತರ ಅಂಗ ಸಂಸ್ಥೆಗಳನ್ನೂ ತನಿಖೆಗೊಳಪಡಿಸಲಿದೆ ಎಂದು ಹೇಳಲಾಗಿದೆ.

ಸಂಘಟನೆ ವಿರುದ್ಧ ಕೇಳಿ ಬಂದಿರುವ ಆರೋಪಗಳ ಕುರಿತು ತಬ್ಲಿಗಿ ಸಂಘಟನೆಯ ಪದಾಧಿಕಾರಿಗಳಿಗೆ ಸಮನ್ಸ್‌ ಜಾರಿಗೊಳಿಸಲು ತಯಾರಿ ನಡೆಸಿದೆ. ದೆಹಲಿ ಮತ್ತು ಇತರೆ ನಗರಗಳಲ್ಲಿರುವ ಸಂಘಟನೆಯ ಪದಾಧಿಕಾರಿಗಳನ್ನೂ ವಿಚಾರಣೆ ಕರೆಸಲಿರುವ ಸಿಬಿಐ, ವಿದೇಶದ ತನಿಖಾ ಸಂಸ್ಥೆಗಳ ನೆರವನ್ನೂ ಪಡೆಯಲಿದೆ ಎಂದು ಸಿಬಿಐನ ಮತ್ತೊಬ್ಬ ಅಧಿಕಾರಿಯೊಬ್ಬರು ರಾಷ್ಟ್ರೀಯ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.

ಕೋವಿಡ್‌ ಸಂದರ್ಭದಲ್ಲಿ ದೆಹಲಿಯಲ್ಲಿ ಸಭೆ ನಡೆಸಿದ್ದ ಅರೋಪದ ಮೇರೆಗೆ ಸಂಘಟನೆಯ ಮುಖ್ಯಸ್ಥರ ವಿರುದ್ಧ ದೆಹಲಿ ಪೊಲೀಸ್‌ನ ಅಪರಾಧ ವಿಭಾಗ ಈಗಾಗಲೇ ಪ್ರಕರಣವನ್ನು ದಾಖಲಿಸಿದೆ. ವಿದೇಶಿಯರು ಒಳಗೊಂಡಂತೆ ಸುಮಾರು 2,300ಕ್ಕೂ ಹೆಚ್ಚು ಮಂದಿಗೆ ದೆಹಲಿಯಲ್ಲಿ ಕ್ವಾರಂಟೈನ್‌ನಲ್ಲಿಡಲಾಗಿತ್ತು. ಏಪ್ರಿಲ್‌ 7ರ ಅಂತ್ಯಕ್ಕೆ ಹರಡಿದ್ದ ಕೋವಿಡ್‌ -19ಕ್ಕೆ ತಬ್ಲಿಗಿಗಳ ಕೊಡುಗೆ ಶೇ.35ರಷ್ಟಿದೆ. ಅಲ್ಲದೆ 1,800 ಸಂಖ್ಯೆಯ ವಿದೇಶಿ ತಬ್ಲಿಗಿ ಕಾರ್ಯಕರ್ತರು ವೀಸಾ ಷರತ್ತುಗಳನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪದ ಮೇರೆಗೆ ಗೃಹ ಸಚಿವಾಲಯವೂ ಕಪ್ಪು ಪಟ್ಟಿಗೆ ಸೇರಿಸಿದೆ.

ಜಾರಿ ನಿರ್ದೇಶನಾಲಯವೂ ಈಗಾಗಲೇ ಮನಿ ಲ್ಯಾಂಡರಿಂಗ್‌ ಕಾಯ್ದೆ ಅನ್ವಯ ತನಿಖೆ ನಡೆಸುತ್ತಿದೆ. ಹವಾಲಾ ಜಾಲದ ಮೂಲಕ ಹಣದ ವಹಿವಾಟು ನಡೆಸಿದೆ ಎಂಬ ಆರೋಪದ ಕುರಿತು ಜಾರಿ ನಿರ್ದೇಶನಾಲಯವೂ ತನಿಖೆ ಮುಂದುವರೆಸಿದೆ.

Hot this week

ವೈಟ್‌ ಟ್ಯಾಪಿಂಗ್‌ ಗೋಲ್ಮಾಲ್‌; ಅಗತ್ಯವಿರದಿದ್ದರೂ ಕಾಮಗಾರಿ, ತಾಂತ್ರಿಕ ಪರಿಶೀಲನೆಯಿಲ್ಲದಿದ್ದರೂ ಹೆಚ್ಚುವರಿ ವೆಚ್ಚ, ಗುತ್ತಿಗೆದಾರರಿಗೆ ಲಾಭ

ಬೆಂಗಳೂರು;  ವೈಟ್‌ ಟ್ಯಾಪಿಂಗ್ ಅಗತ್ಯವಿಲ್ಲದಿದ್ದರೂ  ಕಾಮಗಾರಿ ಆರಂಭಿಸಿದ ನಂತರ ತಾಂತ್ರಿಕ ಮಂಜೂರಾತಿ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕದಲ್ಲಿ ಡಿಸಿಎಂ ಮೇಲುಗೈ, ಜಾರಕಿಹೊಳಿ ಮೌನ; ಕೆಟ್ಟ ಪೂರ್ವ ನಿದರ್ಶನಕ್ಕೆ ನಾಂದಿ ಹಾಡಿದ ಸಿಎಂ

ಬೆಂಗಳೂರು;  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ...

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...
Please Scan to make Your Contribution

Topics

ವೈಟ್‌ ಟ್ಯಾಪಿಂಗ್‌ ಗೋಲ್ಮಾಲ್‌; ಅಗತ್ಯವಿರದಿದ್ದರೂ ಕಾಮಗಾರಿ, ತಾಂತ್ರಿಕ ಪರಿಶೀಲನೆಯಿಲ್ಲದಿದ್ದರೂ ಹೆಚ್ಚುವರಿ ವೆಚ್ಚ, ಗುತ್ತಿಗೆದಾರರಿಗೆ ಲಾಭ

ಬೆಂಗಳೂರು;  ವೈಟ್‌ ಟ್ಯಾಪಿಂಗ್ ಅಗತ್ಯವಿಲ್ಲದಿದ್ದರೂ  ಕಾಮಗಾರಿ ಆರಂಭಿಸಿದ ನಂತರ ತಾಂತ್ರಿಕ ಮಂಜೂರಾತಿ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕದಲ್ಲಿ ಡಿಸಿಎಂ ಮೇಲುಗೈ, ಜಾರಕಿಹೊಳಿ ಮೌನ; ಕೆಟ್ಟ ಪೂರ್ವ ನಿದರ್ಶನಕ್ಕೆ ನಾಂದಿ ಹಾಡಿದ ಸಿಎಂ

ಬೆಂಗಳೂರು;  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ...

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕಕ್ಕೆ ಒತ್ತಡ; ವಿವಾದಕ್ಕೆ ದಾರಿಯಾದ ಡಿಸಿಎಂ ಟಿಪ್ಪಣಿ, ನಿಯಮ ಉಲ್ಲಂಘನೆ?

ಬೆಂಗಳೂರು; ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್  ಪ್ರವೀಣ್ ಲಿಂಗಯ್ಯ ಅವರನ್ನು...

ಆಧಾರ್ ಕಾರ್ಡ್‌ಗಿಂತಲೂ ಶಕ್ತಿ ಸ್ಮಾರ್ಟ್‌ ದುಬಾರಿ, ಎಸ್‌ಪಿವಿ ರಚನೆಯಾದರೂ ಸಿಗದ ಕಾರ್ಡ್‌; 185 ಕೋಟಿ ವೆಚ್ಚ ಭರಿಸುವವರಾರು?

ಬೆಂಗಳೂರು; ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ  ಸೌಲಭ್ಯ ಕಲ್ಪಿಸುವ 'ಶಕ್ತಿ'...

ಟೆಲಿಕಾಂ ಕಂಪನಿಯಿಂದ ವಿಧಾನಸೌಧ ಟರೇಸ್‌ ಅನಧಿಕೃತ ಬಳಕೆ; ವಸೂಲಾಗದ ನೆಲಬಾಡಿಗೆ, ನಿಯಮ ಉಲ್ಲಂಘಿಸಿದ್ದರೂ ಕ್ರಮವಿಲ್ಲ

ಬೆಂಗಳೂರು; ಟೆಲಿಕಾಂ ಮೂಲಸೌಕರ್ಯ ಕಂಪನಿಗಳಲ್ಲಿ ಖ್ಯಾತಿ ಹೊಂದಿರುವ ಆಂಧ್ರ ಪ್ರದೇಶ ಮೂಲದ...

Related Articles

Popular Categories

error: Content is protected !!