Thursday | May 7, 2026 |

ಬಿಡುಗಡೆಯಾಗದ ಹಣ; ತೊಗರಿ, ಕಡಲೆಕಾಳು ಖರೀದಿಗೆ ಹಿನ್ನಡೆ

ಬೆಂಗಳೂರು; ಬಡತನ ರೇಖೆಗಿಂತ ಕೆಳಗಿರುವವರು ಹೊಂದಿರುವ ಪ್ರತಿ ಕಾರ್ಡ್‌ಗೆ 1 ಕೆ ಜಿ ತೊಗರಿಬೇಳೆ ವಿತರಣೆಗೆ ಕೇಂದ್ರ ಸರ್ಕಾರ ಆದೇಶಿಸಿದ್ದರೆ, ಇತ್ತ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಮತ್ತು ಬೆಲೆ ಸ್ಥಿರೀಕರಣ ಯೋಜನೆಯಡಿಯಲ್ಲಿ ತೊಗರಿ ಮತ್ತು ಕಡಲೆಕಾಳು ಖರೀದಿಯಲ್ಲಿ ರಾಜ್ಯ ಹಿಂದೆ ಬಿದ್ದಿದೆ. ತೊಗರಿ ಖರೀದಿ ಸಂಬಂಧ ರಾಜ್ಯ ಸರ್ಕಾರ ಹಣ ಬಿಡುಗಡೆ ಮಾಡದೇ ಇರುವುದೇ ಹಿನ್ನಡೆಗೆ ಮೂಲ ಕಾರಣ.
ಬೆಂಬಲ ಬೆಲೆ ಮತ್ತು ಬೆಲೆ ಸ್ಥಿರೀಕರಣ ಯೋಜನೆಯಡಿಯಲ್ಲಿ ತೊಗರಿ ಮತ್ತು ಕಡಲೆಕಾಳು ನಿರೀಕ್ಷಿತ ಪ್ರಮಾಣದಲ್ಲಿ ಖರೀದಿಯಾಗದೇ ಇರುವುದನ್ನು ಗಂಭೀರವಾಗಿ ಪರಿಗಣಿಸದ ರಾಜ್ಯ ಸರ್ಕಾರ ಹಣ ಬಿಡುಗಡೆ ಮಾಡುವ ಬಗ್ಗೆ ಕ್ರಮ ಕೈಗೊಂಡಿಲ್ಲ.
ಈವರೆವಿಗೆ ಅತ್ಯಂತ ಕಡಿಮೆ ಪ್ರಮಾಣದಲ್ಲಿ ತೊಗರಿ ಖರೀದಿಸಿದೆ. ತೊಗರಿ ಖರೀದಿಗೆ ಹಿನ್ನಡೆಯಾಗಿದೆ. ಕೋವಿಡ್‌-19ರ ಹಿನ್ನೆಲೆಯಲ್ಲಿ ಜಾರಿಯಲ್ಲಿರುವ ಲಾಕ್‌ಡೌನ್‌ನಿಂದಾಗಿ ಖರೀದಿ ಪ್ರಕ್ರಿಯೆಯಲ್ಲಿ ನಿಗದಿತ ಗುರಿ ತಲುಪಿಲ್ಲ.
ತೊಗರಿ ಕಾಪು ದಾಸ್ತಾನಿನ ಪ್ರಮಾಣವನ್ನು ಸ್ಥಿರವಾಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಗ್ರಾಹಕ ವ್ಯವಹಾರಗಳ ಸಚಿವಾಲಯ, ಬೆಲೆ ಸ್ಥಿರೀಕರಣ ಯೋಜನೆಯನ್ವಯ 2020ರ ಏಪ್ರಿಲ್‌ 12 ಮತ್ತು 21ರಂದು ಒಟ್ಟು 2 ಲಕ್ಷ ಮೆಟ್ರಿಕ್‌ ಟನ್‌ ತೊಗರಿ ಖರೀದಿಗೆ ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿತ್ತು.
ಅದರಂತೆ ರಾಜ್ಯ ಸರ್ಕಾರ ಖರೀದಿಸಬೇಕಿದ್ದ ಒಟ್ಟು 2 ಲಕ್ಷ ಮೆಟ್ರಿಕ್‌ ಟನ್‌ ಪೈಕಿ ಈವರೆವಿಗೆ ಕೇವಲ 30,688 ಮೆಟ್ರಿಕ್‌ ಟನ್‌ನಷ್ಟು ತೊಗರಿ ಖರೀದಿಸಿರುವುದು ಗೊತ್ತಾಗಿದೆ. ಇದಷ್ಟೇ ಅಲ್ಲ, ಕಡಲೆಕಾಳು ಖರೀದಿಯಲ್ಲಿಯೂ ರಾಜ್ಯ ಸರ್ಕಾರ ಹಿಂದೆ ಬಿದ್ದಿದೆ.
ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಮತ್ತು ತೊಗರಿ ಅಭಿವೃದ್ಧಿ ಮಂಡಳಿಗಳು ಜಿಲ್ಲೆಗಳಲ್ಲಿ ತೊಗರಿ ಖರೀದಿಸುತ್ತಿದ್ದರೂ 2020ರ ಮಾರ್ಚ್‌ 13ರವರೆಗೆ ಬೆಂಬಲ ಬೆಲೆ ಯೋಜನೆಯಡಿ 2,27,500 ಮೆಟ್ರಿಕ್‌ ಟನ್‌ ಪ್ರಮಾಣದಲ್ಲಿ ತೊಗರಿ ಖರೀದಿಸಿದೆ. ಅದೇ ರೀತಿ 2020ರ ಏಪ್ರಿಲ್‌ 30ರ ಅಂತ್ಯಕ್ಕೆ 6.87 ಲಕ್ಷ ಕ್ವಿಂಟಾಲ್‌ ಕಡಲೆಕಾಳು ಖರೀದಿಸಿದೆ.
2020ರ ಮಾರ್ಚ್‌ 12 ಮತ್ತು ಏಪ್ರಿಲ್‌ 21 ರಂದು 2 ಲಕ್ಷ ಮೆಟ್ರಿಕ್‌ ಟನ್‌ ಪ್ರಮಾಣದಲ್ಲಿ ತೊಗರಿ ಖರೀದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿತ್ತು. ಅಲ್ಲದೆ, ಏಪ್ರಿಲ್‌ 25ರಂದು ಪುನಃ 2.5 ಲಕ್ಷ ಮೆಟ್ರಿಕ್‌ ಟನ್‌ ತೊಗರಿ ಖರೀದಿಸಲು ಅನುಮತಿ ನೀಡಿತ್ತು ಎಂದು ಗೊತ್ತಾಗಿದೆ.
ಕೇಂದ್ರ ಸರ್ಕಾರದ ಅನುಮತಿಯಂತೆ ರಾಜ್ಯ ಸರ್ಕಾರ ಪ್ರತಿ ಎಕರೆಗೆ 7 ಕ್ವಿಂಟಾಲ್‌ ಹಾಗೂ ಪ್ರತಿ ರೈತರಿಂದ 20 ಕ್ವಿಂಟಾಲ್‌ ತೊಗರಿ ಖರೀದಿಸಲು 2020ರ ಏಪ್ರಿಲ್‌ 29 ಮತ್ತು 30ರಂದು ಆದೇಶ ನೀಡಿತ್ತು. ಇದರ ಜತೆಗೆ ಪ್ರತಿ ಎಕರೆಗೆ 5 ಕ್ವಿಂಟಾಲ್‌ ಮತ್ತು ಪ್ರತಿ ರೈತರಿಂದ ಗರಿಷ್ಠ 15 ಕ್ವಿಂಟಾಲ್‌ ಕಡಲೆಕಾಳು ಖರೀದಿಗೆ ಅನುಮತಿ ನೀಡಿದೆ ಎಂದು ತಿಳಿದು ಬಂದಿದೆ.

Hot this week

ಶೌಚಾಲಯ, ಸ್ನಾನದ ಗೃಹ, ಮೂತ್ರಾಲಯ ಶುಲ್ಕ ವಸೂಲಿ; ಸುಲಭ್‌ ಇಂಟರ್ ನ್ಯಾಷನಲ್‌, ಬಿಬಿಎಂಪಿ ಖಾತೆಗೆ ಹಣ ಜಮೆ ಮಾಡಿದೆಯೇ, ನುಂಗಿದೆಯೇ?

ಬೆಂಗಳೂರು;  ಸುಲಭ್ ಶೌಚಾಲಯ ಮತ್ತು ಸಾರ್ವಜನಿಕ ಮೂತ್ರಾಲಯ  ನಿರ್ವಹಣೆಗೆ ಸಂಬಂಧಿಸಿದಂತೆ ಗುತ್ತಿಗೆದಾರರು...

ಬಿಜೆಪಿ ಅವಧಿಯಲ್ಲಿದ್ದ 120 ಎಕರೆ ಗೋಮಾಳ, ಕಾಂಗ್ರೆಸ್‌ ಅವಧಿಯಲ್ಲಿ ಕಣ್ಮರೆ!; 24 ಕೋಟಿ ಮೌಲ್ಯದ ಜಮೀನು, ಖಾಸಗಿ ವ್ಯಕ್ತಿಗಳ ಪಾಲು?

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ...

ಒಂದೇ ಜಾಗದಲ್ಲಿ ಎರಡು ಫ್ಲೈ ಓವರ್, ಶೇ.50ರಷ್ಟು ಕಾಮಗಾರಿಯಾಗಿದ್ದರೂ ಪೂರ್ಣ ಪಾವತಿ; ಬ್ಯಾಂಕ್‌ ಗ್ಯಾರಂಟಿ ಮುಟ್ಟುಗೋಲಿಲ್ಲ, ಗುತ್ತಿಗೆದಾರರಿಗೆ ಲಾಭ, ಬಿಬಿಎಂಪಿ ನಿಧಿಗೆ ನಷ್ಟ

ಬೆಂಗಳೂರು;  ಈಜಿಪುರ ಮೇಲ್ಸೇತುವೆ ಎಲಿವೇಟೆಡ್‌ ಕಾರಿಡಾರ್  ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ  ಪೂರ್ಣಗೊಳಿಸದ...

ಅನುದಾನ ಬಿಡುಗಡೆಯಾಗಿದ್ದರೂ ಪೂರ್ಣಗೊಳ್ಳದ ಕಾಮಗಾರಿ; ತನಿಖಾ ವರದಿಗೆ ಮೆತ್ತಿಕೊಂಡ ಧೂಳು, ಕ್ರಮಕೈಗೊಳ್ಳದ ಸಚಿವ

ಬೆಂಗಳೂರು; ತುಮಕೂರು ಜಿಲ್ಲೆಯ ಶಿರಾ ಪಟ್ಟಣದಲ್ಲಿರುವ ಕಸ್ತೂರಿ ರಂಗಪ್ಪ ನಾಯಕ ಕೋಟೆಯ...
Please Scan to make Your Contribution

Topics

ಶೌಚಾಲಯ, ಸ್ನಾನದ ಗೃಹ, ಮೂತ್ರಾಲಯ ಶುಲ್ಕ ವಸೂಲಿ; ಸುಲಭ್‌ ಇಂಟರ್ ನ್ಯಾಷನಲ್‌, ಬಿಬಿಎಂಪಿ ಖಾತೆಗೆ ಹಣ ಜಮೆ ಮಾಡಿದೆಯೇ, ನುಂಗಿದೆಯೇ?

ಬೆಂಗಳೂರು;  ಸುಲಭ್ ಶೌಚಾಲಯ ಮತ್ತು ಸಾರ್ವಜನಿಕ ಮೂತ್ರಾಲಯ  ನಿರ್ವಹಣೆಗೆ ಸಂಬಂಧಿಸಿದಂತೆ ಗುತ್ತಿಗೆದಾರರು...

ಬಿಜೆಪಿ ಅವಧಿಯಲ್ಲಿದ್ದ 120 ಎಕರೆ ಗೋಮಾಳ, ಕಾಂಗ್ರೆಸ್‌ ಅವಧಿಯಲ್ಲಿ ಕಣ್ಮರೆ!; 24 ಕೋಟಿ ಮೌಲ್ಯದ ಜಮೀನು, ಖಾಸಗಿ ವ್ಯಕ್ತಿಗಳ ಪಾಲು?

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ...

ಅನುದಾನ ಬಿಡುಗಡೆಯಾಗಿದ್ದರೂ ಪೂರ್ಣಗೊಳ್ಳದ ಕಾಮಗಾರಿ; ತನಿಖಾ ವರದಿಗೆ ಮೆತ್ತಿಕೊಂಡ ಧೂಳು, ಕ್ರಮಕೈಗೊಳ್ಳದ ಸಚಿವ

ಬೆಂಗಳೂರು; ತುಮಕೂರು ಜಿಲ್ಲೆಯ ಶಿರಾ ಪಟ್ಟಣದಲ್ಲಿರುವ ಕಸ್ತೂರಿ ರಂಗಪ್ಪ ನಾಯಕ ಕೋಟೆಯ...

ಧರ್ಮಸ್ಥಳ ಪ್ರಕರಣಗಳ ತನಿಖೆ; ಎಸ್‌ಐಟಿ ವರದಿ ಪ್ರತಿ ಒದಗಿಸದ ಸರ್ಕಾರ, ಗೃಹ ಇಲಾಖೆ ಶಾಖೆಯಲ್ಲಿ ಸಭೆ ನಡವಳಿಯೂ ಲಭ್ಯವಿಲ್ಲ

ಬೆಂಗಳೂರು: ಧರ್ಮಸ್ಥಳದ ಸುತ್ತಮುತ್ತ ನಡೆದಿರುವ ಮಹಿಳೆಯರು ಮತ್ತು ಯುವತಿಯರ ಮೇಲಿನ ದೌರ್ಜನ್ಯ/ಕೊಲೆ,...

ವೈಟ್‌ ಟ್ಯಾಪಿಂಗ್‌ ಗೋಲ್ಮಾಲ್‌; ಅಗತ್ಯವಿರದಿದ್ದರೂ ಕಾಮಗಾರಿ, ತಾಂತ್ರಿಕ ಪರಿಶೀಲನೆಯಿಲ್ಲದಿದ್ದರೂ ಹೆಚ್ಚುವರಿ ವೆಚ್ಚ, ಗುತ್ತಿಗೆದಾರರಿಗೆ ಲಾಭ

ಬೆಂಗಳೂರು;  ವೈಟ್‌ ಟ್ಯಾಪಿಂಗ್ ಅಗತ್ಯವಿಲ್ಲದಿದ್ದರೂ  ಕಾಮಗಾರಿ ಆರಂಭಿಸಿದ ನಂತರ ತಾಂತ್ರಿಕ ಮಂಜೂರಾತಿ...

Related Articles

Popular Categories

error: Content is protected !!