Thursday | May 7, 2026 |

ಆದಾಯ ಸ್ಥಗಿತ ನೆಪ; ಕಾಲೇಜು ಶಿಕ್ಷಣ ಶುಲ್ಕ ಶೇ.10ರಷ್ಟು ಹೆಚ್ಚಳ?

ಬೆಂಗಳೂರು; ಕೊರೊನಾ ವೈರಸ್‌ ಹಿನ್ನೆಲೆಯಲ್ಲಿ ಸಂಪನ್ಮೂಲ ಸಂಗ್ರಹ ಸ್ಥಗಿತಗೊಂಡಿರುವ ಕಾರಣ ರಾಜ್ಯ ಸರ್ಕಾರ ತೆರಿಗೆಯೇತರ ಆದಾಯ ಮೂಲಗಳ ಪರಿಷ್ಕರಣೆಯಲ್ಲಿ ಮಗ್ನವಾಗಿದೆ. ಇದರ ಭಾಗವಾಗಿ ಸರ್ಕಾರಿ ಕಾಲೇಜುಗಳಲ್ಲಿನ ಎಂಬಿಎ ಮತ್ತು ಎಂಸಿಎ ಸೇರಿದಂತೆ ಇನ್ನಿತರೆ ಕೋರ್ಸ್‌ಗಳ ಶುಲ್ಕವನ್ನು ಪರಿಷ್ಕರಿಸಲು ತುದಿಗಾಲಲ್ಲಿ ನಿಂತಿದೆ.

2019-20ನೇ ಸಾಲಿನಲ್ಲಿ ವಿಧಿಸಿದ್ದ ಶುಲ್ಕವನ್ನು ಮುಂದುವರೆಸುವುದೇ ಅಥವಾ 2019-20ನೇ ಸಾಲಿನಲ್ಲಿ ನಿಗದಿಗೊಳಿಸಿದ್ದ ಶುಲ್ಕಗಳಿಗೆ ಶೇ.10ರಷ್ಟು ಹೆಚ್ಚಿಸಿ ಪರಿಷ್ಕರಿಸಬೇಕೆ ಎಂಬ ಬಗ್ಗೆ ಉನ್ನತ ಶಿಕ್ಷಣ ಇಲಾಖೆ, ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ ಸಿ ಎನ್‌ ಅಶ್ವಥ್‌ನಾರಾಯಣ್‌ ಅವರ ತೀರ್ಮಾನಕ್ಕೆ ಬಿಟ್ಟಿದೆ.

ಶುಲ್ಕ ಹೆಚ್ಚಿಸುವ ಕುರಿತು ಕಾಲೇಜು ಶಿಕ್ಷಣ ಆಯುಕ್ತರು ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ‘ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಆರಂಭಗೊಳ್ಳಲಿರುವ ಎಂಬಿಎ ಮತ್ತು ಎಂಸಿಎ ಕೋರ್ಸ್‌ಗಳನ್ನು ಒಳಗೊಂಡಂತೆ ವಿವಿಧ ಸ್ನಾತಕೋತ್ತರ ಕೋರ್ಸ್‌ಗಳಿಗೆ 2019-20ನೇ ಸಾಲಿನಲ್ಲಿ ನಿಗದಿಪಡಿಸಿದ್ದ ಶುಲ್ಕ ವಿನ್ಯಾಸವನ್ನೇ 2020-21ನೇ ಸಾಲಿನಲ್ಲಿ ಮುಂದುವರೆಸುವುದೇ ಅಥವಾ ಹಿಂದಿನ ಸಾಲಿನಲ್ಲಿ ನಿಗದಿಗೊಳಿಸಿದ್ದ ಶುಲ್ಕಗಳನ್ನು ಶೇ.10ರಷ್ಟು ಪರಿಷ್ಕರಿಸಲು ಅನುಮತಿ ಕೋರಿದೆ,’ ಎಂದು ಪ್ರಸ್ತಾವನೆ ಸಲ್ಲಿಸುವ ಮೂಲಕ ಆಯುಕ್ತರು ಸರ್ಕಾರದ ಬಾಗಿಲು ತಟ್ಟಿದ್ದಾರೆ.

ಈ ಪ್ರಸ್ತಾವನೆ ಕುರಿತಂತೆ ಉನ್ನತ ಶಿಕ್ಷಣ ಇಲಾಖೆಯೂ ಧನಾತ್ಮಕವಾಗಿ ಪ್ರತಿಕ್ರಿಯಿಸಿದೆ. ‘ಸುಮಾರು 2 ವರ್ಷಗಳ ಹಿಂದೆ ನಿಗದಿಗೊಳಿಸಿದ್ದ ಶುಲ್ಕವನ್ನು ಮುಂದುವರೆಸುತ್ತಿರುವುದರಿಂದ ಅದನ್ನು ಪರಿಷ್ಕರಿಸುವ ಅಗತ್ಯವಿದೆ. ಆದರೂ ಪ್ರಸ್ತಾವನೆಯಲ್ಲಿ ಹಣಕಾಸಿನ ವಿಷಯವಿರುವುದರಿಂದ ಆರ್ಥಿಕ ಇಲಾಖೆಯ ಅಭಿಪ್ರಾಯ ಕೋರಬಹುದು,’ ಎಂದು ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಗಳು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ ಎಂದು ತಿಳಿದು ಬಂದಿದೆ.

ಎಂಬಿಎ ಕೋರ್ಸ್‌ನಲ್ಲಿ ವ್ಯಾಸಂಗ ಮಾಡುತ್ತಿರುವ ಸಾಮಾನ್ಯ ವಿದ್ಯಾರ್ಥಿಗಳಿಗೆ ಸರ್ಕಾರವು ಹಿಂದಿನ ಶೈಕ್ಷಣಿಕ ಸಾಲಿನಲ್ಲಿ ವಾರ್ಷಿಕ 20,000 ರು. ನಿಗದಿಪಡಿಸಿತ್ತು. ಇದೇ ಶುಲ್ಕ 2018-19ನೇ ಸಾಲಿನಲ್ಲಿಯೂ ಚಾಲ್ತಿಯಲ್ಲಿತ್ತು. 2019-20ನೇ ಸಾಲಿನಲ್ಲಿ ಅರ್ಜಿ ಶುಲ್ಕ, ಪ್ರವೇಶ ಶುಲ್ಕ, ಪ್ರಯೋಗಾಲಯ, ಸ್ನಾತಕೋತ್ತರ ವಿಭಾಗ ಅಭಿವೃದ್ಧಿ ಶುಲ್ಕ ಸೇರಿದಂತೆ ಒಟ್ಟು 2,850 ರು.ಗಳನ್ನು ನಿಗದಿಪಡಿಸಿತ್ತು.

ಸರಕಾರಿ ಕಾಲೇಜುಗಳಲ್ಲಿನ ಎಂಬಿಎ, ಎಂಸಿಎ ಸೇರಿದಂತೆ ಹಲವು ಕೋರ್ಸುಗಳ ಶುಲ್ಕವನ್ನು ಪರಿಷ್ಕರಿಸಿದ್ದ ಉನ್ನತ ಶಿಕ್ಷಣ ಇಲಾಖೆ 2017-18 ನೇ ಸಾಲಿನಲ್ಲಿ ಕೆಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪ್ರಾರಂಭಿಸಿರುವ ಎಂಬಿಎ ಹಾಗೂ ಎಂಸಿಎ ಸೇರಿದಂತೆ ನಾನಾ ಸ್ನಾತಕೋತ್ತರ ಕೋರ್ಸುಗಳ ಶುಲ್ಕದಲ್ಲಿ ಯಾವುದೇ ಬದಲಾವಣೆ ಮಾಡಿರಲಿಲ್ಲ.

Hot this week

ಶೌಚಾಲಯ, ಸ್ನಾನದ ಗೃಹ, ಮೂತ್ರಾಲಯ ಶುಲ್ಕ ವಸೂಲಿ; ಸುಲಭ್‌ ಇಂಟರ್ ನ್ಯಾಷನಲ್‌, ಬಿಬಿಎಂಪಿ ಖಾತೆಗೆ ಹಣ ಜಮೆ ಮಾಡಿದೆಯೇ, ನುಂಗಿದೆಯೇ?

ಬೆಂಗಳೂರು;  ಸುಲಭ್ ಶೌಚಾಲಯ ಮತ್ತು ಸಾರ್ವಜನಿಕ ಮೂತ್ರಾಲಯ  ನಿರ್ವಹಣೆಗೆ ಸಂಬಂಧಿಸಿದಂತೆ ಗುತ್ತಿಗೆದಾರರು...

ಬಿಜೆಪಿ ಅವಧಿಯಲ್ಲಿದ್ದ 120 ಎಕರೆ ಗೋಮಾಳ, ಕಾಂಗ್ರೆಸ್‌ ಅವಧಿಯಲ್ಲಿ ಕಣ್ಮರೆ!; 24 ಕೋಟಿ ಮೌಲ್ಯದ ಜಮೀನು, ಖಾಸಗಿ ವ್ಯಕ್ತಿಗಳ ಪಾಲು?

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ...

ಒಂದೇ ಜಾಗದಲ್ಲಿ ಎರಡು ಫ್ಲೈ ಓವರ್, ಶೇ.50ರಷ್ಟು ಕಾಮಗಾರಿಯಾಗಿದ್ದರೂ ಪೂರ್ಣ ಪಾವತಿ; ಬ್ಯಾಂಕ್‌ ಗ್ಯಾರಂಟಿ ಮುಟ್ಟುಗೋಲಿಲ್ಲ, ಗುತ್ತಿಗೆದಾರರಿಗೆ ಲಾಭ, ಬಿಬಿಎಂಪಿ ನಿಧಿಗೆ ನಷ್ಟ

ಬೆಂಗಳೂರು;  ಈಜಿಪುರ ಮೇಲ್ಸೇತುವೆ ಎಲಿವೇಟೆಡ್‌ ಕಾರಿಡಾರ್  ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ  ಪೂರ್ಣಗೊಳಿಸದ...

ಅನುದಾನ ಬಿಡುಗಡೆಯಾಗಿದ್ದರೂ ಪೂರ್ಣಗೊಳ್ಳದ ಕಾಮಗಾರಿ; ತನಿಖಾ ವರದಿಗೆ ಮೆತ್ತಿಕೊಂಡ ಧೂಳು, ಕ್ರಮಕೈಗೊಳ್ಳದ ಸಚಿವ

ಬೆಂಗಳೂರು; ತುಮಕೂರು ಜಿಲ್ಲೆಯ ಶಿರಾ ಪಟ್ಟಣದಲ್ಲಿರುವ ಕಸ್ತೂರಿ ರಂಗಪ್ಪ ನಾಯಕ ಕೋಟೆಯ...
Please Scan to make Your Contribution

Topics

ಶೌಚಾಲಯ, ಸ್ನಾನದ ಗೃಹ, ಮೂತ್ರಾಲಯ ಶುಲ್ಕ ವಸೂಲಿ; ಸುಲಭ್‌ ಇಂಟರ್ ನ್ಯಾಷನಲ್‌, ಬಿಬಿಎಂಪಿ ಖಾತೆಗೆ ಹಣ ಜಮೆ ಮಾಡಿದೆಯೇ, ನುಂಗಿದೆಯೇ?

ಬೆಂಗಳೂರು;  ಸುಲಭ್ ಶೌಚಾಲಯ ಮತ್ತು ಸಾರ್ವಜನಿಕ ಮೂತ್ರಾಲಯ  ನಿರ್ವಹಣೆಗೆ ಸಂಬಂಧಿಸಿದಂತೆ ಗುತ್ತಿಗೆದಾರರು...

ಬಿಜೆಪಿ ಅವಧಿಯಲ್ಲಿದ್ದ 120 ಎಕರೆ ಗೋಮಾಳ, ಕಾಂಗ್ರೆಸ್‌ ಅವಧಿಯಲ್ಲಿ ಕಣ್ಮರೆ!; 24 ಕೋಟಿ ಮೌಲ್ಯದ ಜಮೀನು, ಖಾಸಗಿ ವ್ಯಕ್ತಿಗಳ ಪಾಲು?

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ...

ಅನುದಾನ ಬಿಡುಗಡೆಯಾಗಿದ್ದರೂ ಪೂರ್ಣಗೊಳ್ಳದ ಕಾಮಗಾರಿ; ತನಿಖಾ ವರದಿಗೆ ಮೆತ್ತಿಕೊಂಡ ಧೂಳು, ಕ್ರಮಕೈಗೊಳ್ಳದ ಸಚಿವ

ಬೆಂಗಳೂರು; ತುಮಕೂರು ಜಿಲ್ಲೆಯ ಶಿರಾ ಪಟ್ಟಣದಲ್ಲಿರುವ ಕಸ್ತೂರಿ ರಂಗಪ್ಪ ನಾಯಕ ಕೋಟೆಯ...

ಧರ್ಮಸ್ಥಳ ಪ್ರಕರಣಗಳ ತನಿಖೆ; ಎಸ್‌ಐಟಿ ವರದಿ ಪ್ರತಿ ಒದಗಿಸದ ಸರ್ಕಾರ, ಗೃಹ ಇಲಾಖೆ ಶಾಖೆಯಲ್ಲಿ ಸಭೆ ನಡವಳಿಯೂ ಲಭ್ಯವಿಲ್ಲ

ಬೆಂಗಳೂರು: ಧರ್ಮಸ್ಥಳದ ಸುತ್ತಮುತ್ತ ನಡೆದಿರುವ ಮಹಿಳೆಯರು ಮತ್ತು ಯುವತಿಯರ ಮೇಲಿನ ದೌರ್ಜನ್ಯ/ಕೊಲೆ,...

ವೈಟ್‌ ಟ್ಯಾಪಿಂಗ್‌ ಗೋಲ್ಮಾಲ್‌; ಅಗತ್ಯವಿರದಿದ್ದರೂ ಕಾಮಗಾರಿ, ತಾಂತ್ರಿಕ ಪರಿಶೀಲನೆಯಿಲ್ಲದಿದ್ದರೂ ಹೆಚ್ಚುವರಿ ವೆಚ್ಚ, ಗುತ್ತಿಗೆದಾರರಿಗೆ ಲಾಭ

ಬೆಂಗಳೂರು;  ವೈಟ್‌ ಟ್ಯಾಪಿಂಗ್ ಅಗತ್ಯವಿಲ್ಲದಿದ್ದರೂ  ಕಾಮಗಾರಿ ಆರಂಭಿಸಿದ ನಂತರ ತಾಂತ್ರಿಕ ಮಂಜೂರಾತಿ...

Related Articles

Popular Categories

error: Content is protected !!