Wednesday | July 22, 2026 |

ಒಂದೇ ಒಂದು ಅಗಳು ಅಕ್ಕಿಯೂ ಇಲ್ಲ; ವಲಸಿಗರ ತಾರತಮ್ಯವೂ ನಿಂತಿಲ್ಲ

ಬೆಂಗಳೂರು; ಕೇಂದ್ರ ಮತ್ತು ರಾಜ್ಯದ ಮಧ್ಯೆ ಸಮನ್ವಯತೆ ಇಲ್ಲದ ಕಾರಣ ಹೊರರಾಜ್ಯದ ವಲಸಿಗರು ಇನ್ನೂ ತವರೂರಿಗೆ ತೆರಳಲಾಗದೇ ಬಸ್‌ ಶೆಲ್ಟರ್‌ಗಳಲ್ಲೇ ಆಶ್ರಯ ಪಡೆದು ಒಪ್ಪೊತ್ತಿನ ಗಂಜಿಗಾಗಿ ಪರದಾಡುತ್ತಿದ್ದಾರೆ. ರೈಲುಗಳ ಸಂಖ್ಯೆ ಕಡಿಮೆ ಇರುವ ಕಾರಣ ನಿತ್ಯವೂ ವಲಸಿಗ ಕಾರ್ಮಿಕರ ಸಂಖ್ಯೆ ದಿನೇ ದಿನೇ ಏರುತ್ತಿದೆ.

ಅಲ್ಲದೆ ಹೊರರಾಜ್ಯಗಳಿಗೆ ಕಳಿಸುವ ಸಂದರ್ಭದಲ್ಲಿ ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿರುವ ವಲಸಿಗರಿಗಷ್ಟೇ ಹೆಚ್ಚಿನ ಆದ್ಯತೆ ಸಿಗುತ್ತಿದೆಯೇ ಹೊರತು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜಮಾವಣೆಗೊಂಡಿರುವ ಹೊರ ರಾಜ್ಯದ ವಲಸಿಗರಿಗೆ ಸಿಗುತ್ತಿಲ್ಲ. ಸೇವಾ ಸಿಂಧು ಮೂಲಕ ಹೆಸರು ನೋಂದಾಯಿಸಿ ಹಲವು ದಿನಗಳಾದರೂ ಹಲವರಿಗೆ ರೈಲು ಸಂಚಾರಕ್ಕೆ ಅವಕಾಶ ಸಿಗುತ್ತಿಲ್ಲ.
ಹೊರರಾಜ್ಯದ ವಲಸಿಗರನ್ನು ತವರೂರಿಗೆ ಕಳಿಸುವ ನಿಟ್ಟಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನೆಲೆಗೊಂಡಿರುವ ಹೊರರಾಜ್ಯದ ವಲಸಿಗರ ವಿಚಾರದಲ್ಲಿ ತಾರತಮ್ಯ ಎಸಗುತ್ತಿರುವುದು ಕಂಡು ಬಂದಿದೆ.

ಹೊಸಕೋಟೆ ತಾಲೂಕಿನ ಮಾರಶೆಟ್ಟಿಹಳ್ಳಿಯಲ್ಲಿ ಎಲ್ಲೆಂದರಲ್ಲಿ ಬೀಡುಬಿಟ್ಟಿರುವ ಬಿಹಾರ, ಉತ್ತರ ಪ್ರದೇಶ, ಜಾರ್ಖಂಡ್‌, ಮಧ್ಯ ಪ್ರದೇಶ, ಅಸ್ಸಾಂ, ಒಡಿಶಾ ರಾಜ್ಯಗಳಿಗೆ ಸೇರಿರುವ ನೂರಾರು ಸಾವಿರಾರು ಸಂಖ್ಯೆಯ ವಲಸಿಗರು ರೈಲ್ವೇ ಅಧಿಕಾರಿಗಳಿಂದ ಯಾವ ಪ್ರತಿಕ್ರಿಯೆ ಬಾರದ ಕಾರಣ ಅಸಹಾಯಕ ಸ್ಥಿತಿಯಲ್ಲಿದ್ದಾರೆ.

ಇನ್ನು, ಈ ಕ್ಷೇತ್ರವನ್ನು ಪ್ರತಿನಿಧಿಸಿರುವ ಶಾಸಕ ಶರತ್‌ ಬಚ್ಚೇಗೌಡ, ಮಾಜಿ ಶಾಸಕ ಎಂಟಿಬಿ ನಾಗರಾಜ್‌ ಅವರು ಇತ್ತ ಸುಳಿದಿಲ್ಲ. ಆಹಾರ ಪೊಟ್ಟಣದ ಮಾತಿರಲಿ, ಒಂದೇ ಒಂದು ಅಗಳು ಅಕ್ಕಿಯೂ ದೊರೆತಿಲ್ಲ. ಈ ಭಾಗದ ಚುನಾಯಿತ ಜನಪ್ರತಿನಿಧಿಗಳು ಹೊರರಾಜ್ಯದ ವಲಸಿಗರಿಗೆ ಟೋಕನ್‌ ನೀಡದೇ ಇರುವುದೇ ಇದಕ್ಕೆ ಮುಖ್ಯ ಕಾರಣ ಎಂದು ತಿಳಿದು ಬಂದಿದೆ.

ಮಲ್ಲಸಂದ್ರ, ನಡುವತ್ತಿ, ಕೊರಳೂರು ಭಾಗಗಳಲ್ಲಿ ರೇಷನ್‌ ಅಂಗಡಿಗಳಲ್ಲೂ ಇವರಿಗೆ ಆಹಾರ ಧಾನ್ಯಗಳು ದೊರೆತಿಲ್ಲ ಎಂದು ಹೇಳಲಾಗುತ್ತಿದೆಯಲ್ಲದೆ, ಈ ಭಾಗದ ಮತದಾರರ ಪಟ್ಟಿಯಲ್ಲಿ ಹೊರರಾಜ್ಯದ ವಲಸಿಗರು ಹೆಸರು ಇರದ ಕಾರಣ ಚುನಾಯಿತ ಜನಪ್ರತಿನಿಧಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಗೊತ್ತಾಗಿದೆ.

2020ರ ಮೇ 10ರಂದು ಬಿಹಾರದ 98, ಮೇ 13ರಂದು ಪಶ್ಚಿಮ ಬಂಗಾಳದ 12, ಜಾರ್ಖಂಡ್‌ನ 128, ಉತ್ತರ ಪ್ರದೇಶದ 120, ಮಧ್ಯ ಪ್ರದೇಶದ 80 , ಮೇ 16ರಂದು ಬಿಹಾರದ 150, ಜಾರ್ಖಂಡ್‌ನ 138, ಒಡಿಶಾದ 45, ಅಸ್ಸಾಂನ 48, ಉತ್ತರ ಪ್ರದೇಶದ 65, ಪಶ್ಚಿಮ ಬಂಗಾಳದ 16 ಮಂದಿ ವಲಸಿಗ ಕಾರ್ಮಿಕರನ್ನು ಮಾಲೂರು ರೈಲ್ವೇ ನಿಲ್ದಾಣ ಮೂಲಕ ಆಯಾ ರಾಜ್ಯಗಳಿಗೆ ಕಳಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ‘ದಿ ಫೈಲ್‌’ಗೆ ತಿಳಿಸಿದರು.

ಹೊರರಾಜ್ಯಗಳ ಕಾರ್ಮಿಕರನ್ನು ಕಳಿಸುವಾಗ ನಗರ ಪ್ರದೇಶಕ್ಕೆ ಮೊದಲ ಆದ್ಯತೆ ನೀಡಲಾಗುತ್ತಿದೆ. ವಲಸಿಗ ಕಾರ್ಮಿಕರ ಸಂಖ್ಯೆ ಎಲ್ಲಿ ಹೆಚ್ಚಿದೆಯೋ ಮತ್ತು ಕಂಪನಿ, ಗುತ್ತಿಗೆದಾರರ ಬೆದರಿಕೆ ಎಲ್ಲಿ ಹೆಚ್ಚಿದೆಯೋ ಅಂತಹ ಭಾಗಗಳ ಕಾರ್ಮಿಕರನ್ನು ಬೆಂಗಳೂರಿನಿಂದ ಕಳಿಸುತ್ತಿದ್ದಾರೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

Hot this week

ಶೌಚಗುಂಡಿಗಳಲ್ಲಿ ಸ್ವಚ್ಛತೆ; 5 ವರ್ಷದಲ್ಲಿ ದೇಶದಾದ್ಯಂತ 332 ಮಂದಿ ಸಾವು, ಕರ್ನಾಟಕದೊಂದಿಗೆ ತಾಳೆಯಾಗದ ಮರಣದ ಅಂಕಿಅಂಶ

ಬೆಂಗಳೂರು; ರಾಜ್ಯದಲ್ಲಿ ಶೌಚ ಗುಂಡಿಗಳು ಮತ್ತು ಒಳಚರಂಡಿಗಳಲ್ಲಿ  ಅಪಾಯಕಾರಿ ಪರಿಸ್ಥಿತಿಯಲ್ಲಿ 2024ನೇ...

ವಸತಿ ಬಡಾವಣೆ ನಿರ್ಮಾಣ, ಅಭಿವೃದ್ಧಿ ಕಾಮಗಾರಿ, ಬಡ್ಡಿ ಪಾವತಿ; ಲೆಕ್ಕಪತ್ರವನ್ನೇ ನಿರ್ವಹಿಸಿಲ್ಲ, ದಾಖಲೆಗಳನ್ನೂ ಒದಗಿಸಿಲ್ಲ, ಮುಡಾ ದುರಾಡಳಿತ

ಮಂಗಳೂರು: ಕುಂಜತ್‌ ಬೈಲ್ ಸೇರಿದಂತೆ ಹಲವೆಡೆ ವಸತಿ ಬಡಾವಣೆಗಳನ್ನು ರಚಿಸುವ ಉದ್ದೇಶದಿಂದ...

ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿ; ಡಿಪಿಆರ್, ಟೆಂಡರ್ ಪ್ರಕ್ರಿಯೆಯಲ್ಲಿ ಲೋಪ ದೋಷ, 130 ಕೋಟಿ ರು ಹೆಚ್ಚುವರಿ

ಬೆಂಗಳೂರು; ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿಗೆ ನಡೆಸಲು ಕರೆದಿದ್ದ...

ಆದಾಯಕ್ಕಿಂತ ಹೆಚ್ಚಿನ ಅಕ್ರಮ ಸಂಪತ್ತು ಗಳಿಕೆ ; ಡಾ ಬೂವನಹಳ್ಳಿ ನಾಗರಾಜ್ ವಿರುದ್ಧದ ಪ್ರಕರಣದಲ್ಲಿ ಬಿ ರಿಪೋರ್ಟ್‌ ಅಂಗೀಕರಿಸಿದ ನ್ಯಾಯಾಲಯ

ಬೆಂಗಳೂರು; ತುಮಕೂರು ಜಿಲ್ಲಾ ಪಂಚಾಯ್ತಿಯಲ್ಲಿ ಕುಂದುಕೊರತೆ ನಿವಾರಣೆ ಪ್ರಾಧಿಕಾರಿಯಾಗಿದ್ದ ಡಾ ಬೂವನಹಳ್ಳಿ...
Please Scan to make Your Contribution

Topics

ಶೌಚಗುಂಡಿಗಳಲ್ಲಿ ಸ್ವಚ್ಛತೆ; 5 ವರ್ಷದಲ್ಲಿ ದೇಶದಾದ್ಯಂತ 332 ಮಂದಿ ಸಾವು, ಕರ್ನಾಟಕದೊಂದಿಗೆ ತಾಳೆಯಾಗದ ಮರಣದ ಅಂಕಿಅಂಶ

ಬೆಂಗಳೂರು; ರಾಜ್ಯದಲ್ಲಿ ಶೌಚ ಗುಂಡಿಗಳು ಮತ್ತು ಒಳಚರಂಡಿಗಳಲ್ಲಿ  ಅಪಾಯಕಾರಿ ಪರಿಸ್ಥಿತಿಯಲ್ಲಿ 2024ನೇ...

ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿ; ಡಿಪಿಆರ್, ಟೆಂಡರ್ ಪ್ರಕ್ರಿಯೆಯಲ್ಲಿ ಲೋಪ ದೋಷ, 130 ಕೋಟಿ ರು ಹೆಚ್ಚುವರಿ

ಬೆಂಗಳೂರು; ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿಗೆ ನಡೆಸಲು ಕರೆದಿದ್ದ...

ಆದಾಯಕ್ಕಿಂತ ಹೆಚ್ಚಿನ ಅಕ್ರಮ ಸಂಪತ್ತು ಗಳಿಕೆ ; ಡಾ ಬೂವನಹಳ್ಳಿ ನಾಗರಾಜ್ ವಿರುದ್ಧದ ಪ್ರಕರಣದಲ್ಲಿ ಬಿ ರಿಪೋರ್ಟ್‌ ಅಂಗೀಕರಿಸಿದ ನ್ಯಾಯಾಲಯ

ಬೆಂಗಳೂರು; ತುಮಕೂರು ಜಿಲ್ಲಾ ಪಂಚಾಯ್ತಿಯಲ್ಲಿ ಕುಂದುಕೊರತೆ ನಿವಾರಣೆ ಪ್ರಾಧಿಕಾರಿಯಾಗಿದ್ದ ಡಾ ಬೂವನಹಳ್ಳಿ...

ಏಕಬಳಕೆ ಪ್ಲಾಸ್ಟಿಕ್‌ ಬಳಕೆಗಿಲ್ಲ ಕಡಿವಾಣ, ನಿಷೇಧದ ಕಾನೂನು ಕಾಗದದ ಮೇಲಷ್ಟೇ ಜಾರಿ; ಪಾಲಿಕೆ ಬಳಿ ಮಾಹಿತಿಯೇ ಇಲ್ಲ

ಮೈಸೂರು: ಏಕಬಳಕೆ ಪ್ಲಾಸ್ಟಿಕ್‌ನ ಉತ್ಪಾದನೆ, ಸಂಗ್ರಹಣೆ, ವಿತರಣೆ ಮತ್ತು ಬಳಕೆಯನ್ನು ಸಂಪೂರ್ಣವಾಗಿ...

Related Articles

Popular Categories

error: Content is protected !!