Sunday | September 6, 2026 |

ಅಕ್ರಮ ದಾಖಲಾತಿ; ಕೃಷಿ ವಿವಿ ವಿಶ್ರಾಂತ ಕುಲಪತಿ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ

ಬೆಂಗಳೂರು; ಕೃಷಿ ಕೋಟಾದಡಿ ಅಕ್ರಮವಾಗಿ ಬಿಎಸ್‌ಸಿ ಪ್ರವೇಶ ಗಿಟ್ಟಿಸಿಕೊಂಡಿದ್ದ ರಾಯೂಚೂರು ಕೃಷಿ ವಿಶ್ವವಿದ್ಯಾಲಯದ ವಿಶ್ರಾಂತ ಉಪ ಕುಲಪತಿ ಬಿ.ವಿ.ಪಾಟೀಲ್ ಅವರ ಪುತ್ರ ವಿನಯ್‌ ಪಾಟೀಲ್‌ ಅವರ ಪದವಿಗಳನ್ನು ರದ್ದುಪಡಿಸಲು ಸರ್ಕಾರ ಕೃಷಿ ವಿಶ್ವವಿದ್ಯಾಲಯಕ್ಕೆ ನಿರ್ದೇಶಿಸಿದೆ.

ಈ ಕುರಿತು 2020ರ ಮೇ 22ರಂದು ಸೂಚಿಸಿರುವ ಕೃಷಿ ಇಲಾಖೆ, ಕೃಷಿ ಕೋಟಾದಡಿ ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಪಡೆದಿರುವ ಬಿ ಎಸ್‌ ಸಿ ಪದವಿಯ ಮೂಲ ಪ್ರಮಾಣ ಪತ್ರ ಮತ್ತು ಪಿ ಎಚ್‌ ಡಿ ಪ್ರಮಾಣಪತ್ರಗಳನ್ನು ಹಿಂತಿರುಗಿಸಬೇಕು ಎಂದು ಸೂಚಿಸಿದೆ.

ಇದಷ್ಟೇ ಅಲ್ಲದೆ ‘ಕೃಷಿ ಕೋಟಾದಡಿಯಲ್ಲಿ ಅಕ್ರಮವಾಗಿ ಪ್ರವೇಶ ಪಡೆದು ಓರ್ವ ಕೃಷಿ ವಿದ್ಯಾರ್ಥಿಯು ಪ್ರವೇಶ ಪಡೆಯಲು ವಂಚಿತರಾಗಿರುವುದರಿಂದ ವಿಶ್ವವಿದ್ಯಾಲಯದಿಂದ ಬಿ ಎಸ್‌ ಸಿ ಪದವಿ ಪಡೆಯಲು ತಗುಲುವ ಸಂಪೂರ್ಣ ಅಂದಾಜು ವೆಚ್ಚ 10.00 ಲಕ್ಷ ರು.ಗಳನ್ನು ವಿಶ್ವವಿದ್ಯಾಲಯಕ್ಕೆ ಭರಿಸಬೇಕು,’ ಎಂದು ವಿಶ್ವವಿದ್ಯಾಲಯದ ಕುಲಸಚಿವರೂ ಆದೇಶಿಸಿದ್ದಾರೆ.

ಬಿ ಎಸ್‌ ಸಿ ಪದವಿ ಮತ್ತು ಪಿಎಚ್‌ಡಿ ಪದವಿ ಪ್ರಮಾಣ ಪತ್ರಗಳೆರಡನ್ನೂ ರದ್ದುಗೊಳಿಸಲು ಸೂಚಿಸಿರುವ ಸರ್ಕಾರ, ಕೃಷಿ ಆದಾಯ ಪ್ರಮಾಣ ಪತ್ರವನ್ನು ತಿದ್ದಿರುವ ಕ್ರಿಮಿನಲ್‌ ಅಪರಾಧಕ್ಕಾಗಿ ವಿಶ್ರಾಂತ ಕುಲಪತಿ ಡಾ ಬಿ ವಿ ಪಾಟೀಲ್‌ ಅವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಬೇಕು ಎಂದು ಕೃಷಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಚ್‌ ಎನ್‌ ಲಕ್ಷ್ಮಣಗೌಡ ಸೂಚಿಸಿದ್ದಾರೆ.

ವಿಶ್ರಾಂತ ಉಪ ಕುಲಪತಿ ಬಿ.ವಿ.ಪಾಟೀಲ್ ಅವರ ಪುತ್ರ ವಿನಯ್ ಪಾಟೀಲ್‌ ಅವರು ನಕಲಿ ಪ್ರಮಾಣ ಪತ್ರಗಳನ್ನು ಸಲ್ಲಿಸಿ ಕೃಷಿ ಪದವಿ ಹಾಗೂ ಪಿಎಚ್‍ಡಿ ಪಡೆದಿದ್ದಾರೆ ಎಂದು ಆರೋಪಿಸಿದ್ದ ಹೋರಾಟಗಾರರಿಗೆ ಇದೀಗ ಜಯ ದೊರೆತಿದೆ. ಈ ಹಿಂದೆ ವಿಶ್ವವಿದ್ಯಾಲಯದ ವಿಚಾರಣಾ ಸಮಿತಿ ಹೋರಾಟಗಾರರ ಆರೋಪವನ್ನು ಎತ್ತಿ ಹಿಡಿದಿತ್ತು. ಅಲ್ಲದೆ ಪ್ರಕರಣ ಹೈಕೋರ್ಟ್ ನಲ್ಲಿದ್ದರೂ ವಿನಯ್ ಪಾಟೀಲ್ ಅವರಿಗೆ ಪಿಎಚ್‍ಡಿ ಪ್ರಮಾಣ ಪತ್ರ ನೀಡಲಾಗಿತ್ತು.

ಬಿ.ವಿ.ಪಾಟೀಲ್ ಅವರು ತಮ್ಮ ಆದಾಯ ಪ್ರಮಾಣ ಪತ್ರದಲ್ಲಿದ್ದ 2 ಲಕ್ಷ ರೂ.ವನ್ನು 6.20 ಲಕ್ಷ ರೂ. ಎಂದು ತಿದ್ದುಪಡಿ ಮಾಡಿ ರೈತರ ಕೋಟಾದ ಅಡಿ ಪುತ್ರನಿಗೆ ಪ್ರವೇಶ ದೊರಕಿಸಿಕೊಟ್ಟಿದ್ದರು.

Hot this week

2,500 ಕೋಟಿ ರು ಮೂಲ ಬೆಲೆಯ ಮೇಲೆ 350 ಕೋಟಿ ಪ್ರೀಮಿಯಂ; ನಾಗರೀಕರ ಮೇಲೆ ಹೊರೆ ಸೃಷ್ಟಿಸಿತೇ ಬಿಎಸ್‌ಡಬ್ಲ್ಯೂಎಂಎಲ್?

ಬೆಂಗಳೂರು;  ಪ್ರಾಥಮಿಕ ಹಂತದ ಕಸ ಸಂಗ್ರಹಣೆ ಮತ್ತು ಸಾಗಾಣಿಕೆಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯುಎಂಎಲ್‌...

ಬುಕ್ ಬ್ರಹ್ಮ ಸಾಹಿತ್ಯ ಉತ್ಸವಕ್ಕೆ 5 ಲಕ್ಷ ರು ಅನುದಾನ; ನೋಂದಣಿಯಾಗಿ 3 ವ‍ರ್ಷ ಪೂರೈಸದ ಬುಕ್‌ ಬ್ರಹ್ಮ ಫೌಂಡೇಷನ್‌ಗೆ ಒಂದು ಬಾರಿ ವಿನಾಯಿತಿ

ಬೆಂಗಳೂರು;  ಅನುದಾನ ಪಡೆಯುವ ಸಂಘ, ಸಂಸ್ಥೆಗಳು ನೋಂದಣಿಯಾಗಿ  3 ವರ್ಷಗಳನ್ನು ಪೂರೈಸಿರಬೇಕು...

ಘನತ್ಯಾಜ್ಯ ಸಂಗ್ರಹಣೆ, ಸಾಗಾಣಿಕೆಗೆ ವಾಹನಗಳ ಬಾಡಿಗೆ ವೆಚ್ಚ; ದರಗಳ ಪರಿಷ್ಕರಣೆಗೆ ಅನುಸರಿಸಿರುವ ಮಾನದಂಡದಲ್ಲಿ ಲೋಪವಿದೆಯೇ?

ಬೆಂಗಳೂರು; ಘನತ್ಯಾಜ್ಯ ಸಂಗ್ರಹಣೆ ಮತ್ತು ಸಾಗಾಣಿಕೆಗೆ ವಾಹನಗಳ ಬಾಡಿಗೆ ವೆಚ್ಚ ದರಗಳ...

ಭ್ರಷ್ಟಾಚಾರ, ಅಧಿಕ ಆಸ್ತಿ ಗಳಿಕೆ ಆರೋಪ; 4 ವರ್ಷಗಳಲ್ಲಿ 1,248 ಪ್ರಕರಣ ದಾಖಲು, ಸಿ ಗುಂಪಿನ ನೌಕರರೇ ಹೆಚ್ಚು

ಬೆಂಗಳೂರು; ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ, ಲಂಚಕ್ಕಾಗಿ ಬೇಡಿಕೆಯಿಟ್ಟ  ಆರೋಪಗಳಿಗೆ ಸಂಬಂಧಿಸಿದಂತೆ ...

ಕನ್ಸೋರ್ಟಿಯಂ ಷರತ್ತು, ಸದಸ್ಯರ ಷೇರು; ಅಂಜುಂ ಪರ್ವೇಜ್ ಸಮಿತಿಯ ಆಕ್ಷೇಪಣೆ ತಳ್ಳಿ ಹಾಕಿದ ಘನತ್ಯಾಜ್ಯ ನಿರ್ವಹಣೆ ಮಂಡಳಿ

ಬೆಂಗಳೂರು; ಕಸ ಸಂಗ್ರಹಣೆ ಮತ್ತು ಸಾಗಾಣಿಕೆಗೆ 21 ಪ್ಯಾಕೇಜ್‌ಗಳಲ್ಲಿ ರೂಪಿಸಿರುವ  ಕನ್ಸೋರ್ಟಿಯಂನಲ್ಲಿ...
Please Scan to make Your Contribution

Topics

2,500 ಕೋಟಿ ರು ಮೂಲ ಬೆಲೆಯ ಮೇಲೆ 350 ಕೋಟಿ ಪ್ರೀಮಿಯಂ; ನಾಗರೀಕರ ಮೇಲೆ ಹೊರೆ ಸೃಷ್ಟಿಸಿತೇ ಬಿಎಸ್‌ಡಬ್ಲ್ಯೂಎಂಎಲ್?

ಬೆಂಗಳೂರು;  ಪ್ರಾಥಮಿಕ ಹಂತದ ಕಸ ಸಂಗ್ರಹಣೆ ಮತ್ತು ಸಾಗಾಣಿಕೆಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯುಎಂಎಲ್‌...

ಘನತ್ಯಾಜ್ಯ ಸಂಗ್ರಹಣೆ, ಸಾಗಾಣಿಕೆಗೆ ವಾಹನಗಳ ಬಾಡಿಗೆ ವೆಚ್ಚ; ದರಗಳ ಪರಿಷ್ಕರಣೆಗೆ ಅನುಸರಿಸಿರುವ ಮಾನದಂಡದಲ್ಲಿ ಲೋಪವಿದೆಯೇ?

ಬೆಂಗಳೂರು; ಘನತ್ಯಾಜ್ಯ ಸಂಗ್ರಹಣೆ ಮತ್ತು ಸಾಗಾಣಿಕೆಗೆ ವಾಹನಗಳ ಬಾಡಿಗೆ ವೆಚ್ಚ ದರಗಳ...

ಭ್ರಷ್ಟಾಚಾರ, ಅಧಿಕ ಆಸ್ತಿ ಗಳಿಕೆ ಆರೋಪ; 4 ವರ್ಷಗಳಲ್ಲಿ 1,248 ಪ್ರಕರಣ ದಾಖಲು, ಸಿ ಗುಂಪಿನ ನೌಕರರೇ ಹೆಚ್ಚು

ಬೆಂಗಳೂರು; ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ, ಲಂಚಕ್ಕಾಗಿ ಬೇಡಿಕೆಯಿಟ್ಟ  ಆರೋಪಗಳಿಗೆ ಸಂಬಂಧಿಸಿದಂತೆ ...

ಕನ್ಸೋರ್ಟಿಯಂ ಷರತ್ತು, ಸದಸ್ಯರ ಷೇರು; ಅಂಜುಂ ಪರ್ವೇಜ್ ಸಮಿತಿಯ ಆಕ್ಷೇಪಣೆ ತಳ್ಳಿ ಹಾಕಿದ ಘನತ್ಯಾಜ್ಯ ನಿರ್ವಹಣೆ ಮಂಡಳಿ

ಬೆಂಗಳೂರು; ಕಸ ಸಂಗ್ರಹಣೆ ಮತ್ತು ಸಾಗಾಣಿಕೆಗೆ 21 ಪ್ಯಾಕೇಜ್‌ಗಳಲ್ಲಿ ರೂಪಿಸಿರುವ  ಕನ್ಸೋರ್ಟಿಯಂನಲ್ಲಿ...

Related Articles

Popular Categories

error: Content is protected !!