Monday | August 24, 2026 |

ಸಹಭಾಗಿ ; ‘ದಿ ಫೈಲ್‌’ ವರದಿಯನ್ನು ವಿಸ್ತರಿಸಿದ ಪ್ರಜಾವಾಣಿ

ಬೆಂಗಳೂರು; ಕೊರೊನಾ ವೈರಾಣು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಔಷಧ ಸಾಮಗ್ರಿ ಮತ್ತು ವೈದ್ಯಕೀಯ ಸಲಕರಣೆಗಳ ಖರೀದಿಯಲ್ಲಿ ಕರ್ನಾಟಕ ಡ್ರಗ್‌ ಲಾಜಿಸ್ಟಿಕ್‌ ಸಂಸ್ಥೆ ನಡೆಸಿದ್ದ ವಿವಿಧ ರೀತಿಯ ಅಕ್ರಮಗಳನ್ನು ಮೊತ್ತ ಮೊದಲ ಬಾರಿಗೆ ‘ದಿ ಫೈಲ್‌’ ಹೊರಗೆಡವಿದ್ದ ಸರಣಿ ವರದಿಗಳನ್ನೇ ಇದೀಗ ಪ್ರಜಾವಾಣಿ ಪತ್ರಿಕೆಯೂ ವಿಸ್ತರಿಸಿದೆ.

ಈ ಮೂಲಕ ಸಹಭಾಗಿ ಪತ್ರಿಕೋದ್ಯಮವನ್ನು ಮುಂದುವರೆಸಿದೆ. ಪ್ರಜಾವಾಣಿ ಇಂದು ಮುಖಪುಟದಲ್ಲಿ ಪ್ರಕಟಿಸಿರುವ ವರದಿಯಲ್ಲಿ ಪ್ರಸ್ತಾಪಿಸಿರುವ ಅಕ್ರಮಗಳನ್ನು ‘ದಿ ಫೈಲ್‌’ 2020ರ ಏಪ್ರಿಲ್‌ 21ರಿಂದಲೇ ದಾಖಲೆಗಳ ಸಮೇತ ಎಳೆಎಳೆಯಾಗಿ ಹೊರಗೆಡವುತ್ತಲೇ ಬಂದಿದೆ.

ನಮಗೆ ದೊರೆತಿದ್ದ ದಾಖಲೆಗಳನ್ನು ಪರಿಶೀಲಿಸಿದ್ದ ನಮ್ಮ ತನಿಖಾ ತಂಡ, ಉಪಕರಣಗಳ ತಯಾರಿಸಿದ್ದ ಕಂಪನಿಗಳ ನೈಜತೆ ಮತ್ತು ಉಪಕರಣಗಳನ್ನು ಪೂರೈಕೆ ಮಾಡಿದ್ದ ಸರಬರಾಜುದಾರರ ಹಿನ್ನೆಲೆ, ಸರ್ಕಾರಕ್ಕೆ ಆಗಿದ್ದ ನಷ್ಟದ ಕುರಿತಾದ ದಾಖಲೆಗಳನ್ನು ಕಲೆ ಹಾಕಿತ್ತಲ್ಲದೆ ಈ ಬಗ್ಗೆ ಸರಣಿ ವರದಿಗಳನ್ನು ಪ್ರಕಟಿಸಿತ್ತು.

ಪಿಪಿಇ ಕಿಟ್‌, ಸ್ಯಾನಿಟೈಸರ್‌, ಗ್ಲೂಕೋಸ್‌, ವೆಂಟಿಲೇಟರ್‌, ಡಯಾಲಿಸಿಸ್‌, ಮಾಸ್ಕ್‌, ಸಿರಿಂಜ್‌ ಸೇರಿದಂತೆ ಇನ್ನಿತರೆ ವೈದ್ಯಕೀಯ ಸಲಕರಣೆಗಳ ಖರೀದಿಯಲ್ಲಾಗಿರುವ ಅಕ್ರಮಗಳ ಕುರಿತು ಕರ್ನಾಟಕ ರಾಷ್ಟ್ರಸಮಿತಿ ಕೂಡ ದನಿ ಎತ್ತಿತ್ತು.

ಅಲ್ಲದೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ದಾಖಲಿಸಿದ್ದ ದೂರಿನಲ್ಲಿಯೂ ‘ದಿ ಫೈಲ್‌’ ಹೊರಗೆಡವಿದ್ದ ವರದಿಗಳನ್ನು ಉಲ್ಲೇಖಿಸಿತ್ತು. ಹಾಗೆಯೇ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಂಗಳಕ್ಕೆ ಕೊಂಡೊಯ್ದಿದ್ದ ಕರ್ನಾಟಕ ರಾಷ್ಟ್ರಸಮಿತಿ ಅಲ್ಲಿಯೂ ದೂರು ದಾಖಲಿಸಿದ್ದನ್ನು ಸ್ಮರಿಸಬಹುದು.

ಆರೋಗ್ಯ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಕೊರೊನಾ ವೈರಾಣು ಹರಡುವಿಕೆಯನ್ನು ತಡೆಗಟ್ಟುವ ಹೆಸರಿನಲ್ಲಿ ಕಮಿಷನ್‌ ದಂಧೆಗಿಳಿದಿದ್ದ ಆರೋಗ್ಯ, ವೈದ್ಯಕೀಯ ಶಿಕ್ಷಣ ಇಲಾಖೆಯ ಅಧಿಕಾರಿಗಳ ಮುಖವಾಡವನ್ನು ಕಳಚುವ ನಿಟ್ಟಿನಲ್ಲಿ ಸಹಭಾಗಿ ಪತ್ರಿಕೋದ್ಯಮವು ಹೆಚ್ಚು ಪರಿಣಾಮಕಾರಿ. ಇದನ್ನೇ ‘ದಿ ಫೈಲ್‌’ ಕೂಡ ನಂಬಿದೆಯಲ್ಲದೆ ಹೆಚ್ಚಿನ ವಿಶ್ವಾಸವೂ ಇರಿಸಿಕೊಂಡಿದೆ.

Hot this week

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...

ನೀಟ್‌ ಪರೀಕ್ಷೆಯಿಂದ ವಿನಾಯಿತಿ; ತಮಿಳುನಾಡು ಮಾದರಿಯಲ್ಲಿ ನಿರ್ಣಯ ಮಂಡಿಸಲು ರಾಜ್ಯ ಸಜ್ಜು, ಕಾನೂನುಬದ್ಧ ವಿನಾಯಿತಿಗೆ ಪ್ರಸ್ತಾವ

ಬೆಂಗಳೂರು; ಕರ್ನಾಟಕ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶ ವ್ಯವಸ್ಥೆಯು ರಾಜ್ಯದ ಶೈಕ್ಷಣಿಕ...

2 ಕಂಪನಿಗಳಿಂದ 400 ಕೋಟಿ ರು ವಹಿವಾಟು ಆರೋಪ; ಐಜಿಪಿ ಚಂದ್ರಶೇಖರ್ ಪ್ರಕರಣದಲ್ಲಿ ವರದಿ ನೀಡಲು ಸರ್ಕಾರದ ನಿರ್ದೇಶನ

ಬೆಂಗಳೂರು; ಸರ್ಕಾರದ ಪೂರ್ವಾನುಮತಿ ಪಡೆಯದೇ ಹಾಗೂ ಸರ್ಕಾರಕ್ಕೆ ವರದಿಯನ್ನು ಸಲ್ಲಿಸದೇ ಕುಟುಂಬ...
Please Scan to make Your Contribution

Topics

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...

ನೀಟ್‌ ಪರೀಕ್ಷೆಯಿಂದ ವಿನಾಯಿತಿ; ತಮಿಳುನಾಡು ಮಾದರಿಯಲ್ಲಿ ನಿರ್ಣಯ ಮಂಡಿಸಲು ರಾಜ್ಯ ಸಜ್ಜು, ಕಾನೂನುಬದ್ಧ ವಿನಾಯಿತಿಗೆ ಪ್ರಸ್ತಾವ

ಬೆಂಗಳೂರು; ಕರ್ನಾಟಕ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶ ವ್ಯವಸ್ಥೆಯು ರಾಜ್ಯದ ಶೈಕ್ಷಣಿಕ...

2 ಕಂಪನಿಗಳಿಂದ 400 ಕೋಟಿ ರು ವಹಿವಾಟು ಆರೋಪ; ಐಜಿಪಿ ಚಂದ್ರಶೇಖರ್ ಪ್ರಕರಣದಲ್ಲಿ ವರದಿ ನೀಡಲು ಸರ್ಕಾರದ ನಿರ್ದೇಶನ

ಬೆಂಗಳೂರು; ಸರ್ಕಾರದ ಪೂರ್ವಾನುಮತಿ ಪಡೆಯದೇ ಹಾಗೂ ಸರ್ಕಾರಕ್ಕೆ ವರದಿಯನ್ನು ಸಲ್ಲಿಸದೇ ಕುಟುಂಬ...

ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ; ಹಲವು ಟೆಂಡರ್‍‌ಗಳಿಗೆ ಬಿಡ್ಡರ್‍‌ಗಳೇ ಇಲ್ಲ, ಮರು ಟೆಂಡರ್‍ ಹಿಂದಿದೆಯೇ ಲಂಚಾವತಾರ?

ಬೆಂಗಳೂರು; ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ ಕಾಣಿಸಿಕೊಂಡಿದೆ....

30,01,169 ರೈತರಿಂದ 25,180.77 ಕೋಟಿ ಹೊರಬಾಕಿ; ರೈತರ ಸಾಲ ಮನ್ನಾ ಪ್ರಸ್ತಾವವಿಲ್ಲ, ರೈತರ ಕೆಂಗಣ್ಣಿಗೆ ಗುರಿಯಾಗಲಿದೆಯೇ ಸರ್ಕಾರ?

ಬೆಂಗಳೂರು; ಸಹಕಾರ ಸಂಸ್ಥೆಗಳ ಮೂಲಕ ರೈತರು ಪಡೆದಿರುವ ಕೃಷಿ ಸಾಲವನ್ನು ಮನ್ನಾ...

Related Articles

Popular Categories

error: Content is protected !!