Wednesday | July 15, 2026 |

ಸಹಭಾಗಿ ; ‘ದಿ ಫೈಲ್‌’ ವರದಿಯನ್ನು ವಿಸ್ತರಿಸಿದ ಪ್ರಜಾವಾಣಿ

ಬೆಂಗಳೂರು; ಕೊರೊನಾ ವೈರಾಣು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಔಷಧ ಸಾಮಗ್ರಿ ಮತ್ತು ವೈದ್ಯಕೀಯ ಸಲಕರಣೆಗಳ ಖರೀದಿಯಲ್ಲಿ ಕರ್ನಾಟಕ ಡ್ರಗ್‌ ಲಾಜಿಸ್ಟಿಕ್‌ ಸಂಸ್ಥೆ ನಡೆಸಿದ್ದ ವಿವಿಧ ರೀತಿಯ ಅಕ್ರಮಗಳನ್ನು ಮೊತ್ತ ಮೊದಲ ಬಾರಿಗೆ ‘ದಿ ಫೈಲ್‌’ ಹೊರಗೆಡವಿದ್ದ ಸರಣಿ ವರದಿಗಳನ್ನೇ ಇದೀಗ ಪ್ರಜಾವಾಣಿ ಪತ್ರಿಕೆಯೂ ವಿಸ್ತರಿಸಿದೆ.

ಈ ಮೂಲಕ ಸಹಭಾಗಿ ಪತ್ರಿಕೋದ್ಯಮವನ್ನು ಮುಂದುವರೆಸಿದೆ. ಪ್ರಜಾವಾಣಿ ಇಂದು ಮುಖಪುಟದಲ್ಲಿ ಪ್ರಕಟಿಸಿರುವ ವರದಿಯಲ್ಲಿ ಪ್ರಸ್ತಾಪಿಸಿರುವ ಅಕ್ರಮಗಳನ್ನು ‘ದಿ ಫೈಲ್‌’ 2020ರ ಏಪ್ರಿಲ್‌ 21ರಿಂದಲೇ ದಾಖಲೆಗಳ ಸಮೇತ ಎಳೆಎಳೆಯಾಗಿ ಹೊರಗೆಡವುತ್ತಲೇ ಬಂದಿದೆ.

ನಮಗೆ ದೊರೆತಿದ್ದ ದಾಖಲೆಗಳನ್ನು ಪರಿಶೀಲಿಸಿದ್ದ ನಮ್ಮ ತನಿಖಾ ತಂಡ, ಉಪಕರಣಗಳ ತಯಾರಿಸಿದ್ದ ಕಂಪನಿಗಳ ನೈಜತೆ ಮತ್ತು ಉಪಕರಣಗಳನ್ನು ಪೂರೈಕೆ ಮಾಡಿದ್ದ ಸರಬರಾಜುದಾರರ ಹಿನ್ನೆಲೆ, ಸರ್ಕಾರಕ್ಕೆ ಆಗಿದ್ದ ನಷ್ಟದ ಕುರಿತಾದ ದಾಖಲೆಗಳನ್ನು ಕಲೆ ಹಾಕಿತ್ತಲ್ಲದೆ ಈ ಬಗ್ಗೆ ಸರಣಿ ವರದಿಗಳನ್ನು ಪ್ರಕಟಿಸಿತ್ತು.

ಪಿಪಿಇ ಕಿಟ್‌, ಸ್ಯಾನಿಟೈಸರ್‌, ಗ್ಲೂಕೋಸ್‌, ವೆಂಟಿಲೇಟರ್‌, ಡಯಾಲಿಸಿಸ್‌, ಮಾಸ್ಕ್‌, ಸಿರಿಂಜ್‌ ಸೇರಿದಂತೆ ಇನ್ನಿತರೆ ವೈದ್ಯಕೀಯ ಸಲಕರಣೆಗಳ ಖರೀದಿಯಲ್ಲಾಗಿರುವ ಅಕ್ರಮಗಳ ಕುರಿತು ಕರ್ನಾಟಕ ರಾಷ್ಟ್ರಸಮಿತಿ ಕೂಡ ದನಿ ಎತ್ತಿತ್ತು.

ಅಲ್ಲದೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ದಾಖಲಿಸಿದ್ದ ದೂರಿನಲ್ಲಿಯೂ ‘ದಿ ಫೈಲ್‌’ ಹೊರಗೆಡವಿದ್ದ ವರದಿಗಳನ್ನು ಉಲ್ಲೇಖಿಸಿತ್ತು. ಹಾಗೆಯೇ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಂಗಳಕ್ಕೆ ಕೊಂಡೊಯ್ದಿದ್ದ ಕರ್ನಾಟಕ ರಾಷ್ಟ್ರಸಮಿತಿ ಅಲ್ಲಿಯೂ ದೂರು ದಾಖಲಿಸಿದ್ದನ್ನು ಸ್ಮರಿಸಬಹುದು.

ಆರೋಗ್ಯ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಕೊರೊನಾ ವೈರಾಣು ಹರಡುವಿಕೆಯನ್ನು ತಡೆಗಟ್ಟುವ ಹೆಸರಿನಲ್ಲಿ ಕಮಿಷನ್‌ ದಂಧೆಗಿಳಿದಿದ್ದ ಆರೋಗ್ಯ, ವೈದ್ಯಕೀಯ ಶಿಕ್ಷಣ ಇಲಾಖೆಯ ಅಧಿಕಾರಿಗಳ ಮುಖವಾಡವನ್ನು ಕಳಚುವ ನಿಟ್ಟಿನಲ್ಲಿ ಸಹಭಾಗಿ ಪತ್ರಿಕೋದ್ಯಮವು ಹೆಚ್ಚು ಪರಿಣಾಮಕಾರಿ. ಇದನ್ನೇ ‘ದಿ ಫೈಲ್‌’ ಕೂಡ ನಂಬಿದೆಯಲ್ಲದೆ ಹೆಚ್ಚಿನ ವಿಶ್ವಾಸವೂ ಇರಿಸಿಕೊಂಡಿದೆ.

Hot this week

ಕಲ್ಲು ಸಕ್ಕರೆ, ಖರ್ಜೂರ ಪ್ರಸಾದ; ದುಪ್ಪಟ್ಟು ದರದಲ್ಲಿ ಮಾರಾಟ, ಭಕ್ತರಿಗೆ ಅನಗತ್ಯ ಆರ್ಥಿಕ ಹೊರೆ, ನ್ಯಾಯಾಲಯ ಆದೇಶವೂ ಉಲ್ಲಂಘನೆ

ಬೆಂಗಳೂರು; ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಪ್ರಾಧಿಕಾರವು ನಿಗದಿತ ದರಕ್ಕಿಂತಲೂ ಹೆಚ್ಚುವರಿ ಅಂದರೇ...

ನ್ಯಾಕ್‌, ಎನ್‌ಐಆರ್‍‌ಎಫ್‌ ಮಾನದಂಡ; ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟ ಆತಂಕದ ಪ್ರವೃತ್ತಿ, ಆಯೋಗ ಕಳವಳ

ಬೆಂಗಳೂರು; ನ್ಯಾಕ್‌ ಮತ್ತು ಎನ್‌ಐಆರ್‍‌ಎಫ್‌ ಪ್ರಕಾರ ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟವು...

ಎಬಿ-ಎಆರ್‍‌ಕೆ ಯೋಜನೆಯಲ್ಲಿ ಅಕ್ರಮ; ಜಿಮ್ಸ್‌ ಸಿಬ್ಬಂದಿ, ಖಾಸಗಿ ಆಸ್ಪತ್ರೆ ಶಾಮೀಲು, ರಾಜೀನಾಮೆ ನೀಡಿದ್ದ ವೈದ್ಯರ ಹೆಸರಿನಲ್ಲೂ ನಕಲಿ ಓಆರ್‍‌ಎಸ್‌ ಸೃಜನೆ; ತನಿಖಾ ವರದಿ

ಬೆಂಗಳೂರು; ಆಯುಷ್ಮಾನ್‌ ಭಾರತ್ ಮತ್ತು  ಎಆರ್‍‌ಕೆ ಯೋಜನೆಯಡಿಯಲ್ಲಿ  ಕಲ್ಬುರ್ಗಿ ಜಿಲ್ಲಾ  ಆಸ್ಪತ್ರೆಯಿಂದ...
Please Scan to make Your Contribution

Topics

ಕಲ್ಲು ಸಕ್ಕರೆ, ಖರ್ಜೂರ ಪ್ರಸಾದ; ದುಪ್ಪಟ್ಟು ದರದಲ್ಲಿ ಮಾರಾಟ, ಭಕ್ತರಿಗೆ ಅನಗತ್ಯ ಆರ್ಥಿಕ ಹೊರೆ, ನ್ಯಾಯಾಲಯ ಆದೇಶವೂ ಉಲ್ಲಂಘನೆ

ಬೆಂಗಳೂರು; ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಪ್ರಾಧಿಕಾರವು ನಿಗದಿತ ದರಕ್ಕಿಂತಲೂ ಹೆಚ್ಚುವರಿ ಅಂದರೇ...

ನ್ಯಾಕ್‌, ಎನ್‌ಐಆರ್‍‌ಎಫ್‌ ಮಾನದಂಡ; ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟ ಆತಂಕದ ಪ್ರವೃತ್ತಿ, ಆಯೋಗ ಕಳವಳ

ಬೆಂಗಳೂರು; ನ್ಯಾಕ್‌ ಮತ್ತು ಎನ್‌ಐಆರ್‍‌ಎಫ್‌ ಪ್ರಕಾರ ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟವು...

ಜಿಎಸ್‌ಡಿಪಿ 23,34,000 ಕೋಟಿ, ಉನ್ನತ ಶಿಕ್ಷಣಕ್ಕಾಗಿ ಕೇವಲ 5,646 ಕೋಟಿ ರು ಖರ್ಚು; ಇತರೆ ರಾಜ್ಯಗಳಿಗಿಂತ ಕೆಳಗಿಳಿದ ಕರ್ನಾಟಕ

ಬೆಂಗಳೂರು; ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿ ಆಗಿದ್ದ ಮೊದಲನೇ ಆರ್ಥಿಕ...

Related Articles

Popular Categories

error: Content is protected !!