Saturday | May 9, 2026 |

ಸಹಭಾಗಿ ; ‘ದಿ ಫೈಲ್‌’ ವರದಿಯನ್ನು ವಿಸ್ತರಿಸಿದ ಪ್ರಜಾವಾಣಿ

ಬೆಂಗಳೂರು; ಕೊರೊನಾ ವೈರಾಣು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಔಷಧ ಸಾಮಗ್ರಿ ಮತ್ತು ವೈದ್ಯಕೀಯ ಸಲಕರಣೆಗಳ ಖರೀದಿಯಲ್ಲಿ ಕರ್ನಾಟಕ ಡ್ರಗ್‌ ಲಾಜಿಸ್ಟಿಕ್‌ ಸಂಸ್ಥೆ ನಡೆಸಿದ್ದ ವಿವಿಧ ರೀತಿಯ ಅಕ್ರಮಗಳನ್ನು ಮೊತ್ತ ಮೊದಲ ಬಾರಿಗೆ ‘ದಿ ಫೈಲ್‌’ ಹೊರಗೆಡವಿದ್ದ ಸರಣಿ ವರದಿಗಳನ್ನೇ ಇದೀಗ ಪ್ರಜಾವಾಣಿ ಪತ್ರಿಕೆಯೂ ವಿಸ್ತರಿಸಿದೆ.

ಈ ಮೂಲಕ ಸಹಭಾಗಿ ಪತ್ರಿಕೋದ್ಯಮವನ್ನು ಮುಂದುವರೆಸಿದೆ. ಪ್ರಜಾವಾಣಿ ಇಂದು ಮುಖಪುಟದಲ್ಲಿ ಪ್ರಕಟಿಸಿರುವ ವರದಿಯಲ್ಲಿ ಪ್ರಸ್ತಾಪಿಸಿರುವ ಅಕ್ರಮಗಳನ್ನು ‘ದಿ ಫೈಲ್‌’ 2020ರ ಏಪ್ರಿಲ್‌ 21ರಿಂದಲೇ ದಾಖಲೆಗಳ ಸಮೇತ ಎಳೆಎಳೆಯಾಗಿ ಹೊರಗೆಡವುತ್ತಲೇ ಬಂದಿದೆ.

ನಮಗೆ ದೊರೆತಿದ್ದ ದಾಖಲೆಗಳನ್ನು ಪರಿಶೀಲಿಸಿದ್ದ ನಮ್ಮ ತನಿಖಾ ತಂಡ, ಉಪಕರಣಗಳ ತಯಾರಿಸಿದ್ದ ಕಂಪನಿಗಳ ನೈಜತೆ ಮತ್ತು ಉಪಕರಣಗಳನ್ನು ಪೂರೈಕೆ ಮಾಡಿದ್ದ ಸರಬರಾಜುದಾರರ ಹಿನ್ನೆಲೆ, ಸರ್ಕಾರಕ್ಕೆ ಆಗಿದ್ದ ನಷ್ಟದ ಕುರಿತಾದ ದಾಖಲೆಗಳನ್ನು ಕಲೆ ಹಾಕಿತ್ತಲ್ಲದೆ ಈ ಬಗ್ಗೆ ಸರಣಿ ವರದಿಗಳನ್ನು ಪ್ರಕಟಿಸಿತ್ತು.

ಪಿಪಿಇ ಕಿಟ್‌, ಸ್ಯಾನಿಟೈಸರ್‌, ಗ್ಲೂಕೋಸ್‌, ವೆಂಟಿಲೇಟರ್‌, ಡಯಾಲಿಸಿಸ್‌, ಮಾಸ್ಕ್‌, ಸಿರಿಂಜ್‌ ಸೇರಿದಂತೆ ಇನ್ನಿತರೆ ವೈದ್ಯಕೀಯ ಸಲಕರಣೆಗಳ ಖರೀದಿಯಲ್ಲಾಗಿರುವ ಅಕ್ರಮಗಳ ಕುರಿತು ಕರ್ನಾಟಕ ರಾಷ್ಟ್ರಸಮಿತಿ ಕೂಡ ದನಿ ಎತ್ತಿತ್ತು.

ಅಲ್ಲದೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ದಾಖಲಿಸಿದ್ದ ದೂರಿನಲ್ಲಿಯೂ ‘ದಿ ಫೈಲ್‌’ ಹೊರಗೆಡವಿದ್ದ ವರದಿಗಳನ್ನು ಉಲ್ಲೇಖಿಸಿತ್ತು. ಹಾಗೆಯೇ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಂಗಳಕ್ಕೆ ಕೊಂಡೊಯ್ದಿದ್ದ ಕರ್ನಾಟಕ ರಾಷ್ಟ್ರಸಮಿತಿ ಅಲ್ಲಿಯೂ ದೂರು ದಾಖಲಿಸಿದ್ದನ್ನು ಸ್ಮರಿಸಬಹುದು.

ಆರೋಗ್ಯ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಕೊರೊನಾ ವೈರಾಣು ಹರಡುವಿಕೆಯನ್ನು ತಡೆಗಟ್ಟುವ ಹೆಸರಿನಲ್ಲಿ ಕಮಿಷನ್‌ ದಂಧೆಗಿಳಿದಿದ್ದ ಆರೋಗ್ಯ, ವೈದ್ಯಕೀಯ ಶಿಕ್ಷಣ ಇಲಾಖೆಯ ಅಧಿಕಾರಿಗಳ ಮುಖವಾಡವನ್ನು ಕಳಚುವ ನಿಟ್ಟಿನಲ್ಲಿ ಸಹಭಾಗಿ ಪತ್ರಿಕೋದ್ಯಮವು ಹೆಚ್ಚು ಪರಿಣಾಮಕಾರಿ. ಇದನ್ನೇ ‘ದಿ ಫೈಲ್‌’ ಕೂಡ ನಂಬಿದೆಯಲ್ಲದೆ ಹೆಚ್ಚಿನ ವಿಶ್ವಾಸವೂ ಇರಿಸಿಕೊಂಡಿದೆ.

Hot this week

ಪಿಟಿಸಿಎಲ್, ಗೋಮಾಳ, ಅರಣ್ಯ ಜಮೀನು ಸ್ವರೂಪ ಮರೆಮಾಚಿ ಪರಿವರ್ತನೆ; ದಿ ಫೈಲ್ ವರದಿ ಬೆನ್ನಲ್ಲೇ ಸರ್ಕಾರದ ಮೆಟ್ಟಿಲೇರಿದ ಕೆಆರ್‍‌ಎಸ್‌

ಬೆಂಗಳೂರು; ಪಿಟಿಸಿಎಲ್,  ಸರ್ಕಾರಿ ಗೋಮಾಳ ಮತ್ತು ಅರಣ್ಯ ಪ್ರದೇಶದ ಜಮೀನುಗಳ ಸ್ವರೂಪವನ್ನೇ...

30 ವರ್ಷಗಳ ನಂತರ ಎಲ್‌ಎಸಿ ಪ್ರಕರಣ ದಾಖಲು; ಸರ್ಕಾರದ ಬೊಕ್ಕಸಕ್ಕೆ 80 ಕೋಟಿ ಆರ್ಥಿಕ ಹೊರೆ

ಬೆಂಗಳೂರು; ಮಂಡ್ಯ ತಾಲೂಕು ಕೊತ್ತತ್ತಿ ಹೋಬಳಿಯ ಗುತ್ತಲು ಗ್ರಾಮದಲ್ಲಿ 30 ವರ್ಷಗಳ...

ಶೌಚಾಲಯ, ಸ್ನಾನದ ಗೃಹ, ಮೂತ್ರಾಲಯ ಶುಲ್ಕ ವಸೂಲಿ; ಸುಲಭ್‌ ಇಂಟರ್ ನ್ಯಾಷನಲ್‌, ಬಿಬಿಎಂಪಿ ಖಾತೆಗೆ ಹಣ ಜಮೆ ಮಾಡಿದೆಯೇ, ನುಂಗಿದೆಯೇ?

ಬೆಂಗಳೂರು;  ಸುಲಭ್ ಶೌಚಾಲಯ ಮತ್ತು ಸಾರ್ವಜನಿಕ ಮೂತ್ರಾಲಯ  ನಿರ್ವಹಣೆಗೆ ಸಂಬಂಧಿಸಿದಂತೆ ಗುತ್ತಿಗೆದಾರರು...

ಬಿಜೆಪಿ ಅವಧಿಯಲ್ಲಿದ್ದ 120 ಎಕರೆ ಗೋಮಾಳ, ಕಾಂಗ್ರೆಸ್‌ ಅವಧಿಯಲ್ಲಿ ಕಣ್ಮರೆ!; 24 ಕೋಟಿ ಮೌಲ್ಯದ ಜಮೀನು, ಖಾಸಗಿ ವ್ಯಕ್ತಿಗಳ ಪಾಲು?

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ...
Please Scan to make Your Contribution

Topics

ಪಿಟಿಸಿಎಲ್, ಗೋಮಾಳ, ಅರಣ್ಯ ಜಮೀನು ಸ್ವರೂಪ ಮರೆಮಾಚಿ ಪರಿವರ್ತನೆ; ದಿ ಫೈಲ್ ವರದಿ ಬೆನ್ನಲ್ಲೇ ಸರ್ಕಾರದ ಮೆಟ್ಟಿಲೇರಿದ ಕೆಆರ್‍‌ಎಸ್‌

ಬೆಂಗಳೂರು; ಪಿಟಿಸಿಎಲ್,  ಸರ್ಕಾರಿ ಗೋಮಾಳ ಮತ್ತು ಅರಣ್ಯ ಪ್ರದೇಶದ ಜಮೀನುಗಳ ಸ್ವರೂಪವನ್ನೇ...

30 ವರ್ಷಗಳ ನಂತರ ಎಲ್‌ಎಸಿ ಪ್ರಕರಣ ದಾಖಲು; ಸರ್ಕಾರದ ಬೊಕ್ಕಸಕ್ಕೆ 80 ಕೋಟಿ ಆರ್ಥಿಕ ಹೊರೆ

ಬೆಂಗಳೂರು; ಮಂಡ್ಯ ತಾಲೂಕು ಕೊತ್ತತ್ತಿ ಹೋಬಳಿಯ ಗುತ್ತಲು ಗ್ರಾಮದಲ್ಲಿ 30 ವರ್ಷಗಳ...

ಶೌಚಾಲಯ, ಸ್ನಾನದ ಗೃಹ, ಮೂತ್ರಾಲಯ ಶುಲ್ಕ ವಸೂಲಿ; ಸುಲಭ್‌ ಇಂಟರ್ ನ್ಯಾಷನಲ್‌, ಬಿಬಿಎಂಪಿ ಖಾತೆಗೆ ಹಣ ಜಮೆ ಮಾಡಿದೆಯೇ, ನುಂಗಿದೆಯೇ?

ಬೆಂಗಳೂರು;  ಸುಲಭ್ ಶೌಚಾಲಯ ಮತ್ತು ಸಾರ್ವಜನಿಕ ಮೂತ್ರಾಲಯ  ನಿರ್ವಹಣೆಗೆ ಸಂಬಂಧಿಸಿದಂತೆ ಗುತ್ತಿಗೆದಾರರು...

ಬಿಜೆಪಿ ಅವಧಿಯಲ್ಲಿದ್ದ 120 ಎಕರೆ ಗೋಮಾಳ, ಕಾಂಗ್ರೆಸ್‌ ಅವಧಿಯಲ್ಲಿ ಕಣ್ಮರೆ!; 24 ಕೋಟಿ ಮೌಲ್ಯದ ಜಮೀನು, ಖಾಸಗಿ ವ್ಯಕ್ತಿಗಳ ಪಾಲು?

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ...

ಅನುದಾನ ಬಿಡುಗಡೆಯಾಗಿದ್ದರೂ ಪೂರ್ಣಗೊಳ್ಳದ ಕಾಮಗಾರಿ; ತನಿಖಾ ವರದಿಗೆ ಮೆತ್ತಿಕೊಂಡ ಧೂಳು, ಕ್ರಮಕೈಗೊಳ್ಳದ ಸಚಿವ

ಬೆಂಗಳೂರು; ತುಮಕೂರು ಜಿಲ್ಲೆಯ ಶಿರಾ ಪಟ್ಟಣದಲ್ಲಿರುವ ಕಸ್ತೂರಿ ರಂಗಪ್ಪ ನಾಯಕ ಕೋಟೆಯ...

Related Articles

Popular Categories

error: Content is protected !!