Friday | August 21, 2026 |

ಕೆಎಸ್‌ಆರ್‌ಪಿಯಲ್ಲಿ 1.25 ಕೋಟಿ ರು.ದುರುಪಯೋಗ; ವಿಶೇಷ ಲೆಕ್ಕ ಪರಿಶೋಧನೆಯಿಂದ ಸಾಬೀತು

ಬೆಂಗಳೂರು; ಕರ್ನಾಟಕ ರಾಜ್ಯ ಮೀಸಲು ಪೊಲೀಸ್‌ ಪೇದೆಗಳ ವೇತನ ಮತ್ತು ಭತ್ಯೆಗೆಂದು ಹಂಚಿಕೆಯಾಗಿದ್ದ ಕೋಟಿ ರು.ಅಧಿಕ ಮೊತ್ತ ದುರುಪಯೋಗ ಆಗಿರುವ ಪ್ರಕರಣ ಇದೀಗ ಹೊರಬಿದ್ದಿದೆ. ಕೆಎಸ್‌ಆರ್‌ಪಿಯ ಹಾಸನದ 11ನೇ ಪಡೆಯಲ್ಲಿ ಹಣ ದುರುಪಯೋಗವಾಗಿರುವುದನ್ನು ವಿಶೇಷ ಲೆಕ್ಕ ಪರಿಶೋಧನೆ ವರದಿ ದೃಢಪಡಿಸಿದೆ.

ಈ ವರದಿ ಆಧರಿಸಿ ಕೆಎಸ್‌ಆರ್‌ಪಿ ಎಡಿಜಿಪಿ ಕಚೇರಿಯ ಸಹಾಯಕ ಆಡಳಿತಾಧಿಕಾರಿ ಸುಮಾ ಜೆ ಆರ್‌ ಅವರು ಹಾಸನದ ಶಾಂತಿಗ್ರಾಮ ಪೊಲೀಸ್‌ ಠಾಣೆಯಲ್ಲಿ 2020ರ ಮೇ 21ರಂದು ದೂರು ದಾಖಲಿಸಿದ್ದಾರೆ. ಈ ದೂರಿನ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.
ಹಾಸನದ 11ನೇ ಪಡೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಮಾಡೆಂಟ್‌ ಕೃಷ್ಫಪ್ಪ, ನಿವೃತ್ತ ಸಹಾಯಕ ಆಡಳಿತಾಧಿಕಾರಿ ಮಾದೇಗೌಡ, ದ್ವಿತೀಯ ದರ್ಜೆ ಸಹಾಯಕ ವೈ ಕೆ ಯೋಗೇಶ, ಲತಾಮಣಿ, ವೈಎಚ್‌ ಮನು, ಸತ್ಯಪ್ರಕಾಶ್‌ ಅವರ ವಿರುದ್ಧ ಐಪಿಸಿ 403, 406,409, 465, 468 ಅನ್ವಯ ಮೊಕದ್ದಮೆ ದಾಖಲಾಗಿರುವುದು ತಿಳಿದು ಬಂದಿದೆ.

ಪ್ರಕರಣ ವಿವರ

ಕೆಎಸ್‌ಆರ್‌ಪಿಯ ಹಾಸನದ 11ನೇ ಘಟಕದ ವೇತನ ಶಾಖೆಯಲ್ಲಿ 2015ರ ಜನವರಿ 1ರಿಂದ 2016ರವರೆಗಿನ ಅವಧಿಯಲ್ಲಿ ಕಮಾಡೆಂಟ್‌, ವಿಷಯ ನಿರ್ವಾಹಕರು ಸೇರಿದಂತೆ ಆಡಳಿತ ಕಚೇರಿಯ ಸಿಬ್ಬಂದಿ 1.25 ಕೋಟಿ ರು. ಗಳನ್ನು ದುರುಪಯೋಗಪಡಿಸಿಕೊಂಡು ಮೋಸ ಮಾಡಿರುವ ಪ್ರಕರಣ ಇದಾಗಿದೆ.

ಈ ಹಣ ಕರ್ನಾಟಕ ರಾಜ್ಯ ಮೀಸಲು ಪಡೆಯ ಪೇದೆ ಮತ್ತು ಸಿಬ್ಬಂದಿಯ ವೇತನ ಹಾಗೂ ಭತ್ಯೆಗಳಿಗೆ ಸಂಬಂಧಿಸಿತ್ತು ಎಂಬ ವಿಚಾರ ಗೊತ್ತಾಗಿದೆ. ವೇತನ ಮತ್ತು ಭತ್ಯೆಗೆ ಸಂಬಂಧಿಸಿದಂತೆ ಸರ್ಕಾರದಿಂದ ಹಂಚಿಕೆಯಾಗಿದ್ದ ಅನುದಾನ ಬಳಕೆ ಕುರಿತು 2020ರ ಮಾರ್ಚ್‌ 2ರಿಂದ 31ರವರೆಗೆ ವಿಶೇಷ ಲೆಕ್ಕ ಪರಿಶೋಧನೆ ನಡೆಸಲಾಗಿತ್ತು.

ವೇತನ ಮತ್ತು ಭತ್ಯೆ ನಿಧಿಗೆ ಕನ್ನ ಹಾಕಿದ್ದ ಕಮಾಡೆಂಟ್‌ ಕೃಷ್ಣಪ್ಪ ಸೇರಿದಂತೆ ಇನ್ನಿತರೆ ಸಿಬ್ಬಂದಿ ಕೈ ಚಳಕ ವಿಶೇಷ ಲೆಕ್ಕಪರಿಶೋಧಕರ ತನಿಖೆಯಿಂದ ಬೆಳಕಿಗೆ ಬಂದಿತ್ತು. ಗಣಕ ಯಂತ್ರಗಳ ನಿರ್ವಾಹಕ (ಸಿಸ್ಟಂ ಅನಾಲಿಸ್ಟ್‌) ವೈ ಎಚ್‌ ಮನು ಎಂಬುವರ ಕೈ ಚಳಕವನ್ನೂ ವಿಶೇಷ ಲೆಕ್ಕಪರಿಶೋಧಕರು ಬಹಿರಂಗಗೊಳಿಸಿದ್ದಾರೆ.

Hot this week

ನೀಟ್‌ ಪರೀಕ್ಷೆಯಿಂದ ವಿನಾಯಿತಿ; ತಮಿಳುನಾಡು ಮಾದರಿಯಲ್ಲಿ ನಿರ್ಣಯ ಮಂಡಿಸಲು ರಾಜ್ಯ ಸಜ್ಜು, ಕಾನೂನುಬದ್ಧ ವಿನಾಯಿತಿಗೆ ಪ್ರಸ್ತಾವ

ಬೆಂಗಳೂರು; ಕರ್ನಾಟಕ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶ ವ್ಯವಸ್ಥೆಯು ರಾಜ್ಯದ ಶೈಕ್ಷಣಿಕ...

2 ಕಂಪನಿಗಳಿಂದ 400 ಕೋಟಿ ರು ವಹಿವಾಟು ಆರೋಪ; ಐಜಿಪಿ ಚಂದ್ರಶೇಖರ್ ಪ್ರಕರಣದಲ್ಲಿ ವರದಿ ನೀಡಲು ಸರ್ಕಾರದ ನಿರ್ದೇಶನ

ಬೆಂಗಳೂರು; ಸರ್ಕಾರದ ಪೂರ್ವಾನುಮತಿ ಪಡೆಯದೇ ಹಾಗೂ ಸರ್ಕಾರಕ್ಕೆ ವರದಿಯನ್ನು ಸಲ್ಲಿಸದೇ ಕುಟುಂಬ...

ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ; ಹಲವು ಟೆಂಡರ್‍‌ಗಳಿಗೆ ಬಿಡ್ಡರ್‍‌ಗಳೇ ಇಲ್ಲ, ಮರು ಟೆಂಡರ್‍ ಹಿಂದಿದೆಯೇ ಲಂಚಾವತಾರ?

ಬೆಂಗಳೂರು; ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ ಕಾಣಿಸಿಕೊಂಡಿದೆ....

30,01,169 ರೈತರಿಂದ 25,180.77 ಕೋಟಿ ಹೊರಬಾಕಿ; ರೈತರ ಸಾಲ ಮನ್ನಾ ಪ್ರಸ್ತಾವವಿಲ್ಲ, ರೈತರ ಕೆಂಗಣ್ಣಿಗೆ ಗುರಿಯಾಗಲಿದೆಯೇ ಸರ್ಕಾರ?

ಬೆಂಗಳೂರು; ಸಹಕಾರ ಸಂಸ್ಥೆಗಳ ಮೂಲಕ ರೈತರು ಪಡೆದಿರುವ ಕೃಷಿ ಸಾಲವನ್ನು ಮನ್ನಾ...
Please Scan to make Your Contribution

Topics

ನೀಟ್‌ ಪರೀಕ್ಷೆಯಿಂದ ವಿನಾಯಿತಿ; ತಮಿಳುನಾಡು ಮಾದರಿಯಲ್ಲಿ ನಿರ್ಣಯ ಮಂಡಿಸಲು ರಾಜ್ಯ ಸಜ್ಜು, ಕಾನೂನುಬದ್ಧ ವಿನಾಯಿತಿಗೆ ಪ್ರಸ್ತಾವ

ಬೆಂಗಳೂರು; ಕರ್ನಾಟಕ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶ ವ್ಯವಸ್ಥೆಯು ರಾಜ್ಯದ ಶೈಕ್ಷಣಿಕ...

2 ಕಂಪನಿಗಳಿಂದ 400 ಕೋಟಿ ರು ವಹಿವಾಟು ಆರೋಪ; ಐಜಿಪಿ ಚಂದ್ರಶೇಖರ್ ಪ್ರಕರಣದಲ್ಲಿ ವರದಿ ನೀಡಲು ಸರ್ಕಾರದ ನಿರ್ದೇಶನ

ಬೆಂಗಳೂರು; ಸರ್ಕಾರದ ಪೂರ್ವಾನುಮತಿ ಪಡೆಯದೇ ಹಾಗೂ ಸರ್ಕಾರಕ್ಕೆ ವರದಿಯನ್ನು ಸಲ್ಲಿಸದೇ ಕುಟುಂಬ...

ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ; ಹಲವು ಟೆಂಡರ್‍‌ಗಳಿಗೆ ಬಿಡ್ಡರ್‍‌ಗಳೇ ಇಲ್ಲ, ಮರು ಟೆಂಡರ್‍ ಹಿಂದಿದೆಯೇ ಲಂಚಾವತಾರ?

ಬೆಂಗಳೂರು; ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ ಕಾಣಿಸಿಕೊಂಡಿದೆ....

30,01,169 ರೈತರಿಂದ 25,180.77 ಕೋಟಿ ಹೊರಬಾಕಿ; ರೈತರ ಸಾಲ ಮನ್ನಾ ಪ್ರಸ್ತಾವವಿಲ್ಲ, ರೈತರ ಕೆಂಗಣ್ಣಿಗೆ ಗುರಿಯಾಗಲಿದೆಯೇ ಸರ್ಕಾರ?

ಬೆಂಗಳೂರು; ಸಹಕಾರ ಸಂಸ್ಥೆಗಳ ಮೂಲಕ ರೈತರು ಪಡೆದಿರುವ ಕೃಷಿ ಸಾಲವನ್ನು ಮನ್ನಾ...

ಇ-ಆಫೀಸ್‌ ತಂತ್ರಾಂಶದಲ್ಲೇ ಬೆಟ್ಟದಷ್ಟು ಬೆಳೆದು ನಿಂತ ಕಡತಗಳ ರಾಶಿ; ಗರಿಷ್ಠ 3,187, ಕನಿಷ್ಟ 32 ದಿನಗಳಾದರೂ ವಿಲೇವಾರಿಯಾಗಿಲ್ಲ, ಜಡ್ಡುಗಟ್ಟಿದೆಯೇ ಆಡಳಿತ?

ಬೆಂಗಳೂರು;   ಭೌತಿಕ ಕಡತಗಳ ವಿಲೇವಾರಿಯಲ್ಲಿ ಆಗುತ್ತಿದ್ದ ವಿಳಂಬವನ್ನು ತಪ್ಪಿಸುವ ಉದ್ದೇಶದಿಂದ ಇ-ಆಫೀಸ್‌...

Related Articles

Popular Categories

error: Content is protected !!