Saturday | May 23, 2026 |

ಮಂಡ್ಯ ಡಿಸಿಸಿ ಬ್ಯಾಂಕ್‌ನಲ್ಲಿ 8 ಕೋಟಿ ಅವ್ಯವಹಾರ; ತನಿಖೆಗೆ ಆದೇಶ

ಬೆಂಗಳೂರು; ಮಂಡ್ಯ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ 8 ಕೋಟಿ ರು. ಅಧಿಕ ಮೊತ್ತದ ಅವ್ಯವಹಾರಗಳ ಕುರಿತು ತನಿಖೆಗೆ ರಾಜ್ಯ ಸರ್ಕಾರ ಕಡೆಗೂ ಮುಂದಡಿಯಿಟ್ಟಿದೆ.
ಕೋರ್‌ ಬ್ಯಾಂಕಿಂಗ್‌ ಸಲ್ಯೂಷನ್ಸ್‌(ಸಿಬಿಎಸ್‌) ಅಳವಡಿಸುವ ಸಂಬಂಧ ಕರ್ನಾಟಕ ಪಾರದರ್ಶಕ ಕಾಯ್ದೆ ಕಾಯ್ದೆ ಮತ್ತು ಬ್ಯಾಂಕ್‌ ಆರ್‌ಪಿಎಫ್‌ ಕಾಯ್ದೆ ಉಲ್ಲಂಘನೆ ಆಗಿದೆ ಎಂದು ಮಂಡ್ಯ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ ನಿರ್ದೇಶಕ ಎಂ ಹೊನ್ನೆಗೌಡ ಅವರು ಸರ್ಕಾರಕ್ಕೆ 2020ರ ಏಪ್ರಿಲ್‌ 21 ಮತ್ತು 28ರಂದು ದೂರು ಸಲ್ಲಿಸಿದ್ದರು. ಈ ದೂರಿನ ಮೇರೆಗೆ ಸಹಕಾರ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನಾಗಾಂಬಿಕಾದೇವಿ ಅವರು ತನಿಖೆಗೆ ಆದೇಶಿಸಿದ್ದಾರೆ.
‘ದೂರರ್ಜಿಯಲ್ಲಿ ವಿವರಿಸಿರುವ ಆರೋಪಗಳಿಗೆ ಸಂಬಂಧಿಸಿದಂತೆ ತಕ್ಷಣವೇ ಒಂದು ತಂಡ ರಚಿಸಿ ವಿಚಾರಣೆ ನಡೆಸಬೇಕು,’ ಎಂದು ಸಹಕಾರ ಸಂಘಗಳ ನಿಬಂಧಕರಿಗೆ ಆದೇಶಿಸಿದ್ದಾರೆ. ಮಂಡ್ಯ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿರುವ ಅಕ್ರಮ ತನಿಖೆಗೆ ಸಹಕಾರ ಸಚಿವ ಎಸ್‌ ಟಿ ಸೋಮಶೇಖರ್‌ ಅವರು ಅನುಮೋದಿಸಿದ್ದಾರೆ.

‘ಮಂಡ್ಯ ತಾಲೂಕಿನ ಭಾರತಿನಗರ ಮತ್ತು ಚಿಕ್ಕರಸಿನಕೆರೆ ವೃತ್ತಗಳ ವ್ಯಾಪ್ತಿಯಲ್ಲಿ 8.00 ಕೋಟಿ ರು.ಗೂ ಅಧಿಕ ಮೊತ್ತ ಅವ್ಯವಹಾರವಾಗಿದೆ. ಬ್ಯಾಂಕ್‌ನ ವೃತ್ತ ಮೇಲ್ವಿಚಾರಕರಾಗಿ ಕಾರ್ಯನಿರ್ವಹಿಸುತ್ತಿದ್ದ ಎಂ ಮರಿಸ್ವಾಮಿ ಮತ್ತು ಪ್ಯಾಕ್ಸ್‌ ಆಡಳಿತ ಮಂಡಳಿಯೇ ಇದಕ್ಕೆ ಕಾರಣ,’ ಎಂದು ಹೊನ್ನೆಗೌಡ ಅವರು ದೂರಿನಲ್ಲಿ ವಿವರಿಸಿದ್ದರು ಎಂದು ತಿಳಿದು ಬಂದಿದೆ.
ಕೋರ್‌ ಬ್ಯಾಂಕಿಂಗ್‌ ಸಲ್ಯೂಷನ್ಸ್‌ ಅಳವಡಿಸಲು ಒಟ್ಟು 965.00 ಲಕ್ಷ ರು. ವೆಚ್ಚವಾಗಲಿದೆ ಎಂದು ಬ್ಯಾಂಕ್‌ನ ಆಡಳಿತ ಮಂಡಳಿ ಅಂದಾಜಿಸಿತ್ತು. ಆದರೆ ಬ್ಯಾಂಕ್‌ ಅಧಿಕಾರಿಗಳು ಆರ್‌ಪಿಎಫ್‌ ಮತ್ತು ಕರ್ನಾಟಕ ಪಾರದರ್ಶಕ ಕಾಯ್ದೆ ಉಲ್ಲಂಘಿಸಿ ಎನ್‌ಐಆರ್‌ಬಿ ಜತೆ ಶಾಮೀಲಾಗಿ ಯುಎಸ್‌ಟಿ ಇಂಟರ್‌ನ್ಯಾಷನಲ್‌ ಪ್ರೈವೈಟ್‌ ಲಿಮಿಟೆಡ್‌ಗೆ 5 ವರ್ಷಗಳ ಅವಧಿಗೆ ಕಾರ್ಯಾದೇಶ ನೀಡಿದ್ದರು.
ಅಲ್ಲದೆ ಬ್ಯಾಂಕ್‌ನಲ್ಲಿ ಭದ್ರತಾ ವ್ಯವಸ್ಥೆಗಾಗಿ ವಾರ್ಷಿಕ 200.00 ಲಕ್ಷ ರು. ವೆಚ್ಚವಾಗುತ್ತಿದೆ. ಕಳೆದ 8 ರಿಂದ 10 ವರ್ಷಗಳವರೆಗೆ ಕೆಟಿಪಿಪಿ ಕಾಯ್ದೆ ಪ್ರಕಾರ ಟೆಂಡರ್‌ ಕರೆಯದೇ ಒಂದೇ ಏಜೆನ್ಸಿಯವರಿಗೆ ಗುತ್ತಿಗೆ ನೀಡಲಾಗುತ್ತಿದೆ ಎಂದು ಹೊನ್ನೆಗೌಡ ಅವರು ನೀಡಿದ್ದ ದೂರಿನಿಂದ ಗೊತ್ತಾಗಿದೆ.
ಅದೇ ರೀತಿ ಬ್ಯಾಂಕ್‌ನಲ್ಲಿ ಕೈಗೊಳ್ಳುತ್ತಿರುವ ಕಾಮಗಾರಿ ಕೆಲಸಗಳಿಗೆ ಹಾಗೂ ಅಗತ್ಯವಿರುವ ಪೀಠೋಪಕರಣ ಖರೀದಿ, ಲೇಖನಾ ಸಾಮಗ್ರಿ ಖರೀದಿ ಪ್ರಕ್ರಿಯೆಯಲ್ಲಿ ಯಾವ ನಿಯಮಗಳನ್ನೂ ಪಾಲಿಸದೇ ಬ್ಯಾಂಕ್‌ಗೆ ಅಪಾರ ಪ್ರಮಾಣದಲ್ಲಿ ನಷ್ಟವುಂಟಾಗಿದೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

Hot this week

ಐಎಎಸ್‌ ವೃಂದದಲ್ಲಿ ಅನರ್ಹ 7 ಅಧಿಕಾರಿಗಳು ಮುಂದುವರಿಕೆ; ಬಂಡೆದ್ದ 25 ಕೆಎಎಸ್‌ ಅಧಿಕಾರಿಗಳು, ಅಖಾಡಕ್ಕಿಳಿದ ಡಿ ಕೆ ಶಿವಕುಮಾರ್

ಬೆಂಗಳೂರು;  ಕನಿಷ್ಟ 8 ವರ್ಷಗಳ ನಿಯಮಿತವಾಗಿ ಸೇವೆ ಸಲ್ಲಿಸಿರುವ  ಕೆಎಎಸ್‌ ಅಧಿಕಾರಿಗಳಿಗೆ...

‘ನಾನು ಹೇಳೋವರೆಗೂ ಕೂಡಂಗಿಲ್ಲ, ಗೆಟ್‌ ಔಟ್‌, ಗೆಟ್‌ ಔಟ್’; ಮಂಡಳಿ ಕಾರ್ಯದರ್ಶಿಯಿಂದಲೇ ಪ್ರಾಜೆಕ್ಟ್ ಇಂಜಿನಿಯರ್ ಸಮೀರ್ ಗೆ ಅವಮಾನ?

ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧ್ಯಕ್ಷರಾಗಿರುವ  ಕರ್ನಾಟಕ ರಾಜ್ಯ ವಿಜ್ಞಾನ ಮತ್ತು...

52 ಕ್ರಿಮಿನಲ್ ಪ್ರಕರಣಗಳ ಹಿಂತೆಗೆತಕ್ಕೆ ಮತ್ತೆ ಚಾಲನೆ; ಡಿಜಿಐಜಿಪಿ, ಕಾನೂನು ಇಲಾಖೆ ಅಸಮ್ಮತಿ ನಡುವೆಯೂ ಪ್ರಸ್ತಾವ

ಬೆಂಗಳೂರು; ರಾಜ್ಯದ ವಿವಿಧ ಪೊಲೀಸ್‌ ಠಾಣೆಗಳಲ್ಲಿ  ಜನಪ್ರತಿನಿಧಿಗಳ ವಿರುದ್ಧ  ದಾಖಲಾಗಿರುವ ಮತ್ತು...
Please Scan to make Your Contribution

Topics

ಐಎಎಸ್‌ ವೃಂದದಲ್ಲಿ ಅನರ್ಹ 7 ಅಧಿಕಾರಿಗಳು ಮುಂದುವರಿಕೆ; ಬಂಡೆದ್ದ 25 ಕೆಎಎಸ್‌ ಅಧಿಕಾರಿಗಳು, ಅಖಾಡಕ್ಕಿಳಿದ ಡಿ ಕೆ ಶಿವಕುಮಾರ್

ಬೆಂಗಳೂರು;  ಕನಿಷ್ಟ 8 ವರ್ಷಗಳ ನಿಯಮಿತವಾಗಿ ಸೇವೆ ಸಲ್ಲಿಸಿರುವ  ಕೆಎಎಸ್‌ ಅಧಿಕಾರಿಗಳಿಗೆ...

‘ನಾನು ಹೇಳೋವರೆಗೂ ಕೂಡಂಗಿಲ್ಲ, ಗೆಟ್‌ ಔಟ್‌, ಗೆಟ್‌ ಔಟ್’; ಮಂಡಳಿ ಕಾರ್ಯದರ್ಶಿಯಿಂದಲೇ ಪ್ರಾಜೆಕ್ಟ್ ಇಂಜಿನಿಯರ್ ಸಮೀರ್ ಗೆ ಅವಮಾನ?

ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧ್ಯಕ್ಷರಾಗಿರುವ  ಕರ್ನಾಟಕ ರಾಜ್ಯ ವಿಜ್ಞಾನ ಮತ್ತು...

52 ಕ್ರಿಮಿನಲ್ ಪ್ರಕರಣಗಳ ಹಿಂತೆಗೆತಕ್ಕೆ ಮತ್ತೆ ಚಾಲನೆ; ಡಿಜಿಐಜಿಪಿ, ಕಾನೂನು ಇಲಾಖೆ ಅಸಮ್ಮತಿ ನಡುವೆಯೂ ಪ್ರಸ್ತಾವ

ಬೆಂಗಳೂರು; ರಾಜ್ಯದ ವಿವಿಧ ಪೊಲೀಸ್‌ ಠಾಣೆಗಳಲ್ಲಿ  ಜನಪ್ರತಿನಿಧಿಗಳ ವಿರುದ್ಧ  ದಾಖಲಾಗಿರುವ ಮತ್ತು...

ಸ್ವಚ್ಛ ನಗರಿಯ ಕಸದ ಕರಾಳತೆ; ಪರೀಕ್ಷೆಯಿಲ್ಲದೇ ವಿಷಕಾರಿ ತ್ಯಾಜ್ಯ ನಿರ್ವಹಣೆ, ಸಿಎಂ ತವರಿನಲ್ಲೇ ಅವೈಜ್ಞಾನಿಕ ವಿಲೇವಾರಿ?

ಬೆಂಗಳೂರು;  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ  ಮೈಸೂರು ಮಹಾನಗರಪಾಲಿಕೆ ವ್ಯಾಪ್ತಿಯ ...

Related Articles

Popular Categories

error: Content is protected !!