Wednesday | July 22, 2026 |

ಮಂಡ್ಯ ಡಿಸಿಸಿ ಬ್ಯಾಂಕ್‌ನಲ್ಲಿ 8 ಕೋಟಿ ಅವ್ಯವಹಾರ; ತನಿಖೆಗೆ ಆದೇಶ

ಬೆಂಗಳೂರು; ಮಂಡ್ಯ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ 8 ಕೋಟಿ ರು. ಅಧಿಕ ಮೊತ್ತದ ಅವ್ಯವಹಾರಗಳ ಕುರಿತು ತನಿಖೆಗೆ ರಾಜ್ಯ ಸರ್ಕಾರ ಕಡೆಗೂ ಮುಂದಡಿಯಿಟ್ಟಿದೆ.
ಕೋರ್‌ ಬ್ಯಾಂಕಿಂಗ್‌ ಸಲ್ಯೂಷನ್ಸ್‌(ಸಿಬಿಎಸ್‌) ಅಳವಡಿಸುವ ಸಂಬಂಧ ಕರ್ನಾಟಕ ಪಾರದರ್ಶಕ ಕಾಯ್ದೆ ಕಾಯ್ದೆ ಮತ್ತು ಬ್ಯಾಂಕ್‌ ಆರ್‌ಪಿಎಫ್‌ ಕಾಯ್ದೆ ಉಲ್ಲಂಘನೆ ಆಗಿದೆ ಎಂದು ಮಂಡ್ಯ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ ನಿರ್ದೇಶಕ ಎಂ ಹೊನ್ನೆಗೌಡ ಅವರು ಸರ್ಕಾರಕ್ಕೆ 2020ರ ಏಪ್ರಿಲ್‌ 21 ಮತ್ತು 28ರಂದು ದೂರು ಸಲ್ಲಿಸಿದ್ದರು. ಈ ದೂರಿನ ಮೇರೆಗೆ ಸಹಕಾರ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನಾಗಾಂಬಿಕಾದೇವಿ ಅವರು ತನಿಖೆಗೆ ಆದೇಶಿಸಿದ್ದಾರೆ.
‘ದೂರರ್ಜಿಯಲ್ಲಿ ವಿವರಿಸಿರುವ ಆರೋಪಗಳಿಗೆ ಸಂಬಂಧಿಸಿದಂತೆ ತಕ್ಷಣವೇ ಒಂದು ತಂಡ ರಚಿಸಿ ವಿಚಾರಣೆ ನಡೆಸಬೇಕು,’ ಎಂದು ಸಹಕಾರ ಸಂಘಗಳ ನಿಬಂಧಕರಿಗೆ ಆದೇಶಿಸಿದ್ದಾರೆ. ಮಂಡ್ಯ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿರುವ ಅಕ್ರಮ ತನಿಖೆಗೆ ಸಹಕಾರ ಸಚಿವ ಎಸ್‌ ಟಿ ಸೋಮಶೇಖರ್‌ ಅವರು ಅನುಮೋದಿಸಿದ್ದಾರೆ.

‘ಮಂಡ್ಯ ತಾಲೂಕಿನ ಭಾರತಿನಗರ ಮತ್ತು ಚಿಕ್ಕರಸಿನಕೆರೆ ವೃತ್ತಗಳ ವ್ಯಾಪ್ತಿಯಲ್ಲಿ 8.00 ಕೋಟಿ ರು.ಗೂ ಅಧಿಕ ಮೊತ್ತ ಅವ್ಯವಹಾರವಾಗಿದೆ. ಬ್ಯಾಂಕ್‌ನ ವೃತ್ತ ಮೇಲ್ವಿಚಾರಕರಾಗಿ ಕಾರ್ಯನಿರ್ವಹಿಸುತ್ತಿದ್ದ ಎಂ ಮರಿಸ್ವಾಮಿ ಮತ್ತು ಪ್ಯಾಕ್ಸ್‌ ಆಡಳಿತ ಮಂಡಳಿಯೇ ಇದಕ್ಕೆ ಕಾರಣ,’ ಎಂದು ಹೊನ್ನೆಗೌಡ ಅವರು ದೂರಿನಲ್ಲಿ ವಿವರಿಸಿದ್ದರು ಎಂದು ತಿಳಿದು ಬಂದಿದೆ.
ಕೋರ್‌ ಬ್ಯಾಂಕಿಂಗ್‌ ಸಲ್ಯೂಷನ್ಸ್‌ ಅಳವಡಿಸಲು ಒಟ್ಟು 965.00 ಲಕ್ಷ ರು. ವೆಚ್ಚವಾಗಲಿದೆ ಎಂದು ಬ್ಯಾಂಕ್‌ನ ಆಡಳಿತ ಮಂಡಳಿ ಅಂದಾಜಿಸಿತ್ತು. ಆದರೆ ಬ್ಯಾಂಕ್‌ ಅಧಿಕಾರಿಗಳು ಆರ್‌ಪಿಎಫ್‌ ಮತ್ತು ಕರ್ನಾಟಕ ಪಾರದರ್ಶಕ ಕಾಯ್ದೆ ಉಲ್ಲಂಘಿಸಿ ಎನ್‌ಐಆರ್‌ಬಿ ಜತೆ ಶಾಮೀಲಾಗಿ ಯುಎಸ್‌ಟಿ ಇಂಟರ್‌ನ್ಯಾಷನಲ್‌ ಪ್ರೈವೈಟ್‌ ಲಿಮಿಟೆಡ್‌ಗೆ 5 ವರ್ಷಗಳ ಅವಧಿಗೆ ಕಾರ್ಯಾದೇಶ ನೀಡಿದ್ದರು.
ಅಲ್ಲದೆ ಬ್ಯಾಂಕ್‌ನಲ್ಲಿ ಭದ್ರತಾ ವ್ಯವಸ್ಥೆಗಾಗಿ ವಾರ್ಷಿಕ 200.00 ಲಕ್ಷ ರು. ವೆಚ್ಚವಾಗುತ್ತಿದೆ. ಕಳೆದ 8 ರಿಂದ 10 ವರ್ಷಗಳವರೆಗೆ ಕೆಟಿಪಿಪಿ ಕಾಯ್ದೆ ಪ್ರಕಾರ ಟೆಂಡರ್‌ ಕರೆಯದೇ ಒಂದೇ ಏಜೆನ್ಸಿಯವರಿಗೆ ಗುತ್ತಿಗೆ ನೀಡಲಾಗುತ್ತಿದೆ ಎಂದು ಹೊನ್ನೆಗೌಡ ಅವರು ನೀಡಿದ್ದ ದೂರಿನಿಂದ ಗೊತ್ತಾಗಿದೆ.
ಅದೇ ರೀತಿ ಬ್ಯಾಂಕ್‌ನಲ್ಲಿ ಕೈಗೊಳ್ಳುತ್ತಿರುವ ಕಾಮಗಾರಿ ಕೆಲಸಗಳಿಗೆ ಹಾಗೂ ಅಗತ್ಯವಿರುವ ಪೀಠೋಪಕರಣ ಖರೀದಿ, ಲೇಖನಾ ಸಾಮಗ್ರಿ ಖರೀದಿ ಪ್ರಕ್ರಿಯೆಯಲ್ಲಿ ಯಾವ ನಿಯಮಗಳನ್ನೂ ಪಾಲಿಸದೇ ಬ್ಯಾಂಕ್‌ಗೆ ಅಪಾರ ಪ್ರಮಾಣದಲ್ಲಿ ನಷ್ಟವುಂಟಾಗಿದೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

Hot this week

ರೈಲ್ವೇ ಯೋಜನೆಗಳಿಗೆ ಗ್ರಹಣ; 7,748 ಕೋಟಿ ರು ಅನುದಾನವಿದ್ದರೂ ಬಿರುಸುಗೊಳ್ಳದ ಭೂಸ್ವಾಧೀನ ಪ್ರಕ್ರಿಯೆ, ರಾಜ್ಯದತ್ತಲೇ ಬೊಟ್ಟು ಮಾಡಿದ ಕೇಂದ್ರ ಸರ್ಕಾರ

ಬೆಂಗಳೂರು; ಕರ್ನಾಟಕದಲ್ಲಿ  ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಗೆ ಕೇಂದ್ರ ಸರ್ಕಾರವು  2026-27ನೇ ಸಾಲಿನಲ್ಲಿ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸೇರದ ಭದ್ರಾ ಮೇಲ್ದಂಡೆ ಯೋಜನೆ; ಸಹಾಯಧನ ಬಿಡುಗಡೆ ವಿಳಂಬಕ್ಕೆ ನೆಪವೊಡ್ಡಿದ ಕೇಂದ್ರ

ಬೆಂಗಳೂರು; ರಾಜ್ಯದ ಮಹತ್ವಾಕಾಂಕ್ಷೆ ನೀರಾವರಿ ಯೋಜನೆ ಭದ್ರಾ ಮೇಲ್ದಂಡೆ ಯೋಜನೆಯ ಅಂದಾಜು...

ಶೌಚಗುಂಡಿಗಳಲ್ಲಿ ಸ್ವಚ್ಛತೆ; 5 ವರ್ಷದಲ್ಲಿ ದೇಶದಾದ್ಯಂತ 332 ಮಂದಿ ಸಾವು, ಕರ್ನಾಟಕದೊಂದಿಗೆ ತಾಳೆಯಾಗದ ಮರಣದ ಅಂಕಿಅಂಶ

ಬೆಂಗಳೂರು; ರಾಜ್ಯದಲ್ಲಿ ಶೌಚ ಗುಂಡಿಗಳು ಮತ್ತು ಒಳಚರಂಡಿಗಳಲ್ಲಿ  ಅಪಾಯಕಾರಿ ಪರಿಸ್ಥಿತಿಯಲ್ಲಿ 2024ನೇ...
Please Scan to make Your Contribution

Topics

ರೈಲ್ವೇ ಯೋಜನೆಗಳಿಗೆ ಗ್ರಹಣ; 7,748 ಕೋಟಿ ರು ಅನುದಾನವಿದ್ದರೂ ಬಿರುಸುಗೊಳ್ಳದ ಭೂಸ್ವಾಧೀನ ಪ್ರಕ್ರಿಯೆ, ರಾಜ್ಯದತ್ತಲೇ ಬೊಟ್ಟು ಮಾಡಿದ ಕೇಂದ್ರ ಸರ್ಕಾರ

ಬೆಂಗಳೂರು; ಕರ್ನಾಟಕದಲ್ಲಿ  ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಗೆ ಕೇಂದ್ರ ಸರ್ಕಾರವು  2026-27ನೇ ಸಾಲಿನಲ್ಲಿ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸೇರದ ಭದ್ರಾ ಮೇಲ್ದಂಡೆ ಯೋಜನೆ; ಸಹಾಯಧನ ಬಿಡುಗಡೆ ವಿಳಂಬಕ್ಕೆ ನೆಪವೊಡ್ಡಿದ ಕೇಂದ್ರ

ಬೆಂಗಳೂರು; ರಾಜ್ಯದ ಮಹತ್ವಾಕಾಂಕ್ಷೆ ನೀರಾವರಿ ಯೋಜನೆ ಭದ್ರಾ ಮೇಲ್ದಂಡೆ ಯೋಜನೆಯ ಅಂದಾಜು...

ಶೌಚಗುಂಡಿಗಳಲ್ಲಿ ಸ್ವಚ್ಛತೆ; 5 ವರ್ಷದಲ್ಲಿ ದೇಶದಾದ್ಯಂತ 332 ಮಂದಿ ಸಾವು, ಕರ್ನಾಟಕದೊಂದಿಗೆ ತಾಳೆಯಾಗದ ಮರಣದ ಅಂಕಿಅಂಶ

ಬೆಂಗಳೂರು; ರಾಜ್ಯದಲ್ಲಿ ಶೌಚ ಗುಂಡಿಗಳು ಮತ್ತು ಒಳಚರಂಡಿಗಳಲ್ಲಿ  ಅಪಾಯಕಾರಿ ಪರಿಸ್ಥಿತಿಯಲ್ಲಿ 2024ನೇ...

ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿ; ಡಿಪಿಆರ್, ಟೆಂಡರ್ ಪ್ರಕ್ರಿಯೆಯಲ್ಲಿ ಲೋಪ ದೋಷ, 130 ಕೋಟಿ ರು ಹೆಚ್ಚುವರಿ

ಬೆಂಗಳೂರು; ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿಗೆ ನಡೆಸಲು ಕರೆದಿದ್ದ...

ಆದಾಯಕ್ಕಿಂತ ಹೆಚ್ಚಿನ ಅಕ್ರಮ ಸಂಪತ್ತು ಗಳಿಕೆ ; ಡಾ ಬೂವನಹಳ್ಳಿ ನಾಗರಾಜ್ ವಿರುದ್ಧದ ಪ್ರಕರಣದಲ್ಲಿ ಬಿ ರಿಪೋರ್ಟ್‌ ಅಂಗೀಕರಿಸಿದ ನ್ಯಾಯಾಲಯ

ಬೆಂಗಳೂರು; ತುಮಕೂರು ಜಿಲ್ಲಾ ಪಂಚಾಯ್ತಿಯಲ್ಲಿ ಕುಂದುಕೊರತೆ ನಿವಾರಣೆ ಪ್ರಾಧಿಕಾರಿಯಾಗಿದ್ದ ಡಾ ಬೂವನಹಳ್ಳಿ...

Related Articles

Popular Categories

error: Content is protected !!