Friday | June 12, 2026 |

ಮಂಡ್ಯ ಡಿಸಿಸಿ ಬ್ಯಾಂಕ್‌ನಲ್ಲಿ 8 ಕೋಟಿ ಅವ್ಯವಹಾರ; ತನಿಖೆಗೆ ಆದೇಶ

ಬೆಂಗಳೂರು; ಮಂಡ್ಯ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ 8 ಕೋಟಿ ರು. ಅಧಿಕ ಮೊತ್ತದ ಅವ್ಯವಹಾರಗಳ ಕುರಿತು ತನಿಖೆಗೆ ರಾಜ್ಯ ಸರ್ಕಾರ ಕಡೆಗೂ ಮುಂದಡಿಯಿಟ್ಟಿದೆ.
ಕೋರ್‌ ಬ್ಯಾಂಕಿಂಗ್‌ ಸಲ್ಯೂಷನ್ಸ್‌(ಸಿಬಿಎಸ್‌) ಅಳವಡಿಸುವ ಸಂಬಂಧ ಕರ್ನಾಟಕ ಪಾರದರ್ಶಕ ಕಾಯ್ದೆ ಕಾಯ್ದೆ ಮತ್ತು ಬ್ಯಾಂಕ್‌ ಆರ್‌ಪಿಎಫ್‌ ಕಾಯ್ದೆ ಉಲ್ಲಂಘನೆ ಆಗಿದೆ ಎಂದು ಮಂಡ್ಯ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ ನಿರ್ದೇಶಕ ಎಂ ಹೊನ್ನೆಗೌಡ ಅವರು ಸರ್ಕಾರಕ್ಕೆ 2020ರ ಏಪ್ರಿಲ್‌ 21 ಮತ್ತು 28ರಂದು ದೂರು ಸಲ್ಲಿಸಿದ್ದರು. ಈ ದೂರಿನ ಮೇರೆಗೆ ಸಹಕಾರ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನಾಗಾಂಬಿಕಾದೇವಿ ಅವರು ತನಿಖೆಗೆ ಆದೇಶಿಸಿದ್ದಾರೆ.
‘ದೂರರ್ಜಿಯಲ್ಲಿ ವಿವರಿಸಿರುವ ಆರೋಪಗಳಿಗೆ ಸಂಬಂಧಿಸಿದಂತೆ ತಕ್ಷಣವೇ ಒಂದು ತಂಡ ರಚಿಸಿ ವಿಚಾರಣೆ ನಡೆಸಬೇಕು,’ ಎಂದು ಸಹಕಾರ ಸಂಘಗಳ ನಿಬಂಧಕರಿಗೆ ಆದೇಶಿಸಿದ್ದಾರೆ. ಮಂಡ್ಯ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿರುವ ಅಕ್ರಮ ತನಿಖೆಗೆ ಸಹಕಾರ ಸಚಿವ ಎಸ್‌ ಟಿ ಸೋಮಶೇಖರ್‌ ಅವರು ಅನುಮೋದಿಸಿದ್ದಾರೆ.

‘ಮಂಡ್ಯ ತಾಲೂಕಿನ ಭಾರತಿನಗರ ಮತ್ತು ಚಿಕ್ಕರಸಿನಕೆರೆ ವೃತ್ತಗಳ ವ್ಯಾಪ್ತಿಯಲ್ಲಿ 8.00 ಕೋಟಿ ರು.ಗೂ ಅಧಿಕ ಮೊತ್ತ ಅವ್ಯವಹಾರವಾಗಿದೆ. ಬ್ಯಾಂಕ್‌ನ ವೃತ್ತ ಮೇಲ್ವಿಚಾರಕರಾಗಿ ಕಾರ್ಯನಿರ್ವಹಿಸುತ್ತಿದ್ದ ಎಂ ಮರಿಸ್ವಾಮಿ ಮತ್ತು ಪ್ಯಾಕ್ಸ್‌ ಆಡಳಿತ ಮಂಡಳಿಯೇ ಇದಕ್ಕೆ ಕಾರಣ,’ ಎಂದು ಹೊನ್ನೆಗೌಡ ಅವರು ದೂರಿನಲ್ಲಿ ವಿವರಿಸಿದ್ದರು ಎಂದು ತಿಳಿದು ಬಂದಿದೆ.
ಕೋರ್‌ ಬ್ಯಾಂಕಿಂಗ್‌ ಸಲ್ಯೂಷನ್ಸ್‌ ಅಳವಡಿಸಲು ಒಟ್ಟು 965.00 ಲಕ್ಷ ರು. ವೆಚ್ಚವಾಗಲಿದೆ ಎಂದು ಬ್ಯಾಂಕ್‌ನ ಆಡಳಿತ ಮಂಡಳಿ ಅಂದಾಜಿಸಿತ್ತು. ಆದರೆ ಬ್ಯಾಂಕ್‌ ಅಧಿಕಾರಿಗಳು ಆರ್‌ಪಿಎಫ್‌ ಮತ್ತು ಕರ್ನಾಟಕ ಪಾರದರ್ಶಕ ಕಾಯ್ದೆ ಉಲ್ಲಂಘಿಸಿ ಎನ್‌ಐಆರ್‌ಬಿ ಜತೆ ಶಾಮೀಲಾಗಿ ಯುಎಸ್‌ಟಿ ಇಂಟರ್‌ನ್ಯಾಷನಲ್‌ ಪ್ರೈವೈಟ್‌ ಲಿಮಿಟೆಡ್‌ಗೆ 5 ವರ್ಷಗಳ ಅವಧಿಗೆ ಕಾರ್ಯಾದೇಶ ನೀಡಿದ್ದರು.
ಅಲ್ಲದೆ ಬ್ಯಾಂಕ್‌ನಲ್ಲಿ ಭದ್ರತಾ ವ್ಯವಸ್ಥೆಗಾಗಿ ವಾರ್ಷಿಕ 200.00 ಲಕ್ಷ ರು. ವೆಚ್ಚವಾಗುತ್ತಿದೆ. ಕಳೆದ 8 ರಿಂದ 10 ವರ್ಷಗಳವರೆಗೆ ಕೆಟಿಪಿಪಿ ಕಾಯ್ದೆ ಪ್ರಕಾರ ಟೆಂಡರ್‌ ಕರೆಯದೇ ಒಂದೇ ಏಜೆನ್ಸಿಯವರಿಗೆ ಗುತ್ತಿಗೆ ನೀಡಲಾಗುತ್ತಿದೆ ಎಂದು ಹೊನ್ನೆಗೌಡ ಅವರು ನೀಡಿದ್ದ ದೂರಿನಿಂದ ಗೊತ್ತಾಗಿದೆ.
ಅದೇ ರೀತಿ ಬ್ಯಾಂಕ್‌ನಲ್ಲಿ ಕೈಗೊಳ್ಳುತ್ತಿರುವ ಕಾಮಗಾರಿ ಕೆಲಸಗಳಿಗೆ ಹಾಗೂ ಅಗತ್ಯವಿರುವ ಪೀಠೋಪಕರಣ ಖರೀದಿ, ಲೇಖನಾ ಸಾಮಗ್ರಿ ಖರೀದಿ ಪ್ರಕ್ರಿಯೆಯಲ್ಲಿ ಯಾವ ನಿಯಮಗಳನ್ನೂ ಪಾಲಿಸದೇ ಬ್ಯಾಂಕ್‌ಗೆ ಅಪಾರ ಪ್ರಮಾಣದಲ್ಲಿ ನಷ್ಟವುಂಟಾಗಿದೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

Hot this week

ಆರ್ಥಿಕ ಬಿಕ್ಕಟ್ಟು; ಶಿಕ್ಷಕರ ನೇಮಕಾತಿ, ವೃತ್ತಿಪರತೆ ಅಭಿವೃದ್ಧಿ ವೆಚ್ಚಕ್ಕೆ ತಡೆಹಿಡಿದಿತ್ತೇ ಸರ್ಕಾರ?

ಬೆಂಗಳೂರು; ರಾಜ್ಯದ ಹೆಚ್ಚಿನ ಸರ್ಕಾರಿ ಶಾಲೆಗಳು ಆರ್‍‌ಟಿಇ ಕಾಯ್ದೆಯು ಭೌತಿಕ ಮೂಲಸೌಕರ್ಯಗಳು...

ತ್ಯಾಜ್ಯ ವಿಲೇವಾರಿ ಟೆಂಡರ್ ಪ್ರಕ್ರಿಯೆಗಳಲ್ಲಿ ಅಕ್ರಮ ಆರೋಪ; ಮಧ್ಯಪ್ರವೇಶಕ್ಕೆ ಲೋಕಭವನ ಕದ ತಟ್ಟಿದ ಬಿಜೆಪಿ, ಸ್ವತಂತ್ರ ತನಿಖೆಗೆ ಮುಂದಾಗುವರೇ?

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸಮಗ್ರ ಘನ ತ್ಯಾಜ್ಯ ನಿರ್ವಹಣಾ...
Please Scan to make Your Contribution

Topics

ಆರ್ಥಿಕ ಬಿಕ್ಕಟ್ಟು; ಶಿಕ್ಷಕರ ನೇಮಕಾತಿ, ವೃತ್ತಿಪರತೆ ಅಭಿವೃದ್ಧಿ ವೆಚ್ಚಕ್ಕೆ ತಡೆಹಿಡಿದಿತ್ತೇ ಸರ್ಕಾರ?

ಬೆಂಗಳೂರು; ರಾಜ್ಯದ ಹೆಚ್ಚಿನ ಸರ್ಕಾರಿ ಶಾಲೆಗಳು ಆರ್‍‌ಟಿಇ ಕಾಯ್ದೆಯು ಭೌತಿಕ ಮೂಲಸೌಕರ್ಯಗಳು...

ಕಸ ವಿಲೇವಾರಿ ಟೆಂಡರ್‍‌ನಲ್ಲಿ ಅಕ್ರಮ; 10,000 ಕೋಟಿ ಕಿಕ್‌ ಬ್ಯಾಕ್‌ ಆರೋಪ, ಹೈಕಮಾಂಡ್ ಕಪ್ಪದ ಟೆಂಡರ್, ರಾಜ್ಯಪಾಲರಿಗೆ ದೂರು, ದಿ ಫೈಲ್ ವರದಿ ಬೆನ್ನಲ್ಲೇ ತುಟಿ ಬಿಚ್ಚಿದ ಆರ್ ಅಶೋಕ್

ಬೆಂಗಳೂರು; ಸಮಗ್ರ ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯೂಎಂಎಲ್‌ ಯೋಜಿಸಿದ್ದ ಟೆಂಡರ್ ಪ್ಯಾಕೇಜ್‌ಗಳಲ್ಲಿ...

ಒಂದು ರಾಷ್ಟ್ರ ಒಂದು ಚುನಾವಣೆ; ಸಂಸತ್‌ ಜಂಟಿ ಸಮಿತಿಗೆ 5 ತಿಂಗಳಾದರೂ ಮಾಹಿತಿ ನೀಡದ ರಾಜ್ಯ

ಬೆಂಗಳೂರು; ಒಂದು ರಾಷ್ಟ್ರ ಒಂದು ಚುನಾವಣೆಗೆ ಸಂಬಂಧಿಸಿದಂತೆ ಸಂವಿಧಾನದ 129ನೇ ತಿದ್ದುಪಡಿ...

ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌, ಸಿಎಂ ಜನಸ್ಪಂದನ, ಸಿ ಎಸ್ ಕಚೇರಿಯಲ್ಲಿ ಇತ್ಯರ್ಥವಾಗದ 37,782 ಅರ್ಜಿಗಳು; ನಿಷ್ಕ್ರೀಯವಾಯಿತೇ ಆಡಳಿತ?

ಬೆಂಗಳೂರು;  ಸಾರ್ವಜನಿಕರು ವಿವಿಧ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌,...

Related Articles

Popular Categories

error: Content is protected !!