Wednesday | March 11, 2026 |

ಸಿಗರೇಟು ವಿತರಕರಿಂದ ಲಂಚ; ಮೂವರು ಅಧಿಕಾರಿಗಳು ನಾಪತ್ತೆ?

Support THE-FILE

spot_img

ಬೆಂಗಳೂರು; ಸಿಗರೇಟ್‌ ವಿತರಕರು ಹಾಗೂ ನಕಲಿ ಮಾಸ್ಕ್‌ ತಯಾರಿಕಾ ಕಂಪನಿಗಳಿಂದ ಲಂಚ ಪಡೆದ ಆರೋಪಕ್ಕೆ ಗುರಿಯಾಗಿರುವ ಸಿಸಿಬಿ ಎಸಿಪಿ ಪ್ರಭುಶಂಕರ್‌, ಇನ್‌ಸ್ಪೆಕ್ಟರ್‌ ಅಜಯ್‌ ಹಾಗೂ ನಿರಂಜನಕುಮಾರ್‌ ಅವರು ತಲೆಮರೆಸಿಕೊಂಡಿದ್ದು, ವಿಚಾರಣೆಗೆ ಹಾಜರಾಗುವಂತೆ ಎಸಿಬಿ ನೋಟೀಸ್‌ ಜಾರಿ ಮಾಡಿದೆ.

ಆರೋಪಿತ ಅಧಿಕಾರಿಗಳ ಕುಟುಂಬ ಸದಸ್ಯರು ನೋಟೀಸ್‌ ಸ್ವೀಕರಿಸಿದ್ದಾರೆ. ಮೂವರು ಅಧಿಕಾರಿಗಳ ಮನೆ ಮೇಲೆ ಕಳೆದ ದಾಳಿ ನಡೆಸಿದ್ದ ಎಸಿಬಿ, ಕಳೆದ ಗುರುವಾರ ಭ್ರಷ್ಟಾಚಾರ ನಿಯಂತ್ರಣಾ ಕಾಯ್ದೆ (ಪಿ.ಸಿ. ಆ್ಯಕ್ಟ್‌) ಅಡಿ ಸೆಕ್ಷನ್‌ 17(ಎ) ಅನ್ವಯ ಸಕ್ಷಮ ಪ್ರಾಧಿಕಾರದ ಒಪ್ಪಿಗೆ ಪಡೆದು ಎಫ್‌ಐಆರ್‌ ದಾಖಲಿಸಿತ್ತು. ಈ ಪ್ರಕರಣದ ತನಿಖೆ ನಡೆಸುವಂತೆ ಡಿಜಿ ಮತ್ತು ಐಜಿ ಪ್ರವೀಣ್‌ ಸೂದ್‌ ಎಸಿಬಿಗೆ ಆದೇಶ ನೀಡಿದ್ದರು. ಅದರಂತೆ ಸಕ್ಷಮ ಪ್ರಾಧಿಕಾರದ ಅನುಮತಿ ಪಡೆದು ಎಸಿಬಿ ತನಿಖೆ ಕೈಗೊಂಡಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಟನ್‌ಪೇಟೆಯಲ್ಲಿ ಮೂವರು ಅಧಿಕಾರಿಗಳ ವಿರುದ್ಧ ಸುಲಿಗೆ ಪ್ರಕರಣವೂ ದಾಖಲಾಗಿದೆ. ಎಸಿಪಿ ಪ್ರಭುಶಂಕರ್‌ ಅವರಿಗೆ ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ದೊರೆತಿದೆ. ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿಯಲ್ಲಿ ದಾಖಲಿಸಿರುವ ಪ್ರಕರಣದಲ್ಲೂ ಆರೋಪಿ ಅಧಿಕಾರಿಗಳು ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ವಿಚಾರಣೆ ಇನ್ನಷ್ಟೇ ನಡೆಯಬೇಕಿದೆ.

ಕೋವಿಡ್‌-19ರ ಹಿನ್ನೆಲೆಯಲ್ಲಿ ಜಾರಿಗೊಂಡಿದ್ದ ಲಾಕ್‌ ಡೌನ್‌ ವೇಳೆ ಸಿಗರೇಟ್‌ ಮತ್ತು ಮದ್ಯ ಮಾರಾಟ ನಿಷೇಧಿಸಲಾಗಿತ್ತು. ಆದರೆ ಸಿಗರೇಟ್‌ ವಿತರಕರಿಂದ ಲಂಚ ಪಡೆದ ಮೂವರು ಅಧಿಕಾರಿಗಳು ದುಬಾರಿ ಬೆಲೆಗೆ ಸಿಗರೇಟು ಮಾರಾಟ ಮಾಡಲು ಅನುವು ಮಾಡಿಕೊಟ್ಟ ಆರೋಪ ಎದುರಿಸುತ್ತಿದ್ದಾರೆ.

ಕೆ ಆರ್‌ ಪುರಂನ ಎಂ ಡಿ ಆ್ಯಂಡ್‌ ಸನ್ಸ್‌ ಸೇರಿದಂತೆ ಕೆಲವು ಸಿಗರೇಟು ವಿತರಕರಿಂದ 70 ಲಕ್ಷ ರು. ಲಂಚ ಪಡೆದಿದ್ದಾರೆ ಎಂದು ಡಿಸಿಪಿ ರವಿಕುಮಾರ್‌ ನಡೆಸಿದ ವಿಚಾರಣೆಯಿಂದ ಬಹಿರಂಗಗೊಂಡಿತ್ತು. ಇದಲ್ಲದೆ ಹನುಮಂತನಗರದ ಮಹಾವೀರ್‌ ಟ್ರೇಡರ್ಸ್‌ನ ಸಿಗರೇಟು ವಿತರಕರಿಂದ 15 ಲಕ್ಷ ರು.ಗಳನ್ನು ಪ್ರತ್ಯೇಕವಾಗಿ ಲಂಚದ ರೂಪದಲ್ಲಿ ಪಡೆಯಲಾಗಿತ್ತು.

ಈ ಪ್ರಕರಣದಲ್ಲಿ ಭೂಷಣ್‌, ಬಾಬುರಾಜೇಂದ್ರಪ್ರಸಾದ್‌ ಎಂಬುವರು ಮಧ್ಯವರ್ತಿಗಳಾಗಿ ಕಾರ್ಯನಿರ್ವಹಿಸಿದ್ದರು. ವಿಚಾರಣೆ ವೇಳೆ ತಮ್ಮ ಮೂಲಕ ಹಣದ ವಹಿವಾಟು ನಡೆದಿದ್ದಾಗಿ ಅವರು ಒಪ್ಪಿಕೊಂಡಿದ್ದರು.

ಇದಲ್ಲದೆ ಎಚ್‌ಆರ್‌ಬಿಆರ್‌ ಲೇ ಔಟ್‌ನ ಕಲ್ಯಾಣ ನಗರದಲ್ಲಿ ಎನ್‌ 95 ನಕಲಿ ಮಾಸ್ಕ್‌ ತಯಾರಿಸಿ ಸಿಕ್ಕಿಬಿದ್ದಿದ್ದ ಉದ್ಯಮಿಯೊಬ್ಬರಿಗೆ ರಕ್ಷಣೆ ನೀಡಲು ಸಿಸಿಬಿ ಅಧಿಕಾರಿಗಳು 15 ಲಕ್ಷ ರು. ಲಂಚ ಪಡೆದಿದ್ದರು. ಈ ಪ್ರಕರಣ ಕುರಿತು ಸಿಸಿಬಿ ಡಿಸಿಪಿ ಕುಲದೀಪ್‌ಕುಮಾರ್‌ ಜೈನ್‌ ವಿಚಾರಣೆ ನಡೆಸಿದ್ದರು.

ಈ ವಿಚಾರಣೆ ಬಳಿಕ ಪ್ರಭುಶಂಕರ್‌, ಅಜಯ್‌ ಮತ್ತು ನಿರಂಜನ್‌ ಅವರನ್ನು ಅಮಾನತುಪಡಿಸಲಾಗಿತ್ತು. ಬಳಿಕ ಈ ಐವರ ಮನೆಗಳ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ದಾಳಿ ಮಾಡಿದ್ದರು. ವಿತರಕರು ಹಾಗೂ ಸಿಸಿಬಿ ಅಧಿಕಾರಿಗಳ ನಡುವೆ ಮಧ್ಯವರ್ತಿಗಳಾಗಿ ಕೆಲಸ ಮಾಡಿದ್ದರು ಎನ್ನಲಾಗಿರುವ ಭೂಷಣ್‌ ಮತ್ತು ಯಲಹಂಕದ ಬಾಬು ಎಂಬುವರ ಮನೆಗಳ ಮೇಲೂ ದಾಳಿ ಮಾಡಿ, ಶೋಧ ನಡೆಸಲಾಗಿತ್ತು.

Hot this week

ಹುದ್ದೆಗಳ ಸಂಖ್ಯೆಯಲ್ಲಿ ಗಣನೀಯ ಕಡಿತ, ಸಾಮಾಜಿಕ ನ್ಯಾಯಕ್ಕೆ ಪೆಟ್ಟು; ವಿವಿಗಳ ಅಭಿಪ್ರಾಯ ಬಹಿರಂಗ

ಬೆಂಗಳೂರು; ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇಮಕಾತಿ ಸಂದರ್ಭದಲ್ಲಿ  ವಿಶ್ವವಿದ್ಯಾಲಯವನ್ನು ಘಟಕವನ್ನಾಗಿ ಪರಿಗಣಿಸಿದ್ದಲ್ಲಿ ...

ದೇಶದ್ರೋಹಿ ಘೋಷಣೆ, ದೇಶ ವಿರೋಧಿ ಚಟುವಟಿಕೆ; 24 ಪ್ರಕರಣಗಳಲ್ಲಿ 3 ಬಿ ರಿಪೋರ್ಟ್

ಬೆಂಗಳೂರು; ದೇಶದ್ರೋಹಿ ಘೋಷಣೆ ಕೂಗಿದ ಆರೋಪಗಳಿಗೆ ಸಂಬಂಧಿಸಿದಂತೆ ರಾಜ್ಯದಲ್ಲಿ  ಕಳೆದ ಮೂರು...

ಬಾಗಮನೆ ಡೆವಲಪರ್ಸ್‌ ಪ್ರಸ್ತಾವ ತಿರಸ್ಕೃತ; ಒತ್ತುವರಿ ಜಾಗ ವಶಕ್ಕೆ ಪಡೆಯಲು ಮೀನಮೇಷ

ಬೆಂಗಳೂರು; ಒತ್ತುವರಿ ಮಾಡಿಕೊಂಡಿರುವ ಜಮೀನಿಗೆ ಪ್ರತಿಯಾಗಿ ತಮ್ಮ ಸ್ವಂತ ಭೂಮಿಯನ್ನು ಸರ್ಕಾರಕ್ಕೆ...

ವಿವಿಗಳ ಹುದ್ದೆ ನೇಮಕಾತಿಯಲ್ಲಿ ಅಕ್ರಮ ಚಟುವಟಿಕೆ, ಯುಜಿಸಿ ನಿಯಮ ಉಲ್ಲಂಘನೆ; ಒಪ್ಪಿಕೊಂಡ ಸರ್ಕಾರ

ಬೆಂಗಳೂರು;  ರಾಜ್ಯದ ಬಹುತೇಕ ವಿಶ್ವವಿದ್ಯಾಲಯಗಳು ಬೋಧಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಯುಜಿಸಿ...

ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ರಾಜ್ಯದ ಪಾಲು ಕುಸಿತ; ಕರ್ನಾಟಕಕ್ಕೆ ತೀವ್ರ ಸವಾಲು ಒಡ್ಡಲಿದೆಯೇ?

ಬೆಂಗಳೂರು;  ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ವರ್ಷದಿಂದ ವರ್ಷಕ್ಕೆ  ರಾಜ್ಯ ಪಾಲು ಕುಸಿತವಾಗುತ್ತಿರುವ...

Topics

ಹುದ್ದೆಗಳ ಸಂಖ್ಯೆಯಲ್ಲಿ ಗಣನೀಯ ಕಡಿತ, ಸಾಮಾಜಿಕ ನ್ಯಾಯಕ್ಕೆ ಪೆಟ್ಟು; ವಿವಿಗಳ ಅಭಿಪ್ರಾಯ ಬಹಿರಂಗ

ಬೆಂಗಳೂರು; ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇಮಕಾತಿ ಸಂದರ್ಭದಲ್ಲಿ  ವಿಶ್ವವಿದ್ಯಾಲಯವನ್ನು ಘಟಕವನ್ನಾಗಿ ಪರಿಗಣಿಸಿದ್ದಲ್ಲಿ ...

ದೇಶದ್ರೋಹಿ ಘೋಷಣೆ, ದೇಶ ವಿರೋಧಿ ಚಟುವಟಿಕೆ; 24 ಪ್ರಕರಣಗಳಲ್ಲಿ 3 ಬಿ ರಿಪೋರ್ಟ್

ಬೆಂಗಳೂರು; ದೇಶದ್ರೋಹಿ ಘೋಷಣೆ ಕೂಗಿದ ಆರೋಪಗಳಿಗೆ ಸಂಬಂಧಿಸಿದಂತೆ ರಾಜ್ಯದಲ್ಲಿ  ಕಳೆದ ಮೂರು...

ಬಾಗಮನೆ ಡೆವಲಪರ್ಸ್‌ ಪ್ರಸ್ತಾವ ತಿರಸ್ಕೃತ; ಒತ್ತುವರಿ ಜಾಗ ವಶಕ್ಕೆ ಪಡೆಯಲು ಮೀನಮೇಷ

ಬೆಂಗಳೂರು; ಒತ್ತುವರಿ ಮಾಡಿಕೊಂಡಿರುವ ಜಮೀನಿಗೆ ಪ್ರತಿಯಾಗಿ ತಮ್ಮ ಸ್ವಂತ ಭೂಮಿಯನ್ನು ಸರ್ಕಾರಕ್ಕೆ...

ವಿವಿಗಳ ಹುದ್ದೆ ನೇಮಕಾತಿಯಲ್ಲಿ ಅಕ್ರಮ ಚಟುವಟಿಕೆ, ಯುಜಿಸಿ ನಿಯಮ ಉಲ್ಲಂಘನೆ; ಒಪ್ಪಿಕೊಂಡ ಸರ್ಕಾರ

ಬೆಂಗಳೂರು;  ರಾಜ್ಯದ ಬಹುತೇಕ ವಿಶ್ವವಿದ್ಯಾಲಯಗಳು ಬೋಧಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಯುಜಿಸಿ...

ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ರಾಜ್ಯದ ಪಾಲು ಕುಸಿತ; ಕರ್ನಾಟಕಕ್ಕೆ ತೀವ್ರ ಸವಾಲು ಒಡ್ಡಲಿದೆಯೇ?

ಬೆಂಗಳೂರು;  ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ವರ್ಷದಿಂದ ವರ್ಷಕ್ಕೆ  ರಾಜ್ಯ ಪಾಲು ಕುಸಿತವಾಗುತ್ತಿರುವ...

ಕೃಷಿ, ಕೈಗಾರಿಕೆ ವಲಯದ ಪಾಲು ಇಳಿಕೆ; ಒಟ್ಟಾರೆ ಆಂತರಿಕ ಉತ್ಪನ್ನದಲ್ಲಿ ಹಿನ್ನಡೆ

ಬೆಂಗಳೂರು;  ರಾಜ್ಯದ ಒಟ್ಟು ಆಂತರಿಕ ಉತ್ಪನ್ನದಲ್ಲಿ 2024-25ರಲ್ಲಿ ಕೃಷಿ ವಲಯದ ಪಾಲು...

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

Related Articles

Popular Categories

error: Content is protected !!