Wednesday | June 10, 2026 |

ಕೋವಿಡ್‌ ಸಂಕಷ್ಟ; ಬಿಎಸ್‌ಎನ್‌ಎಲ್‌ಗೆ 38.54 ಕೋಟಿ ರು. ಬಾಕಿ ಉಳಿಸಿಕೊಂಡ ಸರ್ಕಾರ

ಬೆಂಗಳೂರು: ಲಾಕ್‌ಡೌನ್‌ನಿಂದಾಗಿ ರಾಜ್ಯ ಸರ್ಕಾರ ತೀವ್ರತರದ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಬೆನ್ನಲ್ಲೇ ಸರ್ಕಾರದ ಎಲ್ಲಾ ಇಲಾಖೆಗಳು ಬಾಕಿ ಇರಿಸಿಕೊಂಡಿರುವ ದೂರವಾಣಿ ಬಿಲ್‌ ನ ಒಟ್ಟು 38.54 ಕೋಟಿ ರು. ಪಾವತಿಸಲು ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಭಾರತ್‌ ಸಂಚಾರ ನಿಗಮ ಲಿಮಿಟೆಡ್‌(ಬಿಎಸ್‌ಎನ್‌ಎಲ್‌) ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

 

ಬಾಕಿ ಉಳಿಸಿಕೊಂಡಿರುವ ದೂರವಾಣಿ ಬಿಲ್‌ನ್ನು ಪಾವತಿಸಲು ಸರ್ಕಾರದ ಇಲಾಖೆಗಳ ಮುಖ್ಯಸ್ಥರಿಗೆ ಸೂಚಿಸಬೇಕು ಎಂದು ಬಿಎಸ್‌ಎನ್‌ಎಲ್‌ನ ಮುಖ್ಯ ವ್ಯವಸ್ಥಾಪಕ ಸುಶೀಲ್‌ಕುಮಾರ್‌ ಮಿಶ್ರಾ ಅವರು 2020ರ ಮಾರ್ಚ್‌ 2ರಂದು ಆರ್ಥಿಕ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಐ ಎಸ್‌ ಎನ್‌ ಪ್ರಸಾದ್‌ ಅವರಿಗೆ ಪತ್ರ ಬರೆದಿದ್ದಾರೆ. ಈ ಪತ್ರದ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಇಲಾಖೆಗಳ ಕಚೇರಿಗಳಲ್ಲಿರುವ ಸ್ಥಿರ ದೂರವಾಣಿ ಬಳಕೆಗೆ ಸಂಬಂಧಿಸಿದಂತೆ 34.59 ಕೋಟಿ ರು., ಅಧಿಕಾರಿ, ನೌಕರರು ಬಳಸಿಕೊಂಡಿರುವ ಮೊಬೈಲ್‌ ಸೇವೆಗಳಿಗೆ ಸಂಬಂಧಿಸಿದಂತೆ 3.95 ಕೋಟಿ ರು. ಬಾಕಿ ಉಳಿದಿರುವುದು ಪತ್ರದಿಂದ ಗೊತ್ತಾಗಿದೆ.

‘ಸರಿಯಾದ ಸಮಯಕ್ಕೆ ಹೊರ ಬಾಕಿ ಪಾವತಿಯಾಗದಿದ್ದರೆ ಸೇವೆಗಳನ್ನು ವಿಸ್ತರಿಸಲು ಕಷ್ಟಕರವಾಗುತ್ತದೆ. ಸರ್ಕಾರದ ಇಲಾಖೆಗಳಿಗೆ ಡಿಜಿಟಲ್‌ ಸಂಪರ್ಕ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಬಾಕಿ ಉಳಿಸಿಕೊಂಡಿರುವ ದೂರವಾಣಿ ಮೊತ್ತವನ್ನು ಪ್ರಮುಖ ಆದ್ಯತೆಯಾಗಿ ಪರಿಗಣಿಸಿ ತಕ್ಷಣವೇ ಪಾವತಿಸಲು ಕ್ರಮ ಕೈಗೊಳ್ಳಬೇಕು,’ ಎಂದು ಸುಶೀಲ್‌ಕುಮಾರ್‌ ಮಿಶ್ರಾ ಕೋರಿರುವುದು ಪತ್ರದಿಂದ ತಿಳಿದು ಬಂದಿದೆ.

 

ದೂರವಾಣಿ ಮೊತ್ತವನ್ನು 2019ರ ಡಿಸೆಂಬರ್‌ 31 ಅಂತ್ಯಕ್ಕೆ ಬಾಕಿ ಉಳಿಸಿಕೊಂಡಿರುವ ಇಲಾಖೆಗಳಲ್ಲಿ ಇ-ಆಡಳಿತ ಇಲಾಖೆ ಅಗ್ರ ಸ್ಥಾನದಲ್ಲಿದೆ. ಈ ಇಲಾಖೆ 11,77,59,953 ಕೋಟಿ ರು. ಬಾಕಿ ಉಳಿಸಿಕೊಂಡಿದ್ದರೆ ಪೊಲೀಸ್ ಇಲಾಖೆ 9,53,23,581 ಕೋಟಿ, ಪಿಡಿಒಗಳಿಂದ 5,47,60,039 ಕೋಟಿ, ಕಂದಾಯ ಇಲಾಖೆ ವ್ಯಾಪ್ತಿಯಲ್ಲಿ ಬರುವ ನಾಡ ಕಚೇರಿಗಳು 2,81,06,219 ಕೋಟಿ ಬಾಕಿ ಉಳಿಸಿಕೊಳ್ಳುವ ಮೂಲಕ ಕ್ರಮವಾಗಿ 2 ಮತ್ತು 3ನೇ ಸ್ಥಾನದಲ್ಲಿವೆ.

 

ಕಿಯೋನಿಕ್ಸ್‌ 82,96,553 ರು., ಕೃಷಿ ಇಲಾಖೆ 37,21,543 ರು., ಬಿಬಿಎಂಪಿ 38,29,622 ರು., ಶಿಕ್ಷಣ ಇಲಾಖೆ 34,92,708 ರು., ಆರೋಗ್ಯ ಇಲಾಖೆ 35,01,241 ರು., ಅರಣ್ಯ ಇಲಾಖೆ 19,51,259 ರು., ಕಾರ್ಮಿಕ ಇಲಾಖೆ  3,11,780 ರು., ಎಂ-ಗೌರ್ನೆನ್ಸ್‌ 9,06,066 ರು., ತಾಲೂಕು ಪಂಚಾಯ್ತಿಗಳಿಂದ 11,12,518 ರು., ಸಾರಿಗೆ ಇಲಾಖೆ 13,02,495 ರು., ನಗರಾಭಿವೃದ್ಧಿ ಇಲಾಖೆ 11,64,577 ರು., ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ 4,72,900 ರು., ಸೇರಿದಂತೆ ಇನ್ನಿತರೆ ಇಲಾಖೆಗಳು ಲಕ್ಷಾಂತರ ರು.ಮೊತ್ತವನ್ನು ಬಾಕಿ ಉಳಿಸಿಕೊಂಡಿರುವುದು ದಾಖಲೆಯಿಂದ ತಿಳಿದು ಬಂದಿದೆ.

 

ಭಾರತ ಸಂಚಾರ ನಿಗಮ ಲಿಮಿಟೆಡ್‌ (ಬಿಎಸ್‌ಎನ್‌ಎಲ್‌) ರಾಜ್ಯದ ಸರ್ಕಾರಿ ಸೇವೆಗಳಿಗೆ ದೂರವಾಣಿ ಸೌಲಭ್ಯ ಒದಗಿಸುತ್ತಿದೆ. ನಾಡಕಚೇರಿಗಳು, ಕೆ ಸ್ವಾನ್‌ ಯೋಜನೆ, ಸಿಸಿಟಿಎನ್‌ಎಸ್‌ ಯೋಜನೆ, ಪೊಲೀಸ್‌ ಇಲಾಖೆ ಸೇರಿದಂತೆ ಇನ್ನಿತರೆ ಇಲಾಖೆಗಳಿಗೆ ಸ್ಥಿರ ದೂರವಾಣಿ ಉಪಕರಣಗಳನ್ನು ಒದಗಿಸುತ್ತಿದೆ.

Hot this week

ಕಸ ವಿಲೇವಾರಿ ಟೆಂಡರ್‍‌ನಲ್ಲಿ ಅಕ್ರಮ; 10,000 ಕೋಟಿ ಕಿಕ್‌ ಬ್ಯಾಕ್‌ ಆರೋಪ, ಹೈಕಮಾಂಡ್ ಕಪ್ಪದ ಟೆಂಡರ್, ರಾಜ್ಯಪಾಲರಿಗೆ ದೂರು, ದಿ ಫೈಲ್ ವರದಿ ಬೆನ್ನಲ್ಲೇ ತುಟಿ ಬಿಚ್ಚಿದ ಆರ್ ಅಶೋಕ್

ಬೆಂಗಳೂರು; ಸಮಗ್ರ ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯೂಎಂಎಲ್‌ ಯೋಜಿಸಿದ್ದ ಟೆಂಡರ್ ಪ್ಯಾಕೇಜ್‌ಗಳಲ್ಲಿ...

ಒಂದು ರಾಷ್ಟ್ರ ಒಂದು ಚುನಾವಣೆ; ಸಂಸತ್‌ ಜಂಟಿ ಸಮಿತಿಗೆ 5 ತಿಂಗಳಾದರೂ ಮಾಹಿತಿ ನೀಡದ ರಾಜ್ಯ

ಬೆಂಗಳೂರು; ಒಂದು ರಾಷ್ಟ್ರ ಒಂದು ಚುನಾವಣೆಗೆ ಸಂಬಂಧಿಸಿದಂತೆ ಸಂವಿಧಾನದ 129ನೇ ತಿದ್ದುಪಡಿ...

ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌, ಸಿಎಂ ಜನಸ್ಪಂದನ, ಸಿ ಎಸ್ ಕಚೇರಿಯಲ್ಲಿ ಇತ್ಯರ್ಥವಾಗದ 37,782 ಅರ್ಜಿಗಳು; ನಿಷ್ಕ್ರೀಯವಾಯಿತೇ ಆಡಳಿತ?

ಬೆಂಗಳೂರು;  ಸಾರ್ವಜನಿಕರು ವಿವಿಧ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌,...

ಅತಿಥಿ ಶಿಕ್ಷಕರ ನೇಮಕ ಪದ್ಧತಿಗೆ ರಾಜ್ಯ ಶಿಕ್ಷಣ ನೀತಿ ಆಯೋಗ ವಿರೋಧ; ಪದ್ದತಿ ಸಂಪೂರ್ಣವಾಗಿ ತೆಗೆದು ಹಾಕದೇ ವರದಿಯನ್ನೇ ಮೂಲೆಗುಂಪು ಮಾಡಿತೇ ಸರ್ಕಾರ?

ಬೆಂಗಳೂರು; 'ರಾಜ್ಯದಲ್ಲಿ   ಬೇರೂರಿದ ಗುತ್ತಿಗೆ ಶಿಕ್ಷಕ ನೇಮಕ ಪದ್ಧತಿಯಿಂದಾಗಿ  ವೃತ್ತಿಪರತೆಯ ಕೊರತೆ...

ಕಸ ವಿಲೇವಾರಿ ಟೆಂಡರ್ ಪ್ರಕ್ರಿಯೆಗಳಲ್ಲಿ ಬಹುಕೋಟಿ ಮೊತ್ತದ ಹಗರಣ; ಯತ್ನಾಳ್, ಶೋಭಾ ನಂತರ ಧೀರಜ್ ಮುನಿರಾಜು ದೂರು, ತುಟಿಬಿಚ್ಚದ ಪ್ರತಿಪಕ್ಷ ನಾಯಕ ಅಶೋಕ್

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬೆಂಗಳೂರಿನ ಸಮಗ್ರ ಘನತ್ಯಾಜ್ಯ ನಿರ್ವಹಣೆಗೆ...
Please Scan to make Your Contribution

Topics

ಕಸ ವಿಲೇವಾರಿ ಟೆಂಡರ್‍‌ನಲ್ಲಿ ಅಕ್ರಮ; 10,000 ಕೋಟಿ ಕಿಕ್‌ ಬ್ಯಾಕ್‌ ಆರೋಪ, ಹೈಕಮಾಂಡ್ ಕಪ್ಪದ ಟೆಂಡರ್, ರಾಜ್ಯಪಾಲರಿಗೆ ದೂರು, ದಿ ಫೈಲ್ ವರದಿ ಬೆನ್ನಲ್ಲೇ ತುಟಿ ಬಿಚ್ಚಿದ ಆರ್ ಅಶೋಕ್

ಬೆಂಗಳೂರು; ಸಮಗ್ರ ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯೂಎಂಎಲ್‌ ಯೋಜಿಸಿದ್ದ ಟೆಂಡರ್ ಪ್ಯಾಕೇಜ್‌ಗಳಲ್ಲಿ...

ಒಂದು ರಾಷ್ಟ್ರ ಒಂದು ಚುನಾವಣೆ; ಸಂಸತ್‌ ಜಂಟಿ ಸಮಿತಿಗೆ 5 ತಿಂಗಳಾದರೂ ಮಾಹಿತಿ ನೀಡದ ರಾಜ್ಯ

ಬೆಂಗಳೂರು; ಒಂದು ರಾಷ್ಟ್ರ ಒಂದು ಚುನಾವಣೆಗೆ ಸಂಬಂಧಿಸಿದಂತೆ ಸಂವಿಧಾನದ 129ನೇ ತಿದ್ದುಪಡಿ...

ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌, ಸಿಎಂ ಜನಸ್ಪಂದನ, ಸಿ ಎಸ್ ಕಚೇರಿಯಲ್ಲಿ ಇತ್ಯರ್ಥವಾಗದ 37,782 ಅರ್ಜಿಗಳು; ನಿಷ್ಕ್ರೀಯವಾಯಿತೇ ಆಡಳಿತ?

ಬೆಂಗಳೂರು;  ಸಾರ್ವಜನಿಕರು ವಿವಿಧ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌,...

ಅತಿಥಿ ಶಿಕ್ಷಕರ ನೇಮಕ ಪದ್ಧತಿಗೆ ರಾಜ್ಯ ಶಿಕ್ಷಣ ನೀತಿ ಆಯೋಗ ವಿರೋಧ; ಪದ್ದತಿ ಸಂಪೂರ್ಣವಾಗಿ ತೆಗೆದು ಹಾಕದೇ ವರದಿಯನ್ನೇ ಮೂಲೆಗುಂಪು ಮಾಡಿತೇ ಸರ್ಕಾರ?

ಬೆಂಗಳೂರು; 'ರಾಜ್ಯದಲ್ಲಿ   ಬೇರೂರಿದ ಗುತ್ತಿಗೆ ಶಿಕ್ಷಕ ನೇಮಕ ಪದ್ಧತಿಯಿಂದಾಗಿ  ವೃತ್ತಿಪರತೆಯ ಕೊರತೆ...

ಕಸ ವಿಲೇವಾರಿ ಟೆಂಡರ್ ಪ್ರಕ್ರಿಯೆಗಳಲ್ಲಿ ಬಹುಕೋಟಿ ಮೊತ್ತದ ಹಗರಣ; ಯತ್ನಾಳ್, ಶೋಭಾ ನಂತರ ಧೀರಜ್ ಮುನಿರಾಜು ದೂರು, ತುಟಿಬಿಚ್ಚದ ಪ್ರತಿಪಕ್ಷ ನಾಯಕ ಅಶೋಕ್

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬೆಂಗಳೂರಿನ ಸಮಗ್ರ ಘನತ್ಯಾಜ್ಯ ನಿರ್ವಹಣೆಗೆ...

ಈಗಲ್‌ಟನ್‌ ರೆಸಾರ್ಟ್‌ನಿಂದ ಸರ್ಕಾರಿ ಜಮೀನು ಒತ್ತುವರಿ; 29 ವರ್ಷಗಳಾದರೂ ಪ್ರಕರಣ ಇತ್ಯರ್ಥವಾಗಿಲ್ಲ, 982 ಕೋಟಿಯೂ ವಸೂಲಾಗಿಲ್ಲ

ಬೆಂಗಳೂರು; ರಾಮನಗರ ತಾಲೂಕು ಬಿಡದಿ ಹೋಬಳಿ ಶ್ಯಾನುಮಂಗಲ, ಬಿಲ್ಲಕೆಂಪನಹಳ್ಳಿ, ಬಾನಂದೂರು ಗ್ರಾಮದ...

Related Articles

Popular Categories

error: Content is protected !!