Friday | August 21, 2026 |

ನರೇಗಾ ದುರ್ಬಳಕೆ; ಅರಣ್ಯಾಧಿಕಾರಿ ಪತ್ನಿ, ಮಕ್ಕಳಿಗೂ ಜಾಬ್‌ ಕಾರ್ಡ್‌

ಬೆಂಗಳೂರು; ಲಾಕ್‌ಡೌನ್‌ನಿಂದಾಗಿ ಸ್ವಂತ ಸ್ಥಳಗಳಿಗೆ ತೆರಳಿರುವ ವಲಸಿಗ ಕಾರ್ಮಿಕರಿಗೆ ನರೇಗಾದಡಿಯಲ್ಲಿ ಉದ್ಯೋಗ ಅವಕಾಶ ಕಲ್ಪಿಸಬೇಕಿದ್ದ ಅಧಿಕಾರಿಗಳು, ತಮ್ಮ ಕುಟುಂಬ ಸದಸ್ಯರ ಹೆಸರಿಗೆ ಜಾಬ್‌ ಕಾರ್ಡ್‌ ನೀಡಿ ಕೂಲಿ ಹಣ ಲೂಟಿ ಮಾಡುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿವೆ.

ಬಾಗಲಕೋಟೆಯ ಉಪ ವಲಯ ಅರಣ್ಯಾಧಿಕಾರಿ ಟಿ ಬಿ ಬಲವಂತನವರ ತಮ್ಮ ಪತ್ನಿ ಮತ್ತು ಮಕ್ಕಳ ಹೆಸರಿನಲ್ಲಿ ಜಾಬ್‌ ಕಾರ್ಡ್‌ ನೀಡಿರುವುದು ದಾಖಲೆಯಿಂದ ತಿಳಿದು ಬಂದಿದೆ. ಈ ಸಂಬಂಧ ಮಲ್ಲಿಕಾರ್ಜುನ ಎಸ್‌ ರಾಂಪೂರ ಎಂಬುವರು ಪ್ರಧಾನ ಅರಣ್ಯ ಮುಖ್ಯ ಸಂರಕ್ಷಣಾಧಿಕಾರಿ ಸಂಜಯ್‌ ಮೋಹನ್‌ ಅವರಿಗೆ ದಾಖಲೆ ಸಮೇತ ದೂರು ಸಲ್ಲಿಸಿದ್ದಾರೆ. ಈ ದೂರಿನ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

ಬಾಗಲಕೋಟೆಯ ಹುನಗಂದ ಪ್ರಾದೇಶಿಕ ವಲಯದಲ್ಲಿ ಉಪ ವಲಯ ಅರಣ್ಯಾಧಿಕಾರಿಗಳಾಗಿ ಕಾರ್ಯನಿರ್ವಹಿಸುತ್ತಿರುವ ಟಿ ಬಿ ಬಲವಂತನವರ ಅವರು ಪತ್ನಿ ಶಾರದಾ ತಿಪ್ಪಣ್ಣ ಬಲವಂತನವರ, ಮಗ ನಾಗರಾಜ, ನವೀನಕುಮಾರ ಮತ್ತು ಮಗಳು ನಂದಿನಿ ಹೆಸರಿನಲ್ಲಿ ಅಮರಾವತಿ ಗ್ರಾಮ ಪಂಚಾಯ್ತಿಯ ಅಮರಾವತಿ ಗ್ರಾಮದಲ್ಲಿ ಜಾಬ್‌ ಕಾರ್ಡ್‌(ಕೆಎನ್‌-01-004-018-003/325) ಪಡೆದಿರುವುದು ದಾಖಲೆಯಿಂದ ಗೊತ್ತಾಗಿದೆ.

ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಉದ್ಯೋಗ ಕಾರ್ಡ್‌ ಪಡೆದಿರುವ ಟಿ ಬಿ ಬಲವಂತನವರ ಅವರ ಕುಟುಂಬ ಸದಸ್ಯರ ಖಾತೆಗೆ ಕೂಲಿ ಹಣವೂ ಜಮಾ ಆಗಿರುವುದು ನರೇಗಾದ ಅಧಿಕೃತ ಜಾಲ ತಾಣದಿಂದ ತಿಳಿದು ಬಂದಿದೆ.
ಆರೋಪಿತ ಐಎಫ್‌ಎಸ್‌ ಅಧಿಕಾರಿ ಪತ್ನಿ ಮತ್ತು ಮೂವರು ಮಕ್ಕಳು ಅಮರಾವತಿ ಗ್ರಾಮದಲ್ಲಿ ಸಂಗಮಕ್ಕೆ ಹೋಗುವ ಒಳ ರಸ್ತೆ ಬದಿ ಕಾಮಗಾರಿ, ಅಮರಾವತಿ ಚೆಕ್‌ ಡ್ಯಾಂ ಹೂಳು ತೆಗೆಯುವುದು, ರೈತರ ಹೊಲಗಳ ಬದುಗಳಲ್ಲಿ ಜೈವಿಕ ಇಂಧನ ಸಸಿ ನೆಡುವುದು, ರೈತರ ಹೊಲದಲ್ಲಿ ಜೈವಿಕ ನೆಡುತೋಪು ಬೆಳೆಸುವುದು, ರಸ್ತೆ ಮತ್ತು ಬ್ಲಾಕ್‌ಗಳಲ್ಲಿ ಸಸಿ ನೆಡುವುದು ಸೇರಿದಂತೆ ಮತ್ತಿತರ ಕಾಮಗಾರಿಗಳಲ್ಲಿ ದುಡಿದು ಕೂಲಿ ಹಣ ಪಡೆದಿರುವುದು ಲಭ್ಯ ಇರುವ ಜಾಬ್‌ ಕಾರ್ಡ್‌ನಿಂದ ತಿಳಿದು ಬಂದಿದೆ.

‘ಗ್ರಾಮೀಣ ಜನತೆಯ ಸರ್ವತೋಮುಖ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಅನುಷ್ಠಾನಗೊಳಿಸಿರುವ ನರೇಗಾ ಯೋಜನೆಯನ್ನು ಅಧಿಕಾರಶಾಹಿಗಳು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಗ್ರಾಮೀಣ ಜನತೆಯು ಉದ್ಯೋಗವಕಾಶಕ್ಕಾಗಿ ಪಟ್ಟಣ, ಇತರೆ ಔದ್ಯಮಿಕ ಕೇಂದ್ರಗಳಿಗೆ ವಲಸೆ ಹೋಗುತ್ತಿದ್ದಾರೆ. ಇದನ್ನು ತಡೆಗಟ್ಟಲು ಸ್ಥಳೀಯ ಮಟ್ಟದಲ್ಲಿ ಉದ್ಯೋಗ ನೀಡುವ ದೂರದೃಷ್ಟಿಯಿಂದ ಜಾರಿಗೊಂಡಿರುವ ಈ ಯೋಜನೆಯ ಅನುದಾನವನ್ನು ಪ್ರಭಾವಿ ಅಧಿಕಾರಿಗಳು ಲೂಟಿ ಮಾಡುತ್ತಿದ್ದಾರೆ,’ ಎಂದು ಮಲ್ಲಿಕಾರ್ಜುನ ರಾಂಪೂರ ಅವರು ದೂರಿನಲ್ಲಿ ವಿವರಿಸಿದ್ದಾರೆ.

Hot this week

2 ಕಂಪನಿಗಳಿಂದ 400 ಕೋಟಿ ರು ವಹಿವಾಟು ಆರೋಪ; ಐಜಿಪಿ ಚಂದ್ರಶೇಖರ್ ಪ್ರಕರಣದಲ್ಲಿ ವರದಿ ನೀಡಲು ಸರ್ಕಾರದ ನಿರ್ದೇಶನ

ಬೆಂಗಳೂರು; ಸರ್ಕಾರದ ಪೂರ್ವಾನುಮತಿ ಪಡೆಯದೇ ಹಾಗೂ ಸರ್ಕಾರಕ್ಕೆ ವರದಿಯನ್ನು ಸಲ್ಲಿಸದೇ ಕುಟುಂಬ...

ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ; ಹಲವು ಟೆಂಡರ್‍‌ಗಳಿಗೆ ಬಿಡ್ಡರ್‍‌ಗಳೇ ಇಲ್ಲ, ಮರು ಟೆಂಡರ್‍ ಹಿಂದಿದೆಯೇ ಲಂಚಾವತಾರ?

ಬೆಂಗಳೂರು; ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ ಕಾಣಿಸಿಕೊಂಡಿದೆ....

30,01,169 ರೈತರಿಂದ 25,180.77 ಕೋಟಿ ಹೊರಬಾಕಿ; ರೈತರ ಸಾಲ ಮನ್ನಾ ಪ್ರಸ್ತಾವವಿಲ್ಲ, ರೈತರ ಕೆಂಗಣ್ಣಿಗೆ ಗುರಿಯಾಗಲಿದೆಯೇ ಸರ್ಕಾರ?

ಬೆಂಗಳೂರು; ಸಹಕಾರ ಸಂಸ್ಥೆಗಳ ಮೂಲಕ ರೈತರು ಪಡೆದಿರುವ ಕೃಷಿ ಸಾಲವನ್ನು ಮನ್ನಾ...

ಇ-ಆಫೀಸ್‌ ತಂತ್ರಾಂಶದಲ್ಲೇ ಬೆಟ್ಟದಷ್ಟು ಬೆಳೆದು ನಿಂತ ಕಡತಗಳ ರಾಶಿ; ಗರಿಷ್ಠ 3,187, ಕನಿಷ್ಟ 32 ದಿನಗಳಾದರೂ ವಿಲೇವಾರಿಯಾಗಿಲ್ಲ, ಜಡ್ಡುಗಟ್ಟಿದೆಯೇ ಆಡಳಿತ?

ಬೆಂಗಳೂರು;   ಭೌತಿಕ ಕಡತಗಳ ವಿಲೇವಾರಿಯಲ್ಲಿ ಆಗುತ್ತಿದ್ದ ವಿಳಂಬವನ್ನು ತಪ್ಪಿಸುವ ಉದ್ದೇಶದಿಂದ ಇ-ಆಫೀಸ್‌...
Please Scan to make Your Contribution

Topics

2 ಕಂಪನಿಗಳಿಂದ 400 ಕೋಟಿ ರು ವಹಿವಾಟು ಆರೋಪ; ಐಜಿಪಿ ಚಂದ್ರಶೇಖರ್ ಪ್ರಕರಣದಲ್ಲಿ ವರದಿ ನೀಡಲು ಸರ್ಕಾರದ ನಿರ್ದೇಶನ

ಬೆಂಗಳೂರು; ಸರ್ಕಾರದ ಪೂರ್ವಾನುಮತಿ ಪಡೆಯದೇ ಹಾಗೂ ಸರ್ಕಾರಕ್ಕೆ ವರದಿಯನ್ನು ಸಲ್ಲಿಸದೇ ಕುಟುಂಬ...

ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ; ಹಲವು ಟೆಂಡರ್‍‌ಗಳಿಗೆ ಬಿಡ್ಡರ್‍‌ಗಳೇ ಇಲ್ಲ, ಮರು ಟೆಂಡರ್‍ ಹಿಂದಿದೆಯೇ ಲಂಚಾವತಾರ?

ಬೆಂಗಳೂರು; ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ ಕಾಣಿಸಿಕೊಂಡಿದೆ....

30,01,169 ರೈತರಿಂದ 25,180.77 ಕೋಟಿ ಹೊರಬಾಕಿ; ರೈತರ ಸಾಲ ಮನ್ನಾ ಪ್ರಸ್ತಾವವಿಲ್ಲ, ರೈತರ ಕೆಂಗಣ್ಣಿಗೆ ಗುರಿಯಾಗಲಿದೆಯೇ ಸರ್ಕಾರ?

ಬೆಂಗಳೂರು; ಸಹಕಾರ ಸಂಸ್ಥೆಗಳ ಮೂಲಕ ರೈತರು ಪಡೆದಿರುವ ಕೃಷಿ ಸಾಲವನ್ನು ಮನ್ನಾ...

ಇ-ಆಫೀಸ್‌ ತಂತ್ರಾಂಶದಲ್ಲೇ ಬೆಟ್ಟದಷ್ಟು ಬೆಳೆದು ನಿಂತ ಕಡತಗಳ ರಾಶಿ; ಗರಿಷ್ಠ 3,187, ಕನಿಷ್ಟ 32 ದಿನಗಳಾದರೂ ವಿಲೇವಾರಿಯಾಗಿಲ್ಲ, ಜಡ್ಡುಗಟ್ಟಿದೆಯೇ ಆಡಳಿತ?

ಬೆಂಗಳೂರು;   ಭೌತಿಕ ಕಡತಗಳ ವಿಲೇವಾರಿಯಲ್ಲಿ ಆಗುತ್ತಿದ್ದ ವಿಳಂಬವನ್ನು ತಪ್ಪಿಸುವ ಉದ್ದೇಶದಿಂದ ಇ-ಆಫೀಸ್‌...

ಫ್ರೀಡಂ ಹಬ್ಬಕ್ಕೆ 6 ಕೋಟಿ ವೆಚ್ಚ!; ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳುವ ಮುನ್ನವೇ ಕೆಲಸ ಆರಂಭಿಸಿದ ಕಂಪನಿ

ಬೆಂಗಳೂರು; ಹೊಸದಾಗಿ ವಿದ್ಯಾರ್ಥಿ ನಿಲಯಗಳ ಆರಂಭ, ಅನುಮೋದಿತ ಕಾಮಗಾರಿಗಳ ಕಾರ್ಯಭಾರಕ್ಕೆ ನಲುಗಿ...

Related Articles

Popular Categories

error: Content is protected !!