Wednesday | May 13, 2026 |

ಹೊಸ ಪದ್ಧತಿ; ರಾಷ್ಟ್ರೀಯ ಭಾವನೆ ಹೆಸರಿನಲ್ಲಿ ‘ಜೈ ಹಿಂದ್‌’ ಹೇಳಲು ಪೊಲೀಸರಿಗೆ ವಿಚಿತ್ರ ಸೂಚನೆ

ಬೆಂಗಳೂರು; ಹಿರಿಯ ಅಧಿಕಾರಿಗಳಿಗೆ ಸೆಲ್ಯೂಟ್ ಮಾಡಿದ ನಂತರ ಕೊನೆಯಲ್ಲಿ ‘ಜೈ ಹಿಂದ್’ ಹೇಳಬೇಕೆಂದು ಬೆಂಗಳೂರಿನ ಎಚ್‌ಎಎಲ್‌ ಠಾಣೆ ಇನ್‌ಸ್ಪೆಕ್ಟರ್, ತಮ್ಮ ಠಾಣೆ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ವಿಚಿತ್ರವಾದ ಸೂಚನೆ ನೀಡಿದ್ದಾರೆ.

ರಾಜ್ಯದ ಎಲ್ಲಾ ಪೊಲೀಸ್‌ ಠಾಣೆಗಳಿಗೆ ಈ ಸೂಚನೆ ಹೊರಡಿಸಿರುವ ಬಗ್ಗೆ ತಿಳಿದು ಬಂದಿಲ್ಲವಾದರೂ ಎಚ್‌ಎಎಲ್‌ ಠಾಣೆ ಇನ್ಸ್‌ಪೆಕ್ಟರ್‌ ಅವರು ತಮ್ಮ ಹಂತದಲ್ಲೇ ಇಂತಹದ್ದೊಂದು ಜ್ಞಾಪನಾ ಪತ್ರ ಹೊರಡಿಸಿದ್ದಾರೆ. ಇದರ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

2020ರ ಜೂನ್ 5ರಂದು ಹೊರಡಿಸಿರುವ ಜ್ಞಾಪನಾ ಪತ್ರದಲ್ಲಿ ಠಾಣೆಯ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿ ಈ ಸೂಚನೆಯನ್ನು ಪಾಲಿಸಬೇಕು ಎಂದು ಆದೇಶಿಸಿದ್ದಾರೆ. ಆದರೆ ಈ ಸೂಚನೆಯನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿ, ಒಳಾಡಳಿತ ಇಲಾಖೆ ಮತ್ತು ಬೆಂಗಳೂರು ಪೊಲೀಸ್‌ ಕಮಿಷನರ್‌ ಭಾಸ್ಕರರಾವ್‌ ಹೊರಡಿಸಿಲ್ಲ.

‘ಹಿರಿಯ ಅಧಿಕಾರಿಗಳಿಗೆ ಸೆಲ್ಯೂಟ್ ಮಾಡಿ ರಾಷ್ಟ್ರೀಯ ಭಾವನೆ ಅಂಗವಾಗಿ ಜೈ ಹಿಂದ್ ಹೇಳುವ ಹೊಸ ಪದ್ಧತಿಯನ್ನು ರೂಢಿಸಿಕೊಳ್ಳಲು ಈ ಮೂಲಕ ಸೂಚಿಸಲಾಗಿದೆ. ನಿಮ್ಮಿಂದ (ಠಾಣೆ ಅಧಿಕಾರಿ ಹಾಗೂ ಸಿಬ್ಬಂದಿ) ಮೇಲಿನ ರ‍್ಯಾಂಕ್ ಅಧಿಕಾರಿಗಳಿಗೆ ಸೆಲ್ಯೂಟ್ ಮಾಡಿದ ನಂತರ ಜೈ ಹಿಂದ್ ಹೇಳಲು ಸೂಚಿಸಲಾಗಿದೆ’ ಎಂದು ಎಚ್‌ಎಎಲ್‌ ಠಾಣೆ ಇನ್ಸ್‌ಪೆಕ್ಟರ್‌ ಜ್ಞಾಪನ ಪತ್ರದಲ್ಲಿ ಸೂಚಿಸಿದ್ದಾರೆ.

ಮಧ್ಯ ಪ್ರದೇಶದ ಸರಕಾರಿ ಶಾಲೆಗಳಲ್ಲಿ ಶಿಕ್ಷಕರು ಹಾಜರಿ ಕರೆಯುವಾಗ ‘ಜೈ ಹಿಂದ್‌’ ಎಂದು ಕೂಗಬೇಕು ಎಂದು ವಿಚಿತ್ರ ನೋಟಿಸ್‌ ಜಾರಿ ಮಾಡಲಾಗಿತ್ತು. ರಾಜ್ಯ ಸರಕಾರ ನಡೆಸುವ ಎಲ್ಲ ಶಾಲೆಗಳಲ್ಲಿ ಕಡ್ಡಾಯ ಆದೇಶ ಹೊರಡಿಸಿತ್ತು.  2 ವರ್ಷಗಳ ಹಿಂದೆಯೇ ಶಾಲೆಯ ವಿದ್ಯಾರ್ಥಿಗಳು ಹಾಜರಾತಿ ಹೇಳುವಾಗ `ಯಸ್ ಸಾರ್’ ಬದಲಿಗೆ `ಜೈ ಹಿಂದ್’ ಎಂದು ಹೇಳಬೇಕು ಎಂದು ಅಲ್ಲಿನ ಶಿಕ್ಷಕ ಕುನ್ವಾರ್ ವಿಜಯ್ ಶಾ ಕೂಡ ಸೂಚಿಸಿದ್ದನ್ನು ಸ್ಮರಿಸಬಹುದು.

ಪ್ರಾಯೋಗಿಕವಾಗಿ ಈ ಬದಲಾವಣೆ ಸತ್ನಾ ಜಿಲ್ಲೆಯ ಶಾಲೆಗಳಲ್ಲಿ ಮಾತ್ರ ಜಾರಿ ಮಾಡಲಾಗಿತ್ತು. ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಶಾಲೆಗಳಲ್ಲೂ ಜೈ ಹಿಂದ್ ಹೇಳುವುದನ್ನು ಕಡ್ಡಾಯ ಮಾಡಲಾಗುವುದು ಎಂದು ಹೇಳಿದ್ದರು.
ಮಕ್ಕಳು ದೇಶದ ಭವಿಷ್ಯ. ಅವರಲ್ಲಿ ದೇಶದ ಮೇಲೆ ಪ್ರೀತಿ ಗೌರವ ಹಾಗೂ ಭಕ್ತಿಯನ್ನು ಬೆಳಸಬೇಕು. ಆದ್ದರಿಂದ ಜೈ ಹಿಂದ್ ಹೇಳಬೇಕು ಎಂದು ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದರು.

ಅಲ್ಲದೆ ಏರ್ ಇಂಡಿಯಾ ಸಂಸ್ಥೆಯು ತನ್ನ ವಿಮಾನ ಸೇವಾ ಸಿಬ್ಬಂದಿಗೆ ವಿಮಾನದಲ್ಲಿ ಪ್ರಯಾಣಿಕರಿಗೆ ಸೂಚನೆಗಳ ನಂತರ ‘ಜೈ ಹಿಂದ್’ ಎಂದು ಹೇಳುವಂತೆ ಒಂದು ವರ್ಷದ ಹಿಂದೆಯೇ ಆದೇಶಿಸಿತ್ತು. ಏರ್‌ ಇಂಡಿಯಾ ನಿರ್ದೇಶಕ ಅಮಿತಾಬ್ ಸಿಂಗ್ ಅವರು ಈ ಆದೇಶ ಹೊರಡಿಸಿದ್ದು, ವಿಮಾನ ಸೇವಾ ಸಿಬ್ಬಂದಿ ಮಾತ್ರವೇ ಅಲ್ಲದೆ ಕಾಕ್‌ಪೀಟ್‌ನಿಂದ ಹೊರಡುವ ಸೂಚನೆಗಳ ನಂತರವೂ ‘ಜೈ ಹಿಂದ್’ ಎಂದು ಹೇಳುವಂತೆ ಆದೇಶಿಸಲಾಗಿತ್ತು.

2016 ರಲ್ಲಿ ಏರ್‌ ಇಂಡಿಯಾದ ಚೇರ್‌ಮನ್ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಅಶ್ವಿನಿ ಲೋಹಾನಿ ಅವರು ಇದೇ ರೀತಿಯ ಆದೇಶವನ್ನು ಹೊರಡಿಸಿದ್ದರು. ಆದರೆ ಅದು ವಿವಿಧ ಕಾರಣಗಳಿಗಾಗಿ ಪಾಲಿಸಲಾಗಿರಲಿಲ್ಲ. 2019ರಲ್ಲಿ ಪುನಃ ಆದೇಶ ಹೊರಡಿಸಲಾಗಿತ್ತು.

ವಿಮಾನದ ಕ್ಯಾಪ್ಟನ್, ಸೇವಾ ಸಿಬ್ಬಂದಿಗಳು ಪ್ರಯಾಣಿಕರ ಜೊತೆ ಸದಾ ಪರಸ್ಪರ ಸಂಪರ್ಕ ಹೊಂದಿರಲೇಬೇಕಾಗಿರುತ್ತದೆ. ಪ್ರತಿ ಸೂಚನೆಯ ನಂತರ ಜೈ ಹಿಂದ್ ಹೇಳುವುದರಿಂದ ಉತ್ತಮ ವಾತಾವರಣ ವಿಮಾನದಲ್ಲಿ ಉಂಟಾಗುತ್ತದೆ. ಪ್ರಯಾಣಿಕರ, ವಿಮಾನ ಸಿಬ್ಬಂದಿಯ ನಡುವೆ ಬಂಧ ಏರ್ಪಡುತ್ತದೆ ಎಂದು ಏರ್‌ ಇಂಡಿಯಾ ಹೇಳಿತ್ತು.

Hot this week

ಕೋಟ್ಯಂತರ ರು ಮೌಲ್ಯದ ನಿವೇಶನ ನಿಯಮಬಾಹಿರ ಮಂಜೂರು, ಅಕ್ರಮ ಲಾಭ; ಕೆಎಎಸ್ ಅಧಿಕಾರಿ ವಿರುದ್ಧ ಲೋಕಾಯುಕ್ತ ವಿಚಾರಣೆಗೆ ಅನುಮತಿ

ಬೆಂಗಳೂರು; ಕೋಟ್ಯಂತರ ರುಪಾಯಿ ಮೌಲ್ಯದ ನಿವೇಶನಗಳನ್ನು ನಿಯಮಬಾಹಿರವಾಗಿ ಮಂಜೂರು ಮಾಡಿ ಖಾಸಗಿಯವರಿಗೆ...

ರಾಮಕೃಷ್ಣ ಹೆಗಡೆ ಕುಟುಂಬಕ್ಕೆ ಖರಾಬು ಗುಂಡು ತೋಪು ಜಮೀನು ಮಂಜೂರಿಗೆ ಕೋರಿಕೆ; ಸಿದ್ದು ಭೇಟಿ ಬೆನ್ನಲ್ಲೇ ಬಹಿರಂಗವಾದ ಪತ್ರ

ಬೆಂಗಳೂರು; ಬೆಂಗಳೂರು ಉತ್ತರ ತಾಲೂಕಿನಲ್ಲಿ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು...

ಘನತ್ಯಾಜ್ಯ ವಿಲೇವಾರಿ ಟಿಪ್ಪಿಂಗ್ ಶುಲ್ಕ; ರಾಮ್ಕಿ ಗ್ರೂಪ್‌ಗೆ ಅನುಕೂಲಕರ, ರಾಜ್ಯ ಸರ್ಕಾರವನ್ನು ಆರ್ಥಿಕ ದಿವಾಳಿತನದತ್ತ ತಳ್ಳಲಾಗಿದೆಯೇ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣಾ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ಟಿಪ್ಪಿಂಗ್ ಶುಲ್ಕದ ಆಧಾರದ ಮೇಲೆ...

ಶಾಂತಿನಗರ ಹೌಸಿಂಗ್‌ ಸೊಸೈಟಿ ಅಕ್ರಮ; 2,900 ಕೋಟಿ ಅಧಿಕ ಮೊತ್ತದ ಹಗರಣ ಕೆದಕಿದರೇ ಸತೀಶ್ ಜಾರಕಿಹೊಳಿ?

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ಅವರೊಂದಿಗೆ ತಳಕು ಹಾಕಿಕೊಂಡಿದ್ದ...

ಎಲ್‌ 1 ತಿರಸ್ಕೃತವಾದರೂ ನಡೆಯದ ಮರು ಟೆಂಡರ್, ಎಲ್ 2 ಗೆ ನೇರವಾಗಿ ಗುತ್ತಿಗೆಗೆ ಪರಿಗಣನೆ; 2,477.90 ಕೋಟಿ ರು ಹಗರಣ!

ಬೆಂಗಳೂರು; ಮಾಲೂರು-ಹೊಸಕೋಟೆ ವ್ಯಾಪ್ತಿಯನ್ನೂ ಸೇರಿದಂತೆ ಒಟ್ಟಾರೆ 123 ಕಿ ಮೀ ರಸ್ತೆಯನ್ನು ...
Please Scan to make Your Contribution

Topics

ಕೋಟ್ಯಂತರ ರು ಮೌಲ್ಯದ ನಿವೇಶನ ನಿಯಮಬಾಹಿರ ಮಂಜೂರು, ಅಕ್ರಮ ಲಾಭ; ಕೆಎಎಸ್ ಅಧಿಕಾರಿ ವಿರುದ್ಧ ಲೋಕಾಯುಕ್ತ ವಿಚಾರಣೆಗೆ ಅನುಮತಿ

ಬೆಂಗಳೂರು; ಕೋಟ್ಯಂತರ ರುಪಾಯಿ ಮೌಲ್ಯದ ನಿವೇಶನಗಳನ್ನು ನಿಯಮಬಾಹಿರವಾಗಿ ಮಂಜೂರು ಮಾಡಿ ಖಾಸಗಿಯವರಿಗೆ...

ರಾಮಕೃಷ್ಣ ಹೆಗಡೆ ಕುಟುಂಬಕ್ಕೆ ಖರಾಬು ಗುಂಡು ತೋಪು ಜಮೀನು ಮಂಜೂರಿಗೆ ಕೋರಿಕೆ; ಸಿದ್ದು ಭೇಟಿ ಬೆನ್ನಲ್ಲೇ ಬಹಿರಂಗವಾದ ಪತ್ರ

ಬೆಂಗಳೂರು; ಬೆಂಗಳೂರು ಉತ್ತರ ತಾಲೂಕಿನಲ್ಲಿ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು...

ಘನತ್ಯಾಜ್ಯ ವಿಲೇವಾರಿ ಟಿಪ್ಪಿಂಗ್ ಶುಲ್ಕ; ರಾಮ್ಕಿ ಗ್ರೂಪ್‌ಗೆ ಅನುಕೂಲಕರ, ರಾಜ್ಯ ಸರ್ಕಾರವನ್ನು ಆರ್ಥಿಕ ದಿವಾಳಿತನದತ್ತ ತಳ್ಳಲಾಗಿದೆಯೇ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣಾ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ಟಿಪ್ಪಿಂಗ್ ಶುಲ್ಕದ ಆಧಾರದ ಮೇಲೆ...

ಶಾಂತಿನಗರ ಹೌಸಿಂಗ್‌ ಸೊಸೈಟಿ ಅಕ್ರಮ; 2,900 ಕೋಟಿ ಅಧಿಕ ಮೊತ್ತದ ಹಗರಣ ಕೆದಕಿದರೇ ಸತೀಶ್ ಜಾರಕಿಹೊಳಿ?

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ಅವರೊಂದಿಗೆ ತಳಕು ಹಾಕಿಕೊಂಡಿದ್ದ...

ಎಲ್‌ 1 ತಿರಸ್ಕೃತವಾದರೂ ನಡೆಯದ ಮರು ಟೆಂಡರ್, ಎಲ್ 2 ಗೆ ನೇರವಾಗಿ ಗುತ್ತಿಗೆಗೆ ಪರಿಗಣನೆ; 2,477.90 ಕೋಟಿ ರು ಹಗರಣ!

ಬೆಂಗಳೂರು; ಮಾಲೂರು-ಹೊಸಕೋಟೆ ವ್ಯಾಪ್ತಿಯನ್ನೂ ಸೇರಿದಂತೆ ಒಟ್ಟಾರೆ 123 ಕಿ ಮೀ ರಸ್ತೆಯನ್ನು ...

ನಕಲಿ ಶಿಕ್ಷಕರಿಗೆ ವೇತನ ಪಾವತಿ; ಆರೋಪಿತ ಅಧಿಕಾರಿಗಳ ವಿರುದ್ಧ ಇಲಾಖೆ ವಿಚಾರಣೆ ಕೈಬಿಟ್ಟ ಸರ್ಕಾರ!

ಬೆಂಗಳೂರು; ರಾಮನಗರ ಜಿಲ್ಲೆಯಲ್ಲಿ  2011ರಿಂದ 2014ರವರೆಗೆ ಹೆಚ್‌ಆರ್‍ಎಂಎಸ್‌ ಮೂಲಕ ನಕಲಿ ಶಿಕ್ಷಕರ...

120 ಎಕರೆ ಗೋಮಾಳ ಕಬಳಿಕೆ ಪ್ರಕರಣ; ಕಂದಾಯ ನಿರೀಕ್ಷಕರ ವರದಿಯನ್ನೇ ಮುಚ್ಚಿಟ್ಟ ತಹಶೀಲ್ದಾರ್, ಸಚಿವರ ಒತ್ತಡ?

ಬೆಂಗಳೂರು; ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ ಗ್ರಾಮದ ವಿವಿಧ ಸರ್ವೆ ನಂಬರ್‍‌ಗಳಲ್ಲಿರುವ...

ಕೌನ್ಸಲಿಂಗ್‌ಗೂ ಮುನ್ನವೇ ಪಿಡಿಒಗಳ ವರ್ಗಾವಣೆ; ಹಣ ಕೊಟ್ಟವರಿಗೆ ಆದೇಶ, ಕೊಡದವರಿಗೆ ಕೌನ್ಸಲಿಂಗ್, ಆರೋಪ

ಬೆಂಗಳೂರು; ಪಂಚಾಯ್ತಿ ಅಭಿವೃದ್ದಿ ಅಧಿಕಾರಿಗಳ ವರ್ಗಾವಣೆಯನ್ನು ಕೌನ್ಸಲಿಂಗ್‌ ಮೂಲಕವೇ ನಡೆಸಲಾಗುವುದು ಎಂದು...

Related Articles

Popular Categories

error: Content is protected !!