Friday | May 1, 2026 |

ಐಎಎಸ್‌ ಅಧಿಕಾರಿ ಮೊಹ್ಸೀನ್‌ ಬೆನ್ನು ಬಿದ್ದ ಬಿಜೆಪಿ ಸರ್ಕಾರ; ಚಾರ್ಜ್‌ಶೀಟ್‌ ಸಲ್ಲಿಸಲು ಒತ್ತಡ?

ಬೆಂಗಳೂರು; ರಾಜ್ಯ ಬಿಜೆಪಿ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ತಪಾಸಣೆ ನಡೆಸಿ ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿದ್ದ ಕರ್ನಾಟಕದ ಐಎಎಸ್‌ ಅಧಿಕಾರಿ ಮೊಹಮ್ಮದ್‌ ಮೊಹ್ಸೀನ್‌ರ ಬೆನ್ನು ಬಿದ್ದಿದೆ.
ಮಧ್ಯಾಹ್ನ ಉಪಹಾರ ಮತ್ತು ಕ್ಷೀರ ಭಾಗ್ಯ ಯೋಜನೆಯ ಟೆಂಡರ್‌ ಪ್ರಕ್ರಿಯೆ ಪ್ರಕರಣದಲ್ಲಿ ಆರೋಪಿ ಎಂದು ಹೇಳಲಾಗಿರುವ ಮೊಹ್ಸೀನ್‌ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸುವುದು ಮತ್ತು ದೋಷಾರೋಪಣೆ ಪಟ್ಟಿ ಸಲ್ಲಿಕೆ ಮಾಡಲು ಪ್ರಾಥಮಿಕ ಶಿಕ್ಷಣ ಇಲಾಖೆಗೆ ಒತ್ತಡ ಹೇರುತ್ತಿರುವುದು ಇದೀಗ ಬಹಿರಂಗವಾಗಿದೆ.

ಅಲ್ಲದೆ ಈ ಪ್ರಕರಣದಲ್ಲಿ ಸಚಿವ ಎಸ್‌ ಸುರೇಶ್‌ಕುಮಾರ್‌ ಅವರು ದೋಷಾರೋಪಣೆ ಪಟ್ಟಿ ಜಾರಿಗೊಳಿಸಲು ಅನುಮೋದನೆ ನೀಡುವ ಸಂಬಂಧದ ಕಡತವನ್ನು ಮಂಡಿಸಬೇಕು ಎಂದು ಅಧಿಕಾರಿಗಳಿಗೆ ಬೆನ್ನು ಬಿದ್ದಿದ್ದಾರೆ ಎಂದು ಅಧಿಕಾರಿಯೊಬ್ಬರು ‘ದಿ ಫೈಲ್‌’ಗೆ ತಿಳಿಸಿದ್ದಾರೆ.

ಇತ್ತೀಚೆಗಷ್ಟೇ ಸಾಮಾಜಿಕ ಜಾಲ ತಾಣದಲ್ಲಿ ಗೋಧಿ ಮೀಡಿಯಾ ಎಂದು ಜರೆದಿದ್ದ ಮೊಹ್ಮದ್‌ ಮೊಹ್ಸೀನ್‌ ಅವರು ಬಿಜೆಪಿ ಸರ್ಕಾರದ ಕೆಂಗಣ್ಣಿಗೆ ಗುರಿಯಾಗಿದ್ದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಯಾಗಿದ್ದ ಅವರನ್ನು ಕಳೆದ ಮೂರ್ನಾಲ್ಕು ದಿನಗಳ ಹಿಂದೆಯಷ್ಟೇ ಕಂದಾಯ ಇಲಾಖೆಗೆ ವರ್ಗಾಯಿಸಲಾಗಿತ್ತು.

ಐಎಎಸ್‌ ಅಧಿಕಾರಿ ಮೊಹಮ್ಮದ್‌ ಮೊಹ್ಸೀನ್‌ ಅವರನ್ನು 10 ಕೋಟಿ ರು. ಮೊತ್ತದ ಟೆಂಡರ್‌ ಪ್ರಕ್ರಿಯೆ ವಿಳಂಬ ಪ್ರಕರಣದಲ್ಲಿ ದೋಷಾರೋಪಣೆ ನಿಗದಿಗೊಳಿಸಿದ್ದ ಹಳೆಯ ಪ್ರಕರಣದಲ್ಲಿ ಶಿಸ್ತು ಕ್ರಮ ಜರುಗಿಸುವ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ 2020ರ ಫೆ.29 ಮತ್ತು ಮೇ 11ರಂದು ಸತತವಾಗಿ ಪ್ರಾಥಮಿಕ ಶಿಕ್ಷಣ ಇಲಾಖೆಗೆ ಸರಣಿ ಪತ್ರಗಳನ್ನು ಬರೆಯುತ್ತಿದೆ. ಇದಕ್ಕೆ ಸಂಬಂಧಿಸಿದ ಕೆಲ ಪತ್ರಗಳು ‘ದಿ ಫೈಲ್‌’ಗೆ ಲಭ್ಯವಾಗಿದೆ.

‘ಮೊಹಮದ್‌ ಮೊಹ್ಸೀನ್‌ ಅವರ ವಿರುದ್ಧ ಪ್ರತ್ಯೇಕವಾಗಿ ಶಿಸ್ತುಕ್ರಮ ಜರುಗಿಸುವ ದೋಷಾರೋಪಣೆ ಪಟ್ಟಿಯನ್ನು ಜಾರಿಗೊಳಿಸಲು ಇಲಾಖೆ ಸಚಿವರ ಅನುಮೋದನೆ ಪಡೆದು ತಮಗೆ ಪ್ರಸ್ತಾವನೆ ಸಲ್ಲಿಸಲಾಗುವುದು,’ ಎಂದು ಪ್ರಾಥಮಿಕ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಡಿಪಿಎಆರ್‌ಗೆ ಪತ್ರ ಬರೆದಿರುವುದು ಗೊತ್ತಾಗಿದೆ.

ಏನದು ಪ್ರಕರಣ?

ಮೊಹಮ್ಮದ್‌ ಮೊಹ್ಸೀನ್ ಅವರು ಕಾಂಗ್ರೆಸ್‌ಸರ್ಕಾರದ ಅವಧಿಯಲ್ಲಿ (2013-2015) ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಆಯುಕ್ತರಾಗಿ ಕಾರ್ಯನಿರ್ವಹಿಸಿದ್ದರು. ಆ ಅವಧಿಯಲ್ಲಿ ಮಧ್ಯಾಹ್ನ ಉಪಹಾರ ಯೋಜನೆ ಮತ್ತು ಕ್ಷೀರ ಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ಸ್ಟೀಮ್‌ ಬಾಯ್ಲರ್‌ ಅಳವಡಿಸುವ 10.00 ಕೋಟಿ ರು.ಯೋಜನೆಯ ಟೆಂಡರ್‌ ಪ್ರಕ್ರಿಯೆಯಲ್ಲಿ ವಿಳಂಬವಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ಐಎಫ್‌ಎಸ್‌ಅಧಿಕಾರಿ ಶಿವಶೈಲಂ ನೇತೃತ್ವದಲ್ಲಿ ತನಿಖೆ ನಡೆದಿತ್ತು.

ಈ ತನಿಖಾ ವರದಿಯಲ್ಲಿ ಮೊಹಮ್ಮದ್‌ ಮೊಹ್ಸೀನ್‌ ಕೂಡ ಟೆಂಡರ್‌ ಪ್ರಕ್ರಿಯೆಯಲ್ಲಿ ಆಗಿರುವ ವಿಳಂಬಕ್ಕೆ ಕಾರಣರು ಎಂದು ಹೇಳಲಾಗಿತ್ತು. ಈ ವರದಿ ಆಧರಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ, ಆರೋಪ ನಿಗದಿಪಡಿಸಿತ್ತು.

ವಿಶೇಷವೆಂದರೆ ಹಿಂದಿನ ಕಾಂಗ್ರೆಸ್‌ಸರ್ಕಾರ ಜಾರಿಗೆ ತಂದಿದ್ದ ಕ್ಷೀರಭಾಗ್ಯ ಯೋಜನೆಗೆ ರಾಷ್ಟ್ರೀಯ ಪ್ರಶಂಸೆ ದೊರೆತಿತ್ತಲ್ಲದೆ ಕರ್ನಾಟಕ ಮಾದರಿ ಅನುಷ್ಠಾನಕ್ಕೆ ಪಂಜಾಬ್ ರಾಜ್ಯ ಸರ್ಕಾರವೂ  ಆಸಕ್ತಿ ವಹಿಸಿತ್ತು. ಆದರೆ ಈಗಿನ ಬಿಜೆಪಿ ಸರ್ಕಾರ ಟೆಂಡರ್‌ ಪ್ರಕ್ರಿಯೆಯಲ್ಲಿ ಆಗಿರುವ ವಿಳಂಬವನ್ನು ಮುಂದಿಟ್ಟುಕೊಂಡು ಮೊಹ್ಸೀನ್‌ ಅವರ ವಿರುದ್ಧ ದೋಷಾರೋಪ ಪಟ್ಟಿ ಜಾರಿಗೊಳಿಸಲು ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆಗೆ 2019ರ ಡಿಸೆಂಬರ್‌ 6ರಿಂದ ಪತ್ರ ಬರೆಯುತ್ತಲೇ ಬಂದಿದೆ.

ಮೊಹ್ಸೀನ್ ಅವರು ಐಎಎಸ್‌ ಅಧಿಕಾರಿಯಾಗಿರುವ ಕಾರಣ ‘ಇವರ ವಿರುದ್ಧ ಪ್ರತ್ಯೇಕವಾಗಿ ಶಿಸ್ತು ಕ್ರಮ ಜರುಗಿಸಬೇಕಿದೆ. ಹೀಗಾಗಿ ಈ ಅಧಿಕಾರಿಯ ವಿರುದ್ಧ ಸ್ಪಷ್ಟ ಮತ್ತು ನಿರ್ದಿಷ್ಟ ಆರೋಪಗಳುಳ್ಳ ಪರಿಪೂರ್ಣ ದೋಷಾರೋಪಣಾ ಪಟ್ಟಿ ಸಲ್ಲಿಸಿ’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ ಸೂಚಿಸಿತ್ತು.

‘4 ವರ್ಷಗಳ ಹಿಂದೆ ನಡೆದಿರುವ ಈ ಪ್ರಕರಣದಲ್ಲಿ ಮಧ್ಯಾಹ್ನ ಉಪಹಾರ ಯೋಜನೆಯ ಜಂಟಿ ನಿರ್ದೇಶಕ ಎಚ್‌ವಿ ವೆಂಕಟೇಶಪ್ಪ, ಬೆಳ್ಳಶೆಟ್ಟಿ ಮತ್ತು ವ್ಯವಸ್ಥಾಪಕರಾಗಿದ್ದ ವಿ ಹನುಮಂತರಾವ್‌ ಅವರಿಂದ ಆರ್ಥಿಕ ನಷ್ಟ ಉಂಟಾಗಿದ್ದಲ್ಲಿ ಈ ಮೂವರು ಅಧಿಕಾರಿಗಳ ವಿರುದ್ಧ ದಾವೆ ಹೂಡುವ ಸಲುವಾಗಿ ಸ್ಪಷ್ಟ ಅಭಿಪ್ರಾಯದೊಂದಿಗೆ ಆರೋಪ ಪಟ್ಟಿ ಸಲ್ಲಿಕೆಗೆ ಸೂಕ್ತ ಪ್ರಸ್ತಾವನೆ ಸಲ್ಲಿಸಿ,’ ಎಂದು  ಸೂಚಿಸಿತ್ತು. ಆದರೆ ಈ ಮೂವರು ಅಧಿಕಾರಿಗಳು ವಯೋ ನಿವೃತ್ತಿ ಹೊಂದಿದ್ದಾರೆ.

ಬಿಸಿಯೂಟಕ್ಕಾಗಿ ಶಾಲೆ­ಗಳಲ್ಲಿ ಸ್ಟೀಮ್‌ ಬಾಯ್ಲರ್‌­ಗಳನ್ನು ಅಳವಡಿಸುವ ಯೋಜನೆಯ ಟೆಂಡರ್‌ಪ್ರಕ್ರಿಯೆ ವಿಳಂಬವಾಗಲು ಕಾರಣ­ರಾಗಿದ್ದಾರೆ ಎಂದು ಹೇಳಲಾಗಿದ್ದ ಪ್ರಥಮ ದರ್ಜೆ ಸಹಾಯಕ ಎಂ.ಆರ್‌. ಜಗದೀಶ್‌ ಅವರನ್ನು ಶಿಕ್ಷಣ ಇಲಾಖೆ ಆಯುಕ್ತ ಮೊಹಮ್ಮದ್‌ ಮೊಹ್ಸೀನ್‌ ಸೇವೆಯಿಂದ ಅಮಾನತುಗೊಳಿಸಿದ್ದನ್ನು ಸ್ಮರಿಸಬಹುದು.

ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಬಿಸಿಯೂಟ ಯೋಜನೆಗೆ ಸ್ಟೀಮ್ ಬಾಯ್ಲರ್ ಖರೀದಿಯಲ್ಲಿ ಅಕ್ಷರ ದಾಸೋಹದ ಮಾರ್ಗಸೂಚಿಯೂ ಉಲ್ಲಂಘನೆಯಾಗಿತ್ತೆಂಬ ಅರೋಪವೂ ಕೇಳಿ ಬಂದಿತ್ತು. ಇದು 2014ರ ಅಧಿವೇಶನ ಸಂದರ್ಭದಲ್ಲಿ ವಿಧಾನ ಪರಿಷತ್‌ನಲ್ಲಿ ಸಾಕಷ್ಟು ಗದ್ದಲಕ್ಕೂ ಕಾರಣವಾಗಿತ್ತು. 1-10 ನೇ ತರಗತಿ ಇರುವ ಶಾಲೆಗಳಲ್ಲಿ ಕೇಂದ್ರ ಸರ್ಕಾರದ ಬಿಸಿಯೂಟ ಕಾರ್ಯಕ್ರಮದ ಅನುದಾನ ಬಳಸಿ ಬಾಯ್ಲರ್ ಖರೀದಿಸಲು ರಾಜ್ಯ ವಲಯದಲ್ಲಿ ಶಿಕ್ಷಣ ಇಲಾಖೆ ನೇರವಾಗಿ ಗುತ್ತಿಗೆ ಕರೆದಿತ್ತು.
ಆದರೆ ಮಾರ್ಗಸೂಚಿ ಪ್ರಕಾರ ಜಿಲ್ಲಾ ಮಟ್ಟದಲ್ಲಿ ಅಥವಾ ಶಾಲಾ ಮಟ್ಟದಲ್ಲಿ ಗುತ್ತಿಗೆ ಕರೆಯಬೇಕು. ಇಲಾಖೆಯ ಆಯುಕ್ತರು, ಜಂಟಿ ನಿರ್ದೇಶಕರು ಹಾಗೂ ಹಾಗೂ ಅಧೀನ ಕಾರ್ಯದರ್ಶಿ ನಿಯಮ ಉಲ್ಲಂಘಿಸಿ ಆರೋಪಕ್ಕೆ ಗುರಿಯಾಗಿದ್ದರು.

ಬಾಯ್ಲರ್ ಖರೀದಿಗೆ 10 ಕೋಟಿ ಮೀಸಲಿಟ್ಟಿದ್ದ ಸರ್ಕಾರ, ಇದನ್ನು ಆಯ್ದ ಶಾಲೆಗಳಲ್ಲಿ ಪ್ರಾಯೋಗಿಕವಾಗಿ ಬಾಯ್ಲರ್ ಬಳಸಲು ಯೋಜನೆ ರೂಪಿಸಿತ್ತು. ಬಿಸಿಯೂಟ ಮತ್ತು ಕ್ಷೀರ ಭಾಗ್ಯ ಯೋಜನೆಯನ್ನು ಪರಿಣಾಮಕಾರಿ­ಯಾಗಿ ಜಾರಿ ಮಾಡುವ ಉದ್ದೇಶದಿಂದ ಬಾಯ್ಲ­ರ್‌ಒದಗಿ­ಸುವ ಸಂಬಂಧದ ಕಡತ ವಿಳಂಬ ಮಾಡಿದ ಆರೋಪ ಮೊಹ್ಸೀನ್ ಸೇರಿದಂತೆ ಇತರ ಅಧಿಕಾರಿಗಳ ಮೇಲಿತ್ತು. ರಾಜ್ಯದ 1.03 ಕೋಟಿ ಮಕ್ಕಳಿಗೆ ಸುಮಾರು 412 ಕೋಟಿ ವೆಚ್ಚದಲ್ಲಿ ಜಾರಿಗೆ ತಂದಿದ್ದ ಕ್ಷೀರಭಾಗ್ಯ ಯೋಜನೆಯ ಸಂಪೂರ್ಣ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಿತ್ತು.

Hot this week

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕಕ್ಕೆ ಒತ್ತಡ; ವಿವಾದಕ್ಕೆ ದಾರಿಯಾದ ಡಿಸಿಎಂ ಟಿಪ್ಪಣಿ, ನಿಯಮ ಉಲ್ಲಂಘನೆ?

ಬೆಂಗಳೂರು; ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್  ಪ್ರವೀಣ್ ಲಿಂಗಯ್ಯ ಅವರನ್ನು...

ಆಧಾರ್ ಕಾರ್ಡ್‌ಗಿಂತಲೂ ಶಕ್ತಿ ಸ್ಮಾರ್ಟ್‌ ದುಬಾರಿ, ಎಸ್‌ಪಿವಿ ರಚನೆಯಾದರೂ ಸಿಗದ ಕಾರ್ಡ್‌; 185 ಕೋಟಿ ವೆಚ್ಚ ಭರಿಸುವವರಾರು?

ಬೆಂಗಳೂರು; ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ  ಸೌಲಭ್ಯ ಕಲ್ಪಿಸುವ 'ಶಕ್ತಿ'...

ಟೆಲಿಕಾಂ ಕಂಪನಿಯಿಂದ ವಿಧಾನಸೌಧ ಟರೇಸ್‌ ಅನಧಿಕೃತ ಬಳಕೆ; ವಸೂಲಾಗದ ನೆಲಬಾಡಿಗೆ, ನಿಯಮ ಉಲ್ಲಂಘಿಸಿದ್ದರೂ ಕ್ರಮವಿಲ್ಲ

ಬೆಂಗಳೂರು; ಟೆಲಿಕಾಂ ಮೂಲಸೌಕರ್ಯ ಕಂಪನಿಗಳಲ್ಲಿ ಖ್ಯಾತಿ ಹೊಂದಿರುವ ಆಂಧ್ರ ಪ್ರದೇಶ ಮೂಲದ...

ನೀಟ್‌, ಕೆ-ಸಿಇಟಿ ತರಬೇತಿ; ಅಲ್ಪಸಂಖ್ಯಾತರ ಇಲಾಖೆಯಲ್ಲಿ ಟೆಂಡರ್ ನಿಯಮ ಉಲ್ಲಂಘನೆ, ನಿಯಮಬಾಹಿರ ಚಟುವಟಿಕೆ, ಸರ್ಕಾರಕ್ಕೆ ಲೀಗಲ್ ನೋಟೀಸ್‌

ಬೆಂಗಳೂರು; ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ವಸತಿ ಕಾಲೇಜು ವಿದ್ಯಾರ್ಥಿಗಳಿಗೆ ಆಫ್‌ಲೈನ್ ಮಾದರಿಯಲ್ಲಿ...

Topics

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕಕ್ಕೆ ಒತ್ತಡ; ವಿವಾದಕ್ಕೆ ದಾರಿಯಾದ ಡಿಸಿಎಂ ಟಿಪ್ಪಣಿ, ನಿಯಮ ಉಲ್ಲಂಘನೆ?

ಬೆಂಗಳೂರು; ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್  ಪ್ರವೀಣ್ ಲಿಂಗಯ್ಯ ಅವರನ್ನು...

ಆಧಾರ್ ಕಾರ್ಡ್‌ಗಿಂತಲೂ ಶಕ್ತಿ ಸ್ಮಾರ್ಟ್‌ ದುಬಾರಿ, ಎಸ್‌ಪಿವಿ ರಚನೆಯಾದರೂ ಸಿಗದ ಕಾರ್ಡ್‌; 185 ಕೋಟಿ ವೆಚ್ಚ ಭರಿಸುವವರಾರು?

ಬೆಂಗಳೂರು; ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ  ಸೌಲಭ್ಯ ಕಲ್ಪಿಸುವ 'ಶಕ್ತಿ'...

ಟೆಲಿಕಾಂ ಕಂಪನಿಯಿಂದ ವಿಧಾನಸೌಧ ಟರೇಸ್‌ ಅನಧಿಕೃತ ಬಳಕೆ; ವಸೂಲಾಗದ ನೆಲಬಾಡಿಗೆ, ನಿಯಮ ಉಲ್ಲಂಘಿಸಿದ್ದರೂ ಕ್ರಮವಿಲ್ಲ

ಬೆಂಗಳೂರು; ಟೆಲಿಕಾಂ ಮೂಲಸೌಕರ್ಯ ಕಂಪನಿಗಳಲ್ಲಿ ಖ್ಯಾತಿ ಹೊಂದಿರುವ ಆಂಧ್ರ ಪ್ರದೇಶ ಮೂಲದ...

ನೀಟ್‌, ಕೆ-ಸಿಇಟಿ ತರಬೇತಿ; ಅಲ್ಪಸಂಖ್ಯಾತರ ಇಲಾಖೆಯಲ್ಲಿ ಟೆಂಡರ್ ನಿಯಮ ಉಲ್ಲಂಘನೆ, ನಿಯಮಬಾಹಿರ ಚಟುವಟಿಕೆ, ಸರ್ಕಾರಕ್ಕೆ ಲೀಗಲ್ ನೋಟೀಸ್‌

ಬೆಂಗಳೂರು; ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ವಸತಿ ಕಾಲೇಜು ವಿದ್ಯಾರ್ಥಿಗಳಿಗೆ ಆಫ್‌ಲೈನ್ ಮಾದರಿಯಲ್ಲಿ...

ವರ್ಗಾವಣೆ ರದ್ದುಗೊಳಿಸಲು ತಲಾ 20 ಲಕ್ಷಕ್ಕೆ ಬೇಡಿಕೆ ಆರೋಪ; ಟೆಂಡರ್ ಕಮಿಷನ್ ಆಪಾದನೆ ಬೆನ್ನಲ್ಲೇ ಕರೀಗೌಡರ ವಿರುದ್ಧ ದೂರು

ಬೆಂಗಳೂರು; ಒಂದೆಡೆ ಮಂಜೂರಾಗಿರುವ ಹುದ್ದೆಗಳನ್ನು  ಭರ್ತಿ ಮಾಡುತ್ತಿಲ್ಲ, ಶೇ. 40ರಷ್ಟು ಹುದ್ದೆಗಳು...

ಈಜಿಪುರ ಮೇಲ್ಸೇತುವೆ ಕಾಮಗಾರಿ; ಪರಿಷ್ಕೃತ ಅಂದಾಜಿನಲ್ಲಿಯೇ ಲೋಪ ಪತ್ತೆ, 8.80 ಕೋಟಿ ಮೊತ್ತಕ್ಕೆ ಲೆಕ್ಕ ಪರಿಶೋಧಕರ ಆಕ್ಷೇಪಣೆ

ಬೆಂಗಳೂರು;  ಈಜಿಪುರ ಎಲಿವೇಟೆಡ್ ಕಾಮಗಾರಿಗೆ ಸಂಬಂಧಿಸಿದಂತೆ ಬೃಹತ್‌ ಬೆಂಗಳೂರು ಮಹಾನಗರಪಾಲಿಕೆಯು ಮಾಡಿದ್ದ...

Related Articles

Popular Categories

error: Content is protected !!