Friday | April 10, 2026 |

ಕರ್ನಾಟಕದ ಪಟ್ಟಣ ಸಹಕಾರ ಬ್ಯಾಂಕ್‌ಗಳಲ್ಲಿ ಅಕ್ರಮ; ಆರ್‌ಬಿಐ ಗೌಪ್ಯ ವರದಿ ಬಹಿರಂಗ

ಬೆಂಗಳೂರು; ರಾಜ್ಯದ ಮಲ್ಲಿಕಾರ್ಜುನ ಪಟ್ಟಣ ಸಹಕಾರ ಬ್ಯಾಂಕ್‌ ಸೇರಿದಂತೆ ಹಲವು ಪಟ್ಟಣ ಸಹಕಾರ ಬ್ಯಾಂಕ್‌ಗಳು ಸಾಲ, ಮುಂಗಡ, ಹೂಡಿಕೆ, ನಗದು ನಿರ್ವಹಣೆ, ಅನುಮಾನಸ್ಪದ ವಹಿವಾಟು ಸೇರಿದಂತೆ ಇನ್ನಿತರೆ ಚಟುವಟಿಕೆಗಳಲ್ಲಿ ನಿಯಮಾವಳಿಗಳನ್ನು ಉಲ್ಲಂಘಿಸಿರುವ ಗಂಭೀರ ಆರೋಪಕ್ಕೆ ಗುರಿಯಾಗಿವೆ.

ಈ ಕುರಿತು ಭಾರತೀಯ ರಿಸರ್ವ್‌ಬ್ಯಾಂಕ್‌ 2020ರ ಮಾರ್ಚ್‌ನ ವಿವಿಧ ದಿನಾಂಕಗಳಲ್ಲಿ ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯಭಾಸ್ಕರ್ ಅವರಿಗೆ ಸಲ್ಲಿಸಿರುವ ‘ಗೌಪ್ಯ’ ವರದಿ, ಪಟ್ಟಣ ಸಹಕಾರ ಬ್ಯಾಂಕ್‌ಗಳಲ್ಲಿನ ಹಲವು ನಿಯಮಬಾಹಿರ ಚಟುವಟಿಕೆ ಮತ್ತು ದೊಡ್ಡ ಮೊತ್ತದ ವಂಚನೆ ಪ್ರಕರಣಗಳನ್ನು ಹೊರಗೆಡವಿದೆ. ಈ ಎಲ್ಲಾ ಗೌಪ್ಯ ವರದಿಗಳು ‘ದಿ ಫೈಲ್‌’ಗೆ ಲಭ್ಯವಾಗಿದೆ.

ರಾಜ್ಯದ ವಿವಿಧೆಡೆ ಕಾರ್ಯನಿರ್ವಹಿಸುತ್ತಿರುವ ಹಲವು ಪಟ್ಟಣ ಸಹಕಾರ ಬ್ಯಾಂಕ್‌ಗಳ ಆಡಳಿತ ಮಂಡಳಿಯ ವಿಪರೀತ ಹಸ್ತಕ್ಷೇಪ ಮತ್ತು ಆರ್ಥಿಕ ಅಶಿಸ್ತಿನ ಕಾರಣಗಳಿಂದಾಗಿ ಎನ್‌ಪಿಎ ಪ್ರಮಾಣವನ್ನು ಹೆಚ್ಚಿಸಿಕೊಂಡಿದೆ ಎಂದು ಆರ್‌ಬಿಐ ಗೌಪ್ಯ ವರದಿಯಲ್ಲಿ ವಿವರಿಸಿದೆ. 2019ರ ಮಾರ್ಚ್‌ ಅಂತ್ಯದ ಹಣಕಾಸಿನ ವರ್ಷಕ್ಕೆ ಸಂಬಂಧಿಸಿದಂತೆ ತಪಾಸಣೆ ನಡೆಸಿರುವ ಆರ್‌ಬಿಐ, ವರದಿ ಆಧರಿಸಿ ಸೂಕ್ತ ಕ್ರಮ ಜರುಗಿಸಿ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸಿರುವುದು ವರದಿಯಿಂದ ಗೊತ್ತಾಗಿದೆ.

ರಾಯಚೂರು ಮಸ್ಕಿಯ ಮಲ್ಲಿಕಾರ್ಜುನ ಪಟ್ಟಣ ಸಹಕಾರ ಬ್ಯಾಂಕ್‌, ಬನಹಟ್ಟಿಯ ಕಾಡಸಿದ್ದೇಶ್ವರ, ಬಸವನಬಾಗೇವಾಡಿಯ ಬಸವೇಶ್ವರ ಸಹಕಾರ ಬ್ಯಾಂಕ್‌, ಹಡಗಲಿ ಅರ್ಬನ್‌ಕೋ ಆಪರೇಟೀವ್‌ ಬ್ಯಾಂಕ್‌, ಮಡಿಕೇರಿಯ ಕೊಡಗು ಜಿಲ್ಲಾ ಮಹಿಳಾ ಸಹಕಾರ ಬ್ಯಾಂಕ್‌, ತಾಳಿಕೋಟೆಯ ತಾಳಿಕೋಟೆ ಸಹಕಾರಿ ಬ್ಯಾಂಕ್‌, ಕಲಬುರಗಿಯ ಛತ್ರಪತಿ ಶಿವಾಜಿ ಮಹಾರಾಜ ಸಹಕಾರಿ ಬ್ಯಾಂಕ್‌ಗಳ ಕಾರ್ಯನಿರ್ವಹಣೆ ಕುರಿತು ತಪಾಸಣೆ ನಡೆಸಿರುವ ಆರ್‌ಬಿಐ ಅಧಿಕಾರಿಗಳು, ಅಲ್ಲಿನ ಹಲವು ಲೋಪಗಳನ್ನು ಪತ್ತೆ ಹಚ್ಚಿರುವುದು ವರದಿಯಿಂದ ತಿಳಿದು ಬಂದಿದೆ.

ಬಂಡವಾಳ ಮತ್ತು ಮೂಲ ಬಂಡವಾಳ ಮೊತ್ತದಲ್ಲಿ ಭಾರೀ ವ್ಯತ್ಯಾಸಗಳನ್ನು ಹೊರಗೆಡವಿರುವ ಆರ್‌ಬಿಐ ತಪಾಸಣೆ ತಂಡ, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ಗಳಲ್ಲಿ ನಾನ್‌ ಎಸ್‌ಎಲ್‌ಆರ್‌ನಲ್ಲಿ ಹೂಡಿಕೆ ಮಾಡಿರುವ ಮೊತ್ತ ಶೇಕಡವಾರು ಹೆಚ್ಚಿದೆ ಎಂದು ಪತ್ತೆ ಹಚ್ಚಿರುವುದು ವರದಿಯಿಂದ ಗೊತ್ತಾಗಿದೆ.

ಅದೇ ರೀತಿ ಪಟ್ಟಣ ಸಹಕಾರ ಬ್ಯಾಂಕ್‌ಗಳು ಮ್ಯೂಚುವಲ್‌ ಫಂಡ್‌ನಲ್ಲಿ ಹೂಡಿಕೆ ಮಾಡಿಲ್ಲವಲ್ಲದೆ ಬಹುತೇಕ ಬ್ಯಾಂಕ್‌ಗಳ ಕಾರ್ಯನಿರ್ವಹಣೆ ವೆಚ್ಚವನ್ನು ಆಡಳಿತ ಮಂಡಳಿಗಳು ಪ್ರತಿ ವರ್ಷವೂ ಹೆಚ್ಚಿಸಿದೆ. ಬ್ಯಾಂಕ್‌ಗಳ ಆರ್ಥಿಕ ಚಟುವಟಿಕೆಗಳ ಕುರಿತು ನಡೆದಿರುವ ಸಮವರ್ತಿತ ಲೆಕ್ಕಪರಿಶೋಧನೆಯೂ ಕ್ರಮ ಬದ್ಧವಾಗಿಲ್ಲ ಎಂಬ ಅಂಶ ಆರ್‌ಬಿಐನ ಗೌಪ್ಯ ವರದಿಯಿಂದ ತಿಳಿದು ಬಂದಿದೆ.

ಇನ್ನು, ಹಲವು ಬ್ಯಾಂಕ್‌ಗಳು ಹೂಡಿರುವ ಮೊತ್ತದಿಂದ ಬಿಡಿಗಾಸು ಲಾಭಾಂಶ ಗಳಿಸಿಲ್ಲ. ಹೀಗಾಗಿ ಹೂಡಿಕೆ ಮೊತ್ತ ಅನುತ್ಪಾದಕವಾಗಿದೆ. ಆಡಳಿತ ಮಂಡಳಿಯ ಅನುಮತಿ ಇಲ್ಲದೇ ಸಾಲ ನೀಡಿರುವ ಪಟ್ಟಣ ಸಹಕಾರ ಬ್ಯಾಂಕ್‌ಗಳು, ಆಸ್ತಿ ಹೊಣೆಗಾರಿಕೆ ಸಮಿತಿಗಳನ್ನೇ ರಚಿಸಿಲ್ಲ.

ಎನ್‌ಪಿಎ ಪ್ರಮಾಣವನ್ನು ಕಡಿಮೆಗೊಳಿಸಬೇಕು ಎಂದು ಆರ್‌ಬಿಐ ನೀಡಿದ್ದ ಕಟ್ಟುನಿಟ್ಟಿನ ಸೂಚನೆಯನ್ನು ಪಟ್ಟಣ ಸಹಕಾರ ಬ್ಯಾಂಕ್‌ಗಳು ಪಾಲಿಸಿಲ್ಲ. ಹಳೆ ಗ್ರಾಹಕರ ಖಾತೆಯನ್ನು ಸರಿಯಾಗಿ ನಿರ್ವಹಿಸದಿರುವುದು, ಅನುಮಾನಸ್ಪದ ವಹಿವಾಟು ನಡೆಸಿರುವುದು, ಠೇವಣಿಗೆ ವಿರುದ್ಧವಾಗಿ ಮುಂಗಡ ನೀಡಿರುವುದು, ಬಡ್ಡಿ ರಹಿತ ವೆಚ್ಚದಲ್ಲಿನ ಏರಿಕೆ, ಹೊಸ ಖಾತೆಗಳನ್ನು ಮರು ಪರೀಕ್ಷಿಸದಿರುವುದು ಸೇರಿದಂತೆ ಹಲವು ಅಕ್ರಮಗಳು ನಡೆದಿರುವುದು ಆರ್‌ಬಿಐ ತಪಾಸಣೆಯಿಂದ ಗೊತ್ತಾಗಿದೆ.

ಬ್ಯಾಂಕ್‌ಗಳ ಆರ್ಥಿಕ ಚಟುವಟಿಕೆಗಳ ಕುರಿತು ನಡೆಸಿರುವ ಶಾಸನಬದ್ಧ ಲೆಕ್ಕ ಪರಿಶೋಧನೆಗೂ ಆರ್‌ಬಿಐ ತಪಾಸಣೆ ವರದಿ ಮಧ್ಯೆ ಭಾರೀ ವ್ಯತ್ಯಾಸಗಳು ಕಂಡು ಬಂದಿವೆ. ಎನ್‌ಪಿಎಗೆ ಸಂಬಂಧಿಸಿದಂತೆ ನಡೆದಿರುವ ಶಾಸನಬದ್ಧ ಲೆಕ್ಕ ಪರಿಶೋಧನೆಯನ್ನು ಬದಿಗೆ ಸರಿಸಿರುವ ಆರ್‌ಬಿಐ ತಪಾಸಣೆ ತಂಡ, ಹೆಚ್ಚಿನ ಮೊತ್ತ ಎನ್‌ಪಿಎ ಆಗಿರುವುದನ್ನು ಪತ್ತೆ ಹಚ್ಚಿದೆ. ಅದೇ ರೀತಿ ನಷ್ಟಕ್ಕೆ ಸಂಬಂಧಿಸಿದಂತೆ ಶಾಸನಬದ್ಧ ಲೆಕ್ಕ ಪರಿಶೋಧನೆ ನೀಡಿರುವ ವರದಿಯ ನೈಜತೆಯನ್ನು ಒರೆಗೆ ಹಚ್ಚಿದೆಯಲ್ಲದೆ ನಷ್ಟದ ಮೊತ್ತದಲ್ಲಿ ಹೆಚ್ಚಳವಾಗಿರುವುದನ್ನು ಬೆಳಕಿಗೆ ತಂದಿರುವುದು ವರದಿಯಿಂದ ತಿಳಿದು ಬಂದಿದೆ.

Hot this week

13 ಪರ್ಸೆಂಟ್ ಕಮಿಷನ್‌ಗೆ ಬೇಡಿಕೆ; ಗುತ್ತಿಗೆದಾರರ ಸಂಘದಿಂದ ಮತ್ತೊಂದು ಪತ್ರ, ಕೋರ್ಟ್‌ ಕದ ತಟ್ಟಿದ ಗುತ್ತಿಗೆದಾರರು

ಬೆಂಗಳೂರು;  ಮಹಾತ್ಮಗಾಂಂಧಿ ನಗರ ವಿಕಾಸ ಯೋಜನೆ -1 ರ ಅಡಿಯಲ್ಲಿ ಕಾಮಗಾರಿ...

ಬಳಕೆಯಾಗದ ಅನುದಾನ; ಸರ್ಕಾರದ ಬೊಕ್ಕಸಕ್ಕೆ ಸಂದಾಯವಾಗಿಲ್ಲ 10,546.42 ಕೋಟಿ, ಸಿಎಜಿ ಆಕ್ಷೇಪಣೆ

ಬೆಂಗಳೂರು; ಕೃಷಿ ಮತ್ತು ತೋಟಗಾರಿಕೆ ಇಲಾಖೆ ಸೇರಿದಂತೆ 2024-25ನೇ ಸಾಲಿನಲ್ಲಿ   ಒಟ್ಟು...

ತರಕಾರಿ ಬೀಜಗಳ ಕಿಟ್ ವಿತರಣೆ; ದಾಸ್ತಾನು ಇಲ್ಲದ ಏಜೆನ್ಸಿಗೆ 4 ಜಿ ವಿನಾಯಿತಿ, ಬಹುಕೋಟಿ ಅಕ್ರಮ, ಭ್ರಷ್ಟಾಚಾರ ಸುಳಿಯಲ್ಲಿ ಸರ್ಕಾರ?

ಬೆಂಗಳೂರು; 2023-24 ಮತ್ತು 2025-26ನೇ ಸಾಲಿನವರೆಗೆ  ತೋಟಗಾರಿಕೆ ಇಲಾಖೆಯು ಜಾರಿಗೊಳಿಸಿದ್ದ  ...

13,646.51 ಕೋಟಿ ಹೆಚ್ಚುವರಿ ವೆಚ್ಚ; ಗೃಹ ಲಕ್ಷ್ಮಿಯದ್ದೇ ಸಿಂಹಪಾಲು, ಹೆಚ್ಚುವರಿ ಖರ್ಚಿಗೆ ಕಾರಣಗಳೇ ಇಲ್ಲ, ಸಿಎಜಿ ಆಕ್ಷೇಪ

ಬೆಂಗಳೂರು;  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ದಿ ಇಲಾಖೆಯು 2024-25ನೇ ಸಾಲಿನಲ್ಲಿ ...

Topics

ಬಳಕೆಯಾಗದ ಅನುದಾನ; ಸರ್ಕಾರದ ಬೊಕ್ಕಸಕ್ಕೆ ಸಂದಾಯವಾಗಿಲ್ಲ 10,546.42 ಕೋಟಿ, ಸಿಎಜಿ ಆಕ್ಷೇಪಣೆ

ಬೆಂಗಳೂರು; ಕೃಷಿ ಮತ್ತು ತೋಟಗಾರಿಕೆ ಇಲಾಖೆ ಸೇರಿದಂತೆ 2024-25ನೇ ಸಾಲಿನಲ್ಲಿ   ಒಟ್ಟು...

13,646.51 ಕೋಟಿ ಹೆಚ್ಚುವರಿ ವೆಚ್ಚ; ಗೃಹ ಲಕ್ಷ್ಮಿಯದ್ದೇ ಸಿಂಹಪಾಲು, ಹೆಚ್ಚುವರಿ ಖರ್ಚಿಗೆ ಕಾರಣಗಳೇ ಇಲ್ಲ, ಸಿಎಜಿ ಆಕ್ಷೇಪ

ಬೆಂಗಳೂರು;  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ದಿ ಇಲಾಖೆಯು 2024-25ನೇ ಸಾಲಿನಲ್ಲಿ ...

2,298 ಕೋಟಿ ರು ಮೊತ್ತದ ಬಿಲ್‌ ಬಾಕಿ; 276 ಕಾಮಗಾರಿ ಅಪೂರ್ಣ, ಬೊಕ್ಕಸ ಬರಿದಾಯಿತೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು ಕೈಗೆತ್ತಿಕೊಂಡಿದ್ದ  ಕಾಮಗಾರಿಗಳು ನಿಗದಿತ ಅವಧಿಯಲ್ಲಿ...

ಪುಸ್ತಕಗಳ ಖರೀದಿಯಲ್ಲಿ ವಂಚನೆ, ಭ್ರಷ್ಟಾಚಾರ ಆರೋಪ;ಎಚ್ ಟಿ ಪೋತೆ ಅವರ ವಿರುದ್ಧ ಕ್ರಮಕ್ಕೆ ಮೀನಮೇಷ

ಬೆಂಗಳೂರು;  ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ...

ಬಿಆರ್‍‌ಜಿಎಫ್‌ ಅನುದಾನದಲ್ಲಿ ಅಕ್ರಮ; ಲೋಕಾ ಶಿಫಾರಸ್ಸು ತಿರಸ್ಕೃತ, ಹಿರಿಯ ಐಎಎಸ್ ಅಧಿಕಾರಿ ವಿರುದ್ಧದ ಪ್ರಕರಣ ಮುಕ್ತಾಯ!

ಬೆಂಗಳೂರು; ಹಿಂದುಳಿದ ಪ್ರದೇಶಗಳ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರವು ನೀಡಿದ್ದ ಅನುದಾನ ಮತ್ತು...

Related Articles

Popular Categories

error: Content is protected !!