Friday | May 1, 2026 |

ಆಟೋ ಚಾಲಕರಿಗೆ ಪರಿಹಾರ; 387 ಕೋಟಿಯಲ್ಲಿ ಬಿಡುಗಡೆಯಾಗಿದ್ದು 60 ಕೋಟಿಯಷ್ಟೇ

ಬೆಂಗಳೂರು; ಲಾಕ್ ಡೌನ್ ಹಿನ್ನಲೆಯಲ್ಲಿ ಕೆಲಸವಿಲ್ಲದೆ ಸಂಕಷ್ಟಕ್ಕೀಡಾಗಿದ್ದ ಆಟೋ ಚಾಲಕರಿಗೆ ಪರಿಹಾರ ಮೊತ್ತ ಘೋಷಣೆ ಮಾಡಿ 2 ತಿಂಗಳು ಕಳೆದಿದ್ದರೂ ಬಹುತೇಕ ಆಟೋ ಚಾಲಕರಿಗೆ ಪರಿಹಾರದ ಹಣ ದೊರೆತಿಲ್ಲ.

ಆಟೋ ಚಾಲಕರಿಗೆ ತಲಾ ತಲಾ 5,000 ರು.ನಂತೆ ಧನ ಸಹಾಯ ನೀಡುವ ಉದ್ದೇಶಕ್ಕೆ 387.50 ಕೋಟಿ ರು.ಅನುದಾನ ಒದಗಿಸಲು ಆರ್ಥಿಕ ಇಲಾಖೆ ಸಹಮತಿ ನೀಡಿದೆ. ಈ ಪೈಕಿ 2020ರ ಜೂನ್‌ 25ರ ಅಂತ್ಯಕ್ಕೆ ಕೇವಲ 60.00 ಕೋಟಿ ರು. ಮಾತ್ರ ಬಿಡುಗಡೆ ಮಾಡಿದೆ. ಇದರಲ್ಲಿ ಎಷ್ಟು ಮಂದಿ ಆಟೋ ಚಾಲಕರಿಗೆ ಪರಿಹಾರ ಧನ ದೊರೆತಿದೆ ಎಂಬ ಬಗ್ಗೆ ಸಾರಿಗೆ ಇಲಾಖೆ ಮಾಹಿತಿ ಒದಗಿಸಿಲ್ಲ.

ಲಾಕ್‌ಡೌನ್‌ ಪರಿಣಾಮದಿಂದ ಸಂಕಷ್ಟ ಅನುಭವಿಸುತ್ತಿರುವ ಆಟೋ ಚಾಲಕರಿಗೆ ಮತ್ತು ಕೆಎಸ್‌ಆರ್‌ಟಿಸಿ ಸೇರಿದಂತೆ 4 ಸಾರಿಗೆ ಸಂಸ್ಥೆಗಳ ಅಧಿಕಾರಿ, ಸಿಬ್ಬಂದಿಗೆ ಎಷ್ಟು ಪ್ರಮಾಣದಲ್ಲಿ ಪರಿಹಾರ ಧನ ವಿತರಿಸಲಾಗಿದೆ ಎಂದು ಆರ್ಥಿಕ ಇಲಾಖೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಅಪೂರ್ಣ ಮಾಹಿತಿ ಒದಗಿಸಿದೆ. ಇದರ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

ಆಟೋ ಚಾಲಕರಿಗೆ ಮತ್ತು ಸಾರಿಗೆ ಸಂಸ್ಥೆಯ ಅಧಿಕಾರಿ, ಸಿಬ್ಬಂದಿಯ ಪರಿಹಾರ ಧನಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರಿಗೆ ಆರ್ಥಿಕ ಇಲಾಖೆ ಮಾಹಿತಿ ಒದಗಿಸಿದೆಯಾದರೂ ಖರ್ಚು ಮಾಡಿರುವ ಬಗ್ಗೆ ಸಾರಿಗೆ ಮತ್ತು ಒಳಾಡಳಿತ ಇಲಾಖೆ ಈವರೆವಿಗೂ ಒಂದೇ ಒಂದು ಮಾಹಿತಿಯನ್ನು ನೀಡಿಲ್ಲ ಎಂದು ಗೊತ್ತಾಗಿದೆ.

ಪರಿಹಾರ ಪಡೆಯಲು ಸರ್ಕಾರದ ಸೇವಾ ಸಿಂಧು ಆ್ಯಪ್ ಮೂಲಕ ಆಟೋ ಹಾಗೂ ಕ್ಯಾಬ್ ಚಾಲಕರು ಅರ್ಜಿ ಸಲ್ಲಿಸಿದ್ದಾರಾದರೂ ವಾಸ್ತವದಲ್ಲಿ ಸೇವಾ ಸಿಂಧು ಆ್ಯಪ್ ನಲ್ಲಿನ ಅರ್ಜಿಗಳ ಪರಿಶೀಲನೆಗೆ ಅನುಕೂಲವಾಗುವಂತಹ ಸಾಫ್ಟ್‌ವೇರ್‌ ಅಭಿವೃದ್ಧಿಪಡಿಸಿಲ್ಲ ಎನ್ನಲಾಗಿದೆ. ಹೀಗಾಗಿ ಆಟೋ ಚಾಲಕರಿಗೆ ಪರಿಹಾರ ಧನ ವಿತರಣೆಯಲ್ಲಿ ವಿಳಂಬವಾಗಿದೆ ಎಂದು ತಿಳಿದು ಬಂದಿದೆ.

ನೇರ ನಗದು ಮೂಲಕ ನೆರವು ವರ್ಗಾವಣೆಯನ್ನು ಖಚಿತಪಡಿಸಿಕೊಳ್ಳಲು ಸೇವಾ ಸಿಂಧು ಪೋರ್ಟಲ್ ಮತ್ತು ಸಾರಿಗೆ ಮತ್ತು ಹಣಕಾಸು ಇಲಾಖೆಗಳ ನಡುವೆ ದತ್ತಾಂಶವೂ ಪರಿಣಾಮಕಾರಿಯಾಗಿ ಸಂಯೋಜಿತಗೊಂಡಿಲ್ಲ.ತಾಂತ್ರಿಕ ಅಡಚಣೆಗಳನ್ನು ಮುಂದಿಟ್ಟುಕೊಂಡು ಸಾರಿಗೆ ಇಲಾಖೆ ಪರಿಹಾರ ಧನ ವಿತರಣೆಯಲ್ಲಿ ಮಾಡಿರುವ ವಿಳಂಬಕ್ಕೆ ಚಾಲಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಆಟೋ ಮತ್ತು ಕ್ಯಾಬ್ ಚಾಲಕರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಈಗಲೂ ಒದ್ದಾಡುತ್ತಿದ್ದಾರೆ. ಲಭ್ಯವಿರುವ ಮಾಹಿತಿಯಂತೆ 1.30 ಲಕ್ಷ ಅರ್ಜಿಗಳಷ್ಟೇ ಇಲಾಖೆಗೆ ಸ್ವೀಕೃತವಾಗಿದೆ. ಆದರೆ ರಾಜ್ಯದಲ್ಲಿ ಅಂದಾಜು 7.75 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಆಟೋ ಮತ್ತು ಕ್ಯಾಬ್ ಚಾಲಕರಿದ್ದಾರೆ.

ಚಾಸಿ ನಂಬರ್ ಮತ್ತು ಇತರೆ ವಿವರಗಳನ್ನು ಆನ್‌ಲೈನ್‌ ಮೂಲಕ ಒದಗಿಸಿದರೂ ತಂತ್ರಾಂಶ ಸ್ವೀಕರಿಸುತ್ತಿಲ್ಲ.ಹಲವು ಸಂದರ್ಭಗಳಲ್ಲಿ, ತಾಂತ್ರಿಕ ತೊಂದರೆಗಳಿಂದಾಗಿ ಚಾಲಕರ ಚಾಲನಾ ಪರವಾನಗಿ ಮತ್ತು ಆಧಾರ್‌ ಸಂಖ್ಯೆಯೂ ಸ್ವೀಕೃತಗೊಳ್ಳುತ್ತಿಲ್ಲ ಎನ್ನಲಾಗಿದೆ.

ಬಹುತೇಕ ಆಟೋ ಅಥವಾ ಟ್ಯಾಕ್ಸಿಗಳು ಚಾಲಕರ ಹೆಸರಿನಲ್ಲಿಲ್ಲ. ವಾಹನಕ್ಕೆ ಸಂಬಂಧಿಸಿದ ಬಹುತೇಕ ದಾಖಲೆಗಳು ಮಾಲೀಕರ ಬಳಿ ಇರುತ್ತವೆ. ಆದರೆ ಅರ್ಜಿಯಲ್ಲಿ ಸಮಸ್ತ ದಾಖಲೆಗಳನ್ನು ಲಗತ್ತಿಸಬೇಕು. ಡ್ರೈವಿಂಗ್ ಲೈಸೆನ್ಸ್‌ ಹಾಗೂ ಆಧಾರ್‌ ಕಾರ್ಡ್‌ನಲ್ಲಿ ಹೆಸರು ತಪ್ಪಾಗಿ ಉಲ್ಲೇಖವಾದರೂ ಅರ್ಜಿ ಸ್ವೀಕೃತವಾಗುವುದಿಲ್ಲ ಎಂದು ಬಹುತೇಕ ಆಟೋ ಚಾಲಕರು ಆರೋಪಿಸುತ್ತಾರೆ.

ಕೆಎಸ್‌ಆರ್‌ಟಿಸಿ, ಈಶಾನ್ಯ, ವಾಯುವ್ಯ ಸಾರಿಗೆ ಸಂಸ್ಥೆ ಮತ್ತು ಬಿಎಂಟಿಸಿಯ ಅಧಿಕಾರಿ, ಸಿಬ್ಬಂದಿಗೆ 2020ರ ಏಪ್ರಿಲ್‌ ಮತ್ತು ಮೇ ತಿಂಗಳ ವೇತನ ಭರಿಸಲು ತಿಂಗಳಿಗೆ 325.00 ಕೋಟಿ ರು. ನಂತೆ ಒಟ್ಟು 650.00 ಕೋಟಿ ರು. ಬಿಡುಗಡೆ ಮಾಡಿರುವುದು ಆರ್ಥಿಕ ಇಲಾಖೆಯ ಪತ್ರದಿಂದ ತಿಳಿದು ಬಂದಿದೆ.

Hot this week

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕದಲ್ಲಿ ಡಿಸಿಎಂ ಮೇಲುಗೈ, ಜಾರಕಿಹೊಳಿ ಮೌನ; ಕೆಟ್ಟ ಪೂರ್ವ ನಿದರ್ಶನಕ್ಕೆ ನಾಂದಿ ಹಾಡಿದ ಸಿಎಂ

ಬೆಂಗಳೂರು;  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ...

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕಕ್ಕೆ ಒತ್ತಡ; ವಿವಾದಕ್ಕೆ ದಾರಿಯಾದ ಡಿಸಿಎಂ ಟಿಪ್ಪಣಿ, ನಿಯಮ ಉಲ್ಲಂಘನೆ?

ಬೆಂಗಳೂರು; ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್  ಪ್ರವೀಣ್ ಲಿಂಗಯ್ಯ ಅವರನ್ನು...

ಆಧಾರ್ ಕಾರ್ಡ್‌ಗಿಂತಲೂ ಶಕ್ತಿ ಸ್ಮಾರ್ಟ್‌ ದುಬಾರಿ, ಎಸ್‌ಪಿವಿ ರಚನೆಯಾದರೂ ಸಿಗದ ಕಾರ್ಡ್‌; 185 ಕೋಟಿ ವೆಚ್ಚ ಭರಿಸುವವರಾರು?

ಬೆಂಗಳೂರು; ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ  ಸೌಲಭ್ಯ ಕಲ್ಪಿಸುವ 'ಶಕ್ತಿ'...

Topics

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕದಲ್ಲಿ ಡಿಸಿಎಂ ಮೇಲುಗೈ, ಜಾರಕಿಹೊಳಿ ಮೌನ; ಕೆಟ್ಟ ಪೂರ್ವ ನಿದರ್ಶನಕ್ಕೆ ನಾಂದಿ ಹಾಡಿದ ಸಿಎಂ

ಬೆಂಗಳೂರು;  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ...

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕಕ್ಕೆ ಒತ್ತಡ; ವಿವಾದಕ್ಕೆ ದಾರಿಯಾದ ಡಿಸಿಎಂ ಟಿಪ್ಪಣಿ, ನಿಯಮ ಉಲ್ಲಂಘನೆ?

ಬೆಂಗಳೂರು; ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್  ಪ್ರವೀಣ್ ಲಿಂಗಯ್ಯ ಅವರನ್ನು...

ಆಧಾರ್ ಕಾರ್ಡ್‌ಗಿಂತಲೂ ಶಕ್ತಿ ಸ್ಮಾರ್ಟ್‌ ದುಬಾರಿ, ಎಸ್‌ಪಿವಿ ರಚನೆಯಾದರೂ ಸಿಗದ ಕಾರ್ಡ್‌; 185 ಕೋಟಿ ವೆಚ್ಚ ಭರಿಸುವವರಾರು?

ಬೆಂಗಳೂರು; ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ  ಸೌಲಭ್ಯ ಕಲ್ಪಿಸುವ 'ಶಕ್ತಿ'...

ಟೆಲಿಕಾಂ ಕಂಪನಿಯಿಂದ ವಿಧಾನಸೌಧ ಟರೇಸ್‌ ಅನಧಿಕೃತ ಬಳಕೆ; ವಸೂಲಾಗದ ನೆಲಬಾಡಿಗೆ, ನಿಯಮ ಉಲ್ಲಂಘಿಸಿದ್ದರೂ ಕ್ರಮವಿಲ್ಲ

ಬೆಂಗಳೂರು; ಟೆಲಿಕಾಂ ಮೂಲಸೌಕರ್ಯ ಕಂಪನಿಗಳಲ್ಲಿ ಖ್ಯಾತಿ ಹೊಂದಿರುವ ಆಂಧ್ರ ಪ್ರದೇಶ ಮೂಲದ...

ನೀಟ್‌, ಕೆ-ಸಿಇಟಿ ತರಬೇತಿ; ಅಲ್ಪಸಂಖ್ಯಾತರ ಇಲಾಖೆಯಲ್ಲಿ ಟೆಂಡರ್ ನಿಯಮ ಉಲ್ಲಂಘನೆ, ನಿಯಮಬಾಹಿರ ಚಟುವಟಿಕೆ, ಸರ್ಕಾರಕ್ಕೆ ಲೀಗಲ್ ನೋಟೀಸ್‌

ಬೆಂಗಳೂರು; ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ವಸತಿ ಕಾಲೇಜು ವಿದ್ಯಾರ್ಥಿಗಳಿಗೆ ಆಫ್‌ಲೈನ್ ಮಾದರಿಯಲ್ಲಿ...

ವರ್ಗಾವಣೆ ರದ್ದುಗೊಳಿಸಲು ತಲಾ 20 ಲಕ್ಷಕ್ಕೆ ಬೇಡಿಕೆ ಆರೋಪ; ಟೆಂಡರ್ ಕಮಿಷನ್ ಆಪಾದನೆ ಬೆನ್ನಲ್ಲೇ ಕರೀಗೌಡರ ವಿರುದ್ಧ ದೂರು

ಬೆಂಗಳೂರು; ಒಂದೆಡೆ ಮಂಜೂರಾಗಿರುವ ಹುದ್ದೆಗಳನ್ನು  ಭರ್ತಿ ಮಾಡುತ್ತಿಲ್ಲ, ಶೇ. 40ರಷ್ಟು ಹುದ್ದೆಗಳು...

Related Articles

Popular Categories

error: Content is protected !!