Sunday | March 22, 2026 |

ಕೋವಿಡ್‌ ; ಐಎಎಸ್‌ ಅಧಿಕಾರಿಗಳ ಬೆವರಿಳಿಸಿದ ಸಾರ್ವಜನಿಕ ಲೆಕ್ಕಪತ್ರ ಸಮಿತಿ

Support THE-FILE

spot_img

ಬೆಂಗಳೂರು; ಪಿಪಿಇ ಕಿಟ್‌, ಸ್ಯಾನಿಟೈಸರ್‌, ವೆಂಟಿಲೇಟರ್‌ ಸೇರಿದಂತೆ ಇನ್ನಿತರೆ ವೈದ್ಯಕೀಯ ಸಲಕರಣೆಗಳ ಖರೀದಿಯಲ್ಲಿ ನಡೆದಿದೆ ಎನ್ನಲಾಗಿರುವ ಅವ್ಯವಹಾರ ಪ್ರಕರಣಗಳಿಗೆ ಕಾರಣರಾದ ಮತ್ತು ಕೋವಿಡ್‌ ಸೋಂಕಿತರನ್ನು ಅಮಾನುಷ ಮತ್ತು ಅಮಾನವೀಯವಾಗಿ ನಡೆಸಿಕೊಂಡಿರುವ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹಿರಿಯ ಐಎಎಸ್‌ ಅಧಿಕಾರಿಗಳನ್ನು ಎಚ್‌ ಕೆ ಪಾಟೀಲ್‌ ಅಧ್ಯಕ್ಷತೆಯಲ್ಲಿರುವ ಸಾರ್ವಜನಿಕ ಲೆಕ್ಕಪತ್ರ ಸಮಿತಿ, ಬೆವರಿಳಿಸಿದೆ.

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಅಧಿಕಾರಿಗಳನ್ನು ಪಕ್ಷಬೇಧ ಮರೆತು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಸಮಿತಿ ಸದಸ್ಯರು ಕೋವಿಡ್‌ ಸೋಂಕಿತರೊಂದಿಗೆ ಮಾನವೀಯತೆಯಿಂದ ವರ್ತಿಸಿ ಎಂದು ನಿರ್ದೇಶಿಸಿದರು ಎಂದು ವಿಶ್ವಸನೀಯ ಮೂಲಗಳು ‘ದಿ ಫೈಲ್‌’ಗೆ ತಿಳಿಸಿವೆ.

ಸಭೆಯಲ್ಲಿ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಲು ತಡವರಿಸಿದ ಜಾವೇದ್‌ ಅಖ್ತರ್‌, ಪಂಕಜಕುಮಾರ್‌ ಪಾಂಡೆ, ಮಂಜುಶ್ರೀ ಮತ್ತು ರಾಜೆಂದ್ರಕುಮಾರ್ ಕಟಾರಿಯಾ ಸೇರಿದಂತೆ ಇನ್ನಿತರೆ ಅಧಿಕಾರಿಗಳನ್ನು ಸದಸ್ಯರು ತರಾಟೆಗೆ ತೆಗೆದುಕೊಂಡರು ಎಂದು ತಿಳಿದು ಬಂದಿದ್ದು, ಗುಣಮಟ್ಟದ ಸೇವೆ ಮತ್ತು ಉತ್ತಮ ಚಿಕಿತ್ಸೆ ನೀಡುವಲ್ಲಿ ಆರೋಗ್ಯ ಇಲಾಖೆ ವಿಫಲವಾಗಿರುವುದನ್ನು ನಿರ್ದಶನಗಳ ಸಮೇತ ಎತ್ತಿ ತೋರಿಸಿದರು ಎಂದು ಗೊತ್ತಾಗಿದೆ.

‘ರಾಜ್ಯದಲ್ಲಿ ಕೊರೊನಾ ಪೀಡಿತ ರೋಗಿಗಳನ್ನು ಆರೋಗ್ಯ ಇಲಾಖೆಯು ಜಾನುವಾರುಗಳ ತರಹ ನೋಡುತ್ತಿದೆ. ಈ ಪ್ರವೃತ್ತಿಯನ್ನು ಬದಲಿಸಿಕೊಳ್ಳಬೇಕು. ಗುಣಮಟ್ಟದ ಸೇವೆ ಮತ್ತು ಉತ್ತಮ ಚಿಕಿತ್ಸಾ ವೆಚ್ಚ ಒದಗಿಸಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಬೇಕು’ ಎಂದು ಸಮಿತಿ ಎಚ್‌ ಕೆ ಪಾಟೀಲ್‌ ಅವರು ನಿರ್ದೇಶಿಸಿದರು ಎಂದು ಮೂಲಗಳು ತಿಳಿಸಿವೆ.

ರಾಜ್ಯದಲ್ಲಿ ಖಾಸಗಿ ಆಸ್ಪತ್ರೆಗಳು ಹೊಂದಿರುವ ಅಂದಾಜು 20,000 ಹಾಸಿಗೆಗಳನ್ನು ಉಪಯೋಗಿಸಿಕೊಳ್ಳಲು ತಕ್ಷಣ ಸುಗ್ರೀವಾಜ್ಞೆ ಹೊರಡಿಸಿ ಎಂದು ಎಚ್‌ ಕೆ ಪಾಟೀಲ್‌ ಅವರು ನಿರ್ದೇಶಿಸಿದರು ಎಂದು ಗೊತ್ತಾಗಿದೆ. ಖಾಸಗಿ ಆಸ್ಪತ್ರೆಗಳಿಗೆ ಬಿಬಿಎಂಪಿ, ಬೆಸ್ಕಾಂ ಸೇರಿದಂತೆ ಸರ್ಕಾರದ ಹಲವು ಇಲಾಖೆಗಳು ವಿನಾಯಿತಿ ಮತ್ತು ರಿಯಾಯಿತಿ ನೀಡಿವೆ. ಹೀಗಾಗಿ ಇಂತಹ ತುರ್ತು ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಗಳ ಸೇವೆ ಬಳಸಿಕೊಳ್ಳಬೇಕು ಎಂದು ಸಮಿತಿ ಸದಸ್ಯರು ಒಕ್ಕೊರಲಿನಿಂದ ಸೂಚಿಸಿದರು ಎಂದು ತಿಳಿದು ಬಂದಿದೆ.

‘ಇಂತಹ ತುರ್ತು ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಗಳು ಸರ್ಕಾರದೊಂದಿಗೆ ಅಸಹಕಾರ ಯಾಕೆ ತೋರಿಸುತ್ತಿವೆ. ಇಂತಹ ಖಾಸಗಿ ಆಸ್ಪತ್ರೆಗಳಿಗೆ ತಕ್ಷಣವೇ ಆಡಳಿತಾಧಿಕಾರಿಗಳನ್ನು ನೇಮಿಸಬೇಕಲ್ಲದೆ ಅವುಗಳನ್ನು ವಶಕ್ಕೆ ತೆಗೆದುಕೊಳ್ಳಲಿ ಎಂದೂ ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದರು ಎಂದು ಗೊತ್ತಾಗಿದೆ.

ಹಜ್‌ ಭವನದಲ್ಲಿ 10 ರೋಗಿಗಳಗಷ್ಟೆ ಅವಕಾಶ ಇದೆ. ಕೋವಿಡ್‌ ನಿಯಂತ್ರಿಸುವ ಸಂಬಂಧ ಸರ್ಕಾರ ಹೊರಡಿಸಿರುವ ಗುಣಮಟ್ಟದ ಕಾರ್ಯಾಚರಣೆ ಪ್ರಕಾರ (ಎಸ್‌ಒಪಿ) 10 ರೋಗಿಗಳಿಗೆ ಒಂದೇ ಶೌಚಾಲಯ, ಸ್ನಾನಗೃಹವಿದೆ ಎಂದು ಅಧಿಕಾರಿಗಳು ನೀಡಿದ ಉತ್ತರದಿಂದ ಕೆಲ ಸದಸ್ಯರು ಕೆರಳಿದರಲ್ಲದೆ, ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿರುವಾಗ ಇಂತಹ ಅವ್ಯವಸ್ಥೆಗಳೇಕೆ ಎಂದು ಜಾಡಿಸಿದರು ಎಂದು ತಿಳಿದು ಬಂದಿದೆ.

ಆಂಬುಲೆನ್ಸ್‌ಗಳ ಸಂಖ್ಯೆ ಕಡಿಮೆ ಇವೆ. ಇರುವ ಅಂಬುಲೆನ್ಸ್‌ಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಸಮಿತಿ ಸದಸ್ಯ ಹಾಗೂ ಮಾಜಿ ಆರೋಗ್ಯ ಸಚಿವ ಕೆ ಅರ್‌ ರಮೇಶ್‌ಕುಮಾರ್‌ ಸಭೆಯಲ್ಲಿ ಪ್ರಸ್ತಾಪಿಸಿದರು ಎಂದು ಗೊತ್ತಾಗಿದೆ.

Hot this week

ಬೆಳೆ ಹವಾಮಾನ ನಿಗಾ ಸಭೆ ನಡೆಸಿಲ್ಲ, ಮಾಹಿತಿ ವ್ಯವಸ್ಥೆಯೂ ಇಲ್ಲ; ಸಿಎಜಿಯನ್ನೂ ತಪ್ಪುದಾರಿಗೆಳೆದ ಸರ್ಕಾರ

ಬೆಂಗಳೂರು;  ರಾಜ್ಯದಲ್ಲಿ ಬರ ಪರಿಸ್ಥಿತಿ ಮೇಲ್ವಿಚಾರಣೆ ಮಾಡಲು ಬೆಳೆ ಹವಾಮಾನ ನಿಗಾ...

ರಾಡಾರ್ ಸ್ಟ್ರೀಮ್‌ ಗೇಜ್‌, ವೈರ್‍‌ಲೆಸ್‌ ಸಾಧನ ಅಳವಡಿಕೆ; ನಡೆಯದ ತಾಂತ್ರಿಕ ಪರಿಶೀಲನೆ, 3.54 ಕೋಟಿ ವ್ಯರ್ಥ

ಬೆಂಗಳೂರು;  ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಪ್ರವಾಹದ ಮುನ್ನೆಚ್ಚರಿಕೆಗಾಗಿ 2.45 ಕೋಟಿ...

ಎಂ ಆರ್ ಸೀತಾರಾಂ ಕುಟುಂಬ ಸದಸ್ಯರ ವಿರುದ್ಧ ಭೂಕಬಳಿಕೆ ಆರೋಪ; ದೂರು ಮರೆಮಾಚಿತ್ತೇ ಕಂದಾಯ ಇಲಾಖೆ?

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ ಅಕ್ಲೇನಹಳ್ಳಿ...

ನರೇಗಾ ಅಕ್ರಮ; 2 ವರ್ಷದಲ್ಲಿ 105.1 ಕೋಟಿ ದುರುಪಯೋಗ, 12.34 ಕೋಟಿಯಷ್ಟೇ ವಸೂಲು

  ಬೆಂಗಳೂರು; ಕಳೆದ ಮೂರು ವರ್ಷಗಳಲ್ಲಿ  ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 64,806 ಪ್ರಕರಣಗಳಲ್ಲಿ...

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

Topics

ಬೆಳೆ ಹವಾಮಾನ ನಿಗಾ ಸಭೆ ನಡೆಸಿಲ್ಲ, ಮಾಹಿತಿ ವ್ಯವಸ್ಥೆಯೂ ಇಲ್ಲ; ಸಿಎಜಿಯನ್ನೂ ತಪ್ಪುದಾರಿಗೆಳೆದ ಸರ್ಕಾರ

ಬೆಂಗಳೂರು;  ರಾಜ್ಯದಲ್ಲಿ ಬರ ಪರಿಸ್ಥಿತಿ ಮೇಲ್ವಿಚಾರಣೆ ಮಾಡಲು ಬೆಳೆ ಹವಾಮಾನ ನಿಗಾ...

ರಾಡಾರ್ ಸ್ಟ್ರೀಮ್‌ ಗೇಜ್‌, ವೈರ್‍‌ಲೆಸ್‌ ಸಾಧನ ಅಳವಡಿಕೆ; ನಡೆಯದ ತಾಂತ್ರಿಕ ಪರಿಶೀಲನೆ, 3.54 ಕೋಟಿ ವ್ಯರ್ಥ

ಬೆಂಗಳೂರು;  ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಪ್ರವಾಹದ ಮುನ್ನೆಚ್ಚರಿಕೆಗಾಗಿ 2.45 ಕೋಟಿ...

ಎಂ ಆರ್ ಸೀತಾರಾಂ ಕುಟುಂಬ ಸದಸ್ಯರ ವಿರುದ್ಧ ಭೂಕಬಳಿಕೆ ಆರೋಪ; ದೂರು ಮರೆಮಾಚಿತ್ತೇ ಕಂದಾಯ ಇಲಾಖೆ?

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ ಅಕ್ಲೇನಹಳ್ಳಿ...

ನರೇಗಾ ಅಕ್ರಮ; 2 ವರ್ಷದಲ್ಲಿ 105.1 ಕೋಟಿ ದುರುಪಯೋಗ, 12.34 ಕೋಟಿಯಷ್ಟೇ ವಸೂಲು

  ಬೆಂಗಳೂರು; ಕಳೆದ ಮೂರು ವರ್ಷಗಳಲ್ಲಿ  ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 64,806 ಪ್ರಕರಣಗಳಲ್ಲಿ...

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

ರೋಹಿತ್ ವೇಮುಲ ಕಾಯ್ದೆ; ವ್ಯಾಖ್ಯಾನಗಳು ಅಸ್ಪಷ್ಟ, ಕಾನೂನು ಬಲವಿಲ್ಲ, ವಿಧೇಯಕವೇ ಅಪೂರ್ಣ

ಬೆಂಗಳೂರು; ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು...

ಗ್ರಾಮಠಾಣ ಜಮೀನು ಅದಲು-ಬದಲು; ಆರ್ಥಿಕ ಇಲಾಖೆ ಆಕ್ಷೇಪ ಬದಿಗೊತ್ತಿ ಎಂ ಆರ್ ಸೀತಾರಾಂ ಕುಟುಂಬದ ಬೆನ್ನಿಗೆ ನಿಂತ ಸರ್ಕಾರ

ಬೆಂಗಳೂರು; ಸರ್ಕಾರಿ ಭೂಮಿಗೆ ರಸ್ತೆಯ ಸಂಪರ್ಕ ಹೊಂದಿಲ್ಲದಿರುವ, ರಸ್ತೆ ಸಂಪರ್ಕ ಕಲ್ಪಿಸದೇ...

ಅದಾನಿ ಎಸಿಸಿ ಲಿಮಿಟೆಡ್‌ನಿಂದ ಅಕ್ರಮ ಗಣಿಗಾರಿಕೆ; ನಿರ್ದೇಶಕರು, ಅಧಿಕಾರಿಗಳ ವಿರುದ್ಧ ಲೋಕಾ ತನಿಖೆಗೆ ಶಿಫಾರಸ್ಸು, ಕಡತಕ್ಕೆ ಧೂಳು

ಬೆಂಗಳೂರು;  ಕಲ್ಬುರ್ಗಿಯ ವಾಡಿಯಲ್ಲಿ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್ ಪ್ರೈವೈಟ್ ಲಿಮಿಟೆಡ್...

Related Articles

Popular Categories

error: Content is protected !!