Monday | March 23, 2026 |

ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ ಅಕ್ರಮ; ತನಿಖೆಯ ಸದ್ಯದ ವರದಿ ಸಲ್ಲಿಸಲು ಸೂಚನೆ

Support THE-FILE

spot_img

ಬೆಂಗಳೂರು: ಬೆಂಗಳೂರಿನ ಬಸವನಗುಡಿಯಲ್ಲಿರುವ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ಆಗಿರುವ ಅಕ್ರಮದ ಬಗ್ಗೆ ನಡೆಸಿರುವ ತನಿಖೆಯ ಸದ್ಯದ ಸ್ಥಿತಿ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಉಚ್ಛ ನ್ಯಾಯಾಲಯ ಮತ್ತು ಪೊಲೀಸ್‌ ಮಹಾನಿರ್ದೇಶಕರಿಗೆ ವರದಿ ಸಲ್ಲಿಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಮತ್ತು ವಿಶ್ವಜಿತ್‌ ಶೆಟ್ಟಿ ನೇತೃತ್ವದ ವಿಭಾಗೀಯ ಪೀಠ ಸೂಚಿಸಿದೆ.

ನರಸಿಂಹಮೂರ್ತಿ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ವಿಭಾಗೀಯ ಪೀಠ, ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ರಿಸರ್ವ್‌ ಬ್ಯಾಂಕ್‌ನ ಪ್ರಧಾನ ವ್ಯವಸ್ಥಾಪಕ, ಸಹಕಾರ ಸಂಘಗಳ ನಿಬಂಧಕರು, ಡಿಜಿಐಜಿ, ಬ್ಯಾಂಕ್‌ನ ಅಧ್ಯಕ್ಷರು ಸೇರಿದಂತೆ ಒಟ್ಟು 9 ಮಂದಿಗೆ ನೋಟೀಸ್‌ ಜಾರಿಗೊಳಿಸಿದೆ. ಪ್ರಕರಣವನ್ನು ಜೂನ್‌ 16ಕ್ಕೆ ಮುಂದೂಡಿಕೆಯಾಗಿದೆ.

ಪ್ರಕರಣವನ್ನು ಬಾಣಸವಾಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆದರೆ ತನಿಖೆ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿಲ್ಲ ಎಂಬ ಆಕ್ಷೇಪಣೆಗಳು ಕೇಳಿ ಬಂದಿದ್ದವು. ಹೀಗಾಗಿ ಡಿಐಜಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡದ ಮೂಲಕ ತನಿಖೆ ನಡೆಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ಬ್ಯಾಂಕ್‌ನಲ್ಲಿ ಯಾವುದೇ ಆಧಾರವಿಲ್ಲದೆ ಸುಮಾರು 1,650 ಕೋಟಿ ರು. ಸಾಲ ನೀಡಲಾಗಿತ್ತು. ಹಾಗೆಯೇ ನಕಲಿ ಠೇವಣಿ ಮೇಲೆ ಸಾಲ ವಿತರಿಸಲಾಗಿತ್ತು. ಠೇವಣಿದಾರರಿಗೆ ತಿಂಗಳ ಬಡ್ಡಿ ಮತ್ತು ಅಸಲು ಮೊತ್ತವೂ ದೊರೆತಿರಲಿಲ್ಲ. ಬ್ಯಾಂಕ್‌ನ ವಹಿವಾಟುಗಳ ಮೇಲೆ ಆರ್‌ಬಿಐ ಕೂಡ ನಿರ್ಬಂಧ ಹೇರಿತ್ತು.

ಬ್ಯಾಂಕ್‌ನಲ್ಲಿ ನಡೆದಿದ್ದ ಈ ಎಲ್ಲಾ ಬೆಳವಣಿಗೆಗಳಿಂದ ಹೂಡಿಕೆದಾರರು ಮತ್ತು ಠೇವಣಿದಾರರಲ್ಲಿ ಆತಂಕ ಉಂಟಾಗಿತ್ತು. ಠೇವಣಿದಾರರಿಗೆ ವಂಚನೆ ಆಗಿದೆ ಎಂಬ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಬ್ಯಾಂಕ್‌ಗೆ ಆಡಳಿತಾಧಿಕಾರಿ ನೇಮಕವಾಗಿದೆ.
ಬ್ಯಾಂಕ್‌ನಲ್ಲಿ ನಡೆದಿರುವ ಗಂಭೀರ ಸ್ವರೂಪದ ಅಕ್ರಮಗಳಲ್ಲಿ ಸಹಕಾರ ಇಲಾಖೆಯ ಅಧಿಕಾರಿಗಳೂ ಭಾಗಿ ಆಗಿದ್ದಾರೆ ಎಂಬ ಆರೋಪಗಳಿವೆ. ಇವರ ವಿರುದ್ಧವೂ ಭ್ರಷ್ಟಾಚಾರ ನಿಗ್ರಹ ತಡೆ ಕಾಯ್ದೆ ಅನ್ವಯ ತನಿಖೆ ನಡೆಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ. ಅರ್ಜಿದಾರರ ಪರ ವೆಂಕಟೇಶ್‌ ದಳವಾಯಿ ಅವರು ವಕಾಲತ್ತು ವಹಿಸಿದ್ದಾರೆ.

ಈ ಬ್ಯಾಂಕು ಸುಮಾರು ₹ 2,400 ಕೋಟಿ ವಾರ್ಷಿಕ ವಹಿವಾಟು ಹೊಂದಿದೆ. ಒಟ್ಟು ಆರು ಶಾಖೆಗಳನ್ನು ಹೊಂದಿದ್ದು, ಸಾವಿರಾರು ಮಂದಿ ಲಕ್ಷಾಂತರ ರೂಪಾಯಿ ಠೇವಣಿ ಇರಿಸಿದ್ದಾರೆ. ಇತ್ತೀಚೆಗೆ ಪರಿಚಯಿಸಿದ ಹೊಸ ಯೋಜನೆಗಳಿಂದ ಆಕರ್ಷಿತರಾಗಿ ಕಳೆದ ಕೆಲವು ತಿಂಗಳುಗಳಲ್ಲೇ ಸಾವಿರಾರು ಮಂದಿ ಬ್ಯಾಂಕಿನ ಸದಸ್ಯರಾಗಿದ್ದರು. ಉದ್ಯೋಗದಲ್ಲಿದ್ದು ನಿವೃತ್ತರಾದ ಅನೇಕರು ತಮ್ಮ ಜೀವಿತಾವಧಿಯ ಉಳಿತಾಯದ ಹಣವನ್ನು ಇಲ್ಲಿ ಠೇವಣಿ ಇಟ್ಟಿದ್ದರು.

ಯಾವುದೇ ಆಧಾರವಿಲ್ಲದೆ ಮತ್ತು ನಕಲಿ ಠೇವಣಿಗಳ ಮೇಲೆ ಒಂದು ಸಾವಿರ ಕೋಟಿಗೂ ಮೀರಿದ ಸಾಲ ನೀಡಿದ್ದರಿಂದಾಗಿ ಬ್ಯಾಂಕ್‌ ಬೀದಿಗೆ ಬಂದಿತ್ತು. ಹೀಗಾಗಿ ಬ್ಯಾಂಕ್‌ನ ವಹಿವಾಟುಗಳ ಮೇಲೆ ಆರ್‌ಬಿಐ ನಿರ್ಬಂಧ ಹೇರಿತ್ತು.

ಆರ್‌ಬಿಐ ನೀಡಿದ ನಿರ್ದೇಶನವೇನು?

ಆರ್‌ಬಿಐ ನೀಡಿರುವ ನಿರ್ದೇಶನದಲ್ಲಿ, ‘ಆರ್‌ಬಿಐಯಿಂದ ಲಿಖಿತವಾಗಿ ಪೂರ್ವಾನುಮತಿ ಪಡೆಯದೆ ಯಾವುದೇ ಸಾಲ ನೀಡುವುದಾಗಲಿ ಅಥವಾ ಸಾಲ ನವೀಕರಣವಾಗಲಿ ಮಾಡಬಾರದು. ಬಂಡವಾಳ ಹೂಡಿಕೆ ಮಾಡಬಾರದು. ಹೊಸದಾಗಿ ಠೇವಣಿ ಸ್ವೀಕರಿಸಬಾರದು ಎಂದು ಹೇಳಿತ್ತು.

ಆರ್‌ಬಿಐ 2020ರ ಜ. 2ರಂದು ನೀಡಿರುವ ನಿರ್ದೇಶನದಲ್ಲಿರುವುದನ್ನು ಹೊರತುಪಡಿಸಿ ಯಾವುದೇ ವಹಿವಾಟು ನಡೆಸಬಾರದು. ಅಲ್ಲದೆ, ಪ್ರತಿ ಖಾತೆಯಲ್ಲಿರುವ ಒಟ್ಟು ಠೇವಣಿ ಮೊತ್ತದಲ್ಲಿ ₹ 35 ಸಾವಿರಕ್ಕಿಂತ ಹೆಚ್ಚು ಹಣವನ್ನು ವಾಪಸು ಪಡೆಯಲು ಅವಕಾಶ ಇಲ್ಲ. ಈ ನಿರ್ದೇಶನಗಳು ಮುಂದಿನ ಆರು ತಿಂಗಳವರೆಗೆ ಜಾರಿಯಲ್ಲಿ ಇರಲಿದೆ. ಆದರೆ, ಇದರ ಮರುಪರಿಶೀಲನೆಗೆ ಅವಕಾಶ ಇದೆ ಎಂದು ತಿಳಿಸಿತ್ತು.

ಹಣದ ವ್ಯವಹಾರಕ್ಕೆ ಸಂಬಂಧಿಸಿದಂತೆ ಬ್ಯಾಂಕ್ ಆಡಳಿತ ಮಂಡಳಿಯಿಂದ ಸ್ಪಷ್ಟನೆ ಕೋರಿ ಆರ್‌ಬಿಐ ನೋಟಿಸ್ ನೀಡಿತ್ತು. ಖಾತೆಯಲ್ಲಿ ಕೆಲವೊಂದು ದೋಷಗಳನ್ನು ಗುರುತಿಸಿತ್ತಲ್ಲದೆ, ಠೇವಣಿದಾರರು 35 ಸಾವಿರ ರೂ. ಮಾತ್ರ ಡ್ರಾ ಮಾಡಬಹುದು ಎಂದು ಹೇಳಿತ್ತು.

Hot this week

ಭೂ ಸ್ವಾಧೀನ, ಪರಿಹಾರದಲ್ಲಿ ಅಕ್ರಮ; ಬಿಸ್ವಾಸ್ ವರದಿ ಮೂಲೆಗುಂಪು, 29.96 ಕೋಟಿ ನಷ್ಟ ಪ್ರಕರಣಕ್ಕೆ ಕ್ಲೀನ್ ಚಿಟ್

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಸಾಬೀತಾಗಿದ್ದ  ಬೆಳಗಾವಿ ಜಿಲ್ಲೆ ಹುಕ್ಕೇರಿ...

ಬೆಳೆ ಹವಾಮಾನ ನಿಗಾ ಸಭೆ ನಡೆಸಿಲ್ಲ, ಮಾಹಿತಿ ವ್ಯವಸ್ಥೆಯೂ ಇಲ್ಲ; ಸಿಎಜಿಯನ್ನೂ ತಪ್ಪುದಾರಿಗೆಳೆದ ಸರ್ಕಾರ

ಬೆಂಗಳೂರು;  ರಾಜ್ಯದಲ್ಲಿ ಬರ ಪರಿಸ್ಥಿತಿ ಮೇಲ್ವಿಚಾರಣೆ ಮಾಡಲು ಬೆಳೆ ಹವಾಮಾನ ನಿಗಾ...

ರಾಡಾರ್ ಸ್ಟ್ರೀಮ್‌ ಗೇಜ್‌, ವೈರ್‍‌ಲೆಸ್‌ ಸಾಧನ ಅಳವಡಿಕೆ; ನಡೆಯದ ತಾಂತ್ರಿಕ ಪರಿಶೀಲನೆ, 3.54 ಕೋಟಿ ವ್ಯರ್ಥ

ಬೆಂಗಳೂರು;  ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಪ್ರವಾಹದ ಮುನ್ನೆಚ್ಚರಿಕೆಗಾಗಿ 2.45 ಕೋಟಿ...

ಎಂ ಆರ್ ಸೀತಾರಾಂ ಕುಟುಂಬ ಸದಸ್ಯರ ವಿರುದ್ಧ ಭೂಕಬಳಿಕೆ ಆರೋಪ; ದೂರು ಮರೆಮಾಚಿತ್ತೇ ಕಂದಾಯ ಇಲಾಖೆ?

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ ಅಕ್ಲೇನಹಳ್ಳಿ...

ನರೇಗಾ ಅಕ್ರಮ; 2 ವರ್ಷದಲ್ಲಿ 105.1 ಕೋಟಿ ದುರುಪಯೋಗ, 12.34 ಕೋಟಿಯಷ್ಟೇ ವಸೂಲು

  ಬೆಂಗಳೂರು; ಕಳೆದ ಮೂರು ವರ್ಷಗಳಲ್ಲಿ  ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 64,806 ಪ್ರಕರಣಗಳಲ್ಲಿ...

Topics

ಭೂ ಸ್ವಾಧೀನ, ಪರಿಹಾರದಲ್ಲಿ ಅಕ್ರಮ; ಬಿಸ್ವಾಸ್ ವರದಿ ಮೂಲೆಗುಂಪು, 29.96 ಕೋಟಿ ನಷ್ಟ ಪ್ರಕರಣಕ್ಕೆ ಕ್ಲೀನ್ ಚಿಟ್

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಸಾಬೀತಾಗಿದ್ದ  ಬೆಳಗಾವಿ ಜಿಲ್ಲೆ ಹುಕ್ಕೇರಿ...

ಬೆಳೆ ಹವಾಮಾನ ನಿಗಾ ಸಭೆ ನಡೆಸಿಲ್ಲ, ಮಾಹಿತಿ ವ್ಯವಸ್ಥೆಯೂ ಇಲ್ಲ; ಸಿಎಜಿಯನ್ನೂ ತಪ್ಪುದಾರಿಗೆಳೆದ ಸರ್ಕಾರ

ಬೆಂಗಳೂರು;  ರಾಜ್ಯದಲ್ಲಿ ಬರ ಪರಿಸ್ಥಿತಿ ಮೇಲ್ವಿಚಾರಣೆ ಮಾಡಲು ಬೆಳೆ ಹವಾಮಾನ ನಿಗಾ...

ರಾಡಾರ್ ಸ್ಟ್ರೀಮ್‌ ಗೇಜ್‌, ವೈರ್‍‌ಲೆಸ್‌ ಸಾಧನ ಅಳವಡಿಕೆ; ನಡೆಯದ ತಾಂತ್ರಿಕ ಪರಿಶೀಲನೆ, 3.54 ಕೋಟಿ ವ್ಯರ್ಥ

ಬೆಂಗಳೂರು;  ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಪ್ರವಾಹದ ಮುನ್ನೆಚ್ಚರಿಕೆಗಾಗಿ 2.45 ಕೋಟಿ...

ಎಂ ಆರ್ ಸೀತಾರಾಂ ಕುಟುಂಬ ಸದಸ್ಯರ ವಿರುದ್ಧ ಭೂಕಬಳಿಕೆ ಆರೋಪ; ದೂರು ಮರೆಮಾಚಿತ್ತೇ ಕಂದಾಯ ಇಲಾಖೆ?

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ ಅಕ್ಲೇನಹಳ್ಳಿ...

ನರೇಗಾ ಅಕ್ರಮ; 2 ವರ್ಷದಲ್ಲಿ 105.1 ಕೋಟಿ ದುರುಪಯೋಗ, 12.34 ಕೋಟಿಯಷ್ಟೇ ವಸೂಲು

  ಬೆಂಗಳೂರು; ಕಳೆದ ಮೂರು ವರ್ಷಗಳಲ್ಲಿ  ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 64,806 ಪ್ರಕರಣಗಳಲ್ಲಿ...

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

ರೋಹಿತ್ ವೇಮುಲ ಕಾಯ್ದೆ; ವ್ಯಾಖ್ಯಾನಗಳು ಅಸ್ಪಷ್ಟ, ಕಾನೂನು ಬಲವಿಲ್ಲ, ವಿಧೇಯಕವೇ ಅಪೂರ್ಣ

ಬೆಂಗಳೂರು; ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು...

ಗ್ರಾಮಠಾಣ ಜಮೀನು ಅದಲು-ಬದಲು; ಆರ್ಥಿಕ ಇಲಾಖೆ ಆಕ್ಷೇಪ ಬದಿಗೊತ್ತಿ ಎಂ ಆರ್ ಸೀತಾರಾಂ ಕುಟುಂಬದ ಬೆನ್ನಿಗೆ ನಿಂತ ಸರ್ಕಾರ

ಬೆಂಗಳೂರು; ಸರ್ಕಾರಿ ಭೂಮಿಗೆ ರಸ್ತೆಯ ಸಂಪರ್ಕ ಹೊಂದಿಲ್ಲದಿರುವ, ರಸ್ತೆ ಸಂಪರ್ಕ ಕಲ್ಪಿಸದೇ...

Related Articles

Popular Categories

error: Content is protected !!