Wednesday | August 19, 2026 |

ಕೋವಿಡ್‌-19; ಸಚಿವರ ತವರು ಜಿಲ್ಲೆ ಬಳ್ಳಾರಿಯಲ್ಲಿ ಪ್ರಕರಣಗಳ ಸಂಖ್ಯೆ ಮುಚ್ಚಿಡಲಾಗುತ್ತಿದೆಯೇ?

ಬೆಂಗಳೂರು; ಯಾರ ಜಫ್ತಿಗೂ ಸಿಗದಂತೆ ನಾಗಾಲೋಟದಂತೆ ಓಡುತ್ತಿರುವ ಕೋವಿಡ್‌-19 ಸೋಂಕಿತರ ಪ್ರಕರಣಗಳ ಸಂಖ್ಯೆಯನ್ನು ರಾಜ್ಯ ಸರ್ಕಾರ ಮುಚ್ಚಿಡುತ್ತಿದೆ ಎಂಬ ಅನುಮಾನಗಳನ್ನು ಬಲಪಡಿಸುವುತ್ತ ಒಂದಷ್ಟು ಪುರಾವೆ ಲಭ್ಯವಾಗಿವೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ತವರು ಜಿಲ್ಲೆ ಬಳ್ಳಾರಿಯಲ್ಲಿ ಸೋಂಕಿತರ ಸಂಖ್ಯೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿ ಮತ್ತು ಆರೋಗ್ಯ ಇಲಾಖೆ ಬಿಡುಗಡೆಗೊಳಿಸುವ ಪ್ರಕಟಣೆಯಲ್ಲಿ ಸಂಖ್ಯೆಯಲ್ಲಿ ವ್ಯತ್ಯಾಸವಿರುವುದು ಇದೀಗ ಬಹಿರಂಗವಾಗಿದೆ.

ಬಳ್ಳಾರಿ ಜಿಲ್ಲೆಯಲ್ಲಿ ಇಂದು ಒಟ್ಟು 104 ಪ್ರಕರಣಗಳು ಕೋವಿಡ್‌-19 ಸೋಂಕಿತ ಪ್ರಕರಣಗಳು ಖಚಿತಪಟ್ಟಿವೆ ಎಂದು ಬಳ್ಳಾರಿ ಜಿಲ್ಲಾಧಿಕಾರಿ ಪ್ರಕಟಣೆ ಹೊರಡಿಸಿದ್ದರು. ಆದರೆ ರಾತ್ರಿ 8-30ರ ಸುಮಾರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆಗೊಳಿಸಿದ ಪ್ರಕಟಣೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಕೇವಲ 99 ಪ್ರಕರಣಗಳು ಖಚಿತಪಟ್ಟಿವೆ ಎಂದು ತಿಳಿಸಿದೆ.

ಜಿಲ್ಲೆಗಳಿಂದ ಅಂಕಿ ಸಂಖ್ಯೆಗಳನ್ನು ಕ್ರೋಢೀಕರಿಸುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಂತಿಮವಾಗಿ ಪ್ರಕರಣಗಳ ಒಟ್ಟು ಸಂಖ್ಯೆಯನ್ನು ಮುಚ್ಚಿಡುತ್ತಿದೆ ಎಂಬ ಆರೋಪಕ್ಕೆ ಬಳ್ಳಾರಿ ಜಿಲ್ಲೆಯ ಅಂಕಿ ಸಂಖ್ಯೆಗಳೇ ಪುರಾವೆ ಒದಗಿಸಿದಂತಾಗಿದೆ.

ಬಳ್ಳಾರಿ ಜಿಲ್ಲಾಧಿಕಾರಿ ಪ್ರಕಾರ ಇಲ್ಲಿಯವರೆಗೆ ಒಟ್ಟು 3,90,240 ತಪಾಸಣೆಗೊಳಪಡಿಸಲಾಗಿದೆ. ಇಂದು 586 ಮಂದಿಯನ್ನು ತಪಾಸಣೆಗೊಳಪಡಿಸಲಾಗಿದೆ. ಒಟ್ಟು ಪ್ರಕರಣಗಳ ಪೈಕಿ 1,272 ಪ್ರಕರಣಗಳು ಖಚಿತಪಟ್ಟಿವೆ. ಹೊಸಪೇಟೆ, ಸಂಡೂರು, ಕೂಡ್ಲಿಗಿ,ಬಳ್ಳಾರಿ, ಹರಪನಹಳ್ಳಿಯಲ್ಲಿ ಖಚಿತ ಪಟ್ಟ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿವೆ. ಈ ಪೈಕಿ ಬಳ್ಳಾರಿಯ 4 ಮಂದಿ ಆರೋಗ್ಯ ಸಿಬ್ಬಂದಿಗೆ ಕೋವಿಡ್‌ ಸೋಂಕಿರುವುದು ಖಚಿತಪಟ್ಟಿದೆ.

Hot this week

30,01,169 ರೈತರಿಂದ 25,180.77 ಕೋಟಿ ಹೊರಬಾಕಿ; ರೈತರ ಸಾಲ ಮನ್ನಾ ಪ್ರಸ್ತಾವವಿಲ್ಲ, ರೈತರ ಕೆಂಗಣ್ಣಿಗೆ ಗುರಿಯಾಗಲಿದೆಯೇ ಸರ್ಕಾರ?

ಬೆಂಗಳೂರು; ಸಹಕಾರ ಸಂಸ್ಥೆಗಳ ಮೂಲಕ ರೈತರು ಪಡೆದಿರುವ ಕೃಷಿ ಸಾಲವನ್ನು ಮನ್ನಾ...

ಇ-ಆಫೀಸ್‌ ತಂತ್ರಾಂಶದಲ್ಲೇ ಬೆಟ್ಟದಷ್ಟು ಬೆಳೆದು ನಿಂತ ಕಡತಗಳ ರಾಶಿ; ಗರಿಷ್ಠ 3,187, ಕನಿಷ್ಟ 32 ದಿನಗಳಾದರೂ ವಿಲೇವಾರಿಯಾಗಿಲ್ಲ, ಜಡ್ಡುಗಟ್ಟಿದೆಯೇ ಆಡಳಿತ?

ಬೆಂಗಳೂರು;   ಭೌತಿಕ ಕಡತಗಳ ವಿಲೇವಾರಿಯಲ್ಲಿ ಆಗುತ್ತಿದ್ದ ವಿಳಂಬವನ್ನು ತಪ್ಪಿಸುವ ಉದ್ದೇಶದಿಂದ ಇ-ಆಫೀಸ್‌...

ಹಿಂದುಳಿದ ಸಮುದಾಯ ಅಭಿವೃದ್ಧಿ ನಿಗಮಗಳಿಗೆ 473.41 ಕೋಟಿ ಅನುದಾನ ಹಂಚಿಕೆ; ನಾಲ್ಕೂವರೆ ತಿಂಗಳಾದರೂ ನಯಾಪೈಸೆಯೂ ಬಿಡುಗಡೆಯಾಗಿಲ್ಲ

ಬೆಂಗಳೂರು; ಆರ್ಥಿಕ ವರ್ಷ ಆರಂಭವಾಗಿ ನಾಲ್ಕೂವರೆ ತಿಂಗಳಾದರೂ ಸಹ ಹಿಂದುಳಿದ ವರ್ಗಗಳ...
Please Scan to make Your Contribution

Topics

30,01,169 ರೈತರಿಂದ 25,180.77 ಕೋಟಿ ಹೊರಬಾಕಿ; ರೈತರ ಸಾಲ ಮನ್ನಾ ಪ್ರಸ್ತಾವವಿಲ್ಲ, ರೈತರ ಕೆಂಗಣ್ಣಿಗೆ ಗುರಿಯಾಗಲಿದೆಯೇ ಸರ್ಕಾರ?

ಬೆಂಗಳೂರು; ಸಹಕಾರ ಸಂಸ್ಥೆಗಳ ಮೂಲಕ ರೈತರು ಪಡೆದಿರುವ ಕೃಷಿ ಸಾಲವನ್ನು ಮನ್ನಾ...

ಇ-ಆಫೀಸ್‌ ತಂತ್ರಾಂಶದಲ್ಲೇ ಬೆಟ್ಟದಷ್ಟು ಬೆಳೆದು ನಿಂತ ಕಡತಗಳ ರಾಶಿ; ಗರಿಷ್ಠ 3,187, ಕನಿಷ್ಟ 32 ದಿನಗಳಾದರೂ ವಿಲೇವಾರಿಯಾಗಿಲ್ಲ, ಜಡ್ಡುಗಟ್ಟಿದೆಯೇ ಆಡಳಿತ?

ಬೆಂಗಳೂರು;   ಭೌತಿಕ ಕಡತಗಳ ವಿಲೇವಾರಿಯಲ್ಲಿ ಆಗುತ್ತಿದ್ದ ವಿಳಂಬವನ್ನು ತಪ್ಪಿಸುವ ಉದ್ದೇಶದಿಂದ ಇ-ಆಫೀಸ್‌...

ಫ್ರೀಡಂ ಹಬ್ಬಕ್ಕೆ 6 ಕೋಟಿ ವೆಚ್ಚ!; ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳುವ ಮುನ್ನವೇ ಕೆಲಸ ಆರಂಭಿಸಿದ ಕಂಪನಿ

ಬೆಂಗಳೂರು; ಹೊಸದಾಗಿ ವಿದ್ಯಾರ್ಥಿ ನಿಲಯಗಳ ಆರಂಭ, ಅನುಮೋದಿತ ಕಾಮಗಾರಿಗಳ ಕಾರ್ಯಭಾರಕ್ಕೆ ನಲುಗಿ...

3,206 ಪಂಚಾಯ್ತಿಗಳಲ್ಲಿ ಶಾಸನಬದ್ಧ ತೆರಿಗೆ ವಸೂಲು; ಸರ್ಕಾರಕ್ಕೆ ಪಾವತಿಯಾಗದ 17.28 ಕೋಟಿ ಎಲ್ಲಿದೆ?

ಬೆಂಗಳೂರು; ರಾಜ್ಯದ 27 ಜಿಲ್ಲೆಗಳ 3,206 ಪಂಚಾಯ್ತಿಗಳು ಸರಕು ಸೇವಾ ತೆರಿಗೆ,...

Related Articles

Popular Categories

error: Content is protected !!