Friday | August 28, 2026 |

ಕೋವಿಡ್‌ ಭ್ರಷ್ಟಾಚಾರ; ಪೆನ್‌ಡ್ರೈವ್‌ ಬೆನ್ನಲ್ಲೇ ಹೊರಬಿತ್ತು ಜಿಲ್ಲಾ ವಿಪತ್ತು ನಿಧಿಯಲ್ಲಿನ ಅಕ್ರಮ

ಬೆಂಗಳೂರು; ಕೋವಿಡ್‌-19ರ ಹಿನ್ನೆಲೆಯಲ್ಲಿ ಜಿಲ್ಲಾಮಟ್ಟದಲ್ಲಿ ನಡೆದಿರುವ ವೈದ್ಯಕೀಯ ಸಲಕರಣೆಗಳ ಖರೀದಿ ಪ್ರಕ್ರಿಯೆಯಲ್ಲೂ ಕೋಟ್ಯಂತರ ರು. ಅವ್ಯವಹಾರ ನಡೆದಿರುವುದು ಬಹಿರಂಗವಾಗಿದೆ. ಜಿಲ್ಲಾ ವಿಪತ್ತು ನಿಧಿ ಬಳಸಿಕೊಂಡು ವೈದ್ಯಕೀಯ ಸಲಕರಣೆಗಳನ್ನು ಖರೀದಿಸುತ್ತಿರುವ ಜಿಲ್ಲಾಧಿಕಾರಿಗಳು ಶಾಸಕರಿಗೆ ಸಮಂಜಸವಾದ ಮಾಹಿತಿ ನೀಡುತ್ತಿಲ್ಲ ಎಂದು ಸಾರ್ವಜನಿಕ ಲೆಕ್ಕಪತ್ರ ಸಮಿತಿ ಸದಸ್ಯ ಈಶ್ವರ ಖಂಡ್ರೆ ಬಹಿರಂಗಪಡಿಸಿದ್ದಾರೆ.

ಅವ್ಯವಹಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಆಡಳಿತ ಪಕ್ಷದ ಶಾಸಕ ಮುರುಗೇಶ್‌ ನಿರಾಣಿ ಅವರ ಬಳಿ ಇದೆ ಎನ್ನಲಾಗಿರುವ ಪೆನ್‌ ಡ್ರೈವ್‌ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದ್ದರೆ ಇತ್ತ ಜಿಲ್ಲಾ ಮಟ್ಟದಲ್ಲಿಯೂ ಖರ್ಚಾಗಿರುವ ಎಸ್‌ಡಿಆರ್‌ಎಫ್‌ ನಿಧಿಯಲ್ಲೂ ಅಕ್ರಮ ನಡೆದಿದೆ ಎಂದು ಸಮಿತಿ ಮುಂದೆ ಬಹಿರಂಗಪಡಿಸಿರುವ ಈಶ್ವರ ಖಂಡ್ರೆ ಅವರು ಕೊರೊನಾ ಹೆಸರಿನಲ್ಲಿ ನಡೆದಿರುವ ಅವ್ಯವಹಾರ ಪ್ರಕರಣಗಳನ್ನು ಮತ್ತಷ್ಟು ವಿಸ್ತರಿಸಿದ್ದಾರೆ.

‘ಸುಮಾರು 5.50 ಕೋಟಿ ರು. ಹಣ ಬಿಡುಗಡೆಯಾಗಿದ್ದು ಯಾವುದಕ್ಕೆ ಖರ್ಚು ಮಾಡಿದ್ದಾರೆನ್ನುವ ಮಾಹಿತಿ ಇಲ್ಲ. ಲ್ಯಾಬ್‌ಗಳು ಪ್ರಾರಂಭವಾಗಿಲ್ಲ. ಪಿಪಿಇ ಕಿಟ್‌, ಇನ್ನಿತರ ಸುರಕ್ಷತಾ ಸಾಮಗ್ರಿಗಳ ಬಗ್ಗೆ ಲೆಕ್ಕಪತ್ರಗಳಿಲ್ಲ,’ ಎಂದು 2020ರ ಮೇ 28ರಂದು ನಡೆದಿದ್ದ ಸಭೆಯಲ್ಲಿ ಪ್ರಸ್ತಾಪಿಸಿರುವುದು ನಡವಳಿಯಿಂದ ತಿಳಿದು ಬಂದಿದೆ.

ಕೊರೊನಾ ಹರಡುತ್ತಿರುವ ಪರಿಸ್ಥಿತಿಯಲ್ಲಿಯೂ ಸಾರ್ವಜನಿಕರ ಹಣ, ತೆರಿಗೆ ಪಾವತಿದಾರರ ಹಣ ಲೂಟಿ ಹೊಡೆದು ಅವ್ಯವಹಾರ ಮಾಡುತ್ತಿದ್ದಾರೆ. ಪಿಪಿಇ ಕಿಟ್‌, ಮಾಸ್ಕ್‌, ಸ್ಯಾನಿಟೈಸರ್‌, ಗ್ಲೋವ್ಸ್‌ ಇನ್ನಿತರೆ ಅವಶ್ಯಕ ಪರಿಕರಗಳನ್ನು ಒದಗಿಸಬೇಕು. ಎಸ್‌ಡಿಆರ್‌ಎಫ್‌ಗೆ ಕೊಡುವ ಹಣದಲ್ಲಿ ಜಿಲ್ಲಾಧಿಕಾರಿಗಳೇನು ಖರ್ಚು ಮಾಡುತ್ತಿದ್ದಾರೆಯೋ ಅದರ ಬಗ್ಗೆ ಪರಿಶೀಲನಾ ಸಭೆಯಲ್ಲಿ ಕೇಳಿದರೆ ಸಮಂಜಸವಾದ ಉತ್ತರ ನೀಡುತ್ತಿಲ್ಲ ಎಂದು ಸಭೆಯ ಗಮನಕ್ಕೆ ತಂದಿರುವುದು ನಡವಳಿಯಿಂದ ಗೊತ್ತಾಗಿದೆ.

ಇದೇ ಸಭೆಯಲ್ಲಿ ವಲಸಿಗ ಕಾರ್ಮಿಕರಿಗೆ ವಿತರಿಸಿರುವ ಕಿಟ್‌ಗಳ ಬಗ್ಗೆಯೂ ಪ್ರಸ್ತಾಪವಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 198 ವಾರ್ಡ್‌ಗಳಲ್ಲಿ 7 ಲಕ್ಷ ಆಹಾರ ಕಿಟ್‌ಗಳನ್ನು ವಿತರಣೆ ಮಾಡಲಾಗಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರಾದರೂ ಈ 7 ಲಕ್ಷ ಕಿಟ್‌ಗಳನ್ನು ಯಾವ ಕಡೆ ವಿತರಣೆ ಮಾಡಿದ್ದಾರೆ, ಯಾವ ವಿಧಾನಸಭೆ ಕ್ಷೇತ್ರಕ್ಕೆ ಎಷ್ಟೆಷ್ಟು ಕಿಟ್‌ಗಳನ್ನು ನೀಡಿದ್ದಾರೆ, ಒಂದು ವಿಧಾನಸಭೆ ಕ್ಷೇತ್ರಕ್ಕೆ 3,000 ಕಿಟ್‌ಗಳನ್ನು ನೀಡಿದರೆ ಮತ್ತೊಂದು ವಿಧಾನಸಭೆ ಕ್ಷೇತ್ರಕ್ಕೆ 30,000 ಕಿಟ್‌ಗಳನ್ನು ನೀಡಿದ್ದಾರೆ. ಯಾರ ಕೈಗೆ ನೀಡಿದ್ದಾರೆ, ಇವುಗಳನ್ನು ಯಾರು ವಿತರಣೆ ಮಾಡಿದರು ಎಂದು ಸಭೆಯಲ್ಲಿ ಈಶ್ವರ ಬಿ ಖಂಡ್ರೆ ಅವರು ಪ್ರಶ್ನಿಸಿರುವುದು ಸಮಿತಿ ನಡವಳಿಯಿಂದ ತಿಳಿದು ಬಂದಿದೆ.

‘ಈ ಕೂಡಲೇ ಕೋವಿಡ್‌ ನಿಯಂತ್ರಣಕ್ಕೆಂದು ಖರ್ಚು ಮಾಡಿರುವ ಎಲ್ಲಾ ಬಾಬತ್ತುಗಳ ಸಾರ್ವಜನಿಕ ಪರಿಶೀಲನೆ ಆಗಬೇಕು. ಹಲವು ಇಲಾಖೆಗಳಲ್ಲಿ ಯಾವುದೇ ಲೆಕ್ಕಪತ್ರ ಇಡದೇ ಬಹುಶಃ ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಕೋಟ್ಯಂತರ ರುಪಾಯಿಯನ್ನು ಲಪಟಾಯಿಸಿದ್ದಾರೆ ಎಂಬ ಮಾಹಿತಿ ಇದೆ. ಯಾವುದಕ್ಕೆ ಖರ್ಚು ಮಾಡಲಾಗಿದೆ ಎಂಬ ಮಾಹಿತಿಯನ್ನು ಪರಿಶೀಲನೆ ಸಭೆಯಲ್ಲಿ ಶಾಸಕರಿಗೆ ಕೊಡದೇ ಇರುವುದು ಅನುಮಾನಕ್ಕೆ ಕಾರಣವಾಗಿದೆ,’ ಎನ್ನುತ್ತಾರೆ ಕರ್ನಾಟಕ ರಾಷ್ಟ್ರಸಮಿತಿ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ.

Hot this week

‘ಅದಾನಿ ಕಂಪನಿಯಿಂದಲೇ ವಿವಾದ, 850 ಕೋಟಿ ರು ಪಾವತಿಸುವ ಲಕ್ಷಣಗಳೂ ಗೋಚರಿಸುತ್ತಿಲ್ಲ, ಅಧಿಕಾರಿಗಳ ಕೈ ಕಟ್ಟಿ ಹಾಕಿದೆ’; ಸರ್ಕಾರದ ಅಸಹಾಯಕತೆ ಬಹಿರಂಗ

ಬೆಂಗಳೂರು;  'ಕಲ್ಬುರ್ಗಿಯ ವಾಡಿಯಲ್ಲಿ  ಸುಣ್ಣದ ಕಲ್ಲು ಗಣಿ ಗುತ್ತಿಗೆ ಪ್ರದೇಶದಲ್ಲಿ ಗಣಿಗಾರಿಕೆ...

ನೀರಾವರಿ ನಿಗಮಗಳ ಗುತ್ತಿಗೆದಾರರಿಗೆ 15,429.51 ಕೋಟಿ ರು ಬಾಕಿ; ಸ್ಥಗಿತಗೊಂಡಿವೆಯೇ ಕಾಮಗಾರಿಗಳು?

ಬೆಂಗಳೂರು;  ಕೃಷ್ಣಭಾಗ್ಯ ಜಲನಿಗಮ ಸೇರಿದಂತೆ ರಾಜ್ಯದ ನಾಲ್ಕು ನೀರಾವರಿ ನಿಗಮಗಳು ಅನುಷ್ಠಾನಗೊಳಿಸುತ್ತಿರುವ...

ಟೆಂಡರ್ ಇಲ್ಲದೆಯೇ 3.11 ಕೋಟಿ ನೇರ ಹೂಡಿಕೆ, ಮುಂಗಡ ಹಣ ಹೊಂದಾಣಿಕೆಯಲ್ಲೂ ವಿಳಂಬ, ಲಕ್ಷಾಂತರ ರು ನಷ್ಟ; ಮಹರ್ಷಿ ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಅಕ್ರಮ!

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಯಾವುದೇ ಟೆಂಡರ್‍‌ ಕರೆಯದೇ ನೇರವಾಗಿ...

ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಲೋಪ; ಹಣ ಪಾವತಿಯಲ್ಲಿ ಸರ್ಕಾರದ ಆದೇಶಗಳ ಉಲ್ಲಂಘನೆ, 51.21 ಕೋಟಿ ಮೊತ್ತದ ವಹಿವಾಟು ಪಾರದರ್ಶಕವಾಗಿವೆಯೇ?

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು ಹಣ ಪಾವತಿ ಸಂದರ್ಭಗಳಲ್ಲಿ ಸರ್ಕಾರದ...
Please Scan to make Your Contribution

Topics

‘ಅದಾನಿ ಕಂಪನಿಯಿಂದಲೇ ವಿವಾದ, 850 ಕೋಟಿ ರು ಪಾವತಿಸುವ ಲಕ್ಷಣಗಳೂ ಗೋಚರಿಸುತ್ತಿಲ್ಲ, ಅಧಿಕಾರಿಗಳ ಕೈ ಕಟ್ಟಿ ಹಾಕಿದೆ’; ಸರ್ಕಾರದ ಅಸಹಾಯಕತೆ ಬಹಿರಂಗ

ಬೆಂಗಳೂರು;  'ಕಲ್ಬುರ್ಗಿಯ ವಾಡಿಯಲ್ಲಿ  ಸುಣ್ಣದ ಕಲ್ಲು ಗಣಿ ಗುತ್ತಿಗೆ ಪ್ರದೇಶದಲ್ಲಿ ಗಣಿಗಾರಿಕೆ...

ನೀರಾವರಿ ನಿಗಮಗಳ ಗುತ್ತಿಗೆದಾರರಿಗೆ 15,429.51 ಕೋಟಿ ರು ಬಾಕಿ; ಸ್ಥಗಿತಗೊಂಡಿವೆಯೇ ಕಾಮಗಾರಿಗಳು?

ಬೆಂಗಳೂರು;  ಕೃಷ್ಣಭಾಗ್ಯ ಜಲನಿಗಮ ಸೇರಿದಂತೆ ರಾಜ್ಯದ ನಾಲ್ಕು ನೀರಾವರಿ ನಿಗಮಗಳು ಅನುಷ್ಠಾನಗೊಳಿಸುತ್ತಿರುವ...

ಟೆಂಡರ್ ಇಲ್ಲದೆಯೇ 3.11 ಕೋಟಿ ನೇರ ಹೂಡಿಕೆ, ಮುಂಗಡ ಹಣ ಹೊಂದಾಣಿಕೆಯಲ್ಲೂ ವಿಳಂಬ, ಲಕ್ಷಾಂತರ ರು ನಷ್ಟ; ಮಹರ್ಷಿ ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಅಕ್ರಮ!

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಯಾವುದೇ ಟೆಂಡರ್‍‌ ಕರೆಯದೇ ನೇರವಾಗಿ...

ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಲೋಪ; ಹಣ ಪಾವತಿಯಲ್ಲಿ ಸರ್ಕಾರದ ಆದೇಶಗಳ ಉಲ್ಲಂಘನೆ, 51.21 ಕೋಟಿ ಮೊತ್ತದ ವಹಿವಾಟು ಪಾರದರ್ಶಕವಾಗಿವೆಯೇ?

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು ಹಣ ಪಾವತಿ ಸಂದರ್ಭಗಳಲ್ಲಿ ಸರ್ಕಾರದ...

ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?

ಬೆಂಗಳೂರು;  ರಾಯಚೂರಿನಲ್ಲಿರುವ  ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಟೆಂಡರ್ ಕರೆಯದೇ ನೇರವಾಗಿ ಏಜೆನ್ಸಿ...

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

Related Articles

Popular Categories

error: Content is protected !!