Tuesday | September 8, 2026 |

ಕೋವಿಡ್‌ ಭ್ರಷ್ಟಾಚಾರ; ಪೆನ್‌ಡ್ರೈವ್‌ ಬೆನ್ನಲ್ಲೇ ಹೊರಬಿತ್ತು ಜಿಲ್ಲಾ ವಿಪತ್ತು ನಿಧಿಯಲ್ಲಿನ ಅಕ್ರಮ

ಬೆಂಗಳೂರು; ಕೋವಿಡ್‌-19ರ ಹಿನ್ನೆಲೆಯಲ್ಲಿ ಜಿಲ್ಲಾಮಟ್ಟದಲ್ಲಿ ನಡೆದಿರುವ ವೈದ್ಯಕೀಯ ಸಲಕರಣೆಗಳ ಖರೀದಿ ಪ್ರಕ್ರಿಯೆಯಲ್ಲೂ ಕೋಟ್ಯಂತರ ರು. ಅವ್ಯವಹಾರ ನಡೆದಿರುವುದು ಬಹಿರಂಗವಾಗಿದೆ. ಜಿಲ್ಲಾ ವಿಪತ್ತು ನಿಧಿ ಬಳಸಿಕೊಂಡು ವೈದ್ಯಕೀಯ ಸಲಕರಣೆಗಳನ್ನು ಖರೀದಿಸುತ್ತಿರುವ ಜಿಲ್ಲಾಧಿಕಾರಿಗಳು ಶಾಸಕರಿಗೆ ಸಮಂಜಸವಾದ ಮಾಹಿತಿ ನೀಡುತ್ತಿಲ್ಲ ಎಂದು ಸಾರ್ವಜನಿಕ ಲೆಕ್ಕಪತ್ರ ಸಮಿತಿ ಸದಸ್ಯ ಈಶ್ವರ ಖಂಡ್ರೆ ಬಹಿರಂಗಪಡಿಸಿದ್ದಾರೆ.

ಅವ್ಯವಹಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಆಡಳಿತ ಪಕ್ಷದ ಶಾಸಕ ಮುರುಗೇಶ್‌ ನಿರಾಣಿ ಅವರ ಬಳಿ ಇದೆ ಎನ್ನಲಾಗಿರುವ ಪೆನ್‌ ಡ್ರೈವ್‌ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದ್ದರೆ ಇತ್ತ ಜಿಲ್ಲಾ ಮಟ್ಟದಲ್ಲಿಯೂ ಖರ್ಚಾಗಿರುವ ಎಸ್‌ಡಿಆರ್‌ಎಫ್‌ ನಿಧಿಯಲ್ಲೂ ಅಕ್ರಮ ನಡೆದಿದೆ ಎಂದು ಸಮಿತಿ ಮುಂದೆ ಬಹಿರಂಗಪಡಿಸಿರುವ ಈಶ್ವರ ಖಂಡ್ರೆ ಅವರು ಕೊರೊನಾ ಹೆಸರಿನಲ್ಲಿ ನಡೆದಿರುವ ಅವ್ಯವಹಾರ ಪ್ರಕರಣಗಳನ್ನು ಮತ್ತಷ್ಟು ವಿಸ್ತರಿಸಿದ್ದಾರೆ.

‘ಸುಮಾರು 5.50 ಕೋಟಿ ರು. ಹಣ ಬಿಡುಗಡೆಯಾಗಿದ್ದು ಯಾವುದಕ್ಕೆ ಖರ್ಚು ಮಾಡಿದ್ದಾರೆನ್ನುವ ಮಾಹಿತಿ ಇಲ್ಲ. ಲ್ಯಾಬ್‌ಗಳು ಪ್ರಾರಂಭವಾಗಿಲ್ಲ. ಪಿಪಿಇ ಕಿಟ್‌, ಇನ್ನಿತರ ಸುರಕ್ಷತಾ ಸಾಮಗ್ರಿಗಳ ಬಗ್ಗೆ ಲೆಕ್ಕಪತ್ರಗಳಿಲ್ಲ,’ ಎಂದು 2020ರ ಮೇ 28ರಂದು ನಡೆದಿದ್ದ ಸಭೆಯಲ್ಲಿ ಪ್ರಸ್ತಾಪಿಸಿರುವುದು ನಡವಳಿಯಿಂದ ತಿಳಿದು ಬಂದಿದೆ.

ಕೊರೊನಾ ಹರಡುತ್ತಿರುವ ಪರಿಸ್ಥಿತಿಯಲ್ಲಿಯೂ ಸಾರ್ವಜನಿಕರ ಹಣ, ತೆರಿಗೆ ಪಾವತಿದಾರರ ಹಣ ಲೂಟಿ ಹೊಡೆದು ಅವ್ಯವಹಾರ ಮಾಡುತ್ತಿದ್ದಾರೆ. ಪಿಪಿಇ ಕಿಟ್‌, ಮಾಸ್ಕ್‌, ಸ್ಯಾನಿಟೈಸರ್‌, ಗ್ಲೋವ್ಸ್‌ ಇನ್ನಿತರೆ ಅವಶ್ಯಕ ಪರಿಕರಗಳನ್ನು ಒದಗಿಸಬೇಕು. ಎಸ್‌ಡಿಆರ್‌ಎಫ್‌ಗೆ ಕೊಡುವ ಹಣದಲ್ಲಿ ಜಿಲ್ಲಾಧಿಕಾರಿಗಳೇನು ಖರ್ಚು ಮಾಡುತ್ತಿದ್ದಾರೆಯೋ ಅದರ ಬಗ್ಗೆ ಪರಿಶೀಲನಾ ಸಭೆಯಲ್ಲಿ ಕೇಳಿದರೆ ಸಮಂಜಸವಾದ ಉತ್ತರ ನೀಡುತ್ತಿಲ್ಲ ಎಂದು ಸಭೆಯ ಗಮನಕ್ಕೆ ತಂದಿರುವುದು ನಡವಳಿಯಿಂದ ಗೊತ್ತಾಗಿದೆ.

ಇದೇ ಸಭೆಯಲ್ಲಿ ವಲಸಿಗ ಕಾರ್ಮಿಕರಿಗೆ ವಿತರಿಸಿರುವ ಕಿಟ್‌ಗಳ ಬಗ್ಗೆಯೂ ಪ್ರಸ್ತಾಪವಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 198 ವಾರ್ಡ್‌ಗಳಲ್ಲಿ 7 ಲಕ್ಷ ಆಹಾರ ಕಿಟ್‌ಗಳನ್ನು ವಿತರಣೆ ಮಾಡಲಾಗಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರಾದರೂ ಈ 7 ಲಕ್ಷ ಕಿಟ್‌ಗಳನ್ನು ಯಾವ ಕಡೆ ವಿತರಣೆ ಮಾಡಿದ್ದಾರೆ, ಯಾವ ವಿಧಾನಸಭೆ ಕ್ಷೇತ್ರಕ್ಕೆ ಎಷ್ಟೆಷ್ಟು ಕಿಟ್‌ಗಳನ್ನು ನೀಡಿದ್ದಾರೆ, ಒಂದು ವಿಧಾನಸಭೆ ಕ್ಷೇತ್ರಕ್ಕೆ 3,000 ಕಿಟ್‌ಗಳನ್ನು ನೀಡಿದರೆ ಮತ್ತೊಂದು ವಿಧಾನಸಭೆ ಕ್ಷೇತ್ರಕ್ಕೆ 30,000 ಕಿಟ್‌ಗಳನ್ನು ನೀಡಿದ್ದಾರೆ. ಯಾರ ಕೈಗೆ ನೀಡಿದ್ದಾರೆ, ಇವುಗಳನ್ನು ಯಾರು ವಿತರಣೆ ಮಾಡಿದರು ಎಂದು ಸಭೆಯಲ್ಲಿ ಈಶ್ವರ ಬಿ ಖಂಡ್ರೆ ಅವರು ಪ್ರಶ್ನಿಸಿರುವುದು ಸಮಿತಿ ನಡವಳಿಯಿಂದ ತಿಳಿದು ಬಂದಿದೆ.

‘ಈ ಕೂಡಲೇ ಕೋವಿಡ್‌ ನಿಯಂತ್ರಣಕ್ಕೆಂದು ಖರ್ಚು ಮಾಡಿರುವ ಎಲ್ಲಾ ಬಾಬತ್ತುಗಳ ಸಾರ್ವಜನಿಕ ಪರಿಶೀಲನೆ ಆಗಬೇಕು. ಹಲವು ಇಲಾಖೆಗಳಲ್ಲಿ ಯಾವುದೇ ಲೆಕ್ಕಪತ್ರ ಇಡದೇ ಬಹುಶಃ ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಕೋಟ್ಯಂತರ ರುಪಾಯಿಯನ್ನು ಲಪಟಾಯಿಸಿದ್ದಾರೆ ಎಂಬ ಮಾಹಿತಿ ಇದೆ. ಯಾವುದಕ್ಕೆ ಖರ್ಚು ಮಾಡಲಾಗಿದೆ ಎಂಬ ಮಾಹಿತಿಯನ್ನು ಪರಿಶೀಲನೆ ಸಭೆಯಲ್ಲಿ ಶಾಸಕರಿಗೆ ಕೊಡದೇ ಇರುವುದು ಅನುಮಾನಕ್ಕೆ ಕಾರಣವಾಗಿದೆ,’ ಎನ್ನುತ್ತಾರೆ ಕರ್ನಾಟಕ ರಾಷ್ಟ್ರಸಮಿತಿ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ.

Hot this week

ಲೀಡ್‌ ಮೆಂಬರ್‍‌ನದ್ದು ಶೂನ್ಯ ವಹಿವಾಟು; ಆದರೂ ಟೆಂಡರ್ ಪ್ಯಾಕೇಜ್‌ನ 7 ಮತ್ತು 9ರಲ್ಲಿ ಎಲ್ 1 ಆಗಿದ್ಹೇಗೆ?

ಬೆಂಗಳೂರು; ಘನತ್ಯಾಜ್ಯ ಸಂಗ್ರಹಣೆ, ಪ್ರಾಥಮಿಕ ಮತ್ತು ದ್ವಿತೀಯ ಹಂತದ ಸಾಗಾಣಿಕೆಗೆ ಸಂಬಂಧಿಸಿದಂತೆ...

ಪ್ರಜಾಸೇವೆ ಅಭಿಯಾನ ಚಾಲನೆ ಕಾರ್ಯಕ್ರಮಕ್ಕೆ 2.86 ಕೋಟಿ ವೆಚ್ಚ ; ಬರದಿಂದ ತತ್ತರಿಸಿದ್ದರೂ ದುಂದುವೆಚ್ಚಗಳಿಗೆ ಬಿದ್ದಿಲ್ಲ ಕಡಿವಾಣ

ಬೆಂಗಳೂರು;  ಬರದಿಂದ ತತ್ತರಿಸಿ ಹೋಗಿರುವ ರಾಜ್ಯದ 101 ತಾಲೂಕುಗಳಿಗೆ ನಷ್ಟದ ಪರಿಹಾರ...

2,500 ಕೋಟಿ ರು ಮೂಲ ಬೆಲೆಯ ಮೇಲೆ 350 ಕೋಟಿ ಪ್ರೀಮಿಯಂ; ನಾಗರೀಕರ ಮೇಲೆ ಹೊರೆ ಸೃಷ್ಟಿಸಿತೇ ಬಿಎಸ್‌ಡಬ್ಲ್ಯೂಎಂಎಲ್?

ಬೆಂಗಳೂರು;  ಪ್ರಾಥಮಿಕ ಹಂತದ ಕಸ ಸಂಗ್ರಹಣೆ ಮತ್ತು ಸಾಗಾಣಿಕೆಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯುಎಂಎಲ್‌...

ಬುಕ್ ಬ್ರಹ್ಮ ಸಾಹಿತ್ಯ ಉತ್ಸವಕ್ಕೆ 5 ಲಕ್ಷ ರು ಅನುದಾನ; ನೋಂದಣಿಯಾಗಿ 3 ವ‍ರ್ಷ ಪೂರೈಸದ ಬುಕ್‌ ಬ್ರಹ್ಮ ಫೌಂಡೇಷನ್‌ಗೆ ಒಂದು ಬಾರಿ ವಿನಾಯಿತಿ

ಬೆಂಗಳೂರು;  ಅನುದಾನ ಪಡೆಯುವ ಸಂಘ, ಸಂಸ್ಥೆಗಳು ನೋಂದಣಿಯಾಗಿ  3 ವರ್ಷಗಳನ್ನು ಪೂರೈಸಿರಬೇಕು...

ಘನತ್ಯಾಜ್ಯ ಸಂಗ್ರಹಣೆ, ಸಾಗಾಣಿಕೆಗೆ ವಾಹನಗಳ ಬಾಡಿಗೆ ವೆಚ್ಚ; ದರಗಳ ಪರಿಷ್ಕರಣೆಗೆ ಅನುಸರಿಸಿರುವ ಮಾನದಂಡದಲ್ಲಿ ಲೋಪವಿದೆಯೇ?

ಬೆಂಗಳೂರು; ಘನತ್ಯಾಜ್ಯ ಸಂಗ್ರಹಣೆ ಮತ್ತು ಸಾಗಾಣಿಕೆಗೆ ವಾಹನಗಳ ಬಾಡಿಗೆ ವೆಚ್ಚ ದರಗಳ...
Please Scan to make Your Contribution

Topics

ಲೀಡ್‌ ಮೆಂಬರ್‍‌ನದ್ದು ಶೂನ್ಯ ವಹಿವಾಟು; ಆದರೂ ಟೆಂಡರ್ ಪ್ಯಾಕೇಜ್‌ನ 7 ಮತ್ತು 9ರಲ್ಲಿ ಎಲ್ 1 ಆಗಿದ್ಹೇಗೆ?

ಬೆಂಗಳೂರು; ಘನತ್ಯಾಜ್ಯ ಸಂಗ್ರಹಣೆ, ಪ್ರಾಥಮಿಕ ಮತ್ತು ದ್ವಿತೀಯ ಹಂತದ ಸಾಗಾಣಿಕೆಗೆ ಸಂಬಂಧಿಸಿದಂತೆ...

2,500 ಕೋಟಿ ರು ಮೂಲ ಬೆಲೆಯ ಮೇಲೆ 350 ಕೋಟಿ ಪ್ರೀಮಿಯಂ; ನಾಗರೀಕರ ಮೇಲೆ ಹೊರೆ ಸೃಷ್ಟಿಸಿತೇ ಬಿಎಸ್‌ಡಬ್ಲ್ಯೂಎಂಎಲ್?

ಬೆಂಗಳೂರು;  ಪ್ರಾಥಮಿಕ ಹಂತದ ಕಸ ಸಂಗ್ರಹಣೆ ಮತ್ತು ಸಾಗಾಣಿಕೆಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯುಎಂಎಲ್‌...

ಘನತ್ಯಾಜ್ಯ ಸಂಗ್ರಹಣೆ, ಸಾಗಾಣಿಕೆಗೆ ವಾಹನಗಳ ಬಾಡಿಗೆ ವೆಚ್ಚ; ದರಗಳ ಪರಿಷ್ಕರಣೆಗೆ ಅನುಸರಿಸಿರುವ ಮಾನದಂಡದಲ್ಲಿ ಲೋಪವಿದೆಯೇ?

ಬೆಂಗಳೂರು; ಘನತ್ಯಾಜ್ಯ ಸಂಗ್ರಹಣೆ ಮತ್ತು ಸಾಗಾಣಿಕೆಗೆ ವಾಹನಗಳ ಬಾಡಿಗೆ ವೆಚ್ಚ ದರಗಳ...

ಭ್ರಷ್ಟಾಚಾರ, ಅಧಿಕ ಆಸ್ತಿ ಗಳಿಕೆ ಆರೋಪ; 4 ವರ್ಷಗಳಲ್ಲಿ 1,248 ಪ್ರಕರಣ ದಾಖಲು, ಸಿ ಗುಂಪಿನ ನೌಕರರೇ ಹೆಚ್ಚು

ಬೆಂಗಳೂರು; ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ, ಲಂಚಕ್ಕಾಗಿ ಬೇಡಿಕೆಯಿಟ್ಟ  ಆರೋಪಗಳಿಗೆ ಸಂಬಂಧಿಸಿದಂತೆ ...

ಕನ್ಸೋರ್ಟಿಯಂ ಷರತ್ತು, ಸದಸ್ಯರ ಷೇರು; ಅಂಜುಂ ಪರ್ವೇಜ್ ಸಮಿತಿಯ ಆಕ್ಷೇಪಣೆ ತಳ್ಳಿ ಹಾಕಿದ ಘನತ್ಯಾಜ್ಯ ನಿರ್ವಹಣೆ ಮಂಡಳಿ

ಬೆಂಗಳೂರು; ಕಸ ಸಂಗ್ರಹಣೆ ಮತ್ತು ಸಾಗಾಣಿಕೆಗೆ 21 ಪ್ಯಾಕೇಜ್‌ಗಳಲ್ಲಿ ರೂಪಿಸಿರುವ  ಕನ್ಸೋರ್ಟಿಯಂನಲ್ಲಿ...

Related Articles

Popular Categories

error: Content is protected !!