Thursday | April 16, 2026 |

ಕೋವಿಡ್ ಭ್ರಷ್ಟಾಚಾರ; ಕಾಂಗ್ರೆಸ್‌ ವಿರುದ್ಧ ಕೆಂಪಣ್ಣ ಆಯೋಗ ವರದಿಯ ಪ್ರತ್ಯಾಸ್ತ್ರ?

ಬೆಂಗಳೂರು:ಕೋವಿಡ್‌-19ರ ನಿರ್ವಹಣೆಗಾಗಿ ವೈದ್ಯಕೀಯ ಪರಿಕರಗಳ ಖರೀದಿಯಲ್ಲಾಗಿರುವ ಅಕ್ರಮಗಳ ಕುರಿತು ಬೀದಿಗಿಳಿದು ಹೋರಾಟಕ್ಕೆ ಕರೆ ನೀಡಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಅವರನ್ನು ಕುಗ್ಗಿಸಲು ರಾಜಕೀಯ ಪ್ರತ್ಯಾಸ್ತ್ರ ಪ್ರಯೋಗಿಸಲು ರಾಜ್ಯ ಬಿಜೆಪಿ ಸರ್ಕಾರ ಕಾರ್ಯೋನ್ಮುಖವಾಗಿದೆ.

ಅರ್ಕಾವತಿ ಬಡಾವಣೆ ಡಿನೋಟಿಫಿಕೇಶನ್‌ ಹಗರಣ ಕುರಿತು ನ್ಯಾ. ಎಚ್‌.ಎಸ್‌. ಕೆಂಪಣ್ಣ ಆಯೋಗದ ವಿಚಾರಣೆ ವರದಿಯನ್ನು ಬಿಜೆಪಿ ಸರ್ಕಾರವು ಅಸ್ತ್ರವನ್ನಾಗಿಸಿಕೊಳ್ಳಲು ಮುಂದಾಗಿದೆ ಎಂದು ನಗರಾಭಿವೃದ್ಧಿ ಇಲಾಖೆಯ ಉನ್ನತ ಅಧಿಕಾರಿಯೊಬ್ಬರು ‘ದಿ ಫೈಲ್‌’ಗೆ ತಿಳಿಸಿದ್ದಾರೆ.

ಆದರೆ ಈ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರಿಗೆ ಆಯೋಗ ಕ್ಲೀನ್‌ ಚಿಟ್‌ ನೀಡಿದೆ ಎನ್ನಲಾಗಿದೆ. ಆದರೂ ವರದಿಯನ್ನು ಮತ್ತೊಮ್ಮೆ ಅವಲೋಕನ ಮಾಡಲು ಮೂವರು ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದೆ ಎಂದು ಗೊತ್ತಾಗಿದೆ.

ಈ ಸಂಬಂಧ ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯಭಾಸ್ಕರ್‌ ಅವರು ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್‌ ಸಿಂಗ್‌, ಇ ವಿ ರಮಣರೆಡ್ಡಿ, ಮಹೇಂದ್ರ ಜೈನ್‌ರೊಂದಿಗೆ ಈಗಾಗಲೇ ಸರಣಿ ಸಭೆ ನಡೆಸಿದ್ದಾರೆ ಎನ್ನಲಾಗಿದೆ. ಇದರ ಯಾವ ಮಾಹಿತಿಯೂ ಸೋರಿಕೆಯಾಗದಂತೆ ಎಚ್ಚರಿಕೆ ವಹಿಸಲು ಸೂಚನೆ ನೀಡಿರುವ ಮುಖ್ಯ ಕಾರ್ಯದರ್ಶಿ ಅವರು ವಿಚಾರಣೆ ವರದಿ ಹೊರಗೆಡವಿರುವ ಅಂಶಗಳು ಮತ್ತು ಎತ್ತಿರುವ ತಕರಾರುಗಳ ಕುರಿತು ವರದಿ ಸಲ್ಲಿಸಲು ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನಡೆದಿದ್ದ ಅರ್ಕಾವತಿ ಬಡಾವಣೆ ಡಿ ನೋಟಿಫಿಕೇಷನ್‌ ಕುರಿತು ಸಿಬಿಐ ತನಿಖೆ ನಡೆಸುವಂತೆ ಹಲವು ವರ್ಷಗಳ ಹಿಂದೆಯೇ ಬೊಬ್ಬೆ ಹಾಕಿದ್ದ ಬಿಜೆಪಿ ನಾಯಕರು, ಆ ನಂತರ ಇದನ್ನು ಮರೆತು ಬಿಟ್ಟಿದ್ದರು.

ಅಲ್ಲದೆ, ಅರ್ಕಾವತಿ ಬಡಾವಣೆ ಅಕ್ರಮಕ್ಕೆ ಸಂಬಂಧಿಸಿದಂತೆ 2003ರಿಂದ 2018ರವರೆಗೂ ಕಾಗದ ಪತ್ರಗಳನ್ನು ಅಧಿವೇಶನಕ್ಕೆ ಮುನ್ನವೇ ನ್ಯಾಯಮೂರ್ತಿ ಕೆಂಪಣ್ಣ ಆಯೋಗಕ್ಕೆ ನೀಡಲಾಗುವುದು ಎಂದು ಎಚ್‌ ಡಿ ಕುಮಾರಸ್ವಾಮಿ ಹೇಳಿದ್ದರು. ಹಾಗೆಯೇ ‘ಅರ್ಕಾವತಿ ಬಡಾವಣೆ ಆರಂಭದಿಂದ ಇಲ್ಲಿಯವರೆಗೆ ನಡೆದಿರುವ ಹಗರಣಗಳ ಬಗ್ಗೆ ಸಮಗ್ರ ಮಾಹಿತಿ ಕಲೆ ಹಾಕಲಾಗುತ್ತಿದೆ. ಎಲ್ಲವನ್ನೂ ಸೇರಿಸಿ ನ್ಯಾಯಾಂಗ ಆಯೋಗಕ್ಕೆ ಸಲ್ಲಿಸಲಾಗುವುದು. ಇದರಿಂದ ಯಾರ ಕಾಲದಲ್ಲಿ ಏನೇನು ನಡೆದಿದೆ ಎನ್ನುವುದು ಗೊತ್ತಾಗುತ್ತದೆ. ಜೆಡಿಎಸ್ ಈ ಹೋರಾಟ ಮುಂದುವರಿಸಲಿದ್ದು, ಸದನದ ಒಳಗೂ ದನಿ ಎತ್ತಲಾಗುವುದು,’’ ಎಂದು ಹೇಳಿದ್ದರು.

ಕೆಂಪಣ್ಣ ಆಯೋಗ ನೀಡಿದ್ದ ವರದಿಯನ್ನು ಕಾಂಗ್ರೆಸ್‌ ಸರ್ಕಾರ ಬಹಿರಂಗಗೊಳಿಸಿರಲಿಲ್ಲ. ಅಲ್ಲದೆ ಕಾಂಗ್ರೆಸ್‌,ಜೆಡಿಎಸ್‌ ಮೈತ್ರಿಕೂಟ ಸರ್ಕಾರದಲ್ಲಿ ಎಚ್‌ ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲೂ ಆಯೋಗದ ವರದಿಯನ್ನು ವಿಧಾನಮಂಡಲದ ಅಧಿವೇಶನದಲ್ಲಿ ಮಂಡಿಸಿರಲಿಲ್ಲ. ಮೈತ್ರಿಕೂಟ ಸರ್ಕಾರವನ್ನು ಪತನಗೊಳಿಸಿ ಅಧಿಕಾರಕ್ಕೇರಿದ್ದ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದ ನಂತರ ನಡೆದಿರುವ ಅಧಿವೇಶನದಲ್ಲಿಯೂ ಈ ವರದಿಯನ್ನು ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸಿರಲಿಲ್ಲ.

ಆದರೀಗ ಕೋವಿಡ್‌ ಭ್ರಷ್ಟಾಚಾರ ಪ್ರಕರಣಗಳನ್ನು ಕಾಂಗ್ರೆಸ್‌ ರಾಜಕೀಯವಾಗಿ ಪ್ರತಿಷ್ಠೆಯನ್ನಾಗಿಸಿಕೊಳ್ಳುತ್ತಿದ್ದಂತೆ ಬಿಜೆಪಿ ದಿಢೀರ್‌ ಎಂದು ಅರ್ಕಾವತಿ ಡಿ ನೋಟಿಫಿಕೇಷನ್‌ ಕುರಿತು ನೀಡಿದ್ದ ಕೆಂಪಣ್ಣ ಆಯೋಗದ ವರದಿಯನ್ನು ಮುಂದಿಟ್ಟುಕೊಂಡು ಪ್ರತಿಪಕ್ಷದ ಮೇಲೆ ಪ್ರತ್ಯಾಸ್ತ್ರ ಪ್ರಯೋಗಿಸಲು ಚಿಂತಿಸಿರುವುದು ಕುತೂಹಲ ಮೂಡಿಸಿದೆ.

ಅರ್ಕಾವತಿ ಡಿ ನೋಟಿಫಿಕೇಷನ್‌ ಪ್ರಕರಣ ಹಿನ್ನೆಲೆ

ಅರ್ಕಾವತಿ ಬಡಾವಣೆ ನಿರ್ಮಾಣಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ 16 ಹಳ್ಳಿಗಳ 2,750 ಎಕರೆ ಜಮೀನು ಸ್ವಾಧೀನಕ್ಕೆ 2004 ರ ಫೆಬ್ರವರಿಯಲ್ಲಿ ಅಂತಿಮ ಅಧಿಸೂಚನೆ ಹೊರಡಿಸಿತ್ತು. ಅಂತಿಮ ಅಧಿಸೂಚನೆಯಲ್ಲಿದ್ದ ಜಮೀನಿನ ಪೈಕಿ ಒಟ್ಟು 983.33 ಎಕರೆಯನ್ನು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಡಿನೋಟಿಫೈ ಮಾಡಿತ್ತು. ಈ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಪ್ರತಿಪಕ್ಷದ ನಾಯಕರಾಗಿದ್ದ ಜಗದೀಶ್‌ ಶೆಟ್ಟರ್‌ ಅವರು ವಿಧಾನಸಭೆಯಲ್ಲಿ ಆರೋಪಿಸಿದ್ದರು.

ಈ ಹಗರಣವನ್ನೇ ಮುಂದಿಟ್ಟುಕೊಂಡು ಬಿಜೆಪಿ ಶಾಸಕರು ಸದನದಲ್ಲಿ ಗದ್ದಲ ಎಬ್ಬಿಸಿದ್ದರು. ಹೀಗಾಗಿ ಸಿದ್ದರಾಮಯ್ಯ ಅವರು ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಚ್‌ ಎಸ್‌ ಕೆಂಪಣ್ಣ ನೇತೃತ್ವದಲ್ಲಿ ಏಕ ವ್ಯಕ್ತಿ ತನಿಖಾ ಸಮಿತಿ ನೇಮಿಸಿದ್ದರು.
ಸ್ವಾಧೀನ ಮಾಡಿಕೊಂಡಿದ್ದ ಜಮೀನಿನಲ್ಲಿ 983.33 ಎಕರೆ ಡಿ ನೋಟಿಫಿಕೇಷನ್‌ ಮಾಡಿದ್ದರ ಕುರಿತು ತನಿಖೆ ನಡೆಸಿದ್ದ ಆಯೋಗವು 5 ಅಂಶಗಳ ಕುರಿತು ವಿಚಾರಣೆ ನಡೆಸಿತ್ತು.

ಸ್ವಾಧೀನ ಮಾಡಿಕೊಂಡಿದ್ದ ಜಮೀನಿನಲ್ಲಿ 983.33 ಎಕರೆಯನ್ನು ಡಿನೋಟಿಫೈ ಮಾಡಿರುವ ಸರ್ಕಾರದ ಕ್ರಮ­ದಿಂದ ಹೈಕೋರ್ಟ್‌ ಮತ್ತು ಸುಪ್ರೀಂ ಕೋರ್ಟ್‌ ಆದೇಶಗಳ ಉಲ್ಲಂಘನೆ ಆಗಿದೆಯೇ, ಅರೆ ನ್ಯಾಯಾಂಗದ ಅಧಿಕಾರ ಹೊಂದಿದ್ದ ನಾಲ್ವರು ಭೂ­ಸ್ವಾಧೀನ ಅಧಿಕಾರಿಗಳು ಜಮೀನು ಮಾಲೀಕರ ಅಹವಾಲು ಆಲಿಸಿ ನೀಡಿರುವ ಆದೇಶಗಳು ಕಾನೂನುಬದ್ಧವಾಗಿ ಇವೆಯೇ, ಜಮೀನು ಮಾಲೀಕರು ಎತ್ತಿದ ತಕರಾರು ಗಳನ್ನು ­ಆಲಿಸಿದ ಬಿಡಿಎ, ಜಮೀನು ಡಿನೋಟಿಫೈ ಮಾಡಲು ತೆಗೆದುಕೊಂಡ ನಿರ್ಣಯಗಳು ನ್ಯಾಯಾಲಯಗಳ ಆದೇಶಕ್ಕೆ ವಿರುದ್ಧವಾಗಿವೆಯೇ ಎಂಬ ಕುರಿತು ವಿಚಾರಣೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು.

Hot this week

1704.69 ಕೋಟಿ ರು ಗೆ ಆಕ್ಷೇಪಣೆ; ಸಾವಿರಾರು ಕೋಟಿ ವೆಚ್ಚವಾಗಿದ್ದರೂ ಬಂಡವಾಳ ವೆಚ್ಚ ಕಾಮಗಾರಿಗೆ ಅತ್ಯಲ್ಪ ಮೊತ್ತ ಪರಿಗಣನೆ

ಬೆಂಗಳೂರು; ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಸಾಮಾನ್ಯ ಆಡಳಿತ, ಕಾಮಗಾರಿ, ಆರೋಗ್ಯ, ಕಂದಾಯ,...

ಪಿಂಚಣಿಗೆ ಕೇಳಿದ್ದು 5.63 ಕೋಟಿ, ಬಜೆಟ್‌ನಲ್ಲಿ ನಿಗದಿಪಡಿಸಿದ್ದು ಕೇವಲ 1 ಲಕ್ಷ; ಆರ್ಥಿಕ ಮುಗ್ಗಟ್ಟಿಗೆ ಸಿಲುಕಲಿದೆಯೇ ವಿಶ್ವವಿದ್ಯಾಲಯ?

ಬೆಂಗಳೂರು; ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಪಿಂಚಣಿ  ಪಾವತಿಸಲು ವಿಶ್ವವಿದ್ಯಾಲಯಗಳು ಕೇಳಿದ್ದ ಸಹಾಯಾನುದಾನದ...

ಗ್ಯಾರಂಟಿ ಯೋಜನೆಗಳಿಗೆ ಜಾಹೀರಾತು; 3 ವರ್ಷದಲ್ಲಿ 348.25 ಕೋಟಿ ವೆಚ್ಚ

ಬೆಂಗಳೂರು; ಗ್ಯಾರಂಟಿ ಯೋಜನೆ ಜಾರಿಯಾದ ದಿನದಿಂದ ಜನವರಿ ಅಂತ್ಯದವರೆಗೆ ಜಾಹೀರಾತುಗಳ ಮೂಲಕ...

11,721 ಟ್ರಾನ್ಸ್‌ಫಾರ್ಮ್‌ರ್ ಖರೀದಿ; ಕೇರಳ ವಿದ್ಯುತ್ ಕಂಪನಿಗೆ 4 ಜಿ ವಿನಾಯಿತಿ ಅಧಿಸೂಚನೆ, ಕವಿಕಾಕ್ಕೆ 174.73 ಕೋಟಿ ಆದಾಯ ತಪ್ಪಿಸಿತೇ ಕಾಂಗ್ರೆಸ್ ಸರ್ಕಾರ?

ಬೆಂಗಳೂರು;  ರಾಜ್ಯದ ಬೆಂಗಳೂರು, ಹುಬ್ಬಳ್ಳಿ, ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗಳಿಗೆ ಅವಶ್ಯಕವಿರುವ 11,721...

Topics

1704.69 ಕೋಟಿ ರು ಗೆ ಆಕ್ಷೇಪಣೆ; ಸಾವಿರಾರು ಕೋಟಿ ವೆಚ್ಚವಾಗಿದ್ದರೂ ಬಂಡವಾಳ ವೆಚ್ಚ ಕಾಮಗಾರಿಗೆ ಅತ್ಯಲ್ಪ ಮೊತ್ತ ಪರಿಗಣನೆ

ಬೆಂಗಳೂರು; ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಸಾಮಾನ್ಯ ಆಡಳಿತ, ಕಾಮಗಾರಿ, ಆರೋಗ್ಯ, ಕಂದಾಯ,...

ಪಿಂಚಣಿಗೆ ಕೇಳಿದ್ದು 5.63 ಕೋಟಿ, ಬಜೆಟ್‌ನಲ್ಲಿ ನಿಗದಿಪಡಿಸಿದ್ದು ಕೇವಲ 1 ಲಕ್ಷ; ಆರ್ಥಿಕ ಮುಗ್ಗಟ್ಟಿಗೆ ಸಿಲುಕಲಿದೆಯೇ ವಿಶ್ವವಿದ್ಯಾಲಯ?

ಬೆಂಗಳೂರು; ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಪಿಂಚಣಿ  ಪಾವತಿಸಲು ವಿಶ್ವವಿದ್ಯಾಲಯಗಳು ಕೇಳಿದ್ದ ಸಹಾಯಾನುದಾನದ...

ಗ್ಯಾರಂಟಿ ಯೋಜನೆಗಳಿಗೆ ಜಾಹೀರಾತು; 3 ವರ್ಷದಲ್ಲಿ 348.25 ಕೋಟಿ ವೆಚ್ಚ

ಬೆಂಗಳೂರು; ಗ್ಯಾರಂಟಿ ಯೋಜನೆ ಜಾರಿಯಾದ ದಿನದಿಂದ ಜನವರಿ ಅಂತ್ಯದವರೆಗೆ ಜಾಹೀರಾತುಗಳ ಮೂಲಕ...

11,721 ಟ್ರಾನ್ಸ್‌ಫಾರ್ಮ್‌ರ್ ಖರೀದಿ; ಕೇರಳ ವಿದ್ಯುತ್ ಕಂಪನಿಗೆ 4 ಜಿ ವಿನಾಯಿತಿ ಅಧಿಸೂಚನೆ, ಕವಿಕಾಕ್ಕೆ 174.73 ಕೋಟಿ ಆದಾಯ ತಪ್ಪಿಸಿತೇ ಕಾಂಗ್ರೆಸ್ ಸರ್ಕಾರ?

ಬೆಂಗಳೂರು;  ರಾಜ್ಯದ ಬೆಂಗಳೂರು, ಹುಬ್ಬಳ್ಳಿ, ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗಳಿಗೆ ಅವಶ್ಯಕವಿರುವ 11,721...

ಗಾಲ್ಫ್‌ ಅಸೋಸಿಯೇಷನ್‌ನ ಜಮೀನಿನ ಸರ್ವೇ, ಆದಾಯ ಪರಿಶೀಲನೆ; ಜಿಬಿಎ ಮುಖ್ಯ ಆಯುಕ್ತ, ಜಿಲ್ಲಾಧಿಕಾರಿಗೆ ಪತ್ರ ಬರೆದ ಸರ್ಕಾರ

ಬೆಂಗಳೂರು;  ಕರ್ನಾಟಕ ಗಾಲ್ಫ್‌ ಅಸೋಸಿಯೇಷನ್ ಸಂಸ್ಥೆಗೆ ನೀಡಲಾಗಿರುವ ಜಮೀನಿನ ಸರ್ವೇ ನಡೆಸಲು...

866.59 ಕೋಟಿ ರು ಮೊತ್ತದ 399 ಬಳಕೆ ಪ್ರಮಾಣ ಪತ್ರಗಳ ಸಲ್ಲಿಕೆಗೆ ಬಾಕಿ ಉಳಿಸಿಕೊಂಡ ಇಲಾಖೆಗಳು; ಅನುದಾನ ದುರುಪಯೋಗ ಸಾಧ್ಯತೆ?

ಬೆಂಗಳೂರು; ರಾಜ್ಯದ ಹಲವು ಇಲಾಖೆಗಳು ಬಳಕೆ ಪ್ರಮಾಣ ಪತ್ರಗಳನ್ನು ಸಲ್ಲಿಕೆಯಲ್ಲಿ ತೀವ್ರ...

ಸರ್ಕಾರಿ ಸೇವೆ; ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಪ್ರಾತಿನಿಧ್ಯ ಎರಡು ವರ್ಷದಲ್ಲಿ ಇಳಿಕೆಯಾಗಿದೆಯೇ?

ಬೆಂಗಳೂರು; ರಾಜ್ಯ ಸರ್ಕಾರದ ಶಿಕ್ಷಣ, ಒಳಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ...

Related Articles

Popular Categories

error: Content is protected !!