Thursday | April 30, 2026 |

ಮಾಸ್ಕ್‌ ಖರೀದಿ; ವಿಧಾನಪರಿಷತ್‌ ಸಚಿವಾಲಯದ ಉನ್ನತ ಅಧಿಕಾರಿಗೆ ಖಾಸಗಿ ಆಸ್ಪತ್ರೆ ನಂಟು?

ಬೆಂಗಳೂರು; ಏಪ್ರಿಲ್‌ನಲ್ಲಿ ಮಾಸ್ಕ್‌ ಖರೀದಿಗೆ ಮುಂದಾಗಿದ್ದ ವಿಧಾನಪರಿಷತ್‌ ಸಚಿವಾಲಯದ ಬಳಿ ಹಣವೇ ಇರಲಿಲ್ಲ!. ಹೀಗಾಗಿ ಕ್ರೆಡಿಟ್‌ ಆಧಾರದ ಮೇಲೆ ಮಾಸ್ಕ್‌ ಸರಬರಾಜು ಮಾಡಲು ಹಲವು ಕಂಪನಿಗಳಿಗೆ ಮೊರೆ ಇಟ್ಟಿತ್ತು.

ಆದರೆ ಕ್ರೆಡಿಟ್‌ ಆಧಾರದ ಮೇಲೆ ಯಾವ ಕಂಪನಿಯೂ ಮಾಸ್ಕ್‌ಗಳನ್ನು ಸರಬರಾಜು ಮಾಡಲು ಮುಂದೆ ಬಂದಿರಲಿಲ್ಲ. ಹೀಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಿಂದ 500 ಸಂಖ್ಯೆಯ ಕೆ ಎನ್‌ 95 ಮಾಸ್ಕ್‌ಗಳನ್ನು ಕ್ರೆಡಿಟ್‌ ಆಧಾರದ ಮೇರೆಗೆ ಖರೀದಿಸಿತ್ತು ಎಂಬುದು ಇದೀಗ ಬಹಿರಂಗವಾಗಿದೆ.

ಏಪ್ರಿಲ್‌ನಲ್ಲಿ ಮಾಸ್ಕ್‌ಗಳನ್ನು ಸರಬರಾಜು ಮಾಡಿದ್ದ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಹಣ ಮಂಜೂರು ಮಾಡಿದ ಆದೇಶ ಹೊರಬೀಳುತ್ತಿದ್ದಂತೆ ವಿಧಾನಪರಿಷತ್‌ ಸಚಿವಾಲಯದ ಸಮರ್ಥನೆಯೂ ಈಗ ಚರ್ಚೆಗೊಳಗಾಗಿದೆ.

ಔಷಧಾಲಯ ಮತ್ತು ಔಷಧ ಮಳಿಗೆಗಳಲ್ಲೂ ಮಾಸ್ಕ್‌ ನಿಯಮಿತವಾಗಿ ದೊರೆಯದ ಕಾರಣ ವಿಧಾನಪರಿಷತ್‌ ಸಚಿವಾಲಯ, ಮಾರುಕಟ್ಟೆಯ ದರಕ್ಕಿಂತ ದುಪ್ಪಟ್ಟು ದರದಲ್ಲಿ ಖರೀದಿಸಿರುವುದನ್ನು ವಿಧಾನಪರಿಷತ್‌ ಸಚಿವಾಲಯ ಸಮರ್ಥಿಸಿಕೊಂಡಿದೆ.

ವಿಧಾನಪರಿಷತ್‌ ಸಚಿವಾಲಯಕ್ಕೆ ಮಲ್ಲೇಶ್ವರಂನಲ್ಲಿರುವ ಪ್ರಾಣ ಹೆಲ್ತ್‌ ಸಿಸ್ಟಂ ಸರಬರಾಜು ಮಾಡಿದ್ದ ಮಾಸ್ಕ್‌ಗಳ ಗುಣಮಟ್ಟದ ಬಗ್ಗೆ ಸಮಾಧಾನಕರವಾಗದ ಕಾರಣ ಸಚಿವಾಲಯದ ಉನ್ನತ ಅಧಿಕಾರಿಯೊಬ್ಬರಿಗೆ ಪರಿಚಿತರು ಎನ್ನಲಾಗಿರುವ ಡಾ ಅರುಣ್‌ ಕುದುವ ಅವರ ಮೂಲಕ ಮಂಗಳೂರಿನ ಅನಂತ ಮಲ್ಟಿ ಸ್ಪೆಷಾಲಿಟಿ ಕ್ಲಿನಿಕ್‌ನಿಂದ ಮಾಸ್ಕ್‌ಗಳನ್ನು ಖರೀದಿಸಿತ್ತು ಎಂಬುದು ಗೊತ್ತಾಗಿದೆ.

ಕೋವಿಡ್‌ ಸೋಂಕು ಇದೀಗ ವಿಧಾನಸೌಧಕ್ಕೂ ಹಬ್ಬಿದ್ದರೂ ವಿಧಾನಸೌಧದ ಕಟ್ಟಡದಲ್ಲೇ ಕಾರ್ಯನಿರ್ವಹಿಸುತ್ತಿರುವ ವಿಧಾನಸಭೆ ಮತ್ತು ವಿಧಾನಪರಿಷತ್‌ ಸಚಿವಾಲಯದ ಅಧಿಕಾರಿ, ನೌಕರರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಚಿತವಾಗಿ ಈವರೆವಿಗೂ ಮಾಸ್ಕ್‌, ಸ್ಯಾನಿಟೈಸರ್‌ ವಿತರಿಸಿಲ್ಲ ಎಂಬುದು ತಿಳಿದು ಬಂದಿದೆ.

ಕರ್ನಾಟಕ ವಿಧಾನಪರಿಷತ್‌ ಸಚಿವಾಲಯ ಮುಕ್ತ ಮಾರುಕಟ್ಟೆಯಲ್ಲಿರುವ ದರಕ್ಕಿಂತಲೂ ದುಪ್ಪಟ್ಟು ದರ ತೆತ್ತು ಕೆಎನ್‌ 95 ಮಾಸ್ಕ್‌ಗಳನ್ನು ಖರೀದಿ ಮಾಡಿದ್ದು ವಿವಾದಕ್ಕೆಡೆ ಮಾಡಿಕೊಟ್ಟಿತ್ತು. ಚೀನಾ ತಯಾರಿಸಿರುವ ಕೆಎನ್‌ 95 ಮಾಸ್ಕ್‌ಗಳನ್ನು ದುಪ್ಪಟ್ಟು ದರದಲ್ಲಿ ಖರೀದಿಸಿರುವುದರ ಹಿಂದೆ ಕಮಿಷನ್‌ ವ್ಯವಹಾರ ನಡೆದಿದೆ ಎಂಬ ಆರೋಪಗಳು ಕೇಳಿ ಬಂದಿದ್ದವು.

ಕರ್ನಾಟಕ ವಿಧಾನಪರಿಷತ್‌ ಸಚಿವಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಎ,ಬಿ, ಸಿ ಮತ್ತು ಡಿ ಗುಂಪಿನ ಅಧಿಕಾರಿ, ನೌಕರ ವರ್ಗದವರ ಬಳಕೆಗಾಗಿ ಮಾಸ್ಕ್‌ವೊಂದಕ್ಕೆ ಅಂದಾಜು 200 ರು. ದರದಲ್ಲಿ ಒಟ್ಟು 500 ಮಾಸ್ಕ್‌ಗಳಿಗೆ 1,05,000 ರು.ಗಳನ್ನು ಪಾವತಿಸಲು 2020ರ ಮೇ 13ರಂದು ಆಡಳಿತಾತ್ಮಕ ಮಂಜೂರಾತಿ ನೀಡಿತ್ತು. ಇದಕ್ಕೆ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಅವರು ಅನುಮೋದಿಸಿದ್ದರು.

ಮಾರುಕಟ್ಟೆಯಲ್ಲಿ 40 ರು.ನಿಂದ 120 ರು.ವರೆಗೆ ಕೆಎನ್‌ 95 ಮಾಸ್ಕ್‌ಗಳು ದೊರೆಯುತ್ತವೆ. ಇದೇ ಮಾಸ್ಕ್‌ಗೆ ಇಂಡಿಯಾ ಮಾರ್ಟ್‌ನಲ್ಲಿ 100 ರು., ಟ್ರೇಡ್‌ ಇಂಡಿಯಾದಲ್ಲಿ 120 ರು. ದರವಿದೆ. ಸಗಟು ರೂಪದಲ್ಲಿ ಒಂದು ಕೆಎನ್‌ 95 ಮಾಸ್ಕ್‌ಗೆ 20-25 ರು. ದರದಲ್ಲಿ ಖರೀದಿಸಲು ಸಾಧ್ಯವಿದ್ದರೂ ದುಪ್ಪಟ್ಟು ದರದಲ್ಲಿ ಖರೀದಿಸಿದ್ದರ ಹಿಂದೆ ಅವ್ಯವಹಾರ ನಡೆದಿದೆ ಎಂಬ ಬಲವಾದ ಆರೋಪ ಕೇಳಿ ಬಂದಿತ್ತು.

ಚೀನಾವು ದೇಣಿಗೆ ರೂಪದಲ್ಲಿ ಮಿಲಿಯನ್‌ ಪ್ರಮಾಣದಲ್ಲಿ ನೀಡಿದ್ದ ಕೆಎನ್‌ 95 ಮಾಸ್ಕ್‌ಗಳನ್ನು ಅಮೇರಿಕದ ಆಹಾರ ಮತ್ತು ಔಷಧ ಆಡಳಿತ ವಿಭಾಗ ನಿಷೇಧಿಸಿತ್ತು ಎಂದು ನ್ಯೂಯಾರ್ಕ್‌ ಟೈಮ್ಸ್‌ ಮೇ 13ರಂದು ವರದಿ ಮಾಡಿದ್ದನ್ನು ಸ್ಮರಿಸಬಹುದು.
ಹಾಗೆಯೇ ಕೆಎನ್‌ 95 ಮಾಸ್ಕ್‌ಗಳು ಪ್ರಯೋಗಾಲಯದಲ್ಲಿ ನಿಗದಿಪಡಿಸಿದ್ದ ಮಾನದಂಡಗಳ ಪ್ರಕಾರ ಇರಲಿಲ್ಲ. ಅಲ್ಲಿನ ದಂತ ವೈದ್ಯರು ಕೂಡ ಈ ಮಾಸ್ಕ್‌ಗಳನ್ನು ಬಳಕೆಗೆ ವಿರೋಧ ವ್ಯಕ್ತಪಡಿಸಿದ್ದರು ಎಂಬುದು ನ್ಯೂಯಾರ್ಕ್‌ ಟೈಮ್ಸ್‌ ವರದಿಯಿಂದ ತಿಳಿದು ಬಂದಿತ್ತು. ಈ ಕುರಿತು ‘ದಿ ಫೈಲ್‌’ ವರದಿ ಮಾಡಿದ್ದನ್ನು ಸ್ಮರಿಸಬಹುದು.

Hot this week

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕಕ್ಕೆ ಒತ್ತಡ; ವಿವಾದಕ್ಕೆ ದಾರಿಯಾದ ಡಿಸಿಎಂ ಟಿಪ್ಪಣಿ, ನಿಯಮ ಉಲ್ಲಂಘನೆ?

ಬೆಂಗಳೂರು; ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್  ಪ್ರವೀಣ್ ಲಿಂಗಯ್ಯ ಅವರನ್ನು...

ಆಧಾರ್ ಕಾರ್ಡ್‌ಗಿಂತಲೂ ಶಕ್ತಿ ಸ್ಮಾರ್ಟ್‌ ದುಬಾರಿ, ಎಸ್‌ಪಿವಿ ರಚನೆಯಾದರೂ ಸಿಗದ ಕಾರ್ಡ್‌; 185 ಕೋಟಿ ವೆಚ್ಚ ಭರಿಸುವವರಾರು?

ಬೆಂಗಳೂರು; ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ  ಸೌಲಭ್ಯ ಕಲ್ಪಿಸುವ 'ಶಕ್ತಿ'...

ಟೆಲಿಕಾಂ ಕಂಪನಿಯಿಂದ ವಿಧಾನಸೌಧ ಟರೇಸ್‌ ಅನಧಿಕೃತ ಬಳಕೆ; ವಸೂಲಾಗದ ನೆಲಬಾಡಿಗೆ, ನಿಯಮ ಉಲ್ಲಂಘಿಸಿದ್ದರೂ ಕ್ರಮವಿಲ್ಲ

ಬೆಂಗಳೂರು; ಟೆಲಿಕಾಂ ಮೂಲಸೌಕರ್ಯ ಕಂಪನಿಗಳಲ್ಲಿ ಖ್ಯಾತಿ ಹೊಂದಿರುವ ಆಂಧ್ರ ಪ್ರದೇಶ ಮೂಲದ...

ನೀಟ್‌, ಕೆ-ಸಿಇಟಿ ತರಬೇತಿ; ಅಲ್ಪಸಂಖ್ಯಾತರ ಇಲಾಖೆಯಲ್ಲಿ ಟೆಂಡರ್ ನಿಯಮ ಉಲ್ಲಂಘನೆ, ನಿಯಮಬಾಹಿರ ಚಟುವಟಿಕೆ, ಸರ್ಕಾರಕ್ಕೆ ಲೀಗಲ್ ನೋಟೀಸ್‌

ಬೆಂಗಳೂರು; ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ವಸತಿ ಕಾಲೇಜು ವಿದ್ಯಾರ್ಥಿಗಳಿಗೆ ಆಫ್‌ಲೈನ್ ಮಾದರಿಯಲ್ಲಿ...

Topics

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕಕ್ಕೆ ಒತ್ತಡ; ವಿವಾದಕ್ಕೆ ದಾರಿಯಾದ ಡಿಸಿಎಂ ಟಿಪ್ಪಣಿ, ನಿಯಮ ಉಲ್ಲಂಘನೆ?

ಬೆಂಗಳೂರು; ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್  ಪ್ರವೀಣ್ ಲಿಂಗಯ್ಯ ಅವರನ್ನು...

ಆಧಾರ್ ಕಾರ್ಡ್‌ಗಿಂತಲೂ ಶಕ್ತಿ ಸ್ಮಾರ್ಟ್‌ ದುಬಾರಿ, ಎಸ್‌ಪಿವಿ ರಚನೆಯಾದರೂ ಸಿಗದ ಕಾರ್ಡ್‌; 185 ಕೋಟಿ ವೆಚ್ಚ ಭರಿಸುವವರಾರು?

ಬೆಂಗಳೂರು; ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ  ಸೌಲಭ್ಯ ಕಲ್ಪಿಸುವ 'ಶಕ್ತಿ'...

ಟೆಲಿಕಾಂ ಕಂಪನಿಯಿಂದ ವಿಧಾನಸೌಧ ಟರೇಸ್‌ ಅನಧಿಕೃತ ಬಳಕೆ; ವಸೂಲಾಗದ ನೆಲಬಾಡಿಗೆ, ನಿಯಮ ಉಲ್ಲಂಘಿಸಿದ್ದರೂ ಕ್ರಮವಿಲ್ಲ

ಬೆಂಗಳೂರು; ಟೆಲಿಕಾಂ ಮೂಲಸೌಕರ್ಯ ಕಂಪನಿಗಳಲ್ಲಿ ಖ್ಯಾತಿ ಹೊಂದಿರುವ ಆಂಧ್ರ ಪ್ರದೇಶ ಮೂಲದ...

ನೀಟ್‌, ಕೆ-ಸಿಇಟಿ ತರಬೇತಿ; ಅಲ್ಪಸಂಖ್ಯಾತರ ಇಲಾಖೆಯಲ್ಲಿ ಟೆಂಡರ್ ನಿಯಮ ಉಲ್ಲಂಘನೆ, ನಿಯಮಬಾಹಿರ ಚಟುವಟಿಕೆ, ಸರ್ಕಾರಕ್ಕೆ ಲೀಗಲ್ ನೋಟೀಸ್‌

ಬೆಂಗಳೂರು; ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ವಸತಿ ಕಾಲೇಜು ವಿದ್ಯಾರ್ಥಿಗಳಿಗೆ ಆಫ್‌ಲೈನ್ ಮಾದರಿಯಲ್ಲಿ...

ವರ್ಗಾವಣೆ ರದ್ದುಗೊಳಿಸಲು ತಲಾ 20 ಲಕ್ಷಕ್ಕೆ ಬೇಡಿಕೆ ಆರೋಪ; ಟೆಂಡರ್ ಕಮಿಷನ್ ಆಪಾದನೆ ಬೆನ್ನಲ್ಲೇ ಕರೀಗೌಡರ ವಿರುದ್ಧ ದೂರು

ಬೆಂಗಳೂರು; ಒಂದೆಡೆ ಮಂಜೂರಾಗಿರುವ ಹುದ್ದೆಗಳನ್ನು  ಭರ್ತಿ ಮಾಡುತ್ತಿಲ್ಲ, ಶೇ. 40ರಷ್ಟು ಹುದ್ದೆಗಳು...

ಈಜಿಪುರ ಮೇಲ್ಸೇತುವೆ ಕಾಮಗಾರಿ; ಪರಿಷ್ಕೃತ ಅಂದಾಜಿನಲ್ಲಿಯೇ ಲೋಪ ಪತ್ತೆ, 8.80 ಕೋಟಿ ಮೊತ್ತಕ್ಕೆ ಲೆಕ್ಕ ಪರಿಶೋಧಕರ ಆಕ್ಷೇಪಣೆ

ಬೆಂಗಳೂರು;  ಈಜಿಪುರ ಎಲಿವೇಟೆಡ್ ಕಾಮಗಾರಿಗೆ ಸಂಬಂಧಿಸಿದಂತೆ ಬೃಹತ್‌ ಬೆಂಗಳೂರು ಮಹಾನಗರಪಾಲಿಕೆಯು ಮಾಡಿದ್ದ...

Related Articles

Popular Categories

error: Content is protected !!